Homeಕರೋನಾ ತಲ್ಲಣಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ಏಪ್ರಿಲ್‌ನಿಂದ 1.89 ಕೋಟಿಗೆ ಏರಿದೆ ಎಂದು ಅದು ತಿಳಿಸಿದೆ.

- Advertisement -
- Advertisement -

ಜುಲೈ ತಿಂಗಳೊಂದರಲ್ಲೇ ಸುಮಾರು 50 ಲಕ್ಷ ಉದ್ಯೋಗಿಗಳು ಉದ್ಯೂಗ ಕಳೆದು ಕೊಂಡಿದ್ದಾರೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE) ಯ ಅಂಕಿ ಅಂಶಗಳು ತಿಳಿಸಿವೆ.

CMIE ಭಾರತದ ಒಂದು ಪ್ರಮುಖ ವ್ಯವಹಾರ ಮಾಹಿತಿಯ ಸ್ವತಂತ್ರ ಚಿಂತನಾ ಕೇಂದ್ರವಾಗಿದೆ. ಇದನ್ನು 1976 ರಲ್ಲಿ ಸ್ಥಾಪಿಸಲಾಗಿದೆ. ಇದು ನಿರಂತರವಾಗಿ ಭಾರತದ ಆರ್ಥಿಕತೆಯ ಬಗ್ಗೆ ಅಧ್ಯಯನ ಮಾಡುತ್ತಾ ಬರುತ್ತಿದೆ.

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ಏಪ್ರಿಲ್‌ನಿಂದ 1.89 ಕೋಟಿಗೆ ಏರಿದೆ ಎಂದು ಅದು ತಿಳಿಸಿದೆ.

ಅಂಕಿಅಂಶಗಳ ಪ್ರಕಾರ ಜೂನ್‌ನಲ್ಲಿ ಸುಮಾರು 39 ಲಕ್ಷ ಜನರು ಉದ್ಯೋಗ ಗಳಿಸಿದರೂ, ಜುಲೈನಲ್ಲಿ ಸುಮಾರು 50 ಲಕ್ಷ ಉದ್ಯೋಗಗಳು ನಷ್ಟವಾಗಿದೆ.

ಇದನ್ನೂ ಓದಿ: ಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಏಪ್ರಿಲ್‌ನಲ್ಲಿ 1.77 ಕೋಟಿ ನಿಯಮಿತ ಸಂಬಳ ಪಡೆಯುವ ಉದ್ಯೋಗಿಗಳು ಉದ್ಯೋಗ ಕಳೆದು ಕೊಂಡಿದ್ದಾರೆ. ಅಲ್ಲದೆ ಮೇ ತಿಂಗಳಲ್ಲಿ 10 ಲಕ್ಷ ಉದ್ಯೋಗಗಳು ನಷ್ಟವಾಗಿದೆ.

“ನಿಯಮಿತ ಸಂಬಳ ಪಡೆಯುವ ಉದ್ಯೋಗಗಳು ಸುಲಭವಾಗಿ ಕಳೆದುಹೋಗುವುದಿಲ್ಲ, ಒಮ್ಮೆ ಕಳೆದುಹೋದರೆ ಅವುಗಳನ್ನು ಮತ್ತೆ ಪಡೆಯುವುದು ಸಹ ಕಷ್ಟ. ಆದ್ದರಿಂದ ಅವರ ಸಂಖ್ಯೆಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿವೆ” ಎಂದು CMIE ಕೇಂದ್ರದ ಸಿಇಒ ಮಹೇಶ್ ವ್ಯಾಸ್ ಹೇಳಿದ್ದಾರೆ.

“ನಿಯಮಿತ ಸಂಬಳದ ಉದ್ಯೋಗಗಳು 2019-20 ರಲ್ಲಿ ಸರಾಸರಿಗಿಂತ ಸುಮಾರು 1.90 ಕೋಟಿ ಕಡಿಮೆಯಾಗಿದೆ. ಇದು ಕಳೆದ ಹಣಕಾಸು ವರ್ಷದ ಮಟ್ಟಕ್ಕಿಂತ ಶೇಕಡಾ 22 ರಷ್ಟು ಕಡಿಮೆಯಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ

ಇತ್ತೀಚಿನ CMIE ಅಂಕಿಅಂಶವು ಈ ಅವಧಿಯಲ್ಲಿ ಸುಮಾರು 68 ಲಕ್ಷ ದೈನಂದಿನ ವೇತನ ಪಡೆಯುವವರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ, ಆದರೆ ಈ ಅವಧಿಯಲ್ಲಿ ಸುಮಾರು 1.49 ಕೋಟಿ ಜನರು ಕೃಷಿಯಲ್ಲಿ ತೊಡಗಿದರು ಎಂದು ಹೇಳಿದೆ.

ಕೊರೊನಾ ಲಾಕ್‌ಡೌನ್ ಘೋಷಣೆಯಾದಾಗಿನಿಂದ ಹಲವಾರು ಕಂಪನಿಗಳು ಉದ್ಯೋಗ ಕಡಿತ ಮಾಡುತ್ತಿದೆ. ಅದರ ಜೊತೆಗೆ ವೇತನ ಕಡಿತ ಮತ್ತು ವೇತನವಿಲ್ಲದೆ ರಜೆಯಂತಹ ನಿರ್ಧಾರವನ್ನು ಕೂಡಾ ಕೈಗೊಂಡಿದೆ.

ಕೈಗಾರಿಕಾ ಸಂಸ್ಥೆಗಳು ಮತ್ತು ಹಲವಾರು ಅರ್ಥಶಾಸ್ತ್ರಜ್ಞರು ಸಾಮೂಹಿಕ ಉದ್ಯೋಗ ನಷ್ಟವನ್ನು ತಪ್ಪಿಸಲು ಮತ್ತು ಸಾಂಕ್ರಾಮಿಕ ರೋಗದ ದಾಳಿಯಿಂದ ಬದುಕುಳಿಯಲು ಉದ್ಯಮಗಳಿಗೆ ಸರ್ಕಾರದ ಬೆಂಬಲವನ್ನು ಕೋರಿದ್ದಾರೆ.

ಜುಲೈ ತಿಂಗಳಲ್ಲಿ 5 ಮಿಲಿಯನ್ ಉದ್ಯೋಗಗಳು ನಷ್ಟವಾಗಿದೆ. ಏಪ್ರಿಲ್‌ನಿಂದ ಒಟ್ಟು 18.9 ಉದ್ಯೋಗಗಳು ನಷ್ಟವಾಗಿದೆ. ಇದು ಮಾನಸಿಕ ಆರೋಗ್ಯ, ಮನೆ ಹಿಡುವಳಿ ಉಳಿತಾಯ ಮತ್ತು ಖರ್ಚಿನ ಮೇಲೆ ಭಾರಿ ಪರಿಣಾಮ ಬೀರುತ್ತದೆ. ಈ ಬಗ್ಗೆ ಚರ್ಚೆ ಯಾಕೆ ಆಗುತ್ತಿಲ್ಲ ಎಂದು ಪತ್ರಕರ್ತೆ ಫಾಯೆ ಡಿ’ಸೋಜಾ ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ್ದಾರೆ.


ಓದಿ: ಮಧ್ಯಪ್ರದೇಶದ ಸರ್ಕಾರಿ ಉದ್ಯೋಗಗಳು ಸ್ಥಳೀಯರಿಗೆ ಮಾತ್ರ: ಶಿವರಾಜ್ ಚೌಹಾಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...