Homeಕರ್ನಾಟಕಸೆಪ್ಟೆಂಬರ್‌ 1 ರಿಂದ ಹಲವು ಗೊಂದಲಗಳ ನಡುವೆ ನಡೆಯಲಿದೆ ಪದವಿ ಪರೀಕ್ಷೆಗಳು

ಸೆಪ್ಟೆಂಬರ್‌ 1 ರಿಂದ ಹಲವು ಗೊಂದಲಗಳ ನಡುವೆ ನಡೆಯಲಿದೆ ಪದವಿ ಪರೀಕ್ಷೆಗಳು

ಕೊರೊನ ಸೋಂಕು ಹೆಚ್ಚುತ್ತಿರುವ ನಡುವೆಯೇ ರಾಜ್ಯದ ಎಲ್ಲಾ ವಿವಿಗಳು ಬಿಎ, ಬಿಎಸ್‌ಸಿ, ಬಿಕಾಂ, ಬಿಲಿಬ್ ಪದವಿಯ 6 ನೇ ಸೆಮಿಸ್ಟರ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.

- Advertisement -
- Advertisement -

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಅಂತಿಮ ವರ್ಷದ ಪರೀಕ್ಷೆಗಳು ಸೆ.1 ರಿಂದ 24 ರವರೆಗೆ ನಡೆಯಲಿವೆ. ಕೊರೊನ ಸೋಂಕು ಹೆಚ್ಚುತ್ತಿರುವ ನಡುವೆಯೇ ಬಿಎ, ಬಿಎಸ್‌ಸಿ, ಬಿಕಾಂ, ಬಿಲಿಬ್ ಪದವಿಯ 6 ನೇ ಸೆಮಿಸ್ಟರ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.

ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲಾ ವಿವಿಗಳು ಒಂದೇ ಭಾರಿಗೆ ಪರೀಕ್ಷೆಗಳನ್ನು ನಡೆಸುತ್ತಿದ್ದು ಏಕರೂಪ ಶಿಕ್ಷಣದ ಮೊದಲ ಹಂತ ಇದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ವಿಭಜಿತ ಬೆಂಗಳೂರು ವಿವಿಯ ನಾಲ್ಕು, ಮೈಸೂರು, ಕುವೆಂಪು, ತುಮಕೂರು, ಬಳ್ಳಾರಿಯ ಕೃಷ್ಣದೇವರಾಯ, ರಾಣಿಚೆನ್ನಮ್ಮ ಹೀಗೆ ಎಲ್ಲಾ ವಿವಿಗಳಲ್ಲೂ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದ್ದು ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಕಳೆದ ವರ್ಷ ನವೆಂಬರ್‌ನಿಂದ ಜನವರಿವರೆಗೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಈಗ ಐದು ತಿಂಗಳ ದೀರ್ಘಾವಧಿ ಕೊರೊನಾ ರಜೆಯ ಬಳಿಕ ಪರೀಕ್ಷೆಗಳನ್ನು ಎದುರಿಸಬೇಕಾಗಿ ಬಂದಿದೆ.

ಇದನ್ನೂ ಓದಿ: ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ.

“ಲಾಕ್‌ಡೌನ್ ಮಾಡುವ ಪೂರ್ವದಲ್ಲಿ ಆಫ್‌ಲೈನ್ ತರಗತಿಗಳು ನಡಿದ್ದವು. ಕೊರೊನಾ ಸೋಂಕು ಹರಡಿದ ಪರಿಣಾಮ ಮೂರು ತಿಂಗಳು ತರಗತಿಗಳು ನಡೆಯಲಿಲ್ಲ. ನಂತರ ವಿವಿಗಳು ಆನ್‌ಲೈನ್ ತರಗತಿ ನಡೆಸಿದವು. ಮೊಬೈಲ್ ಇದ್ದು ಸಿಗ್ನಲ್ ಸಿಕ್ಕವರು ತರಗತಿಯಲ್ಲಿ ಪಾಲ್ಗೊಂಡಿರಬಹುದು ಬಹುದು. ಆದರೆ ಮೊಬೈಲ್ ಇಲ್ಲದೇ ಇರುವವರು ಆನ್‌ಲೈನ್ ತರಗತಿಯಲ್ಲಿ ಪಾಠ ಕೇಳಲು ಸಾಧ್ಯವಾಗಿರಲಿಲ್ಲ. ನೇರ ಅಧ್ಯಾಪಕರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಲು ಬಸ್ ವ್ಯವಸ್ಥೆ ಇರಲಿಲ್ಲ. ನಗರದ ವಿದ್ಯಾರ್ಥಿಗಳು ಅಧ್ಯಾಪಕರನ್ನು ಭೇಟಿ ಮಾಡಿರಬಹುದು. ಆದರೆ ನಮಗೆ ಅಂತಹ ವ್ಯವಸ್ಥೆ ಇರಲಿಲ್ಲ” ಎಂದು ಗ್ರಾಮೀಣ ವಿದ್ಯಾರ್ಥಿಗಳು ದೂರಿದ್ದಾರೆ.

ತುಮಕೂರು ಮತ್ತು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬರುವ ವಿವಿಗಳಲ್ಲಿ ಶೇಕಡ 60 ರಷ್ಟು ಸಿಲಬಸ್ ಪೂರ್ಣಗೊಂಡಿಲ್ಲ. ಆದರೂ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಆದರೆ ಮಾರ್ಚ್ ವೇಳೆಗೆ ಶೇ. 80 ರಷ್ಟು ಸಿಲಬಸ್ ಪೂರ್ಣಗೊಂಡಿತ್ತು. ಪ್ರಶ್ನೆಪತ್ರಿಕೆಗಳ ರಚನೆಗೆ ಸಿದ್ದತೆ ನಡೆದಿತ್ತು ಎನ್ನುತ್ತವೆ ಅಧ್ಯಾಪಕ ವರ್ಗದ ಮೂಲಗಳು.

ಇದನ್ನೂ ಓದಿ: ಅರುಣ್ ಫೆರೇರ: ನತದೃಷ್ಟರ ಕಾನೂನು ನೆರವಿಗೆ ಸದಾ ಲಭ್ಯವಿದ್ದ ಕಾರ್ಯಕರ್ತ

ಈ ನಡುವೆ ಯುಜಿಸಿ ಕೂಡ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುವುದು. ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿಗಳು ಪರೀಕ್ಷೆ ಕಟ್ಟುವ ಅಗತ್ಯವಿಲ್ಲ. ಹಿಂದಿನ ಸೆಮಿಸ್ಟರ್‌ನಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಗ್ರೇಡ್‌ಗಳನ್ನು ನೀಡಲಾಗುವುದು ಎಂದು ಹೇಳಿತು. ಆದರೆ ಈಗ 2 ಮತ್ತು 4ನೇ ಸೆಮಿಸ್ಟರ್‌ಗೂ ಪರೀಕ್ಷೆ ನಡೆಸಲು ಶುಲ್ಕ ಕಟ್ಟಿಸಿಕೊಳ್ಳಲಾಗಿದೆ. ಇದು ವಿದ್ಯಾರ್ಥಿಗಳನ್ನು ಗೊಂದಲಕ್ಕೆ ದೂಡುವಂತೆ ಮಾಡಿದೆ. ಯುಜಿಸಿ ಮತ್ತು ವಿವಿಗಳ ತೀರ್ಮಾನಗಳು ಭಿನ್ನವಾಗಿರುವುದು ಇಂಥ ಗೊಂದಲಕ್ಕೆ ಕಾರಣವಾಗಿದೆ.

ಈ. ಶಿವಣ್ಣ (ಎಸ್‌ಎಫ್‌ಐ ತುಮಕೂರು ಜಿಲ್ಲಾಧ್ಯಕ್ಷ)

ಎಸ್‌ಎಫ್‌ಐ ತುಮಕೂರು ಜಿಲ್ಲಾಧ್ಯಕ್ಷ ಈ. ಶಿವಣ್ಣ ನಾನುಗೌರಿ.ಕಾಂ ಜೊತೆ ಮಾತನಾಡಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಬಿಡಿಸಿಟ್ಟರು. ಸಿಲಬಸ್ ಪೂರ್ಣಗೊಂಡಿಲ್ಲ, ವಿದ್ಯಾರ್ಥಿಗಳು ದೀರ್ಘಾವಧಿಯಾಗಿ ತರಗತಿಗೆ ಹೋಗಲು ಆಗಿಲ್ಲ. ಆದರೂ ಪರೀಕ್ಷೆಗಳನ್ನು ಅವೈಜ್ಞಾನಿಕವಾಗಿ ನಡೆಸಲಾಗುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತೀವ್ರ ಸಮಸ್ಯೆ ಎದುರಿಸಬೇಕಾಗುತ್ತದೆ. ಫಲಿತಾಂಶದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ 2 ಮತ್ತು 4ನೇ ಸೆಮ್ ವಿದ್ಯಾರ್ಥಿಗಳಿಗೆ ಹಿಂದಿನ ತರಗತಿಯ ಅಂಕಗಳ ಆಧಾರದ ಮೇಲೆ ಗ್ರೇಡ್ ನೀಡಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: ಬಡಜನರಿಗೆ ವಕೀಲೆಯಾಗಿದ್ದಕ್ಕೆ ಜೈಲಿಗೆ ಹೋದ ಐಐಟಿ ಪದವೀಧರೆ ಸುಧಾ ಭಾರದ್ವಾಜ್!

ಬೆಂಗಳೂರು ವ್ಯಾಪ್ತಿಯ ನಾಲ್ಕು ವಿವಿಗಳು ಮತ್ತು ತುಮಕೂರು ವಿಶ್ವವಿದ್ಯಾಲಯದಲ್ಲಿ ಸಾಕಷ್ಟು ಸಮಸ್ಯೆಗಳು ಇವೆ. ಈ ವಿವಿಗಳನ್ನು ಹೊರತುಪಡಿಸಿ ಬೇರೆ ವಿವಿಗಳಲ್ಲಿ ಆರನೇ ಸೆಮಿಸ್ಟರ್ ವಿದ್ಯಾರ್ಥಿಗಳು ಮೂರು ವರ್ಷದ ಎಲ್ಲಾ ಪರೀಕ್ಷೆಗಳಿಗೆ ಶುಲ್ಕ ಕಟ್ಟಿ ಬರೆಯಲು ಅವಕಾಶವಿದೆ. ಅಂದರೆ 2, 4 ಮತ್ತು 5ನೇ ಸೆಮ್ ಫೇಲ್ ಆಗಿದ್ದರೂ ಅವರು ಎಲ್ಲಾ ಪರೀಕ್ಷೆಗಳಿಗೆ ಏಕಕಾಲಕ್ಕೆ ಶುಲ್ಕ ಕಟ್ಟಬಹುದು.

ಆದರೆ ತುಮಕೂರು ಮತ್ತು ಬೆಂಗಳೂರು ವ್ಯಾಪ್ತಿ ವಿವಿಗಳಲ್ಲಿ 6ನೇ ಸಮಿಸ್ಟರ್ ವಿದ್ಯಾರ್ಥಿಗಳು 2, 3, 4 ಮತ್ತು 5ನೇ ಸೆಮಿಸ್ಟರ್‌ಗಳಲ್ಲಿ ಫೇಲಾಗಿದ್ದರೆ ಆ ಪರೀಕ್ಷೆಗಳಿಗೆ ಶುಲ್ಕ ಕಟ್ಟಲು ಅವಕಾಶವಿಲ್ಲ. ಇದು ವಿದ್ಯಾರ್ಥಿಗಳಿಗೆ ಒಂದು ವರ್ಷ ನಷ್ಟವಾಗುತ್ತದೆ. ಇದು ತಾಂತ್ರಿಕ ಸಮಸ್ಯೆ ಇದನ್ನು ಬಗೆಹರಿಸಬೇಕು ಎಂದು ಅವರು ಒತ್ತಾಯಿಸಿದರು.

‘ವಿಜಯೀಭವ’ ವೆಬ್ ಸೈಟ್‌ಗೆ ಹೋದರೆ ಎಲ್ಲಾ ವಿಷಯಗಳ ಆನ್‌ಲೈನ್ ತರಗತಿಗಳ  ಮಾಹಿತಿ ಸಿಗುತ್ತದೆ. ವಿದ್ಯಾರ್ಥಿಗಳು ಅದರ ಪ್ರಯೋಜ ಪಡೆಯುವ ವ್ಯವಸ್ಥೆ ಆಯಾ ವಿವಿಗಳು ಕಲ್ಪಿಸಿವೆ. ಸಮಸ್ಯೆ ಏನೆಂದರೆ ಆಂಡ್ರಾಯಿಡ್ ಮೊಬೈಲ್, ಇಂಟರ್ ನೆಟ್ ಸೌಲಭ್ಯವಿಲ್ಲದ ವಿದ್ಯಾರ್ಥಿಗಳು ಏನು ಮಾಡಬೇಕು. ಇದಕ್ಕೆ ಪ್ರಾಧ್ಯಾಪಕರು ಮತ್ತು ವಿವಿಗಳ ಬಳಿ ಉತ್ತರವಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.


ಓದಿ: ಭೀಮಾ ಕೋರೆಗಾಂವ್; ಪ್ರಾಧ್ಯಾಪಕರ ಮೇಲಿನ NIA ಕಿರುಕುಳಕ್ಕೆ ವಿದ್ಯಾರ್ಥಿಗಳ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...