Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಸುಶಾಂತ್ ಸಿಂಗ್ ಸೊಸೆಯ ಬಗ್ಗೆ ಆಜ್‌ತಕ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿದ್ದ ಈ...

ಫ್ಯಾಕ್ಟ್‌ಚೆಕ್: ಸುಶಾಂತ್ ಸಿಂಗ್ ಸೊಸೆಯ ಬಗ್ಗೆ ಆಜ್‌ತಕ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿದ್ದ ಈ ವರದಿ ಸುಳ್ಳು

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್, ಮಾಧುರಿ ದೀಕ್ಷಿತ್ ಅವರ ಹಾಡು ‘ಚಾನೆ ಕೆ ಖೇತ್ ಮೇ’ ಗೆ ನೃತ್ಯ ಮಾಡುತ್ತಿರುವ ವೈರಲ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದರಲ್ಲಿ ನಟನು ತನ್ನ ಸೋದರ ಸೊಸೆ ಮಲ್ಲಿಕಾ ಅವರೊಂದಿಗೆ ನೃತ್ಯ ಮಾಡುತ್ತಿದ್ದಾರೆ ಎಂಬ ಸಂದೇಶಗಳು ಸೇರಿ ವ್ಯಾಪಕವಾಗಿ ಹರಿದಾಡುತ್ತಿದೆ.

ಅಷ್ಟೇ ಅಲ್ಲದೆ ಆಜ್‌‌ತಕ್ ಹಿಂದಿ ಸುದ್ದಿ ವಾಹಿನಿಯ ಕಾರ್ಯನಿರ್ವಾಹಕ ಸಂಪಾದಕಿ ಅಂಜನಾ ಓಂ ಕಶ್ಯಪ್ “ಸುಶಾಂತ್ ಸಿಂಗ್ ರಜಪೂತ್ ಅವರ ಈ ವಿಡಿಯೋವನ್ನೂ ನೋಡಿ. ಮಾವ-ಸೋದರ ಸೊಸೆಯ ಮೋಜು. ಕುಟುಂಬದ ಪ್ರೀತಿ! ಹಿರಿಯ ಸಹೋದರಿ ರಾಣಿಯ ಮಗಳು ಮಲ್ಲಿಕಾ ಸಿಂಗ್ ಅವರೊಂದಿಗೆ ಸುಶಾಂತ್ ನೃತ್ಯ ಮಾಡುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಆರ್ಕೈವ್ ಇಲ್ಲಿದೆ.

ಅಷ್ಟೇ ಅಲ್ಲದೆ ಸುಶಾಂತ್ ಸಿಂಗ್ ರಜಪೂತ್‌ ಕುಟುಂಬದಲ್ಲಿ ಎಲ್ಲರೂ ಚೆನ್ನಾಗಿಯೇ ಇದ್ದರು, “ಅಸಮಾಧಾನ” ದ ಯಾವುದೇ ಲಕ್ಷಣಗಳಿಲ್ಲ ಎಂದು ಹೇಳಲು ಟೈಮ್ಸ್ ನೌ ಈ ವೀಡಿಯೊವನ್ನು ಇಟ್ಟುಕೊಂಡು ಬುಲೆಟಿನ್ ಶೋ ಮಾಡಿತ್ತು.

ಆರ್ಕೈವ್ ಇಲ್ಲಿದೆ.

ಅಲ್ಲದೆ ಇದನ್ನು Times of India ಮತ್ತು Aaj Tak ನಂತಹ ಸುದ್ದಿ ಸಂಸ್ಥೆಗಳು ಕೂಡಾ ವರದಿ ಮಾಡಿವೆ.

ಆರ್ಕೈವ್‌ ಇಲ್ಲದೆ.
ಆರ್ಕೈವ್ ಇಲ್ಲಿದೆ

ಅಷ್ಟೇ ಅಲ್ಲದೆ ಎಬಿಪಿ ನ್ಯೂಸ್ ಹಿಂದಿ ಮತ್ತು ಇಂಡಿಯಾ ಟಿವಿಯೂ ಸಹ ಈ ವೈರಲ್ ವಿಡಿಯೋವನ್ನು ”ಸುಶಾಂತ್‌ ಸಿಂಗ್ ಅವರ ಸೋದರ ಸೊಸೆಯೊಂದಿಗಿನ ವಿಡಿಯೋ” ಎಂದು ವರದಿ ಮಾಡಿದೆ, ಆದರೆ ನಂತರ ಅದನ್ನು ತೆಗೆದು ಹಾಕಿದೆ.

ಫ್ಯಾಕ್ಟ್‌‌ಚೆಕ್

ವಾಸ್ತವವಾಗಿ ವಿಡಿಯೋದಲ್ಲಿ ಇರುವುದು ಸುಶಾಂತ್ ಸಿಂಗ್ ರಜಪೂತ್ ಆಗಿದ್ದರೂ ಅವರ ಜೊತೆ ನೃತ್ಯ ಮಾಡುತ್ತಿರುವುದು ಅವರ ಸೋದರ ಸೊಸೆಯಲ್ಲ, ನೃತ್ಯ ಸಂಯೋಜಕಿ ಮನ್‌ಪ್ರೀತ್ ಟೂರ್ ಆಗಿದ್ದಾರೆ. ಈ ವಿಡಿಯೊ 2017 ದ್ದಾಗಿದೆ.

ವೈರಲ್ ವೀಡಿಯೊವನ್ನು ರಿವರ್ಸ್ ಸರ್ಚ್ ಮಾಡಿದಾಗ ಅದು ಪಿಂಕ್‌ವಿಲ್ಲ ಎಂಬ ವೆಬ್‌ಸೈಟಿನಲ್ಲಿರುವ ಲೇಖನವನ್ನು ತೋರಿಸಿದೆ. ಇದರಲ್ಲಿ ವಿಡಿಯೊ ಸಹ ಇದೆ. ಇದರ ವರದಿಯಲ್ಲಿ “ಸುಶಾಂತ್ ಯೂಟ್ಯೂಬರ್ ಮತ್ತು ನೃತ್ಯ ಸಂಯೋಜಕಿ ಮನ್ಪ್ರೀತ್ ಟೂರ್ ಅವರೊಂದಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಈ ಜೋಡಿ ಮಾಧುರಿ ದೀಕ್ಷಿತ್ ಅವರ ಜನಪ್ರಿಯ ಹಾಡು ‘ಚಾನೆ ಕೆ ಖೇತ್ ಮೇ’ ನಲ್ಲಿ ನೃತ್ಯ ಮಾಡುತ್ತಿದ್ದಾರೆ. ಸುಶಾಂತ್ ಉತ್ಸಾಹಭರಿತ ವ್ಯಕ್ತಿತ್ವ ಹೊಂದಿದ್ದನೆಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ” ಎಂದು ಬರೆಯಲಾಗಿದೆ.

ನಂತರ ಕೀವರ್ಡ್ ಮೂಲಕ ಹುಡುಕಾಡಿದಾಗ ಜೂನ್ 4 2017 ರಂದು ಮನ್‌ಪ್ರೀತ್ ಟೂರ್ ತಮ್ಮ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ಗೆ ಅಪ್‌ಲೋಡ್ ಮಾಡಿದ ಚಿತ್ರವನ್ನು ಕಾಣಬಹುದು. ಅದಲ್ಲಿ ಮನ್‌ಪ್ರೀತ್‌ ಮತ್ತು ಸುಶಾಂತ್ ವೈರಲ್ ವಿಡಿಯೊದಲ್ಲಿ ಇರುವ ಬಟ್ಟೆಯಲ್ಲಿ ಕಾಣಬಹುದಾಗಿದೆ.

ಮನ್‌ಪ್ರೀತ್ ತನ್ನ ನಿನ್ನೆ ತನ್ನ ಇನ್ಸ್ಟ್ರಾಗ್ರಾಮ್‌ನಲ್ಲಿ ಸ್ಪಷ್ಟೀಕರಣವನ್ನು ಸಹ ನೀಡಿದ್ದಾರೆ. “ನಾವು ಪತ್ರಿಕೆಯಲ್ಲಿ ಓದಿದ ಎಲ್ಲವನ್ನೂ ನಂಬಲು ಸಾಧ್ಯವಿಲ್ಲ. ಆದರೆ ಇದನ್ನು ಹಂಚಿಕೊಂಡಿದ್ದಕ್ಕಾಗಿ ಧನ್ಯವಾದಗಳು” ಎಂಬ ಶೀರ್ಷಿಕೆಯೊಂದಿಗೆ ಅವರು ವೈರಲ್ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಒಟ್ಟಿನಲ್ಲಿ ಈ ವಿಡಿಯೋ ಸುಶಾಂತ್ ಸಿಂಗ್ ರಜಪೂತ್ ತನ್ನ ಸೋದರ ಸೊಸೆಯೊಂದಿಗೆ ನೃತ್ಯ ಮಾಡುತ್ತಿದ್ದಂತೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.


ಓದಿ: ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...