Homeಕರೋನಾ ತಲ್ಲಣಕೊರೊನಾ ಎಫೆಕ್ಟ್: ಬೆಂಗಳೂರಿನ 50 ಸಾವಿರ ಅಂಗಡಿಗಳು ಶಾಶ್ವತವಾಗಿ ಬಂದ್

ಕೊರೊನಾ ಎಫೆಕ್ಟ್: ಬೆಂಗಳೂರಿನ 50 ಸಾವಿರ ಅಂಗಡಿಗಳು ಶಾಶ್ವತವಾಗಿ ಬಂದ್

ಮುಂಬರುವ ಹಬ್ಬದ ಋತುವಿನಲ್ಲಿ ಮಾರಾಟಗಳು ಹೆಚ್ಚಾಗದಿದ್ದರೆ ಇನ್ನೂ ಅನೇಕ ಅಂಗಡಿಗಳು ಮುಚ್ಚುವ ಹಾದಿಯಲ್ಲಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಬೆಂಗಳೂರಿನಲ್ಲಿ ಸುಮಾರು 50,000 ಕ್ಕೂ ಹೆಚ್ಚು ಅಂಗಡಿಗಳು ಶಾಶ್ವತವಾಗಿ ಮುಚ್ಚಲ್ಪಟ್ಟುದೆ ಹಾಗೂ ಮುಂಬರುವ ಹಬ್ಬದ ಋತುವಿನಲ್ಲಿ ಮಾರಾಟಗಳು ಹೆಚ್ಚಾಗದಿದ್ದರೆ ಇನ್ನೂ ಅನೇಕ ಅಂಗಡಿಗಳು ಮುಚ್ಚುವ ಹಾದಿಯಲ್ಲಿದೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ರೆಡಿಮೇಡ್ ಉಡುಪುಗಳು, ಪಾದರಕ್ಷೆಗಳು, ಲೇಖನ ಸಾಮಗ್ರಿಗಳು, ಮೊಬೈಲ್ ಪರಿಕರಗಳು ಮತ್ತು ಸಣ್ಣ ತಿನಿಸುಗಳನ್ನು ಮಾರಾಟ ಮಾಡುವ ಅಂಗಡಿಗಳು ಮುಚ್ಚಲ್ಪಟ್ಟ ಪಟ್ಟಿಯಲ್ಲಿ ಸೇರಿವೆ.

ಮುಚ್ಚಲ್ಪಟ್ಟ ಅಂಗಡಿಗಳ ಮುಂದೆ ’ಟು-ಲೆಟ್’ ಬೋರ್ಡುಗಳ ನೇತಾಡುತ್ತಿರುವುದು ಬೆಂಗಳೂರಿನಾದ್ಯಂತ ಕಾಣುತ್ತಿರುವ ಸಾಮಾನ್ಯ ದೃಶ್ಯವಾಗಿದೆ.

ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಎಫ್‌ಕೆಸಿಸಿಐ) ಪ್ರಕಾರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಿತಿಯಲ್ಲಿ ಸುಮಾರು 4 ಲಕ್ಷ ಅಂಗಡಿಗಳಿದ್ದು, ಅದರಲ್ಲಿ 12% ರಿಂದ 15% ಮುಚ್ಚಲಾಗಿದೆ, ಅಷ್ಟೇ ಅಲ್ಲದೆ ಇನ್ನೂ 8% -10% ಅಂಗಡಿಗಳು ಮುಚ್ಚುವ ಹಾದಿಯಲ್ಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?

ಪ್ರಸ್ತುತ ಮುಚ್ಚಿರುವ ಹೆಚ್ಚಿನ ಅಂಗಡಿಗಳಲ್ಲಿ ಇತರ ರಾಜ್ಯಗಳ ಅಥವಾ ಬೆಂಗಳೂರಿನ ಹೊರಗಿನ ಕನ್ನಡಿಗರು ಬಾಡಿಗೆಗೆ ಪಡೆದದ್ದಾಗಿದೆ.

“ಅವರು ತಮ್ಮ ಮನೆಗಳ ಬಾಡಿಗೆ ಮತ್ತು ಅಂಗಡಿಗಳಿಗೆ ಕೂಡಾ ಬಾಡಿಗೆ ಪಾವತಿಸಬೇಕಾಗಿರುವುದರಿಂದ ಇದು ಎರಡೆರೆಡು ಹೊಡೆತ ಕೊಡುತ್ತದೆ. ಕೊರೊನಾ ಕಾಲದಲ್ಲಿ ವ್ಯಾಪಾರವು 25% ದಷ್ಟೂ ಇಲ್ಲದಾಗ, ಅವುಗಳು ಹೇಗೆ ಉಳಿಸಿಕೊಳ್ಳುತ್ತಾರೆ?” ಎಫ್‌ಕೆಸಿಸಿಐ ಅಧ್ಯಕ್ಷ ಕೆ ಜನಾರ್ಧನ್ ಪ್ರಶ್ನಿಸಿದ್ದಾರೆ.

“ನಾನು ಏಪ್ರಿಲ್‌ನಿಂದ ಬಾಡಿಗೆ ಪಾವತಿಸಿಲ್ಲ. ಲಾಕ್‌ಡೌನ್ ಕಾರಣ ನನ್ನ ಅಂಗಡಿಯನ್ನು ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಮುಚ್ಚಲಾಯಿತು. ನಂತರ ಅದನ್ನು ಮತ್ತೆ ತೆರೆದರೂ ಗ್ರಾಹಕರು ಇಲ್ಲ” ಎಂದು ಸಂಜಯ್‌ನಗರದ ರೆಡಿಮೇಡ್ ಗಾರ್ಮೆಂಟ್ಸ್ ಅಂಗಡಿಯ ಮಾಲೀಕ ವಿಶ್ವಜಿತ್ ಹೇಳಿದ್ದಾರೆ.

ಅವರು ತಿಂಗಳಿಗೆ 12,000 ರೂಗಳನ್ನು ಬಾಡಿಗೆಯಾಗಿ ಪಾವತಿಸುತ್ತಾರೆ ಮತ್ತು ವಿಶ್ವಜಿತ್ ಪಾವತಿಸಿದ 2.5 ಲಕ್ಷ ರೂ. ಮುಂಗಡ ಹಣದಿಂದ ಬಾಡಿಗೆ ಬಾಕಿ ಕಡಿತಗೊಳಿಸುವುದಾಗಿ ಮಾಲೀಕರು ಹೇಳಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಜೆಪಿ ಶಾಸಕ ಮತ್ತು ಗರುಡ ಮಾಲ್ ಮಾಲೀಕ ಉದಯ್ ಗರುಡಾಚಾರ್ ಮಾತನಾಡಿ, ಬಾಡಿಗೆದಾರರು ನಾಲ್ಕು ತಿಂಗಳವರೆಗೆ ಯಾವುದೇ ವ್ಯವಹಾರವಿಲ್ಲದ ಕಾರಣ ಬಾಡಿಗೆ ಪಾವತಿಸುವುದು ಕಷ್ಟಕರವಾಗಿದೆ. ಮಾಲ್‌ನಲ್ಲೂ ಕಳೆದ ಎರಡು ತಿಂಗಳಲ್ಲಿ ನಾಲ್ಕು ಅಂಗಡಿಗಳು ಖಾಲಿ ಇವೆ. ಬಾಡಿಗೆದಾರರ ಪರಿಸ್ಥಿತಿಯನ್ನು ತಿಳಿದುಕೊಂಡು, ನಾವು ಬಾಡಿಗೆಗೆ ಒತ್ತಾಯಿಸುತ್ತಿಲ್ಲ. ಗರುಡ ಮಾಲ್‌ನಲ್ಲಿ, ನಾವು ಬಾಡಿಗೆದಾರರಿಂದ ಕೋರ್ ಏರಿಯಾ ನಿರ್ವಹಣೆ ಶುಲ್ಕವನ್ನು ಮಾತ್ರ ಸಂಗ್ರಹಿಸುತ್ತಿದ್ದೇವೆ. ಇದು ನಾವು ಪರಸ್ಪರ ಸಹಕರಿಸುವ ಸಮಯ ಎಂದು ಹೇಳಿದ್ದಾರೆ.

ಕೊರೊನಾ ಪ್ರಾರಂಭವಾಗುವುದಕ್ಕಿಂತ ಕೆಲವೇ ತಿಂಗಳುಗಳ ಮೊದಲು ಪ್ರಾರಂಭವಾದ ವ್ಯವಹಾರಗಳ ಮಾಲೀಕರು ಬಾಡಿಗೆ ಮತ್ತು ಸಾಲದ ಕಂತುಗಳನ್ನು ಪಾವತಿಸಲು ಹೆಣಗಾಡುತ್ತಿದ್ದಾರೆ.

“ನಾನು ಬೇಸರದಲ್ಲೆ ಭವಿಷ್ಯವನ್ನು ನೋಡುತ್ತಿದ್ದೇನೆ. ಏನು ಮಾಡಬೇಕೆಂದು ನನಗೆ ತಿಳಿದಿಲ್ಲ” ಎಂದು ಜನವರಿ ತಿಂಗಳಲ್ಲಿ ಸಂಜಯ್‌ನಗರದ ಬಳಿ ಉಪಾಹಾರ ಗೃಹವನ್ನು ಪ್ರಾರಂಭಿಸಿದ ಅವಿನಾಶ್ ಹೇಳುತ್ತಾರೆ.

ಕೃಪೆ: ಟೈಮ್ಸ್ ಆಫ್‌ ಇಂಡಿಯಾ


ಓದಿ: ಕಿಮ್ಸ್‌ನಲ್ಲಿ ಆಮ್ಲಜನಕ ವಿತರಣೆ ಕೊರತೆ: ಕೊರೊನಾ ರೋಗಿಗಳ ಸ್ಥಳಾಂತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...