Homeಮುಖಪುಟದ್ವೇಷ ಭಾಷಣ: ಕ್ರಿಮಿನಲ್ ಕಾನೂನಿನ ಬದಲಾವಣೆ ಈಗಿನ ತುರ್ತ: ತಜ್ಞರ ಸಮಿತಿ

ದ್ವೇಷ ಭಾಷಣ: ಕ್ರಿಮಿನಲ್ ಕಾನೂನಿನ ಬದಲಾವಣೆ ಈಗಿನ ತುರ್ತ: ತಜ್ಞರ ಸಮಿತಿ

- Advertisement -
- Advertisement -

ದ್ವೇಷ ಭಾಷಣ ನಿಯಂತ್ರಣದ ಕಾನೂನಿಗೆ ಬದಲಾವಣೆಯ ಅಗತ್ಯತೆ ಈಗಿನ ತುರ್ತು ಎಂದು, ಮೂರು ವರ್ಷಗಳ ಹಿಂದೆ ಐಪಿಸಿ, ಸಿಆರ್‌ಪಿಸಿ, ಮಾಹಿತಿ ತಂತ್ರಜ್ಞಾನ ಕಾಯ್ದೆಯಲ್ಲಿನ ಕೆಲವು ಬದಲಾವಣೆಗಳ ಕುರಿತು ಮತ್ತು ದ್ವೇಷದ ಭಾಷಣದ ಕುರಿತ ವಿಶಾಲವಾದ ವ್ಯಾಖ್ಯಾನಕ್ಕೆ ನಿಯೋಜಿಸಿದ್ದ ತಜ್ಞರ ಸಮಿತಿಯ ಸದಸ್ಯರೊಬ್ಬರು ಹೇಳಿದ್ದಾರೆ.

“ಅನೇಕ ವಿಷಯಗಳಲ್ಲಿ ಕ್ರಿಮಿನಲ್ ಕಾನೂನನ್ನು ಬದಲಾಯಿಸುವ ತುರ್ತು ಇದೆ. ಆದರೆ ಅದು ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ. ದ್ವೇಷದ ಭಾಷಣವನ್ನು ನಿಯಂತ್ರಿಸುವುದು ಈ ಸಮಯದ ಅಗತ್ಯವಾಗಿರುವುದರಿಂದ, ನಾವು ನೀಡಿದ ಸಲಹೆಗಳನ್ನು ವ್ಯಾಪಕ ಸಮಾಲೋಚನೆಗಾಗಿ ಇಡಬೇಕು. ನಾವೇನೂ ಬುದ್ಧಿವಂತಿಕೆಯ ಮಾಲೀಕರಲ್ಲ. ಆದರೆ ನಾವು ನೀಡಿದ ಸಲಹೆಗಳನ್ನು ಗಮನಿಸಬೇಕು” ಎಂದು ನಿವೃತ್ತ ಐಪಿಎಸ್ ಅಧಿಕಾರಿ ಮತ್ತು ಟಿ ಕೆ ವಿಶ್ವನಾಥನ್ ಸಮಿತಿಯ ಸದಸ್ಯ ನವನೀತ್ ವಾಸನ್ ಹೇಳಿದ್ದಾರೆ.

ಕಳೆದ ವರ್ಷ ಆಗಸ್ಟ್ ನಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಸುಧಾರಣೆಗೊಳಿಸುವುದಕ್ಕೆ ಕರೆ ನೀಡಿದ್ದರು. ನಾಲ್ಕು ಪ್ರಮುಖ ಅಪರಾಧ ನ್ಯಾಯ ಕಾನೂನುಗಳಲ್ಲಿ ಅಗತ್ಯವಿರುವ ಬದಲಾವಣೆಗಳ ಬಗ್ಗೆ ರಾಜ್ಯಗಳ ಅಭಿಪ್ರಾಯಗಳನ್ನು ಕೋರಿದ್ದರು.

ಭಾರತೀಯ ದಂಡ ಸಂಹಿತೆ (ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ), ಶಸ್ತ್ರಾಸ್ತ್ರ ಕಾಯ್ದೆ ಮತ್ತು ನಾರ್ಕೋಟಿಕ್ಸ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಕಾಯ್ದೆ (ಎನ್‌ಡಿಪಿಎಸ್)ಗಳ ಮೇಲೆ ಈ ಪ್ರಕ್ರಿಯೆ ನಡೆಯುತ್ತಿದೆ.

ಬಿಜೆಪಿಯ ಆಜ್ಞೆಯ ಮೇರೆಗೆ ಫೇಸ್‌ಬುಕ್ ತನ್ನ ಕೆಲಸವನ್ನು ಕುಶಲತೆಯಿಂದ ನಿರ್ವಹಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದ ನಂತರ, 2017 ರಲ್ಲಿ ವಿವರವಾದ ವರದಿಯನ್ನು ಸಿದ್ಧಪಡಿಸಿದ ತಜ್ಞರ ಸಮಿತಿಯ ಸದಸ್ಯರನ್ನು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಸಂಪರ್ಕಿಸಿತ್ತು.

ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಾದಾತ್ಮಕ ಸೆಕ್ಷನ್ 66 ಎ ಅನ್ನು ಸುಪ್ರೀಂ ಕೋರ್ಟ್ 2015 ರಲ್ಲಿ ತಡೆದ ನಂತರ ಮಾಜಿ ಕಾನೂನು ಕಾರ್ಯದರ್ಶಿ ಮತ್ತು ಲೋಕಸಭಾ ಪ್ರಧಾನ ಕಾರ್ಯದರ್ಶಿ ಟಿ.ಕೆ.ವಿಶ್ವನಾಥನ್ ನೇತೃತ್ವದ ತಜ್ಞರ ಸಮಿತಿಯನ್ನು ಕೇಂದ್ರ ರಚಿಸಿತು.

ಇದು 2017 ರಲ್ಲಿ ಸಲ್ಲಿಸಿದ ತನ್ನ ವರದಿಯಲ್ಲಿ, ದ್ವೇಷ ಮತ್ತು ಪ್ರಚೋದನೆಯನ್ನು ಹರಡಲು ದ್ವೇಷದ ಭಾಷಣ ಮತ್ತು ಸೈಬರ್‌ಪೇಸ್‌ನ ಬಳಕೆಯ ಪ್ರಕರಣಗಳನ್ನು ಎದುರಿಸಲು ಕಠಿಣ ನಿಬಂಧನೆಗಳನ್ನು ಪರಿಚಯಿಸಲು ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು ಐಟಿ ಕಾಯ್ದೆಯನ್ನು ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಶಿಫಾರಸು ಮಾಡಿತ್ತು.

ಡಿಜಿಟಲ್ ತಂತ್ರಜ್ಞಾನದಿಂದ ಒದಗಿಸಲಾದ ಅವಕಾಶಗಳು ಅಗಾಧವಾಗಿದ್ದರೂ, ಸಾರ್ವಜನಿಕ ಸುವ್ಯವಸ್ಥೆ ಮತ್ತು ರಾಷ್ಟ್ರೀಯ ಭದ್ರತೆಗೆ ಬೆದರಿಕೆಗಳು ನೈಜವಾಗಿವೆ. ಡಿಜಿಟಲ್ ವೇದಿಕೆಯ ಮೂಲಕ ಪ್ರಚಾರ ಮಾಡುವ ಹಾನಿಕಾರಕ ವಿಷಯಗಳಿಗೆ ಮತ್ತು ಇದು ದ್ವೇಷವನ್ನು ಸೃಷ್ಟಿಸುವ ಕಾರಣಕ್ಕೆ ಸರ್ಕಾರಗಳು ಮೂಕ ಪ್ರೇಕ್ಷಕನಂತಿರಲು ಸಾಧ್ಯವಿಲ್ಲ ಎಂದು ವರದಿ ಹೇಳಿದೆ.

ಅಪರಾಧ ನ್ಯಾಯ ವ್ಯವಸ್ಥೆಯ ಸಮಗ್ರ ಪುನರುಜ್ಜೀವನದಿಂದ ಮಾತ್ರ ದ್ವೇಷ ಭಾಷಣವನ್ನು ಪರಿಶೀಲಿಸುವ ಕ್ರಮಗಳನ್ನು ಒದಗಿಸಬಹುದು ಎಂದು ಸಮಿತಿಯ ಮತ್ತೊಬ್ಬ ಸದಸ್ಯರಾದ ಡಾ ಎಸ್ ಶಿವಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಕೇಂದ್ರ ಸಮಿತಿ; ಅಬ್ಜೆಕ್ಶನ್, ಮೈ ಲಾರ್ಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...