Homeಅಂಕಣಗಳುಎಲೆಮರೆ-43: ಪರಿಸರ ಪ್ರಜ್ಞೆ, ಅತ್ಯಾಧುನಿಕ ತಾಂತ್ರಿಕತೆಯಿಂದ ದೇಶದ ಗಮನಸೆಳೆದ ಗೊಜನೂರು ಸರಕಾರಿ ಪ್ರೌಢಶಾಲೆ

ಎಲೆಮರೆ-43: ಪರಿಸರ ಪ್ರಜ್ಞೆ, ಅತ್ಯಾಧುನಿಕ ತಾಂತ್ರಿಕತೆಯಿಂದ ದೇಶದ ಗಮನಸೆಳೆದ ಗೊಜನೂರು ಸರಕಾರಿ ಪ್ರೌಢಶಾಲೆ

‘ಬೆಸ್ಟ ಇಕೋ-ಕ್ಲಬ್’ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಶಾಲೆಯೆಂಬ ಗರಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೊಜನೂರ ಸರಕಾರಿ ಪೌಢಶಾಲೆಗೆ ಇದೆ.

- Advertisement -
- Advertisement -

ಶಾಲಾ ಆವರಣವನ್ನು ’ಪರಿಸರ’ಮಯಗೊಳಿಸುವುದಲ್ಲದೆ, ನಿಸರ್ಗಪ್ರೇರಿತ ಕಲಿಕೆಯ ಕಾರಣಕ್ಕೆ ಈ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲಿ ಆಯ್ಕೆಯಾಗುತ್ತದೆ. ರಾಜ್ಯಮಟ್ಟದ ಸ್ಪರ್ಧೆಯಲ್ಲೂ `ರಾಷ್ಟ್ರಮಟ್ಟಕ್ಕೆ’ ಆರಿಸಲಾಗುತ್ತದೆ. 2019 ರ ಡಿಸೆಂಬರ್ 20 ರಂದು ಗುಜರಾತಿನ ಕೇವಡಿಯಾದಲ್ಲಿ ಕೇಂದ್ರ ಪರಿಸರ ಅರಣ್ಯ ಮತ್ತು ಹವಮಾನ ಬದಲಾವಣೆ ಸಚಿವಾಲಯವು ಆಯೋಜಿಸಿದ್ದ ವಾರ್ಷಿಕ ಸಮ್ಮೇಳನದಲ್ಲಿ ದೇಶದ ಆರು ಪ್ರೌಢಶಾಲೆಗಳು ‘ಬೆಸ್ಟ ಇಕೋ-ಕ್ಲಬ್ ಪ್ರಶಸ್ತಿ’ಪಡೆಯುತ್ತವೆ.

ಅದರಲ್ಲಿ ಈ ಶಾಲೆಯೂ ಆಯ್ಕೆಯಾಗುತ್ತದೆ. ಇದರೊಂದಿಗೆ ಈ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಶಾಲೆಯೆಂಬ ಗರಿ ಮೂಡುತ್ತದೆ. ಅದುವೆ ಗದಗ ಜಿಲ್ಲೆ, ಲಕ್ಷ್ಮೇಶ್ವರ ತಾಲೂಕಿನ ಗೊಜನೂರ ಸರಕಾರಿ ಪೌಢಶಾಲೆ. ಈ ಹಂತಕ್ಕೆ ಶಾಲೆಯನ್ನು ರೂಪಿಸಲು ಕಳೆದ ಹತ್ತು ವರ್ಷದಿಂದ ತನ್ನನ್ನು ತಾನು ತೇದುಕೊಂಡ ಮುಖ್ಯ ಶಿಕ್ಷಕ ರವಿ ಬಸವಣ್ಣೆಪ್ಪ ಬೆಂಚಳ್ಳಿಯವರು.

ಮೂಲತಃ ಹಾವೇರಿ ಜಿಲ್ಲೆ ಹಾನಗಲ್ಲ ತಾಲೂಕಿನ ವಾಸನ ಗ್ರಾಮದ ರವಿ ಬಿ. ಬೆಂಚಳ್ಳಿಯವರು 2009-10 ರಲ್ಲಿ ಆಯ್ಕೆಯಾಗಿ ಸರಕಾರಿ ಪ್ರೌಢಶಾಲೆ ಗೊಜನೂರದಲ್ಲಿ ಮುಖ್ಯ ಶಿಕ್ಷಕರಾಗಿ ಬರುತ್ತಾರೆ. ಕಳೆದ ಹತ್ತು ವರ್ಷದಲ್ಲಿ ರವಿಯವರು ಗೊಜನೂರು ಹೈಸ್ಕೂಲಿನ ಚಹರೆಯನ್ನೆ ಬದಲಿಸಿದರು. ಈ ಶಾಲೆಯ ಪರಿಸರವನ್ನು ಪುಟ್ಟ ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಂತೆ ಮೇಲ್ದರ್ಜೆಗೇರಿಸಿದರು. ಆರಂಭಕ್ಕೆ ಶಾಲೆಯನ್ನು ತಮ್ಮ ಗ್ರಾಮ ಪಂಚಾಯ್ತಿಯಲ್ಲಿ, ನಂತರ ತಾಲೂಕಿನಲ್ಲಿ, ಜಿಲ್ಲೆಯಲ್ಲಿ, ರಾಜ್ಯದಲ್ಲಿ ಕಡೆಯದಾಗಿ ದೇಶವೇ ಗಮನಿಸುವಂತೆ ರೂಪಿಸಿದರು.

ಈ ಪಯಣದಲ್ಲಿ ಅವರೊಂದಿಗೆ ಗ್ರಾಮದ ಪಾಲಕ-ಪೋಷಕರು, ಗಣ್ಯರು, ಜನಪ್ರತಿನಿಧಿಗಳು, ಸಹಶಿಕ್ಷಕರು, ಸಿಬ್ಬಂದಿಯವರು, ಸಮುದಾಯ ಹಾಗೂ ವಿದ್ಯಾರ್ಥಿಗಳು, ಇದೆಲ್ಲಕ್ಕೂ ಸಹಕರಿಸಿ ಪ್ರೋತ್ಸಾಹಿಸಿದ ಇಲಾಖೆ ಅಧಿಕಾರಿಗಳು ಜೊತೆಯಾದರು. ಇದೆಲ್ಲದರ ಕೂಡುಶಕ್ತಿಯ ಫಲವಾಗಿ ನಾನಾ ವಿಭಾಗಗಳಲ್ಲಿ ಈ ತನಕ ಗೊಜನೂರು ಪ್ರೌಢಶಾಲೆಗೆ ಎಂಟು ಪ್ರಶಸ್ತಿಗಳು, ಮುಖ್ಯ ಶಿಕ್ಷಕರಾದ ರವಿ ಅವರಿಗೆ ಹನ್ನೆರಡು ಪ್ರಶಸ್ತಿಗಳು, ಇತರೆ ಶಿಕ್ಷಕ ವರ್ಗಕ್ಕೆ ಏಳು ಪ್ರಶಸ್ತಿಗಳು ಲಬಿಸಿವೆ.

ಹಾಗಾದರೆ ಈ ಪ್ರೌಢಶಾಲೆ ರೂಪಿಸಿದ ಮಾದರಿ ಯಾವುದು?

ಮುಖ್ಯವಾಗಿ ಶಾಲೆಯ ಶೈಕ್ಷಣಿಕ ವಾತಾವರಣವನ್ನು ಸಮುದಾಯ ಸಹಭಾಗಿತ್ವದಲ್ಲಿ ಕ್ರಿಯಾಶೀಲಗೊಳಿಸಲಾಗಿದೆ. ಶಾಲಾ ಆವರಣದಲ್ಲಿ ಸಾವಯವ ಕೃಷಿ, ಮಳೆಕೊಯ್ಲು, ವನಮಹೋತ್ಸವ, ಸಾಮಾಜಿಕ ಜಾಗೃತಿ, ಗ್ರಾಮ-ಮರ-ಕೆರೆ ದತ್ತು ಪಡೆಯುವಿಕೆ ಹಾಗೂ ಸ್ವಚ್ಚತೆ, ಪ್ಲಾಸ್ಟಿಕ್ ರದ್ದು ಜಾಗೃತಿ, ಶಾಲಾ ಕೈತೋಟ, ನೀರು-ಶಕ್ತಿ ಉಳಿತಾಯ, ಕಸ ವಿಲೇವಾರಿ, ಶ್ರಮದಾನ ಆರೋಗ್ಯ ರಕ್ಷಣೆ, ಪರಿಸರ ಹಾಗೂ ಆರೋಗ್ಯದ ಕುರಿತು ದಿನಾಚರಣೆಗಳಲ್ಲಿ ಊರನ್ನು ಒಳಗೊಳ್ಳುವಿಕೆ, ನವೀನ ಸೃಜನಾತ್ಮಕ ಕಲಿಕಾ ಚಟುವಟುಕೆಗಳು ಹಾಗೂ ಗುಣಾತ್ಮಕ ಕಲಿಕಾ ವಾತಾವರಣ ಹೀಗೆ ಇಡೀ ಶಾಲೆಯನ್ನು ಒಂದು ನಿರಂತರ ಪ್ರಯೋಗಶಾಲೆಯನ್ನಾಗಿ ರೂಪಿಸಲಾಗಿದೆ.

ಶಾಲೆಯಲ್ಲಿ ಸಾವಯವ ಕೃಷಿ ಪದ್ಧತಿಯ ಎರೆಹುಳು ಗೊಬ್ಬರ ಘಟಕ, ಎರೆಜಲ, ಜೀವಾಮೃತ, ಜೀವಸಾರ ಘಟಕ, ಪಂಚಗವ್ಯ, ಪೈಪ್ ಕಾಂಪೋಸ್ಟ್ ಇತ್ಯಾದಿಗಳನ್ನು ನೆಲೆಗೊಳಿಸಲಾಗಿದೆ. ಶಾಲಾ ಅಂಗಳದಲ್ಲಿ ಅಂತರ್ಜಲ ಬಳಕೆ ಸಹಕಾರಿಗೆ ಇಂಗುಗುಂಡಿ, ನೀರಿನ ಸಂಗ್ರಹಕ್ಕೆ ಮಳೆನೀರು ಸಂಗ್ರಹ ತೊಟ್ಟಿ, ಶುದ್ಧ ಕುಡಿಯುವ ನೀರಿಗೆ ಮಳೆನೀರು ಕೊಯ್ಲು ನೀರಿನ ಪುನರ್ಬಳಕೆ ಮಾಡಿ ಸಸ್ಯಪಾಲನೆ ಮಾಡಲಾಗುತ್ತದೆ. ಶಕ್ತಿ ಹಾಗೂ ಇಂಧನ ಉಳಿತಾಯಕ್ಕಾಗಿ ಸೋಲಾರ್ ವ್ಯವಸ್ಥೆ, ಎಲ್.ಇ.ಡಿ. ಬಲ್ಬ್ ಬಳಕೆ ಮಾಡಲಾಗಿದೆ. ಜೈವಿಕ ಸಸ್ಯಗಳಾದ ಹೊಂಗೆ, ಸುಬಾಬುಲ್, ಬೇವು, ನೀಲಗಿರಿ ಇತ್ಯಾದಿ ಸಸ್ಯಗಳನ್ನು ಬೆಳೆಸಲಾಗಿದೆ.

ತಾಂತ್ರಿಕವಾಗಿ ಅತ್ಯುತ್ತಮ ಗುಣಮಟ್ಟದ ಸೌಲಭ್ಯವಿರುವ ‘ಗಣಕಯಂತ್ರ ಮಾಹಿತಿ ತಂತ್ರಜ್ಞಾನ ಕೊಠಡಿ’ಯನ್ನು ‘ರಾಜೀವಶೆಟ್ಟಿ ಚಾರಿಟೆಲ್ ಸೋಸೈಟಿ (ರಿ)’ ಬೆಂಗಳೂರು ಇವರ 5 ಲಕ್ಷ ದೇಣಿಗೆಯಿಂದ ಸ್ಥಾಪಿಸಲಾಗಿದೆ, ಹೀಗಾಗಿ ಮಕ್ಕಳಿಗೆ ‘ಗಣಕಯಂತ್ರ ಶಿಕ್ಷಣ’ ನೀಡಲಾಗುತ್ತಿದೆ. ಶಾಲೆಯ ಆಕರ್ಷಕ ತರಗತಿ ಕೋಣೆ, ಸಿ.ಸಿ ಕ್ಯಾಮರಾ ಹಾಗೂ ಧ್ವನಿವರ್ಧಕ, ಎಜ್ಯುಸ್ಯಾಟ್, ರೇಡಿಯೋ ಪಾಠ, ಸ್ಮಾರ್ಟ್ ಕ್ಲಾಸ್ ಹಾಗೂ ದೂರದರ್ಶನ, ಗ್ರೀನ್-ಬ್ಲ್ಯಾಕ್-ಪ್ಯಾನಲ್-ನೋಟಿಸ್ ಬೋರ್ಡ್, ಆಡಿಯೋ-ವಿಡಿಯೋ ವ್ಯವಸ್ಥೆ, ನವೀನ ಸಾಫ್ಟ್ವೇರ್ ಆಧಾರಿತ ಗುಣಾತ್ಮಕ ಶಿಕ್ಷಣವನ್ನು ಶಾಲೆಯಲ್ಲಿ ಅಳವಡಿಸಿಕೊಳ್ಳಲಾಗಿದೆ.

ಎಲ್ಲಾ ಕಲಿಕಾ ಪ್ರಕ್ರಿಯೆಗಳನ್ನು ಮುಖ್ಯ ಶಿಕ್ಷಕರ ಕೊಠಡಿಯಿಂದಲೇ ವೀಕ್ಷಿಸಿ ಚರ್ಚಿಸಬಹುದಾಗಿದೆ. ಈ ಬಗೆಯ ತಾಂತ್ರಿಕತೆಯು ಯಾವುದೇ ಖಾಸಗಿ ಶಾಲೆಯನ್ನು ಮೀರಿಸುವಂತಿದೆ. ಹೀಗಾಗಿ ಸುತ್ತಮುತ್ತಲ ಹಳ್ಳಿಗಳ ಪೋಷಕರು ತಮ್ಮ ಮಕ್ಕಳನ್ನು ಗೊಜನೂರು ಪ್ರೌಢಶಾಲೆಗೆ ಸೇರಿಸಲು ಧಾವಿಸುತ್ತಾರೆ, ಶಾಲೆಯಲ್ಲಿ 277 ಮಕ್ಕಳ ತನಕ ದಾಖಲಾತಿಯಾಗಿದೆ. ಹೀಗಾಗಿ ಹೆಚ್ಚುವರಿ ದಾಖಲಾತಿಯನ್ನು ನಿಲ್ಲಿಸಿದ್ದೂ ಇದೆ.

2010 ರಿಂದ 2020 ರ ತನಕ ಪ್ರತಿ ವರ್ಷವೂ ಶಾಲಾ ಸಾಧನೆ, ಮಕ್ಕಳ ಮತ್ತು ಮೇಷ್ಟ್ರುಗಳ ಬರಹಗಳನ್ನೊಳಗೊಂಡ ವಾರ್ಷಿಕ ಸಂಚಿಕೆಗಳನ್ನು ರವಿ ಅವರು ಸಂಪಾದಿಸಿದ್ದಾರೆ. ಈತನಕ ಅಕ್ಷರ ದುಂದುಬಿ, ಶಿಖರ ಸಂಪದ, ಜ್ಞಾನ ಮಂಜರಿ, ಅಷ್ಟಾದಶ ದರ್ಪಣ, ಪಂಚವಟಿ, ಅಂಬರಮಣಿ, ಸಪ್ತಗಿರಿ ವೈಭವ, ಗಿರಿತೇಜ ಲಹರಿ, ನವ ನಿಕೇತನ, ದಶದೀಪ್ತಿ ದರ್ಶಿಕೆ ಎಂಬ ಹತ್ತು ಸ್ಮರಣ ಸಂಚಿಕೆಗಳನ್ನು ತರಲಾಗಿದೆ. ಈ ಸಂಚಿಕೆಗಳು ಶಾಲೆಯ ಎಲ್ಲಾ ಬಗೆಯ ಕ್ರಿಯಾಶೀಲ ಚಟುವಟಿಕೆಗಳ ದಾಖಲೆಗಳಾಗಿವೆ.

ಇಷ್ಟಾಗಿಯೂ ರವಿ ಅವರ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸೂಕ್ಷ್ಮವಾಗಿ ಧಾರ್ಮಿಕತೆಯ ಪ್ರಭಾವವಿದೆ. ಅಂಬೇಡ್ಕರ್, ಸಂವಿಧಾನ ಪ್ರಜಾಪ್ರಭುತ್ವದ ಆಶಯಗಳ ಕುರಿತ ವೈಚಾರಿಕ ಕಾರ್ಯಕ್ರಮಗಳು ನಡೆದದ್ದು ತುಂಬಾ ವಿರಳ. ಅಂತೆಯೇ ಶಾಲಾ ಆವರಣದ ವಿವೇಕಾನಂದ ಪ್ರತಿಮೆ, ಪಂಚವಟಿ, ಶಾಲಾ ಸಂಚಿಕೆಯ ಹೆಸರುಗಳು, ಸ್ವಾಮೀಜಿಗಳನ್ನು ಶಾಲೆಗೆ ಕರೆಸುವುದು ಇಂತದ್ದರಲ್ಲೆಲ್ಲಾ ಸನಾತನತೆ ಇಣುಕುತ್ತದೆ. ಇದು ಮುಂದೆ ಶಾಲೆಯ ಸಾಧನೆಯನ್ನು ಮಂಕಾಗಿಸಬಹುದು.

ಸಂವಿಧಾನ ಬದ್ಧ ಸಾರ್ವಜನಿಕ ಸಂಸ್ಥೆಯಾದ ಶಾಲೆಯೊಂದರಲ್ಲಿ ಯಾವುದೇ ಧರ್ಮದ ಛಾಯೆಗಳು ಢಾಳಾಗಿ ಕಾಣಿಸಕೂಡದು. ’ಭಾರತೀಯರಾದ ನಾವು’ ಎಂದು ಆರಂಭವಾಗುವ ಸಂವಿಧಾನದ ಪ್ರಸ್ತಾವನೆಗೆ ಪೂರಕವಾಗಿ ಶಾಲೆಯ ಮಕ್ಕಳಲ್ಲಿ ವೈಚಾರಿಕತೆಯನ್ನು ಬೆಳೆಸುವುದು ಶಿಕ್ಷಕರ ಆದ್ಯ ಕರ್ತವ್ಯ. ಈ ಬೆಳವಣಿಗೆ ಅಕಸ್ಮಾತ್ ನಡೆದಿದ್ದರೆ, ಮುಂದಿನ ದಿನಗಳಲ್ಲಿ ರವಿ ಬೆಂಚಳ್ಳಿಯವರು ಇದನ್ನು ಸರಿಪಡಿಸಿಕೊಳ್ಳುತ್ತಾರೆಂದು ಭಾವಿಸುವೆ.

ತನ್ನ ಬಿಡುವಿಲ್ಲದ ಕೆಲಸಗಳಿಗೆ ತನ್ನ ಸಂಗಾತಿ ಸುಮತಿಯವರ ನೆರವಿದೆ ಎಂದು ರವಿ ಹೇಳುತ್ತಾರೆ. ಮಕ್ಕಳಾದ ವೈಭವ್ ಮತ್ತು ವರ್ಷಿತ ಅವರರೊಂದಿಗೆ ಸದ್ಯಕ್ಕೆ ರವಿಯವರು ಲಕ್ಷ್ಮೇಶ್ವರದಲ್ಲಿ ನೆಲೆಸಿದ್ದಾರೆ. ಊರಿನವರ ಸಹಕಾರದೊಂದಿಗೆ ಶಾಲೆಯನ್ನು ಇನ್ನಷ್ಟು ಎತ್ತರಕ್ಕೆ ಹೊಯ್ಯಲಿ, ಸರಕಾರಿ ಪ್ರೌಢಶಾಲೆಗಳಿಗೆ ಅತ್ಯುತ್ತಮ ಮಾದರಿಯನ್ನು ರೂಪಿಸಲಿ ಎಂದು ನಾನುಗೌರಿ.ಕಾಮ್ ಆಶಿಸುತ್ತದೆ.

ಗೊಜನೂರು ಪ್ರೌಢಶಾಲೆ ತನ್ನದೇ ಸ್ವಂತ ವೆಬ್ ಸೈಟ್ ಹೊಂದಿದೆ. ಆಸಕ್ತರು ಶಾಲೆಯನ್ನು ಈ www.ghsgojanur.com ಕೊಂಡಿಯಿಂದ ಸಂಪರ್ಕಿಸಬಹುದು. ಅಲ್ಲದೇ ಶಾಲೆಯ ಕಲಿಕಾ ಪ್ರಗತಿ, ಚಟುವಟಿಕೆ ಹಾಗೂ ಸಾಧನೆಗಳನ್ನು youtube ನ ghsgojanur ಚಾನಲ್ ಮೂಲಕ ವೀಕ್ಷೀಸಬಹುದು. ಸಂಪರ್ಕಕ್ಕೆ ಇಮೇಲ್‌ [email protected] ಸಂಪರ್ಕಿಸಬಹುದು.

-ಅರುಣ್ ಜೋಳದಕೂಡ್ಲಿಗಿ


ಓದಿ: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...