Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಸುಶಾಂತ್ ಸಿಂಗ್ ಸೊಸೆಯ ಬಗ್ಗೆ ಆಜ್‌ತಕ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿದ್ದ ಈ...

ಫ್ಯಾಕ್ಟ್‌ಚೆಕ್: ಸುಶಾಂತ್ ಸಿಂಗ್ ಸೊಸೆಯ ಬಗ್ಗೆ ಆಜ್‌ತಕ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿದ್ದ ಈ ವರದಿ ಸುಳ್ಳು

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್, ಮಾಧುರಿ ದೀಕ್ಷಿತ್ ಅವರ ಹಾಡು ‘ಚಾನೆ ಕೆ ಖೇತ್ ಮೇ’ ಗೆ ನೃತ್ಯ ಮಾಡುತ್ತಿರುವ ವೈರಲ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದರಲ್ಲಿ ನಟನು ತನ್ನ ಸೋದರ ಸೊಸೆ ಮಲ್ಲಿಕಾ ಅವರೊಂದಿಗೆ ನೃತ್ಯ ಮಾಡುತ್ತಿದ್ದಾರೆ ಎಂಬ ಸಂದೇಶಗಳು ಸೇರಿ ವ್ಯಾಪಕವಾಗಿ ಹರಿದಾಡುತ್ತಿದೆ.

ಅಷ್ಟೇ ಅಲ್ಲದೆ ಆಜ್‌‌ತಕ್ ಹಿಂದಿ ಸುದ್ದಿ ವಾಹಿನಿಯ ಕಾರ್ಯನಿರ್ವಾಹಕ ಸಂಪಾದಕಿ ಅಂಜನಾ ಓಂ ಕಶ್ಯಪ್ “ಸುಶಾಂತ್ ಸಿಂಗ್ ರಜಪೂತ್ ಅವರ ಈ ವಿಡಿಯೋವನ್ನೂ ನೋಡಿ. ಮಾವ-ಸೋದರ ಸೊಸೆಯ ಮೋಜು. ಕುಟುಂಬದ ಪ್ರೀತಿ! ಹಿರಿಯ ಸಹೋದರಿ ರಾಣಿಯ ಮಗಳು ಮಲ್ಲಿಕಾ ಸಿಂಗ್ ಅವರೊಂದಿಗೆ ಸುಶಾಂತ್ ನೃತ್ಯ ಮಾಡುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಆರ್ಕೈವ್ ಇಲ್ಲಿದೆ.

ಅಷ್ಟೇ ಅಲ್ಲದೆ ಸುಶಾಂತ್ ಸಿಂಗ್ ರಜಪೂತ್‌ ಕುಟುಂಬದಲ್ಲಿ ಎಲ್ಲರೂ ಚೆನ್ನಾಗಿಯೇ ಇದ್ದರು, “ಅಸಮಾಧಾನ” ದ ಯಾವುದೇ ಲಕ್ಷಣಗಳಿಲ್ಲ ಎಂದು ಹೇಳಲು ಟೈಮ್ಸ್ ನೌ ಈ ವೀಡಿಯೊವನ್ನು ಇಟ್ಟುಕೊಂಡು ಬುಲೆಟಿನ್ ಶೋ ಮಾಡಿತ್ತು.

ಆರ್ಕೈವ್ ಇಲ್ಲಿದೆ.

ಅಲ್ಲದೆ ಇದನ್ನು Times of India ಮತ್ತು Aaj Tak ನಂತಹ ಸುದ್ದಿ ಸಂಸ್ಥೆಗಳು ಕೂಡಾ ವರದಿ ಮಾಡಿವೆ.

ಆರ್ಕೈವ್‌ ಇಲ್ಲದೆ.
ಆರ್ಕೈವ್ ಇಲ್ಲಿದೆ

ಅಷ್ಟೇ ಅಲ್ಲದೆ ಎಬಿಪಿ ನ್ಯೂಸ್ ಹಿಂದಿ ಮತ್ತು ಇಂಡಿಯಾ ಟಿವಿಯೂ ಸಹ ಈ ವೈರಲ್ ವಿಡಿಯೋವನ್ನು ”ಸುಶಾಂತ್‌ ಸಿಂಗ್ ಅವರ ಸೋದರ ಸೊಸೆಯೊಂದಿಗಿನ ವಿಡಿಯೋ” ಎಂದು ವರದಿ ಮಾಡಿದೆ, ಆದರೆ ನಂತರ ಅದನ್ನು ತೆಗೆದು ಹಾಕಿದೆ.

ಫ್ಯಾಕ್ಟ್‌‌ಚೆಕ್

ವಾಸ್ತವವಾಗಿ ವಿಡಿಯೋದಲ್ಲಿ ಇರುವುದು ಸುಶಾಂತ್ ಸಿಂಗ್ ರಜಪೂತ್ ಆಗಿದ್ದರೂ ಅವರ ಜೊತೆ ನೃತ್ಯ ಮಾಡುತ್ತಿರುವುದು ಅವರ ಸೋದರ ಸೊಸೆಯಲ್ಲ, ನೃತ್ಯ ಸಂಯೋಜಕಿ ಮನ್‌ಪ್ರೀತ್ ಟೂರ್ ಆಗಿದ್ದಾರೆ. ಈ ವಿಡಿಯೊ 2017 ದ್ದಾಗಿದೆ.

ವೈರಲ್ ವೀಡಿಯೊವನ್ನು ರಿವರ್ಸ್ ಸರ್ಚ್ ಮಾಡಿದಾಗ ಅದು ಪಿಂಕ್‌ವಿಲ್ಲ ಎಂಬ ವೆಬ್‌ಸೈಟಿನಲ್ಲಿರುವ ಲೇಖನವನ್ನು ತೋರಿಸಿದೆ. ಇದರಲ್ಲಿ ವಿಡಿಯೊ ಸಹ ಇದೆ. ಇದರ ವರದಿಯಲ್ಲಿ “ಸುಶಾಂತ್ ಯೂಟ್ಯೂಬರ್ ಮತ್ತು ನೃತ್ಯ ಸಂಯೋಜಕಿ ಮನ್ಪ್ರೀತ್ ಟೂರ್ ಅವರೊಂದಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಈ ಜೋಡಿ ಮಾಧುರಿ ದೀಕ್ಷಿತ್ ಅವರ ಜನಪ್ರಿಯ ಹಾಡು ‘ಚಾನೆ ಕೆ ಖೇತ್ ಮೇ’ ನಲ್ಲಿ ನೃತ್ಯ ಮಾಡುತ್ತಿದ್ದಾರೆ. ಸುಶಾಂತ್ ಉತ್ಸಾಹಭರಿತ ವ್ಯಕ್ತಿತ್ವ ಹೊಂದಿದ್ದನೆಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ” ಎಂದು ಬರೆಯಲಾಗಿದೆ.

ನಂತರ ಕೀವರ್ಡ್ ಮೂಲಕ ಹುಡುಕಾಡಿದಾಗ ಜೂನ್ 4 2017 ರಂದು ಮನ್‌ಪ್ರೀತ್ ಟೂರ್ ತಮ್ಮ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ಗೆ ಅಪ್‌ಲೋಡ್ ಮಾಡಿದ ಚಿತ್ರವನ್ನು ಕಾಣಬಹುದು. ಅದಲ್ಲಿ ಮನ್‌ಪ್ರೀತ್‌ ಮತ್ತು ಸುಶಾಂತ್ ವೈರಲ್ ವಿಡಿಯೊದಲ್ಲಿ ಇರುವ ಬಟ್ಟೆಯಲ್ಲಿ ಕಾಣಬಹುದಾಗಿದೆ.

ಮನ್‌ಪ್ರೀತ್ ತನ್ನ ನಿನ್ನೆ ತನ್ನ ಇನ್ಸ್ಟ್ರಾಗ್ರಾಮ್‌ನಲ್ಲಿ ಸ್ಪಷ್ಟೀಕರಣವನ್ನು ಸಹ ನೀಡಿದ್ದಾರೆ. “ನಾವು ಪತ್ರಿಕೆಯಲ್ಲಿ ಓದಿದ ಎಲ್ಲವನ್ನೂ ನಂಬಲು ಸಾಧ್ಯವಿಲ್ಲ. ಆದರೆ ಇದನ್ನು ಹಂಚಿಕೊಂಡಿದ್ದಕ್ಕಾಗಿ ಧನ್ಯವಾದಗಳು” ಎಂಬ ಶೀರ್ಷಿಕೆಯೊಂದಿಗೆ ಅವರು ವೈರಲ್ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಒಟ್ಟಿನಲ್ಲಿ ಈ ವಿಡಿಯೋ ಸುಶಾಂತ್ ಸಿಂಗ್ ರಜಪೂತ್ ತನ್ನ ಸೋದರ ಸೊಸೆಯೊಂದಿಗೆ ನೃತ್ಯ ಮಾಡುತ್ತಿದ್ದಂತೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.


ಓದಿ: ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...