Homeಚಳವಳಿವರವರ ರಾವ್ ದೈಹಿಕವಾಗಿ ಇನ್ನೂ ದುರ್ಬಲವಾಗಿಯೇ ಇದ್ದಾರೆ: ಎನ್ ವೇಣುಗೋಪಾಲ್

ವರವರ ರಾವ್ ದೈಹಿಕವಾಗಿ ಇನ್ನೂ ದುರ್ಬಲವಾಗಿಯೇ ಇದ್ದಾರೆ: ಎನ್ ವೇಣುಗೋಪಾಲ್

ಎಲ್ಗರ್ ಪರಿಷತ್ ಪ್ರಕರಣದಲ್ಲಿ ವರವರ ರಾವ್ ಅವರ ಜಾಮೀನು ಅರ್ಜಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆಕ್ಷೇಪ ವ್ಯಕ್ತಪಡಿಸಿತ್ತು.

- Advertisement -
- Advertisement -

ಜುಲೈ 16 ರಂದು ಕೊರೊನಾ ದೃಢಪಟ್ಟ ನಂತರ ಜೈಲಿನಲ್ಲಿದ್ದ 80 ವರ್ಷದ ಹೋರಾಟಗಾರ ಕವಿ ಮತ್ತು ಸಾಮಾಜಿಕ ಕಾರ್ಯಕರ್ತ ವರವರರಾವ್, ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಇನ್ನೂ ದೈಹಿಕವಾಗಿ ದುರ್ಬಲವಾಗಿಯೇ ಇದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.

“ಬಾಂಬೆ ಹೈಕೋರ್ಟ್‌ನ ನಿರ್ದೇಶನದಂತೆ, ಆಗಸ್ಟ್ 18 ರ ಮಂಗಳವಾರ ಅವರೊಂದಿಗೆ ವೀಡಿಯೊ ಕರೆ ಮಾಡಲು ನಮಗೆ ಅನುಮತಿ ನೀಡಲಾಯಿತು. ಅದೃಷ್ಟವಶಾತ್, ಅವರ ದೈಹಿಕ ಆರೋಗ್ಯ ಇನ್ನೂ ದುರ್ಬಲವಾಗಿದ್ದರೂ ಈ ಬಾರಿ ಅವರು ಸ್ಥಿಮಿತದಲ್ಲಿದ್ದರು” ಎಂದು ಅವರ ಸೋದರಳಿಯ ಎನ್ ವೇಣುಗೋಪಾಲ್ ದಿ ಕ್ವಿಂಟ್‌ಗೆ ಹೇಳಿದರು.

“ಪ್ರಸ್ತುತ ಅವರು ಕೊರೊನಾ ಸೋಂಕಿನಿಂದ ಗುಣವಾಗಿದ್ದಾರೆಯೇ ಎಂದೂ ತಿಳಿದಿಲ್ಲ. ಅಧಿಕಾರಿಗಳು ಅಥವಾ ವೈದ್ಯರಿಂದ ಯಾವುದೇ ಅಧಿಕೃತ ಹೊಸ ವಿಷಯಗಳು ತಿಳಿದುಬಂದಿಲ್ಲ. ಅವರು ಸಾಮಾನ್ಯವಾಗಿ ಎಲ್ಲಾ ವರದಿಗಳನ್ನು ನ್ಯಾಯಾಲಯಗಳಿಗೆ ಸಲ್ಲಿಸುತ್ತಾರೆ. ಯಾವುದೇ ಪರೀಕ್ಷಾ ಫಲಿತಾಂಶಗಳ ಬಗ್ಗೆ ಕುಟುಂಬಕ್ಕೆ ತಿಳಿಸಲಾಗಿಲ್ಲ” ಎಂದು ಅವರು ಆರೋಪಿಸಿದ್ದಾರೆ.

ಜುಲೈ 28 ರಂದು, ಮೂರು ದಿನಗಳಲ್ಲಿ ವರವರ ರಾವ್ ಅವರ ವೈದ್ಯಕೀಯ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಅಧಿಕಾರಿಗಳಿಗೆ ಸೂಚಿಸಿತ್ತು ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

“ಸೋಮವಾರ, ನ್ಯಾಯಪೀಠವು ಜುಲೈ 31 ರಂದು ಸಲ್ಲಿಸಿದ ವೈದ್ಯಕೀಯ ವರದಿಯನ್ನು ಪರಿಶೀಲಿಸಿದೆ” ಎಂದು ಹೇಳಿದರು.

ಆಗಸ್ಟ್ 17, ಸೋಮವಾರ, ಎಲ್ಗರ್ ಪರಿಷತ್ ಪ್ರಕರಣದಲ್ಲಿ ರಾವ್ ಅವರಿಗೆ ಜಾಮೀನು ನೀಡುವುದನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆಕ್ಷೇಪ ವ್ಯಕ್ತಪಡಿಸಿತ್ತು.

ಬಾಂಬೆ ಹೈಕೋರ್ಟ್ ರಾಜ್ಯ ಜೈಲು ಅಧಿಕಾರಿಗಳಿಗೆ ವರವರ ರಾವ್ ಅವರ ಕುಟುಂಬದೊಂದಿಗೆ ವೀಡಿಯೊ ಕರೆಯಲ್ಲಿ ಮಾತನಾಡಲು ಅವಕಾಶ ಕಲ್ಪಿಸುವಂತೆ ನಿರ್ದೇಶಿಸಿತ್ತು.

ಜುಲೈ 31 ರಂದು ವೀಡಿಯೊ ಕರೆಯ ನಂತರ, “ರಾವ್ ತನ್ನ ತಂದೆಯ ಸಾವಿನ ಬಗ್ಗೆ ಭ್ರಮನಿರಸನಗೊಂಡಿದ್ದಾರೆ. ಇದು ಅತ್ಯಂತ ದುರ್ಬಲ ಮತ್ತು ಅಸಂಗತ ವಿಷಯವಾಗಿದೆ” ಎಂದು ಅವರ ಕುಟುಂಬವು ಹೇಳಿಕೊಂಡಿತ್ತು.

ತಲೋಜಾ ಜೈಲಿನಲ್ಲಿದ್ದ ರಾವ್ ಅವರಿಗೆ ತಲೆಗೆ ಪೆಟ್ಟಾಗಿದ್ದರಿಂದ, ಸರ್ಕಾರ ನಡೆಸುತ್ತಿರುವ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಉತ್ತಮ ಚಿಕಿತ್ಸೆಗಾಗಿ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಮಹಾರಾಷ್ಟ್ರ ಸರ್ಕಾರದ ಪತ್ರಿಕಾ ಪ್ರಕಟಣೆಯ ಪ್ರಕಾರ, ಆಗಸ್ಟ್ 16 ರವರೆಗೆ, ತಲೋಜಾ ಜೈಲಿನಲ್ಲಿರುವ ಮೂವರು ಕೈದಿಗಳಿಗೆ ಕೊರೊನಾ ದೃಢಪಟ್ಟಿದ್ದು, ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಹೈಕೋರ್ಟಿನ ಆದೇಶದ ಪ್ರಕಾರ, ತಲೋಜಾ ಜೈಲು ಕೈದಿಗಳ ಮೇಲೆ 46 ಕ್ಷಿಪ್ರ ಕೊರೊನಾ ಪರೀಕ್ಷೆಗಳನ್ನು ನಡೆಸಿದೆ.

ಇತರ ಭೀಮಾ ಕೋರೆಗಾಂವ್ ಆರೋಪಿಗಳಾದ ಆನಂದ್ ತೇಲ್ದುಂಬ್ಡೆ ಮತ್ತು ವೆರ್ನಾನ್ ಗೊನ್ಸಾಲ್ವೆಸ್ ಸಹ ತಾಲೋಜ ಜೈಲಿನಲ್ಲಿದ್ದಾರೆ.

ಅವರೂ ಕೂಡ ಸಾಂಕ್ರಾಮಿಕ ಸಮಯದಲ್ಲಿ ಆರೋಗ್ಯ ಪರಿಸ್ಥಿತಿಯ ಆಧಾರದಲ್ಲಿ ಜಾಮೀನು ಕೋರಿದ್ದಾರೆ.


ಇದನ್ನೂ ಓದಿ: ಭೀಮಾ ಕೋರೆಗಾಂವ್; ಪ್ರಾಧ್ಯಾಪಕರ ಮೇಲಿನ NIA ಕಿರುಕುಳಕ್ಕೆ ವಿದ್ಯಾರ್ಥಿಗಳ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...