Homeಮುಖಪುಟಕೇಂದ್ರ ಸರ್ಕಾರದ ನೇಮಕಾತಿಗಳಿಗೆ 'ಒಂದೇ' ಸಾಮಾನ್ಯ ಅರ್ಹತಾ ಪರೀಕ್ಷೆ: ಸಂಸತ್ತು ಒಪ್ಪಿಗೆ

ಕೇಂದ್ರ ಸರ್ಕಾರದ ನೇಮಕಾತಿಗಳಿಗೆ ‘ಒಂದೇ’ ಸಾಮಾನ್ಯ ಅರ್ಹತಾ ಪರೀಕ್ಷೆ: ಸಂಸತ್ತು ಒಪ್ಪಿಗೆ

ಸಚಿವ ಪ್ರಕಾಶ್ ಜಾವಡೇಕರ್ ಇದು ಐತಿಹಾಸಿಕ ನಿರ್ಧಾರವಾಗಿದ್ದು, ಉದ್ಯೋಗಾಕಾಂಕ್ಷಿಗಳು 'ಒಂದು' ಸಾಮಾನ್ಯ ಪರೀಕ್ಷೆಯನ್ನು ತೆಗೆದುಕೊಳ್ಳುವ ಮೂಲಕ, ಹತ್ತಾರು ಪರೀಕ್ಷೆಗಳನ್ನು ಬರೆಯುವ ಸಮಯವನ್ನು ಉಳಿಸಲು ಅವಕಾಶ ನೀಡುತ್ತದೆ ಎಂದಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ಸಾಮಾನ್ಯ ಅರ್ಹತಾ ಪರೀಕ್ಷೆ ನಡೆಸಲು ರಾಷ್ಟ್ರೀಯ ನೇಮಕಾತಿ ಸಂಸ್ಥೆ (ಎನ್‌ಆರ್‌ಎ) ರಚಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದ್ದು, ನೇಮಕಾತಿ ಪ್ರಕ್ರಿಯೆಯಲ್ಲಿ ಇದು ಒಂದು ಮೈಲಿಗಲ್ಲು ಎಂದಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಪ್ರಕಾಶ್ ಜಾವಡೇಕರ್ ಇದು ಐತಿಹಾಸಿಕ ನಿರ್ಧಾರವಾಗಿದ್ದು, ಉದ್ಯೋಗಾಕಾಂಕ್ಷಿಗಳು ‘ಒಂದು’ ಸಾಮಾನ್ಯ ಪರೀಕ್ಷೆಯನ್ನು ತೆಗೆದುಕೊಳ್ಳುವ ಮೂಲಕ, ಹತ್ತಾರು ಪರೀಕ್ಷೆಗಳನ್ನು ಬರೆಯುವ ಸಮಯವನ್ನು ಉಳಿಸಲು ಅವಕಾಶ ನೀಡುತ್ತದೆ ಎಂದಿದ್ದಾರೆ.

ಇದು ಅನೇಕ ವರ್ಷಗಳಿಂದ ಯುವಕರ ಪ್ರಮುಖ ಬೇಡಿಕೆಯಾಗಿದೆ. ಈಗ ಅದು ಈಡೇರಿದೆ ಎಂದು ಅವರು ಹೇಳಿದರು.

ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಇದನ್ನು ದೇಶದ ಇತಿಹಾಸದಲ್ಲಿ ಒಂದು ಕ್ರಾಂತಿಕಾರಿ ಮತ್ತು ಮೈಲಿಗಲ್ಲು ಎಂದು ಬಣ್ಣಿಸಿದರು.

ಇದು ವಿವಿಧ ಉದ್ಯೋಗಗಳಿಗೆ ಪರೀಕ್ಷೆಗಳನ್ನು ತೆಗೆದುಕೊಳ್ಳಲು ದೂರದ ಪ್ರಯಾಣ ಮಾಡಬೇಕಾದ ಬಡವರಿಗೆ ಮತ್ತು ಮಹಿಳೆಯರಿಗೆ ಸಹಾಯ ಮಾಡುತ್ತದೆ ಎಂದರು.

ಗ್ರೂಪ್ ಬಿ ಮತ್ತು ಗ್ರೂಪ್ ಸಿ (ತಾಂತ್ರಿಕೇತರ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಕ್ರೀನ್/ಶಾರ್ಟ್‌ಲಿಸ್ಟ್ ಮಾಡಲು ಎನ್‌ಆರ್‌ಎ ಸಾಮಾನ್ಯ ಅರ್ಹತಾ ಪರೀಕ್ಷೆ (ಸಿಇಟಿ) ನಡೆಸಲಿದೆ.

ಎನ್‌ಆರ್‌ಎ ನಲ್ಲಿ, ರೈಲ್ವೆ ಸಚಿವಾಲಯ, ಹಣಕಾಸು ಸಚಿವಾಲಯ/ಹಣಕಾಸು ಸೇವೆಗಳ ಇಲಾಖೆ, ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ), ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ಮತ್ತು ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ (ಐಬಿಪಿಎಸ್) ಪ್ರತಿನಿಧಿಗಳು ಇರಲಿದ್ದಾರೆ.

ಎನ್‌ಆರ್‌ಎ ಕೇಂದ್ರ ಸರ್ಕಾರದ ನೇಮಕಾತಿ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಉತ್ತಮ ಅಭ್ಯಾಸಗಳನ್ನು ತರುವ ವಿಶೇಷ ಸಂಸ್ಥೆಯಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಸದ್ಯಕ್ಕೆ, ಸಾಮಾನ್ಯ ಪರೀಕ್ಷೆಯ ಅಂಕಗಳನ್ನು ಮೂರು ಪ್ರಮುಖ ನೇಮಕಾತಿ ಏಜೆನ್ಸಿಗಳು ಬಳಸುತ್ತವೆ. ಇತರ ಏಜೆನ್ಸಿಗಳನ್ನು ನಿರ್ದಿಷ್ಟ ಅವಧಿಯಲ್ಲಿ ಸೇರಿಸಲಾಗುತ್ತದೆ.

ಇದರ ಸಿಇಟಿ ಅಂಕವನ್ನು ಅನ್ನು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶಗಳು, ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಖಾಸಗಿ ವಲಯದ ಇತರ ನೇಮಕಾತಿ ಸಂಸ್ಥೆಗಳೊಂದಿಗೆ ಹಂಚಿಕೊಳ್ಳಬಹುದು ಎಂದು ಜಿತೇಂದ್ರ ಸಿಂಗ್ ಹೇಳಿದರು.

ಇದು ನೇಮಕಾತಿಯಲ್ಲಿನ ಖರ್ಚು ಮತ್ತು ಸಮಯವನ್ನು ಉಳಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ದೆಹಲಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ರಾಷ್ಟ್ರೀಯ ನೇಮಕಾತಿ ಸಂಸ್ಥೆ (ಎನ್‌ಆರ್‌ಎ)ಯನ್ನು ಸ್ಥಾಪಿಸಲು ಸರ್ಕಾರ 1,517.57 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ.

ಇದು ಸರ್ಕಾರದ ಕಾರ್ಯದರ್ಶಿ ಹುದ್ದೆಯ ಅಧ್ಯಕ್ಷರನ್ನು ಹೊಂದಿರುತ್ತದೆ.

ಎನ್‌ಆರ್‌ಎ ಸ್ಥಾಪಿಸುವುದರ ಹೊರತಾಗಿ, 117 ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಪರೀಕ್ಷಾ ಮೂಲಸೌಕರ್ಯಗಳನ್ನು ಸ್ಥಾಪಿಸಲು ವೆಚ್ಚವಾಗಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪ್ರಸ್ತುತ, ಸರ್ಕಾರಿ ಉದ್ಯೋಗಗಳನ್ನು ಬಯಸುವ ಅಭ್ಯರ್ಥಿಗಳು ಒಂದೇ ರೀತಿಯ ಅರ್ಹತಾ ಷರತ್ತುಗಳನ್ನು ಹೊಂದಿದ್ದರೂ ಸಹ ವಿವಿಧ ಹುದ್ದೆಗಳಿಗೆ ಬಹು ನೇಮಕಾತಿ ಏಜೆನ್ಸಿಗಳು ನಡೆಸುವ ಪ್ರತ್ಯೇಕ ಪರೀಕ್ಷೆಗಳಿಗೆ ಹಾಜರಾಗಬೇಕಾಗುತ್ತದೆ.

ಅಭ್ಯರ್ಥಿಗಳು ಹೀಗೆ ಅನೇಕ ನೇಮಕಾತಿ ಏಜೆನ್ಸಿಗಳಿಗೆ ಶುಲ್ಕವನ್ನು ಪಾವತಿಸುವುದನ್ನು ಕೊನೆಗೊಳಿಸಿದ್ದು, ಈ ಪರೀಕ್ಷೆಗಳಲ್ಲಿ ಹಾಜರಾಗಲು ದೂರದ ಪ್ರಯಾಣವನ್ನು ಕಡಿಮೆಗೊಳಿಸುತ್ತದೆ.

ಈ ಸಾಮಾನ್ಯ ಪರೀಕ್ಷೆಯನ್ನು ನಡೆಸಲು ದೇಶಾದ್ಯಂತ 1,000 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸುವುದು ಆರಂಭಿಕ ಯೋಜನೆಯಾಗಿದೆ ಎಂದು ಜಿತೇಂದ್ರ ಸಿಂಗ್ ಹೇಳಿದರು.

ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಪರೀಕ್ಷಾ ಕೇಂದ್ರವಿರುತ್ತದೆ ಮತ್ತು ಈ ಸಾಮಾನ್ಯ ಪರೀಕ್ಷೆಯನ್ನು ತೆಗೆದುಕೊಳ್ಳಲು ಯಾವುದೇ ಅಭ್ಯರ್ಥಿಗಳು ತಮ್ಮ ಜಿಲ್ಲೆಯಿಂದ ಹೊರಹೋಗಬೇಕಾಗಿಲ್ಲ ಎಂದು ಅವರು ಹೇಳಿದರು.

ಈ ಪ್ರತಿಯೊಂದು ಪರೀಕ್ಷೆಯಲ್ಲಿ ಸರಾಸರಿ 2.5 ಕೋಟಿಯಿಂದ 3 ಕೋಟಿ ಅಭ್ಯರ್ಥಿಗಳು ಹಾಜರಾಗುತ್ತಾರೆ.

ಸಾಮಾನ್ಯ ಅರ್ಹತಾ ಪರೀಕ್ಷೆಯನ್ನು ಒಮ್ಮೆ ತೆಗೆದುಕೊಂಡರೆ ಅದು ಉನ್ನತ ಮಟ್ಟದ ಯಾವುದೇ/ಎಲ್ಲಾ ನೇಮಕಾತಿ ಏಜೆನ್ಸಿಗಳಿಗೆ ಅನ್ವಯಿಸುತ್ತದೆ ಎಂದು ಅವರು ಹೇಳಿದರು.


ಇದನ್ನೂ ಓದಿ: ಶೋಷಿತರಿಗೆ ಮೀಸಲಾತಿ ಯಾಕೆ ಬೇಕಿದೆ? : ವಿಕಾಸ್‌ ಆರ್‌ ಮೌರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...