Homeಮುಖಪುಟಜಾತಿ-ತಾರತಮ್ಯ: ವರದಿ ಮಾಡಿದ್ದ ತಮಿಳುನಾಡಿನ ಪತ್ರಕರ್ತನ ಮೇಲೆ ಹಲ್ಲೆ

ಜಾತಿ-ತಾರತಮ್ಯ: ವರದಿ ಮಾಡಿದ್ದ ತಮಿಳುನಾಡಿನ ಪತ್ರಕರ್ತನ ಮೇಲೆ ಹಲ್ಲೆ

ಅತ್ತುಪಾಕಂನ ಪಂಚಾಯತಿಯ ಮುಖಂಡರಾದ ಅಮೃತಂ ಎಂಬವರು ದಲಿತೆ ಎಂಬ ಕಾರಣಕ್ಕೆ ಸ್ವಾತಂತ್ರ್ಯ ದಿನಾಚರಣೆಯಂದು ಶಾಲೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಅವಕಾಶ ನೀಡಿದ ಕುರಿತು, ಅವರು ಎದುರಿಸುತ್ತಿರುವ ಜಾತಿ ಆಧಾರಿತ ತಾರತಮ್ಯದ ಬಗ್ಗೆ ವರದಿ ಮಾಡಲು ವರದಿಗಾರ ಸ್ಥಳಕ್ಕೆ ಭೇಟಿ ನೀಡಿದ್ದರು.

- Advertisement -
- Advertisement -

ಗುಮ್ಮಿಡಿಪೂಂಡಿಯದ ಅತ್ತುಪಾಕಂನಲ್ಲಿನ ಜಾತಿ-ತಾರತಮ್ಯದ ವಿರುದ್ಧ ವರದಿ ಮಾಡಿದ್ದಕ್ಕಾಗಿ, ಪ್ರಮುಖ ತಮಿಳು ಸುದ್ದಿ ವಾಹಿನಿಯ ಪತ್ರಕರ್ತನ ಮೇಲೆ, ಅಲ್ಲಿನ ಪಂಚಾಯಿತಿಯ ಪದಾಧಿಕಾರಿಗಳು ಮಂಗಳವಾರ ಹಲ್ಲೆ ನಡೆಸಿದ್ದಾರೆ.

ಅತ್ತುಪಾಕಂನ ಪಂಚಾಯತಿಯ ಮುಖಂಡರಾದ ಅಮೃತಂ ದಲಿತೆ ಎಂಬ ಕಾರಣಕ್ಕೆ ಸ್ವಾತಂತ್ರ್ಯ ದಿನಾಚರಣೆಯಂದು ಶಾಲೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಅವಕಾಶ ನೀಡಿರಲಿಲ್ಲ. ಇದರ ಕುರಿತು, ಅವರು ಎದುರಿಸುತ್ತಿರುವ ಜಾತಿ ಆಧಾರಿತ ತಾರತಮ್ಯದ ಬಗ್ಗೆ ವರದಿ ಮಾಡಲು ವರದಿಗಾರ ಸ್ಥಳಕ್ಕೆ ಭೇಟಿ ನೀಡಿದ್ದರು.

ಪುದಿಯ ತಲೈಮುರೈ ಚಾನೆಲ್‌ನಲ್ಲಿ ಕೆಲಸ ಮಾಡುತ್ತಿರುವ ವರದಿಗಾರ ಎಳಿಲ್ ತನ್ನನ್ನು ಪರಿಚಯಿಸಿಕೊಂಡ ಕೂಡಲೇ, ಅತ್ತುಪಾಕಂನಲ್ಲಿ ಸುಮಾರು ಐದು ಮಂದಿ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವಿಷಯವನ್ನು ವರದಿ ಮಾಡಲು ಮುಂದೆ ಬಂದಿದ್ದಕ್ಕಾಗಿ ಅವರನ್ನು ವೈಯಕ್ತಿಕ ಬಂಧನದಲ್ಲಿರಿಸಲಾಗಿತ್ತು.

ದಿ ನ್ಯೂಸ್ ಮಿನಿಟ್ ಜೊತೆ ಮಾತನಾಡಿದ ಎಳಿಲ್, “ಉಪಾಧ್ಯಕ್ಷರ ಪತಿ ಮತ್ತು ಪಂಚಾಯತ್ ಕಾರ್ಯದರ್ಶಿ ಸೇರಿದಂತೆ ಐದು ಜನರು ನನ್ನ ಮೇಲೆ ಹಲ್ಲೆ ನಡೆಸಿದರು. ಅವರು ನನ್ನ ಫೋನ್ ಕಿತ್ತು ಬೆಳಿಗ್ಗೆ 10.30 ಕ್ಕೆ ನನ್ನನ್ನು ಕೋಣೆಗೆ ತಳ್ಳಿ ಬೀಗ ಹಾಕಿದರು. ದಾಳಿಯಲ್ಲಿ, ನನ್ನ ಕಣ್ಣು ಮತ್ತು ಎದೆಗೆ ಗಾಯಗಳಾಗಿವೆ” ಎಂದು ಹೇಳಿದ್ದಾರೆ.

“ನಾನು ಗುಮ್ಮುಡಿಪೂಂಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ. ಇಬ್ಬರನ್ನು ಬಂಧಿಸಲಾಗಿದೆ” ಎಂದು ಅವರು ಹೇಳಿದರು.

“ನಾವು ದೂರಿನ ಬಗ್ಗೆ ಕ್ರಮ ಕೈಗೊಂಡಿದ್ದೇವೆ. ಈಗಾಗಲೆ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಗುಮ್ಮುಡಿಪೂಂಡಿ ಪೊಲೀಸ್ ಇನ್ಸ್‌ಪೆಕ್ಟರ್ ರಾಜೇಂದ್ರನ್ ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147 (ಗಲಭೆಗೆ ಶಿಕ್ಷೆ), ಸೆಕ್ಷನ್ 342 (ತಪ್ಪಾಗಿ ಬಂಧನಕ್ಕೊಳಪಡಿಸಿದ್ದಕ್ಕೆ ಶಿಕ್ಷೆ) ಮತ್ತು ಸೆಕ್ಷನ್ 323 (ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡಿರುವುದಕ್ಕೆ ಶಿಕ್ಷೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಪಂಚಾಯತ್‌ನ ಮುಖಂಡರಾದ ಅಮೃತಂ ದಲಿತ ಮಹಿಳೆಯಾಗಿರುವ ಕಾರಣಕ್ಕೆ, ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜವನ್ನು ಹಾರಿಸುವುದಕ್ಕೆ ಪಂಚಾಯತ್ ಪದಾಧಿಕಾರಿಗಳು ಮತ್ತು ಜಾತಿವಾದಿಗಳು ಅವಕಾಶ ಕೊಟ್ಟಿರಲಿಲ್ಲ. ಈ ಕ್ಷೇತ್ರವನ್ನು ಪರಿಶಿಷ್ಟ ಜಾತಿ ಸಮುದಾಯಕ್ಕೆ ಕಾಯ್ದಿರಿಸಿದ ಸ್ಥಾನವೆಂದು ಘೋಷಿಸಿದ ನಂತರ ಅಮೃತಂ ಅವರು ಅತ್ತುಪಕ್ಕಂನಿಂದ ಆಯ್ಕೆಯಾದ ಮೊದಲ ಪಂಚಾಯತ್ ನಾಯಕಿಯಾಗಿದ್ದರು.

ಕಳೆದ ವಾರ, ಸ್ವಾತಂತ್ರ್ಯ ದಿನಾಚರಣೆಗೆ ರಾಷ್ಟ್ರಧ್ವಜವನ್ನು ಹಾರಿಸಲು ಅಮೃತಂ ಅವರನ್ನು ಶಾಲೆಯ ಮುಖ್ಯೋಪಾಧ್ಯಾಯರು ಆಹ್ವಾನಿಸಿದ್ದರು. ಆದರೆ ಮುಖ್ಯೋಪಾಧ್ಯಾಯರು ಮತ್ತೆ ಆವರಿಗೆ ಕರೆಮಾಡಿ ಕಾರ್ಯಕ್ರಮಕ್ಕೆ ಬರಬಾರದೆಂದು ಹೇಳಿದ್ದರು.

ಅಮೃತಂ ಅವರು ಇದೇ ರೀತಿಯ ತಾರತಮ್ಯವನ್ನು ಹಲವು ಬಾರಿ ಎದುರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮಾಜಿ ಪಂಚಾಯತ್ ಅಧ್ಯಕ್ಷರು ತಮ್ಮನ್ನು ಮಾತಿನಿಂದ ನಿಂದಿಸಿದ್ದಾರೆ. ಪಂಚಾಯತ್ ಕಾರ್ಯದರ್ಶಿ, ನಾನು ಸಹಿ ಮಾಡಬೇಕಾದ ಪತ್ರಗಳನ್ನು ನನಗೆ ಓದಲು ಸಾಧ್ಯವಾಗದಂತೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪಂಚಾಯತ್ ಮುಖಂಡರಿಗೆ ಮೀಸಲಾದ ಕುರ್ಚಿಯನ್ನು ಬಳಸಲು ಅವರಿಗೆ ಅನುಮತಿ ಇಲ್ಲ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ: ಮೇಲ್ಜಾತಿಗಳಿಗೆ 10% ಮೀಸಲಾತಿಯೆಂಬುದು ಮಹಾ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...