Homeಕರೋನಾ ತಲ್ಲಣಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ಏಪ್ರಿಲ್‌ನಿಂದ 1.89 ಕೋಟಿಗೆ ಏರಿದೆ ಎಂದು ಅದು ತಿಳಿಸಿದೆ.

- Advertisement -
- Advertisement -

ಜುಲೈ ತಿಂಗಳೊಂದರಲ್ಲೇ ಸುಮಾರು 50 ಲಕ್ಷ ಉದ್ಯೋಗಿಗಳು ಉದ್ಯೂಗ ಕಳೆದು ಕೊಂಡಿದ್ದಾರೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE) ಯ ಅಂಕಿ ಅಂಶಗಳು ತಿಳಿಸಿವೆ.

CMIE ಭಾರತದ ಒಂದು ಪ್ರಮುಖ ವ್ಯವಹಾರ ಮಾಹಿತಿಯ ಸ್ವತಂತ್ರ ಚಿಂತನಾ ಕೇಂದ್ರವಾಗಿದೆ. ಇದನ್ನು 1976 ರಲ್ಲಿ ಸ್ಥಾಪಿಸಲಾಗಿದೆ. ಇದು ನಿರಂತರವಾಗಿ ಭಾರತದ ಆರ್ಥಿಕತೆಯ ಬಗ್ಗೆ ಅಧ್ಯಯನ ಮಾಡುತ್ತಾ ಬರುತ್ತಿದೆ.

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ಏಪ್ರಿಲ್‌ನಿಂದ 1.89 ಕೋಟಿಗೆ ಏರಿದೆ ಎಂದು ಅದು ತಿಳಿಸಿದೆ.

ಅಂಕಿಅಂಶಗಳ ಪ್ರಕಾರ ಜೂನ್‌ನಲ್ಲಿ ಸುಮಾರು 39 ಲಕ್ಷ ಜನರು ಉದ್ಯೋಗ ಗಳಿಸಿದರೂ, ಜುಲೈನಲ್ಲಿ ಸುಮಾರು 50 ಲಕ್ಷ ಉದ್ಯೋಗಗಳು ನಷ್ಟವಾಗಿದೆ.

ಇದನ್ನೂ ಓದಿ: ಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಏಪ್ರಿಲ್‌ನಲ್ಲಿ 1.77 ಕೋಟಿ ನಿಯಮಿತ ಸಂಬಳ ಪಡೆಯುವ ಉದ್ಯೋಗಿಗಳು ಉದ್ಯೋಗ ಕಳೆದು ಕೊಂಡಿದ್ದಾರೆ. ಅಲ್ಲದೆ ಮೇ ತಿಂಗಳಲ್ಲಿ 10 ಲಕ್ಷ ಉದ್ಯೋಗಗಳು ನಷ್ಟವಾಗಿದೆ.

“ನಿಯಮಿತ ಸಂಬಳ ಪಡೆಯುವ ಉದ್ಯೋಗಗಳು ಸುಲಭವಾಗಿ ಕಳೆದುಹೋಗುವುದಿಲ್ಲ, ಒಮ್ಮೆ ಕಳೆದುಹೋದರೆ ಅವುಗಳನ್ನು ಮತ್ತೆ ಪಡೆಯುವುದು ಸಹ ಕಷ್ಟ. ಆದ್ದರಿಂದ ಅವರ ಸಂಖ್ಯೆಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿವೆ” ಎಂದು CMIE ಕೇಂದ್ರದ ಸಿಇಒ ಮಹೇಶ್ ವ್ಯಾಸ್ ಹೇಳಿದ್ದಾರೆ.

“ನಿಯಮಿತ ಸಂಬಳದ ಉದ್ಯೋಗಗಳು 2019-20 ರಲ್ಲಿ ಸರಾಸರಿಗಿಂತ ಸುಮಾರು 1.90 ಕೋಟಿ ಕಡಿಮೆಯಾಗಿದೆ. ಇದು ಕಳೆದ ಹಣಕಾಸು ವರ್ಷದ ಮಟ್ಟಕ್ಕಿಂತ ಶೇಕಡಾ 22 ರಷ್ಟು ಕಡಿಮೆಯಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ

ಇತ್ತೀಚಿನ CMIE ಅಂಕಿಅಂಶವು ಈ ಅವಧಿಯಲ್ಲಿ ಸುಮಾರು 68 ಲಕ್ಷ ದೈನಂದಿನ ವೇತನ ಪಡೆಯುವವರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ, ಆದರೆ ಈ ಅವಧಿಯಲ್ಲಿ ಸುಮಾರು 1.49 ಕೋಟಿ ಜನರು ಕೃಷಿಯಲ್ಲಿ ತೊಡಗಿದರು ಎಂದು ಹೇಳಿದೆ.

ಕೊರೊನಾ ಲಾಕ್‌ಡೌನ್ ಘೋಷಣೆಯಾದಾಗಿನಿಂದ ಹಲವಾರು ಕಂಪನಿಗಳು ಉದ್ಯೋಗ ಕಡಿತ ಮಾಡುತ್ತಿದೆ. ಅದರ ಜೊತೆಗೆ ವೇತನ ಕಡಿತ ಮತ್ತು ವೇತನವಿಲ್ಲದೆ ರಜೆಯಂತಹ ನಿರ್ಧಾರವನ್ನು ಕೂಡಾ ಕೈಗೊಂಡಿದೆ.

ಕೈಗಾರಿಕಾ ಸಂಸ್ಥೆಗಳು ಮತ್ತು ಹಲವಾರು ಅರ್ಥಶಾಸ್ತ್ರಜ್ಞರು ಸಾಮೂಹಿಕ ಉದ್ಯೋಗ ನಷ್ಟವನ್ನು ತಪ್ಪಿಸಲು ಮತ್ತು ಸಾಂಕ್ರಾಮಿಕ ರೋಗದ ದಾಳಿಯಿಂದ ಬದುಕುಳಿಯಲು ಉದ್ಯಮಗಳಿಗೆ ಸರ್ಕಾರದ ಬೆಂಬಲವನ್ನು ಕೋರಿದ್ದಾರೆ.

ಜುಲೈ ತಿಂಗಳಲ್ಲಿ 5 ಮಿಲಿಯನ್ ಉದ್ಯೋಗಗಳು ನಷ್ಟವಾಗಿದೆ. ಏಪ್ರಿಲ್‌ನಿಂದ ಒಟ್ಟು 18.9 ಉದ್ಯೋಗಗಳು ನಷ್ಟವಾಗಿದೆ. ಇದು ಮಾನಸಿಕ ಆರೋಗ್ಯ, ಮನೆ ಹಿಡುವಳಿ ಉಳಿತಾಯ ಮತ್ತು ಖರ್ಚಿನ ಮೇಲೆ ಭಾರಿ ಪರಿಣಾಮ ಬೀರುತ್ತದೆ. ಈ ಬಗ್ಗೆ ಚರ್ಚೆ ಯಾಕೆ ಆಗುತ್ತಿಲ್ಲ ಎಂದು ಪತ್ರಕರ್ತೆ ಫಾಯೆ ಡಿ’ಸೋಜಾ ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ್ದಾರೆ.


ಓದಿ: ಮಧ್ಯಪ್ರದೇಶದ ಸರ್ಕಾರಿ ಉದ್ಯೋಗಗಳು ಸ್ಥಳೀಯರಿಗೆ ಮಾತ್ರ: ಶಿವರಾಜ್ ಚೌಹಾಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...