Homeಕರೋನಾ ತಲ್ಲಣಕೊರೊನಾ ಎಫೆಕ್ಟ್: ಬೆಂಗಳೂರಿನ 50 ಸಾವಿರ ಅಂಗಡಿಗಳು ಶಾಶ್ವತವಾಗಿ ಬಂದ್

ಕೊರೊನಾ ಎಫೆಕ್ಟ್: ಬೆಂಗಳೂರಿನ 50 ಸಾವಿರ ಅಂಗಡಿಗಳು ಶಾಶ್ವತವಾಗಿ ಬಂದ್

ಮುಂಬರುವ ಹಬ್ಬದ ಋತುವಿನಲ್ಲಿ ಮಾರಾಟಗಳು ಹೆಚ್ಚಾಗದಿದ್ದರೆ ಇನ್ನೂ ಅನೇಕ ಅಂಗಡಿಗಳು ಮುಚ್ಚುವ ಹಾದಿಯಲ್ಲಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಬೆಂಗಳೂರಿನಲ್ಲಿ ಸುಮಾರು 50,000 ಕ್ಕೂ ಹೆಚ್ಚು ಅಂಗಡಿಗಳು ಶಾಶ್ವತವಾಗಿ ಮುಚ್ಚಲ್ಪಟ್ಟುದೆ ಹಾಗೂ ಮುಂಬರುವ ಹಬ್ಬದ ಋತುವಿನಲ್ಲಿ ಮಾರಾಟಗಳು ಹೆಚ್ಚಾಗದಿದ್ದರೆ ಇನ್ನೂ ಅನೇಕ ಅಂಗಡಿಗಳು ಮುಚ್ಚುವ ಹಾದಿಯಲ್ಲಿದೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ರೆಡಿಮೇಡ್ ಉಡುಪುಗಳು, ಪಾದರಕ್ಷೆಗಳು, ಲೇಖನ ಸಾಮಗ್ರಿಗಳು, ಮೊಬೈಲ್ ಪರಿಕರಗಳು ಮತ್ತು ಸಣ್ಣ ತಿನಿಸುಗಳನ್ನು ಮಾರಾಟ ಮಾಡುವ ಅಂಗಡಿಗಳು ಮುಚ್ಚಲ್ಪಟ್ಟ ಪಟ್ಟಿಯಲ್ಲಿ ಸೇರಿವೆ.

ಮುಚ್ಚಲ್ಪಟ್ಟ ಅಂಗಡಿಗಳ ಮುಂದೆ ’ಟು-ಲೆಟ್’ ಬೋರ್ಡುಗಳ ನೇತಾಡುತ್ತಿರುವುದು ಬೆಂಗಳೂರಿನಾದ್ಯಂತ ಕಾಣುತ್ತಿರುವ ಸಾಮಾನ್ಯ ದೃಶ್ಯವಾಗಿದೆ.

ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಎಫ್‌ಕೆಸಿಸಿಐ) ಪ್ರಕಾರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಿತಿಯಲ್ಲಿ ಸುಮಾರು 4 ಲಕ್ಷ ಅಂಗಡಿಗಳಿದ್ದು, ಅದರಲ್ಲಿ 12% ರಿಂದ 15% ಮುಚ್ಚಲಾಗಿದೆ, ಅಷ್ಟೇ ಅಲ್ಲದೆ ಇನ್ನೂ 8% -10% ಅಂಗಡಿಗಳು ಮುಚ್ಚುವ ಹಾದಿಯಲ್ಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?

ಪ್ರಸ್ತುತ ಮುಚ್ಚಿರುವ ಹೆಚ್ಚಿನ ಅಂಗಡಿಗಳಲ್ಲಿ ಇತರ ರಾಜ್ಯಗಳ ಅಥವಾ ಬೆಂಗಳೂರಿನ ಹೊರಗಿನ ಕನ್ನಡಿಗರು ಬಾಡಿಗೆಗೆ ಪಡೆದದ್ದಾಗಿದೆ.

“ಅವರು ತಮ್ಮ ಮನೆಗಳ ಬಾಡಿಗೆ ಮತ್ತು ಅಂಗಡಿಗಳಿಗೆ ಕೂಡಾ ಬಾಡಿಗೆ ಪಾವತಿಸಬೇಕಾಗಿರುವುದರಿಂದ ಇದು ಎರಡೆರೆಡು ಹೊಡೆತ ಕೊಡುತ್ತದೆ. ಕೊರೊನಾ ಕಾಲದಲ್ಲಿ ವ್ಯಾಪಾರವು 25% ದಷ್ಟೂ ಇಲ್ಲದಾಗ, ಅವುಗಳು ಹೇಗೆ ಉಳಿಸಿಕೊಳ್ಳುತ್ತಾರೆ?” ಎಫ್‌ಕೆಸಿಸಿಐ ಅಧ್ಯಕ್ಷ ಕೆ ಜನಾರ್ಧನ್ ಪ್ರಶ್ನಿಸಿದ್ದಾರೆ.

“ನಾನು ಏಪ್ರಿಲ್‌ನಿಂದ ಬಾಡಿಗೆ ಪಾವತಿಸಿಲ್ಲ. ಲಾಕ್‌ಡೌನ್ ಕಾರಣ ನನ್ನ ಅಂಗಡಿಯನ್ನು ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಮುಚ್ಚಲಾಯಿತು. ನಂತರ ಅದನ್ನು ಮತ್ತೆ ತೆರೆದರೂ ಗ್ರಾಹಕರು ಇಲ್ಲ” ಎಂದು ಸಂಜಯ್‌ನಗರದ ರೆಡಿಮೇಡ್ ಗಾರ್ಮೆಂಟ್ಸ್ ಅಂಗಡಿಯ ಮಾಲೀಕ ವಿಶ್ವಜಿತ್ ಹೇಳಿದ್ದಾರೆ.

ಅವರು ತಿಂಗಳಿಗೆ 12,000 ರೂಗಳನ್ನು ಬಾಡಿಗೆಯಾಗಿ ಪಾವತಿಸುತ್ತಾರೆ ಮತ್ತು ವಿಶ್ವಜಿತ್ ಪಾವತಿಸಿದ 2.5 ಲಕ್ಷ ರೂ. ಮುಂಗಡ ಹಣದಿಂದ ಬಾಡಿಗೆ ಬಾಕಿ ಕಡಿತಗೊಳಿಸುವುದಾಗಿ ಮಾಲೀಕರು ಹೇಳಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಜೆಪಿ ಶಾಸಕ ಮತ್ತು ಗರುಡ ಮಾಲ್ ಮಾಲೀಕ ಉದಯ್ ಗರುಡಾಚಾರ್ ಮಾತನಾಡಿ, ಬಾಡಿಗೆದಾರರು ನಾಲ್ಕು ತಿಂಗಳವರೆಗೆ ಯಾವುದೇ ವ್ಯವಹಾರವಿಲ್ಲದ ಕಾರಣ ಬಾಡಿಗೆ ಪಾವತಿಸುವುದು ಕಷ್ಟಕರವಾಗಿದೆ. ಮಾಲ್‌ನಲ್ಲೂ ಕಳೆದ ಎರಡು ತಿಂಗಳಲ್ಲಿ ನಾಲ್ಕು ಅಂಗಡಿಗಳು ಖಾಲಿ ಇವೆ. ಬಾಡಿಗೆದಾರರ ಪರಿಸ್ಥಿತಿಯನ್ನು ತಿಳಿದುಕೊಂಡು, ನಾವು ಬಾಡಿಗೆಗೆ ಒತ್ತಾಯಿಸುತ್ತಿಲ್ಲ. ಗರುಡ ಮಾಲ್‌ನಲ್ಲಿ, ನಾವು ಬಾಡಿಗೆದಾರರಿಂದ ಕೋರ್ ಏರಿಯಾ ನಿರ್ವಹಣೆ ಶುಲ್ಕವನ್ನು ಮಾತ್ರ ಸಂಗ್ರಹಿಸುತ್ತಿದ್ದೇವೆ. ಇದು ನಾವು ಪರಸ್ಪರ ಸಹಕರಿಸುವ ಸಮಯ ಎಂದು ಹೇಳಿದ್ದಾರೆ.

ಕೊರೊನಾ ಪ್ರಾರಂಭವಾಗುವುದಕ್ಕಿಂತ ಕೆಲವೇ ತಿಂಗಳುಗಳ ಮೊದಲು ಪ್ರಾರಂಭವಾದ ವ್ಯವಹಾರಗಳ ಮಾಲೀಕರು ಬಾಡಿಗೆ ಮತ್ತು ಸಾಲದ ಕಂತುಗಳನ್ನು ಪಾವತಿಸಲು ಹೆಣಗಾಡುತ್ತಿದ್ದಾರೆ.

“ನಾನು ಬೇಸರದಲ್ಲೆ ಭವಿಷ್ಯವನ್ನು ನೋಡುತ್ತಿದ್ದೇನೆ. ಏನು ಮಾಡಬೇಕೆಂದು ನನಗೆ ತಿಳಿದಿಲ್ಲ” ಎಂದು ಜನವರಿ ತಿಂಗಳಲ್ಲಿ ಸಂಜಯ್‌ನಗರದ ಬಳಿ ಉಪಾಹಾರ ಗೃಹವನ್ನು ಪ್ರಾರಂಭಿಸಿದ ಅವಿನಾಶ್ ಹೇಳುತ್ತಾರೆ.

ಕೃಪೆ: ಟೈಮ್ಸ್ ಆಫ್‌ ಇಂಡಿಯಾ


ಓದಿ: ಕಿಮ್ಸ್‌ನಲ್ಲಿ ಆಮ್ಲಜನಕ ವಿತರಣೆ ಕೊರತೆ: ಕೊರೊನಾ ರೋಗಿಗಳ ಸ್ಥಳಾಂತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...