Homeಅಂಕಣಗಳುಎಲೆಮರೆ-43: ಪರಿಸರ ಪ್ರಜ್ಞೆ, ಅತ್ಯಾಧುನಿಕ ತಾಂತ್ರಿಕತೆಯಿಂದ ದೇಶದ ಗಮನಸೆಳೆದ ಗೊಜನೂರು ಸರಕಾರಿ ಪ್ರೌಢಶಾಲೆ

ಎಲೆಮರೆ-43: ಪರಿಸರ ಪ್ರಜ್ಞೆ, ಅತ್ಯಾಧುನಿಕ ತಾಂತ್ರಿಕತೆಯಿಂದ ದೇಶದ ಗಮನಸೆಳೆದ ಗೊಜನೂರು ಸರಕಾರಿ ಪ್ರೌಢಶಾಲೆ

‘ಬೆಸ್ಟ ಇಕೋ-ಕ್ಲಬ್’ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಶಾಲೆಯೆಂಬ ಗರಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೊಜನೂರ ಸರಕಾರಿ ಪೌಢಶಾಲೆಗೆ ಇದೆ.

- Advertisement -
- Advertisement -

ಶಾಲಾ ಆವರಣವನ್ನು ’ಪರಿಸರ’ಮಯಗೊಳಿಸುವುದಲ್ಲದೆ, ನಿಸರ್ಗಪ್ರೇರಿತ ಕಲಿಕೆಯ ಕಾರಣಕ್ಕೆ ಈ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲಿ ಆಯ್ಕೆಯಾಗುತ್ತದೆ. ರಾಜ್ಯಮಟ್ಟದ ಸ್ಪರ್ಧೆಯಲ್ಲೂ `ರಾಷ್ಟ್ರಮಟ್ಟಕ್ಕೆ’ ಆರಿಸಲಾಗುತ್ತದೆ. 2019 ರ ಡಿಸೆಂಬರ್ 20 ರಂದು ಗುಜರಾತಿನ ಕೇವಡಿಯಾದಲ್ಲಿ ಕೇಂದ್ರ ಪರಿಸರ ಅರಣ್ಯ ಮತ್ತು ಹವಮಾನ ಬದಲಾವಣೆ ಸಚಿವಾಲಯವು ಆಯೋಜಿಸಿದ್ದ ವಾರ್ಷಿಕ ಸಮ್ಮೇಳನದಲ್ಲಿ ದೇಶದ ಆರು ಪ್ರೌಢಶಾಲೆಗಳು ‘ಬೆಸ್ಟ ಇಕೋ-ಕ್ಲಬ್ ಪ್ರಶಸ್ತಿ’ಪಡೆಯುತ್ತವೆ.

ಅದರಲ್ಲಿ ಈ ಶಾಲೆಯೂ ಆಯ್ಕೆಯಾಗುತ್ತದೆ. ಇದರೊಂದಿಗೆ ಈ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಶಾಲೆಯೆಂಬ ಗರಿ ಮೂಡುತ್ತದೆ. ಅದುವೆ ಗದಗ ಜಿಲ್ಲೆ, ಲಕ್ಷ್ಮೇಶ್ವರ ತಾಲೂಕಿನ ಗೊಜನೂರ ಸರಕಾರಿ ಪೌಢಶಾಲೆ. ಈ ಹಂತಕ್ಕೆ ಶಾಲೆಯನ್ನು ರೂಪಿಸಲು ಕಳೆದ ಹತ್ತು ವರ್ಷದಿಂದ ತನ್ನನ್ನು ತಾನು ತೇದುಕೊಂಡ ಮುಖ್ಯ ಶಿಕ್ಷಕ ರವಿ ಬಸವಣ್ಣೆಪ್ಪ ಬೆಂಚಳ್ಳಿಯವರು.

ಮೂಲತಃ ಹಾವೇರಿ ಜಿಲ್ಲೆ ಹಾನಗಲ್ಲ ತಾಲೂಕಿನ ವಾಸನ ಗ್ರಾಮದ ರವಿ ಬಿ. ಬೆಂಚಳ್ಳಿಯವರು 2009-10 ರಲ್ಲಿ ಆಯ್ಕೆಯಾಗಿ ಸರಕಾರಿ ಪ್ರೌಢಶಾಲೆ ಗೊಜನೂರದಲ್ಲಿ ಮುಖ್ಯ ಶಿಕ್ಷಕರಾಗಿ ಬರುತ್ತಾರೆ. ಕಳೆದ ಹತ್ತು ವರ್ಷದಲ್ಲಿ ರವಿಯವರು ಗೊಜನೂರು ಹೈಸ್ಕೂಲಿನ ಚಹರೆಯನ್ನೆ ಬದಲಿಸಿದರು. ಈ ಶಾಲೆಯ ಪರಿಸರವನ್ನು ಪುಟ್ಟ ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಂತೆ ಮೇಲ್ದರ್ಜೆಗೇರಿಸಿದರು. ಆರಂಭಕ್ಕೆ ಶಾಲೆಯನ್ನು ತಮ್ಮ ಗ್ರಾಮ ಪಂಚಾಯ್ತಿಯಲ್ಲಿ, ನಂತರ ತಾಲೂಕಿನಲ್ಲಿ, ಜಿಲ್ಲೆಯಲ್ಲಿ, ರಾಜ್ಯದಲ್ಲಿ ಕಡೆಯದಾಗಿ ದೇಶವೇ ಗಮನಿಸುವಂತೆ ರೂಪಿಸಿದರು.

ಈ ಪಯಣದಲ್ಲಿ ಅವರೊಂದಿಗೆ ಗ್ರಾಮದ ಪಾಲಕ-ಪೋಷಕರು, ಗಣ್ಯರು, ಜನಪ್ರತಿನಿಧಿಗಳು, ಸಹಶಿಕ್ಷಕರು, ಸಿಬ್ಬಂದಿಯವರು, ಸಮುದಾಯ ಹಾಗೂ ವಿದ್ಯಾರ್ಥಿಗಳು, ಇದೆಲ್ಲಕ್ಕೂ ಸಹಕರಿಸಿ ಪ್ರೋತ್ಸಾಹಿಸಿದ ಇಲಾಖೆ ಅಧಿಕಾರಿಗಳು ಜೊತೆಯಾದರು. ಇದೆಲ್ಲದರ ಕೂಡುಶಕ್ತಿಯ ಫಲವಾಗಿ ನಾನಾ ವಿಭಾಗಗಳಲ್ಲಿ ಈ ತನಕ ಗೊಜನೂರು ಪ್ರೌಢಶಾಲೆಗೆ ಎಂಟು ಪ್ರಶಸ್ತಿಗಳು, ಮುಖ್ಯ ಶಿಕ್ಷಕರಾದ ರವಿ ಅವರಿಗೆ ಹನ್ನೆರಡು ಪ್ರಶಸ್ತಿಗಳು, ಇತರೆ ಶಿಕ್ಷಕ ವರ್ಗಕ್ಕೆ ಏಳು ಪ್ರಶಸ್ತಿಗಳು ಲಬಿಸಿವೆ.

ಹಾಗಾದರೆ ಈ ಪ್ರೌಢಶಾಲೆ ರೂಪಿಸಿದ ಮಾದರಿ ಯಾವುದು?

ಮುಖ್ಯವಾಗಿ ಶಾಲೆಯ ಶೈಕ್ಷಣಿಕ ವಾತಾವರಣವನ್ನು ಸಮುದಾಯ ಸಹಭಾಗಿತ್ವದಲ್ಲಿ ಕ್ರಿಯಾಶೀಲಗೊಳಿಸಲಾಗಿದೆ. ಶಾಲಾ ಆವರಣದಲ್ಲಿ ಸಾವಯವ ಕೃಷಿ, ಮಳೆಕೊಯ್ಲು, ವನಮಹೋತ್ಸವ, ಸಾಮಾಜಿಕ ಜಾಗೃತಿ, ಗ್ರಾಮ-ಮರ-ಕೆರೆ ದತ್ತು ಪಡೆಯುವಿಕೆ ಹಾಗೂ ಸ್ವಚ್ಚತೆ, ಪ್ಲಾಸ್ಟಿಕ್ ರದ್ದು ಜಾಗೃತಿ, ಶಾಲಾ ಕೈತೋಟ, ನೀರು-ಶಕ್ತಿ ಉಳಿತಾಯ, ಕಸ ವಿಲೇವಾರಿ, ಶ್ರಮದಾನ ಆರೋಗ್ಯ ರಕ್ಷಣೆ, ಪರಿಸರ ಹಾಗೂ ಆರೋಗ್ಯದ ಕುರಿತು ದಿನಾಚರಣೆಗಳಲ್ಲಿ ಊರನ್ನು ಒಳಗೊಳ್ಳುವಿಕೆ, ನವೀನ ಸೃಜನಾತ್ಮಕ ಕಲಿಕಾ ಚಟುವಟುಕೆಗಳು ಹಾಗೂ ಗುಣಾತ್ಮಕ ಕಲಿಕಾ ವಾತಾವರಣ ಹೀಗೆ ಇಡೀ ಶಾಲೆಯನ್ನು ಒಂದು ನಿರಂತರ ಪ್ರಯೋಗಶಾಲೆಯನ್ನಾಗಿ ರೂಪಿಸಲಾಗಿದೆ.

ಶಾಲೆಯಲ್ಲಿ ಸಾವಯವ ಕೃಷಿ ಪದ್ಧತಿಯ ಎರೆಹುಳು ಗೊಬ್ಬರ ಘಟಕ, ಎರೆಜಲ, ಜೀವಾಮೃತ, ಜೀವಸಾರ ಘಟಕ, ಪಂಚಗವ್ಯ, ಪೈಪ್ ಕಾಂಪೋಸ್ಟ್ ಇತ್ಯಾದಿಗಳನ್ನು ನೆಲೆಗೊಳಿಸಲಾಗಿದೆ. ಶಾಲಾ ಅಂಗಳದಲ್ಲಿ ಅಂತರ್ಜಲ ಬಳಕೆ ಸಹಕಾರಿಗೆ ಇಂಗುಗುಂಡಿ, ನೀರಿನ ಸಂಗ್ರಹಕ್ಕೆ ಮಳೆನೀರು ಸಂಗ್ರಹ ತೊಟ್ಟಿ, ಶುದ್ಧ ಕುಡಿಯುವ ನೀರಿಗೆ ಮಳೆನೀರು ಕೊಯ್ಲು ನೀರಿನ ಪುನರ್ಬಳಕೆ ಮಾಡಿ ಸಸ್ಯಪಾಲನೆ ಮಾಡಲಾಗುತ್ತದೆ. ಶಕ್ತಿ ಹಾಗೂ ಇಂಧನ ಉಳಿತಾಯಕ್ಕಾಗಿ ಸೋಲಾರ್ ವ್ಯವಸ್ಥೆ, ಎಲ್.ಇ.ಡಿ. ಬಲ್ಬ್ ಬಳಕೆ ಮಾಡಲಾಗಿದೆ. ಜೈವಿಕ ಸಸ್ಯಗಳಾದ ಹೊಂಗೆ, ಸುಬಾಬುಲ್, ಬೇವು, ನೀಲಗಿರಿ ಇತ್ಯಾದಿ ಸಸ್ಯಗಳನ್ನು ಬೆಳೆಸಲಾಗಿದೆ.

ತಾಂತ್ರಿಕವಾಗಿ ಅತ್ಯುತ್ತಮ ಗುಣಮಟ್ಟದ ಸೌಲಭ್ಯವಿರುವ ‘ಗಣಕಯಂತ್ರ ಮಾಹಿತಿ ತಂತ್ರಜ್ಞಾನ ಕೊಠಡಿ’ಯನ್ನು ‘ರಾಜೀವಶೆಟ್ಟಿ ಚಾರಿಟೆಲ್ ಸೋಸೈಟಿ (ರಿ)’ ಬೆಂಗಳೂರು ಇವರ 5 ಲಕ್ಷ ದೇಣಿಗೆಯಿಂದ ಸ್ಥಾಪಿಸಲಾಗಿದೆ, ಹೀಗಾಗಿ ಮಕ್ಕಳಿಗೆ ‘ಗಣಕಯಂತ್ರ ಶಿಕ್ಷಣ’ ನೀಡಲಾಗುತ್ತಿದೆ. ಶಾಲೆಯ ಆಕರ್ಷಕ ತರಗತಿ ಕೋಣೆ, ಸಿ.ಸಿ ಕ್ಯಾಮರಾ ಹಾಗೂ ಧ್ವನಿವರ್ಧಕ, ಎಜ್ಯುಸ್ಯಾಟ್, ರೇಡಿಯೋ ಪಾಠ, ಸ್ಮಾರ್ಟ್ ಕ್ಲಾಸ್ ಹಾಗೂ ದೂರದರ್ಶನ, ಗ್ರೀನ್-ಬ್ಲ್ಯಾಕ್-ಪ್ಯಾನಲ್-ನೋಟಿಸ್ ಬೋರ್ಡ್, ಆಡಿಯೋ-ವಿಡಿಯೋ ವ್ಯವಸ್ಥೆ, ನವೀನ ಸಾಫ್ಟ್ವೇರ್ ಆಧಾರಿತ ಗುಣಾತ್ಮಕ ಶಿಕ್ಷಣವನ್ನು ಶಾಲೆಯಲ್ಲಿ ಅಳವಡಿಸಿಕೊಳ್ಳಲಾಗಿದೆ.

ಎಲ್ಲಾ ಕಲಿಕಾ ಪ್ರಕ್ರಿಯೆಗಳನ್ನು ಮುಖ್ಯ ಶಿಕ್ಷಕರ ಕೊಠಡಿಯಿಂದಲೇ ವೀಕ್ಷಿಸಿ ಚರ್ಚಿಸಬಹುದಾಗಿದೆ. ಈ ಬಗೆಯ ತಾಂತ್ರಿಕತೆಯು ಯಾವುದೇ ಖಾಸಗಿ ಶಾಲೆಯನ್ನು ಮೀರಿಸುವಂತಿದೆ. ಹೀಗಾಗಿ ಸುತ್ತಮುತ್ತಲ ಹಳ್ಳಿಗಳ ಪೋಷಕರು ತಮ್ಮ ಮಕ್ಕಳನ್ನು ಗೊಜನೂರು ಪ್ರೌಢಶಾಲೆಗೆ ಸೇರಿಸಲು ಧಾವಿಸುತ್ತಾರೆ, ಶಾಲೆಯಲ್ಲಿ 277 ಮಕ್ಕಳ ತನಕ ದಾಖಲಾತಿಯಾಗಿದೆ. ಹೀಗಾಗಿ ಹೆಚ್ಚುವರಿ ದಾಖಲಾತಿಯನ್ನು ನಿಲ್ಲಿಸಿದ್ದೂ ಇದೆ.

2010 ರಿಂದ 2020 ರ ತನಕ ಪ್ರತಿ ವರ್ಷವೂ ಶಾಲಾ ಸಾಧನೆ, ಮಕ್ಕಳ ಮತ್ತು ಮೇಷ್ಟ್ರುಗಳ ಬರಹಗಳನ್ನೊಳಗೊಂಡ ವಾರ್ಷಿಕ ಸಂಚಿಕೆಗಳನ್ನು ರವಿ ಅವರು ಸಂಪಾದಿಸಿದ್ದಾರೆ. ಈತನಕ ಅಕ್ಷರ ದುಂದುಬಿ, ಶಿಖರ ಸಂಪದ, ಜ್ಞಾನ ಮಂಜರಿ, ಅಷ್ಟಾದಶ ದರ್ಪಣ, ಪಂಚವಟಿ, ಅಂಬರಮಣಿ, ಸಪ್ತಗಿರಿ ವೈಭವ, ಗಿರಿತೇಜ ಲಹರಿ, ನವ ನಿಕೇತನ, ದಶದೀಪ್ತಿ ದರ್ಶಿಕೆ ಎಂಬ ಹತ್ತು ಸ್ಮರಣ ಸಂಚಿಕೆಗಳನ್ನು ತರಲಾಗಿದೆ. ಈ ಸಂಚಿಕೆಗಳು ಶಾಲೆಯ ಎಲ್ಲಾ ಬಗೆಯ ಕ್ರಿಯಾಶೀಲ ಚಟುವಟಿಕೆಗಳ ದಾಖಲೆಗಳಾಗಿವೆ.

ಇಷ್ಟಾಗಿಯೂ ರವಿ ಅವರ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸೂಕ್ಷ್ಮವಾಗಿ ಧಾರ್ಮಿಕತೆಯ ಪ್ರಭಾವವಿದೆ. ಅಂಬೇಡ್ಕರ್, ಸಂವಿಧಾನ ಪ್ರಜಾಪ್ರಭುತ್ವದ ಆಶಯಗಳ ಕುರಿತ ವೈಚಾರಿಕ ಕಾರ್ಯಕ್ರಮಗಳು ನಡೆದದ್ದು ತುಂಬಾ ವಿರಳ. ಅಂತೆಯೇ ಶಾಲಾ ಆವರಣದ ವಿವೇಕಾನಂದ ಪ್ರತಿಮೆ, ಪಂಚವಟಿ, ಶಾಲಾ ಸಂಚಿಕೆಯ ಹೆಸರುಗಳು, ಸ್ವಾಮೀಜಿಗಳನ್ನು ಶಾಲೆಗೆ ಕರೆಸುವುದು ಇಂತದ್ದರಲ್ಲೆಲ್ಲಾ ಸನಾತನತೆ ಇಣುಕುತ್ತದೆ. ಇದು ಮುಂದೆ ಶಾಲೆಯ ಸಾಧನೆಯನ್ನು ಮಂಕಾಗಿಸಬಹುದು.

ಸಂವಿಧಾನ ಬದ್ಧ ಸಾರ್ವಜನಿಕ ಸಂಸ್ಥೆಯಾದ ಶಾಲೆಯೊಂದರಲ್ಲಿ ಯಾವುದೇ ಧರ್ಮದ ಛಾಯೆಗಳು ಢಾಳಾಗಿ ಕಾಣಿಸಕೂಡದು. ’ಭಾರತೀಯರಾದ ನಾವು’ ಎಂದು ಆರಂಭವಾಗುವ ಸಂವಿಧಾನದ ಪ್ರಸ್ತಾವನೆಗೆ ಪೂರಕವಾಗಿ ಶಾಲೆಯ ಮಕ್ಕಳಲ್ಲಿ ವೈಚಾರಿಕತೆಯನ್ನು ಬೆಳೆಸುವುದು ಶಿಕ್ಷಕರ ಆದ್ಯ ಕರ್ತವ್ಯ. ಈ ಬೆಳವಣಿಗೆ ಅಕಸ್ಮಾತ್ ನಡೆದಿದ್ದರೆ, ಮುಂದಿನ ದಿನಗಳಲ್ಲಿ ರವಿ ಬೆಂಚಳ್ಳಿಯವರು ಇದನ್ನು ಸರಿಪಡಿಸಿಕೊಳ್ಳುತ್ತಾರೆಂದು ಭಾವಿಸುವೆ.

ತನ್ನ ಬಿಡುವಿಲ್ಲದ ಕೆಲಸಗಳಿಗೆ ತನ್ನ ಸಂಗಾತಿ ಸುಮತಿಯವರ ನೆರವಿದೆ ಎಂದು ರವಿ ಹೇಳುತ್ತಾರೆ. ಮಕ್ಕಳಾದ ವೈಭವ್ ಮತ್ತು ವರ್ಷಿತ ಅವರರೊಂದಿಗೆ ಸದ್ಯಕ್ಕೆ ರವಿಯವರು ಲಕ್ಷ್ಮೇಶ್ವರದಲ್ಲಿ ನೆಲೆಸಿದ್ದಾರೆ. ಊರಿನವರ ಸಹಕಾರದೊಂದಿಗೆ ಶಾಲೆಯನ್ನು ಇನ್ನಷ್ಟು ಎತ್ತರಕ್ಕೆ ಹೊಯ್ಯಲಿ, ಸರಕಾರಿ ಪ್ರೌಢಶಾಲೆಗಳಿಗೆ ಅತ್ಯುತ್ತಮ ಮಾದರಿಯನ್ನು ರೂಪಿಸಲಿ ಎಂದು ನಾನುಗೌರಿ.ಕಾಮ್ ಆಶಿಸುತ್ತದೆ.

ಗೊಜನೂರು ಪ್ರೌಢಶಾಲೆ ತನ್ನದೇ ಸ್ವಂತ ವೆಬ್ ಸೈಟ್ ಹೊಂದಿದೆ. ಆಸಕ್ತರು ಶಾಲೆಯನ್ನು ಈ www.ghsgojanur.com ಕೊಂಡಿಯಿಂದ ಸಂಪರ್ಕಿಸಬಹುದು. ಅಲ್ಲದೇ ಶಾಲೆಯ ಕಲಿಕಾ ಪ್ರಗತಿ, ಚಟುವಟಿಕೆ ಹಾಗೂ ಸಾಧನೆಗಳನ್ನು youtube ನ ghsgojanur ಚಾನಲ್ ಮೂಲಕ ವೀಕ್ಷೀಸಬಹುದು. ಸಂಪರ್ಕಕ್ಕೆ ಇಮೇಲ್‌ [email protected] ಸಂಪರ್ಕಿಸಬಹುದು.

-ಅರುಣ್ ಜೋಳದಕೂಡ್ಲಿಗಿ


ಓದಿ: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...