Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಸುಶಾಂತ್ ಸಿಂಗ್ ಸೊಸೆಯ ಬಗ್ಗೆ ಆಜ್‌ತಕ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿದ್ದ ಈ...

ಫ್ಯಾಕ್ಟ್‌ಚೆಕ್: ಸುಶಾಂತ್ ಸಿಂಗ್ ಸೊಸೆಯ ಬಗ್ಗೆ ಆಜ್‌ತಕ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿದ್ದ ಈ ವರದಿ ಸುಳ್ಳು

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್, ಮಾಧುರಿ ದೀಕ್ಷಿತ್ ಅವರ ಹಾಡು ‘ಚಾನೆ ಕೆ ಖೇತ್ ಮೇ’ ಗೆ ನೃತ್ಯ ಮಾಡುತ್ತಿರುವ ವೈರಲ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದರಲ್ಲಿ ನಟನು ತನ್ನ ಸೋದರ ಸೊಸೆ ಮಲ್ಲಿಕಾ ಅವರೊಂದಿಗೆ ನೃತ್ಯ ಮಾಡುತ್ತಿದ್ದಾರೆ ಎಂಬ ಸಂದೇಶಗಳು ಸೇರಿ ವ್ಯಾಪಕವಾಗಿ ಹರಿದಾಡುತ್ತಿದೆ.

ಅಷ್ಟೇ ಅಲ್ಲದೆ ಆಜ್‌‌ತಕ್ ಹಿಂದಿ ಸುದ್ದಿ ವಾಹಿನಿಯ ಕಾರ್ಯನಿರ್ವಾಹಕ ಸಂಪಾದಕಿ ಅಂಜನಾ ಓಂ ಕಶ್ಯಪ್ “ಸುಶಾಂತ್ ಸಿಂಗ್ ರಜಪೂತ್ ಅವರ ಈ ವಿಡಿಯೋವನ್ನೂ ನೋಡಿ. ಮಾವ-ಸೋದರ ಸೊಸೆಯ ಮೋಜು. ಕುಟುಂಬದ ಪ್ರೀತಿ! ಹಿರಿಯ ಸಹೋದರಿ ರಾಣಿಯ ಮಗಳು ಮಲ್ಲಿಕಾ ಸಿಂಗ್ ಅವರೊಂದಿಗೆ ಸುಶಾಂತ್ ನೃತ್ಯ ಮಾಡುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಆರ್ಕೈವ್ ಇಲ್ಲಿದೆ.

ಅಷ್ಟೇ ಅಲ್ಲದೆ ಸುಶಾಂತ್ ಸಿಂಗ್ ರಜಪೂತ್‌ ಕುಟುಂಬದಲ್ಲಿ ಎಲ್ಲರೂ ಚೆನ್ನಾಗಿಯೇ ಇದ್ದರು, “ಅಸಮಾಧಾನ” ದ ಯಾವುದೇ ಲಕ್ಷಣಗಳಿಲ್ಲ ಎಂದು ಹೇಳಲು ಟೈಮ್ಸ್ ನೌ ಈ ವೀಡಿಯೊವನ್ನು ಇಟ್ಟುಕೊಂಡು ಬುಲೆಟಿನ್ ಶೋ ಮಾಡಿತ್ತು.

ಆರ್ಕೈವ್ ಇಲ್ಲಿದೆ.

ಅಲ್ಲದೆ ಇದನ್ನು Times of India ಮತ್ತು Aaj Tak ನಂತಹ ಸುದ್ದಿ ಸಂಸ್ಥೆಗಳು ಕೂಡಾ ವರದಿ ಮಾಡಿವೆ.

ಆರ್ಕೈವ್‌ ಇಲ್ಲದೆ.
ಆರ್ಕೈವ್ ಇಲ್ಲಿದೆ

ಅಷ್ಟೇ ಅಲ್ಲದೆ ಎಬಿಪಿ ನ್ಯೂಸ್ ಹಿಂದಿ ಮತ್ತು ಇಂಡಿಯಾ ಟಿವಿಯೂ ಸಹ ಈ ವೈರಲ್ ವಿಡಿಯೋವನ್ನು ”ಸುಶಾಂತ್‌ ಸಿಂಗ್ ಅವರ ಸೋದರ ಸೊಸೆಯೊಂದಿಗಿನ ವಿಡಿಯೋ” ಎಂದು ವರದಿ ಮಾಡಿದೆ, ಆದರೆ ನಂತರ ಅದನ್ನು ತೆಗೆದು ಹಾಕಿದೆ.

ಫ್ಯಾಕ್ಟ್‌‌ಚೆಕ್

ವಾಸ್ತವವಾಗಿ ವಿಡಿಯೋದಲ್ಲಿ ಇರುವುದು ಸುಶಾಂತ್ ಸಿಂಗ್ ರಜಪೂತ್ ಆಗಿದ್ದರೂ ಅವರ ಜೊತೆ ನೃತ್ಯ ಮಾಡುತ್ತಿರುವುದು ಅವರ ಸೋದರ ಸೊಸೆಯಲ್ಲ, ನೃತ್ಯ ಸಂಯೋಜಕಿ ಮನ್‌ಪ್ರೀತ್ ಟೂರ್ ಆಗಿದ್ದಾರೆ. ಈ ವಿಡಿಯೊ 2017 ದ್ದಾಗಿದೆ.

ವೈರಲ್ ವೀಡಿಯೊವನ್ನು ರಿವರ್ಸ್ ಸರ್ಚ್ ಮಾಡಿದಾಗ ಅದು ಪಿಂಕ್‌ವಿಲ್ಲ ಎಂಬ ವೆಬ್‌ಸೈಟಿನಲ್ಲಿರುವ ಲೇಖನವನ್ನು ತೋರಿಸಿದೆ. ಇದರಲ್ಲಿ ವಿಡಿಯೊ ಸಹ ಇದೆ. ಇದರ ವರದಿಯಲ್ಲಿ “ಸುಶಾಂತ್ ಯೂಟ್ಯೂಬರ್ ಮತ್ತು ನೃತ್ಯ ಸಂಯೋಜಕಿ ಮನ್ಪ್ರೀತ್ ಟೂರ್ ಅವರೊಂದಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಈ ಜೋಡಿ ಮಾಧುರಿ ದೀಕ್ಷಿತ್ ಅವರ ಜನಪ್ರಿಯ ಹಾಡು ‘ಚಾನೆ ಕೆ ಖೇತ್ ಮೇ’ ನಲ್ಲಿ ನೃತ್ಯ ಮಾಡುತ್ತಿದ್ದಾರೆ. ಸುಶಾಂತ್ ಉತ್ಸಾಹಭರಿತ ವ್ಯಕ್ತಿತ್ವ ಹೊಂದಿದ್ದನೆಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ” ಎಂದು ಬರೆಯಲಾಗಿದೆ.

ನಂತರ ಕೀವರ್ಡ್ ಮೂಲಕ ಹುಡುಕಾಡಿದಾಗ ಜೂನ್ 4 2017 ರಂದು ಮನ್‌ಪ್ರೀತ್ ಟೂರ್ ತಮ್ಮ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ಗೆ ಅಪ್‌ಲೋಡ್ ಮಾಡಿದ ಚಿತ್ರವನ್ನು ಕಾಣಬಹುದು. ಅದಲ್ಲಿ ಮನ್‌ಪ್ರೀತ್‌ ಮತ್ತು ಸುಶಾಂತ್ ವೈರಲ್ ವಿಡಿಯೊದಲ್ಲಿ ಇರುವ ಬಟ್ಟೆಯಲ್ಲಿ ಕಾಣಬಹುದಾಗಿದೆ.

ಮನ್‌ಪ್ರೀತ್ ತನ್ನ ನಿನ್ನೆ ತನ್ನ ಇನ್ಸ್ಟ್ರಾಗ್ರಾಮ್‌ನಲ್ಲಿ ಸ್ಪಷ್ಟೀಕರಣವನ್ನು ಸಹ ನೀಡಿದ್ದಾರೆ. “ನಾವು ಪತ್ರಿಕೆಯಲ್ಲಿ ಓದಿದ ಎಲ್ಲವನ್ನೂ ನಂಬಲು ಸಾಧ್ಯವಿಲ್ಲ. ಆದರೆ ಇದನ್ನು ಹಂಚಿಕೊಂಡಿದ್ದಕ್ಕಾಗಿ ಧನ್ಯವಾದಗಳು” ಎಂಬ ಶೀರ್ಷಿಕೆಯೊಂದಿಗೆ ಅವರು ವೈರಲ್ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಒಟ್ಟಿನಲ್ಲಿ ಈ ವಿಡಿಯೋ ಸುಶಾಂತ್ ಸಿಂಗ್ ರಜಪೂತ್ ತನ್ನ ಸೋದರ ಸೊಸೆಯೊಂದಿಗೆ ನೃತ್ಯ ಮಾಡುತ್ತಿದ್ದಂತೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.


ಓದಿ: ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...