Homeಮುಖಪುಟಕಾಂಗ್ರೆಸ್ ಅಧ್ಯಕ್ಷ ಸ್ಥಾನ; ಕುಟುಂಬದ ಹೊರಗಿನವರಿಗೆ ಆದ್ಯತೆ: ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ ಸ್ಥಾನ; ಕುಟುಂಬದ ಹೊರಗಿನವರಿಗೆ ಆದ್ಯತೆ: ಪ್ರಿಯಾಂಕಾ ಗಾಂಧಿ

ಆಗಸ್ಟ್ 13ರಂದು ಪ್ರಕಟಗೊಂಡಿರುವ 'ಇಂಡಿಯಾ ಟುಮಾರೋ: ಕಾನ್ವರ್ಸೇಷನ್ಸ್ ವಿತ್ ದಿ ನೆಕ್ಸ್ಟ್ ಜನರೇಷನ್ ಆಫ್ ಪೊಲಿಟಿಕಲ್ ಲೀಡರ್ಸ್' ಎಂಬ ಕೃತಿಯಲ್ಲಿ ನೀಡಿರುವ ಸಂದರ್ಶನದಲ್ಲಿ ಪ್ರಿಯಾಂಕಾ ಗಾಂಧಿ ಈ ಮಾತನ್ನು ಹೇಳಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಖಾಲಿಯಿರುವ ಅಧ್ಯಕ್ಷ ಸ್ಥಾನವನ್ನು ಭರ್ತಿ ಮಾಡಬೇಕು ಎಂಬ ಕೂಗು ಪಕ್ಷದ ಒಳಗಡೆಯೇ ಬಲವಾಗಿ ಕೇಳಿಬರುತ್ತಿರುವ ಸಂದರ್ಭದಲ್ಲಿ, ನಮ್ಮ ಕುಟುಂಬದ ಹೊರಗಿನವರಿಗೆ ಆಧ್ಯತೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಬಗೆಗೆ ಕುಟುಂಬ ರಾಜಕಾರಣದ ಟೀಕೆಯು ಹಲವು ವರ್ಷಗಳಿಂದ ಕೇಳಿಬರುತ್ತಿದ್ದು, ಈಗ ಅದಕ್ಕೆ ಅಂತ್ಯ ಹಾಡಬೇಕು ಎನ್ನುವಂತೆ ರಾಹುಲ್ ಗಾಂಧಿಯವರ ಅಭಿಪ್ರಾಯಕ್ಕೆ ತಮ್ಮ ಸಹಮತವನ್ನು ಪ್ರಿಯಾಂಕಾ ವ್ಯಕ್ತಪಡಿಸಿದ್ದಾರೆ.

ಆಗಸ್ಟ್ 13 ರಂದು ಪ್ರಕಟಗೊಂಡಿರುವ ಪ್ರದೀಪ್ ಛಿಬ್ಬರ್ ಮತ್ತು ಹರ್ಷ್ ಶಾ ಬರೆದಿರುವ ‘ಇಂಡಿಯಾ ಟುಮಾರೋ: ಕಾನ್ವರ್ಸೇಷನ್ಸ್ ವಿತ್ ದಿ ನೆಕ್ಸ್ಟ್ ಜನರೇಷನ್ ಆಫ್ ಪೊಲಿಟಿಕಲ್ ಲೀಡರ್ಸ್’ ಎಂಬ ಕೃತಿಯಲ್ಲಿ ನೀಡಿರುವ ಸಂದರ್ಶನದಲ್ಲಿ ಪ್ರಿಯಾಂಕಾ ಗಾಂಧಿ ಅಧ್ಯಕ್ಷ ಸ್ಥಾನದ ಕುರಿತು ಹೇಳಿದ್ದಾರೆ.

ಈ ಪುಸ್ತಕದಲ್ಲಿ ಪ್ರಿಯಾಂಕಾ ಗಾಂಧಿ ಅಲ್ಲದೇ, ರಾಹುಲ್ ಗಾಂಧಿ, ಆದಿತ್ಯ ಠಾಕ್ರೆ, ಆಖಿಲೇಶ್ ಯಾದವ್, ರಾಜ್ಯವರ್ಧನ್ ರಾಥೋಡ್, ಸುಪ್ರಿಯಾ ಸುಳೆ ಮುಂತಾದವರ ಸಂದರ್ಶನವೂ ಇದೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಸಂದರ್ಶನವನ್ನು 2019 ರ ಮಧ್ಯಪ್ರದೇಶ ಮತ್ತು ರಾಜಸ್ಥಾನ ಚುನಾವಣೆಗೂ ಮೊದಲು ನಡೆಸಲಾಗಿತ್ತು.

ನಮ್ಮ ಕುಟುಂಬದ ಹೊರಗಿನವರು ಅಧ್ಯಕ್ಷರಾಗಬೇಕು ಎಂಬ ಮಾತನ್ನು ರಾಹುಲ್ ಗಾಂಧಿ ರಾಜಿನಾಮೆ ಪತ್ರದಲ್ಲಿ ಹೇಳದಿದ್ದರೂ, ಹಲವು ಸಂದರ್ಭದಲ್ಲಿ ಈ ಮಾತನ್ನು ನಿರ್ದಿಷ್ಟವಾಗಿ ಹೇಳಿದ್ದಾರೆ. ಈ ಅಭಿಪ್ರಾಯಕ್ಕೆ ನನ್ನ ಸಂಪೂರ್ಣ ಸಹಮತವಿದೆ ಎಂದು ಪ್ರಿಯಾಂಕಾ ಹೇಳಿದ್ದಾರೆ.

ನಮ್ಮ ಕುಟುಂಬದ ಹೊರತಾಗಿ ಯಾರೇ ಅಧ್ಯಕ್ಷರಾದರೂ ಅವರೇ ನಮಗೆ ಬಾಸ್. ಅಧ್ಯಕ್ಷರು ನಾಳೆ ದಿನ ನನ್ನನ್ನು ಉತ್ತರಪ್ರದೇಶಕ್ಕೆ ಹೋಗುವುದು ಬೇಡ, ಅಂಡಾಮಾನ್ ನಿಕೋಬಾರ್‌ಗೆ ಹೋಗು ಎಂದೂ ಹೇಳಿದರೆ ನಾನು ಅವರ ಮಾತನ್ನು ಕೇಳಲೇಬೇಕು ಎಂದು ತಮ್ಮ ಸಂದರ್ಶನದಲ್ಲಿ ಹೇಳಿದ್ದಾರೆ.

ಈ ವಿಷಯಗಳೊಟ್ಟಿಗೆ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಹತ್ಯೆಗಳು ತಮ್ಮ ಬಾಲ್ಯದ ಮೇಲೆ ತುಂಬಾ ಪರಿಣಾಮ ಬೀರಿದೆ ಎಂದೂ ಹೇಳಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಇಂದಿನ ಸ್ಥಿತಿಯ ಬಗ್ಗೆ ಸ್ಪಷ್ವವಾಗಿ ಮಾತನಾಡಿದ್ದಾರೆ.

‘ಒಬ್ಬ ರಾಜಕಾರಣಿಯಾಗಿ ನಾನು ಜನರ ತೀರ್ಪನ್ನು ಗೌರವಿಸುತ್ತೇನೆ. ಮೋದಿ ನೇತೃತ್ವದ ಸರ್ಕಾರಕ್ಕೆ ಇನ್ನೊಂದು ಅವಕಾಶ ಕೊಡಬೇಕೆಂದು ಜನರು ಬಯಸಿದರು. ನಮಗೂ ಇನ್ನೊಂದು ಅವಕಾಶ ಕೊಡಿ. ಕಾಂಗ್ರೆಸ್ ಪಕ್ಷವು ಒಮ್ಮತದಿಂದ ದೇಶವನ್ನು ಮುನ್ನಡೆಸಲು ಬಯಸುತ್ತದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

‘ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಠೋರ ಮನಸ್ಥಿತಿ ಹೊಂದಿದೆ. ಇದನ್ನು ದೇಶದ ಜನರ ಮೇಲೆ ಹೇರುತ್ತಿದೆ. ತನ್ನ ಸಿದ್ಧಾಂತದ ಹೇರಿಕೆಯಿಂದಾಗಿ ಬಿಜೆಪಿ ವಿರುದ್ಧ ಜನರ ಆಕ್ರೋಷ ಹೆಚ್ಚಾಗುತ್ತಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಇದೇ ಕಾರಣವಾಗಲಿದೆ’ ಎಂದೂ ಹೇಳಿದ್ದಾರೆ.


ಇದನ್ನೂ ಓದೆ: ಹೊಸ ಅಧ್ಯಕ್ಷರು ಆಯ್ಕೆಯಾಗುವವರೆಗೂ ಸೋನಿಯಾ ಗಾಂಧಿ ಮುಂದುವರೆಯಲಿದ್ದಾರೆ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...