Homeಚಳವಳಿವರವರ ರಾವ್ ದೈಹಿಕವಾಗಿ ಇನ್ನೂ ದುರ್ಬಲವಾಗಿಯೇ ಇದ್ದಾರೆ: ಎನ್ ವೇಣುಗೋಪಾಲ್

ವರವರ ರಾವ್ ದೈಹಿಕವಾಗಿ ಇನ್ನೂ ದುರ್ಬಲವಾಗಿಯೇ ಇದ್ದಾರೆ: ಎನ್ ವೇಣುಗೋಪಾಲ್

ಎಲ್ಗರ್ ಪರಿಷತ್ ಪ್ರಕರಣದಲ್ಲಿ ವರವರ ರಾವ್ ಅವರ ಜಾಮೀನು ಅರ್ಜಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆಕ್ಷೇಪ ವ್ಯಕ್ತಪಡಿಸಿತ್ತು.

- Advertisement -
- Advertisement -

ಜುಲೈ 16 ರಂದು ಕೊರೊನಾ ದೃಢಪಟ್ಟ ನಂತರ ಜೈಲಿನಲ್ಲಿದ್ದ 80 ವರ್ಷದ ಹೋರಾಟಗಾರ ಕವಿ ಮತ್ತು ಸಾಮಾಜಿಕ ಕಾರ್ಯಕರ್ತ ವರವರರಾವ್, ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಇನ್ನೂ ದೈಹಿಕವಾಗಿ ದುರ್ಬಲವಾಗಿಯೇ ಇದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.

“ಬಾಂಬೆ ಹೈಕೋರ್ಟ್‌ನ ನಿರ್ದೇಶನದಂತೆ, ಆಗಸ್ಟ್ 18 ರ ಮಂಗಳವಾರ ಅವರೊಂದಿಗೆ ವೀಡಿಯೊ ಕರೆ ಮಾಡಲು ನಮಗೆ ಅನುಮತಿ ನೀಡಲಾಯಿತು. ಅದೃಷ್ಟವಶಾತ್, ಅವರ ದೈಹಿಕ ಆರೋಗ್ಯ ಇನ್ನೂ ದುರ್ಬಲವಾಗಿದ್ದರೂ ಈ ಬಾರಿ ಅವರು ಸ್ಥಿಮಿತದಲ್ಲಿದ್ದರು” ಎಂದು ಅವರ ಸೋದರಳಿಯ ಎನ್ ವೇಣುಗೋಪಾಲ್ ದಿ ಕ್ವಿಂಟ್‌ಗೆ ಹೇಳಿದರು.

“ಪ್ರಸ್ತುತ ಅವರು ಕೊರೊನಾ ಸೋಂಕಿನಿಂದ ಗುಣವಾಗಿದ್ದಾರೆಯೇ ಎಂದೂ ತಿಳಿದಿಲ್ಲ. ಅಧಿಕಾರಿಗಳು ಅಥವಾ ವೈದ್ಯರಿಂದ ಯಾವುದೇ ಅಧಿಕೃತ ಹೊಸ ವಿಷಯಗಳು ತಿಳಿದುಬಂದಿಲ್ಲ. ಅವರು ಸಾಮಾನ್ಯವಾಗಿ ಎಲ್ಲಾ ವರದಿಗಳನ್ನು ನ್ಯಾಯಾಲಯಗಳಿಗೆ ಸಲ್ಲಿಸುತ್ತಾರೆ. ಯಾವುದೇ ಪರೀಕ್ಷಾ ಫಲಿತಾಂಶಗಳ ಬಗ್ಗೆ ಕುಟುಂಬಕ್ಕೆ ತಿಳಿಸಲಾಗಿಲ್ಲ” ಎಂದು ಅವರು ಆರೋಪಿಸಿದ್ದಾರೆ.

ಜುಲೈ 28 ರಂದು, ಮೂರು ದಿನಗಳಲ್ಲಿ ವರವರ ರಾವ್ ಅವರ ವೈದ್ಯಕೀಯ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಅಧಿಕಾರಿಗಳಿಗೆ ಸೂಚಿಸಿತ್ತು ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

“ಸೋಮವಾರ, ನ್ಯಾಯಪೀಠವು ಜುಲೈ 31 ರಂದು ಸಲ್ಲಿಸಿದ ವೈದ್ಯಕೀಯ ವರದಿಯನ್ನು ಪರಿಶೀಲಿಸಿದೆ” ಎಂದು ಹೇಳಿದರು.

ಆಗಸ್ಟ್ 17, ಸೋಮವಾರ, ಎಲ್ಗರ್ ಪರಿಷತ್ ಪ್ರಕರಣದಲ್ಲಿ ರಾವ್ ಅವರಿಗೆ ಜಾಮೀನು ನೀಡುವುದನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆಕ್ಷೇಪ ವ್ಯಕ್ತಪಡಿಸಿತ್ತು.

ಬಾಂಬೆ ಹೈಕೋರ್ಟ್ ರಾಜ್ಯ ಜೈಲು ಅಧಿಕಾರಿಗಳಿಗೆ ವರವರ ರಾವ್ ಅವರ ಕುಟುಂಬದೊಂದಿಗೆ ವೀಡಿಯೊ ಕರೆಯಲ್ಲಿ ಮಾತನಾಡಲು ಅವಕಾಶ ಕಲ್ಪಿಸುವಂತೆ ನಿರ್ದೇಶಿಸಿತ್ತು.

ಜುಲೈ 31 ರಂದು ವೀಡಿಯೊ ಕರೆಯ ನಂತರ, “ರಾವ್ ತನ್ನ ತಂದೆಯ ಸಾವಿನ ಬಗ್ಗೆ ಭ್ರಮನಿರಸನಗೊಂಡಿದ್ದಾರೆ. ಇದು ಅತ್ಯಂತ ದುರ್ಬಲ ಮತ್ತು ಅಸಂಗತ ವಿಷಯವಾಗಿದೆ” ಎಂದು ಅವರ ಕುಟುಂಬವು ಹೇಳಿಕೊಂಡಿತ್ತು.

ತಲೋಜಾ ಜೈಲಿನಲ್ಲಿದ್ದ ರಾವ್ ಅವರಿಗೆ ತಲೆಗೆ ಪೆಟ್ಟಾಗಿದ್ದರಿಂದ, ಸರ್ಕಾರ ನಡೆಸುತ್ತಿರುವ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಉತ್ತಮ ಚಿಕಿತ್ಸೆಗಾಗಿ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಮಹಾರಾಷ್ಟ್ರ ಸರ್ಕಾರದ ಪತ್ರಿಕಾ ಪ್ರಕಟಣೆಯ ಪ್ರಕಾರ, ಆಗಸ್ಟ್ 16 ರವರೆಗೆ, ತಲೋಜಾ ಜೈಲಿನಲ್ಲಿರುವ ಮೂವರು ಕೈದಿಗಳಿಗೆ ಕೊರೊನಾ ದೃಢಪಟ್ಟಿದ್ದು, ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಹೈಕೋರ್ಟಿನ ಆದೇಶದ ಪ್ರಕಾರ, ತಲೋಜಾ ಜೈಲು ಕೈದಿಗಳ ಮೇಲೆ 46 ಕ್ಷಿಪ್ರ ಕೊರೊನಾ ಪರೀಕ್ಷೆಗಳನ್ನು ನಡೆಸಿದೆ.

ಇತರ ಭೀಮಾ ಕೋರೆಗಾಂವ್ ಆರೋಪಿಗಳಾದ ಆನಂದ್ ತೇಲ್ದುಂಬ್ಡೆ ಮತ್ತು ವೆರ್ನಾನ್ ಗೊನ್ಸಾಲ್ವೆಸ್ ಸಹ ತಾಲೋಜ ಜೈಲಿನಲ್ಲಿದ್ದಾರೆ.

ಅವರೂ ಕೂಡ ಸಾಂಕ್ರಾಮಿಕ ಸಮಯದಲ್ಲಿ ಆರೋಗ್ಯ ಪರಿಸ್ಥಿತಿಯ ಆಧಾರದಲ್ಲಿ ಜಾಮೀನು ಕೋರಿದ್ದಾರೆ.


ಇದನ್ನೂ ಓದಿ: ಭೀಮಾ ಕೋರೆಗಾಂವ್; ಪ್ರಾಧ್ಯಾಪಕರ ಮೇಲಿನ NIA ಕಿರುಕುಳಕ್ಕೆ ವಿದ್ಯಾರ್ಥಿಗಳ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...