Homeಕರ್ನಾಟಕಸೆಪ್ಟೆಂಬರ್‌ 1 ರಿಂದ ಹಲವು ಗೊಂದಲಗಳ ನಡುವೆ ನಡೆಯಲಿದೆ ಪದವಿ ಪರೀಕ್ಷೆಗಳು

ಸೆಪ್ಟೆಂಬರ್‌ 1 ರಿಂದ ಹಲವು ಗೊಂದಲಗಳ ನಡುವೆ ನಡೆಯಲಿದೆ ಪದವಿ ಪರೀಕ್ಷೆಗಳು

ಕೊರೊನ ಸೋಂಕು ಹೆಚ್ಚುತ್ತಿರುವ ನಡುವೆಯೇ ರಾಜ್ಯದ ಎಲ್ಲಾ ವಿವಿಗಳು ಬಿಎ, ಬಿಎಸ್‌ಸಿ, ಬಿಕಾಂ, ಬಿಲಿಬ್ ಪದವಿಯ 6 ನೇ ಸೆಮಿಸ್ಟರ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.

- Advertisement -
- Advertisement -

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಅಂತಿಮ ವರ್ಷದ ಪರೀಕ್ಷೆಗಳು ಸೆ.1 ರಿಂದ 24 ರವರೆಗೆ ನಡೆಯಲಿವೆ. ಕೊರೊನ ಸೋಂಕು ಹೆಚ್ಚುತ್ತಿರುವ ನಡುವೆಯೇ ಬಿಎ, ಬಿಎಸ್‌ಸಿ, ಬಿಕಾಂ, ಬಿಲಿಬ್ ಪದವಿಯ 6 ನೇ ಸೆಮಿಸ್ಟರ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.

ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲಾ ವಿವಿಗಳು ಒಂದೇ ಭಾರಿಗೆ ಪರೀಕ್ಷೆಗಳನ್ನು ನಡೆಸುತ್ತಿದ್ದು ಏಕರೂಪ ಶಿಕ್ಷಣದ ಮೊದಲ ಹಂತ ಇದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ವಿಭಜಿತ ಬೆಂಗಳೂರು ವಿವಿಯ ನಾಲ್ಕು, ಮೈಸೂರು, ಕುವೆಂಪು, ತುಮಕೂರು, ಬಳ್ಳಾರಿಯ ಕೃಷ್ಣದೇವರಾಯ, ರಾಣಿಚೆನ್ನಮ್ಮ ಹೀಗೆ ಎಲ್ಲಾ ವಿವಿಗಳಲ್ಲೂ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದ್ದು ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಕಳೆದ ವರ್ಷ ನವೆಂಬರ್‌ನಿಂದ ಜನವರಿವರೆಗೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಈಗ ಐದು ತಿಂಗಳ ದೀರ್ಘಾವಧಿ ಕೊರೊನಾ ರಜೆಯ ಬಳಿಕ ಪರೀಕ್ಷೆಗಳನ್ನು ಎದುರಿಸಬೇಕಾಗಿ ಬಂದಿದೆ.

ಇದನ್ನೂ ಓದಿ: ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ.

“ಲಾಕ್‌ಡೌನ್ ಮಾಡುವ ಪೂರ್ವದಲ್ಲಿ ಆಫ್‌ಲೈನ್ ತರಗತಿಗಳು ನಡಿದ್ದವು. ಕೊರೊನಾ ಸೋಂಕು ಹರಡಿದ ಪರಿಣಾಮ ಮೂರು ತಿಂಗಳು ತರಗತಿಗಳು ನಡೆಯಲಿಲ್ಲ. ನಂತರ ವಿವಿಗಳು ಆನ್‌ಲೈನ್ ತರಗತಿ ನಡೆಸಿದವು. ಮೊಬೈಲ್ ಇದ್ದು ಸಿಗ್ನಲ್ ಸಿಕ್ಕವರು ತರಗತಿಯಲ್ಲಿ ಪಾಲ್ಗೊಂಡಿರಬಹುದು ಬಹುದು. ಆದರೆ ಮೊಬೈಲ್ ಇಲ್ಲದೇ ಇರುವವರು ಆನ್‌ಲೈನ್ ತರಗತಿಯಲ್ಲಿ ಪಾಠ ಕೇಳಲು ಸಾಧ್ಯವಾಗಿರಲಿಲ್ಲ. ನೇರ ಅಧ್ಯಾಪಕರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಲು ಬಸ್ ವ್ಯವಸ್ಥೆ ಇರಲಿಲ್ಲ. ನಗರದ ವಿದ್ಯಾರ್ಥಿಗಳು ಅಧ್ಯಾಪಕರನ್ನು ಭೇಟಿ ಮಾಡಿರಬಹುದು. ಆದರೆ ನಮಗೆ ಅಂತಹ ವ್ಯವಸ್ಥೆ ಇರಲಿಲ್ಲ” ಎಂದು ಗ್ರಾಮೀಣ ವಿದ್ಯಾರ್ಥಿಗಳು ದೂರಿದ್ದಾರೆ.

ತುಮಕೂರು ಮತ್ತು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬರುವ ವಿವಿಗಳಲ್ಲಿ ಶೇಕಡ 60 ರಷ್ಟು ಸಿಲಬಸ್ ಪೂರ್ಣಗೊಂಡಿಲ್ಲ. ಆದರೂ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಆದರೆ ಮಾರ್ಚ್ ವೇಳೆಗೆ ಶೇ. 80 ರಷ್ಟು ಸಿಲಬಸ್ ಪೂರ್ಣಗೊಂಡಿತ್ತು. ಪ್ರಶ್ನೆಪತ್ರಿಕೆಗಳ ರಚನೆಗೆ ಸಿದ್ದತೆ ನಡೆದಿತ್ತು ಎನ್ನುತ್ತವೆ ಅಧ್ಯಾಪಕ ವರ್ಗದ ಮೂಲಗಳು.

ಇದನ್ನೂ ಓದಿ: ಅರುಣ್ ಫೆರೇರ: ನತದೃಷ್ಟರ ಕಾನೂನು ನೆರವಿಗೆ ಸದಾ ಲಭ್ಯವಿದ್ದ ಕಾರ್ಯಕರ್ತ

ಈ ನಡುವೆ ಯುಜಿಸಿ ಕೂಡ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುವುದು. ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿಗಳು ಪರೀಕ್ಷೆ ಕಟ್ಟುವ ಅಗತ್ಯವಿಲ್ಲ. ಹಿಂದಿನ ಸೆಮಿಸ್ಟರ್‌ನಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಗ್ರೇಡ್‌ಗಳನ್ನು ನೀಡಲಾಗುವುದು ಎಂದು ಹೇಳಿತು. ಆದರೆ ಈಗ 2 ಮತ್ತು 4ನೇ ಸೆಮಿಸ್ಟರ್‌ಗೂ ಪರೀಕ್ಷೆ ನಡೆಸಲು ಶುಲ್ಕ ಕಟ್ಟಿಸಿಕೊಳ್ಳಲಾಗಿದೆ. ಇದು ವಿದ್ಯಾರ್ಥಿಗಳನ್ನು ಗೊಂದಲಕ್ಕೆ ದೂಡುವಂತೆ ಮಾಡಿದೆ. ಯುಜಿಸಿ ಮತ್ತು ವಿವಿಗಳ ತೀರ್ಮಾನಗಳು ಭಿನ್ನವಾಗಿರುವುದು ಇಂಥ ಗೊಂದಲಕ್ಕೆ ಕಾರಣವಾಗಿದೆ.

ಈ. ಶಿವಣ್ಣ (ಎಸ್‌ಎಫ್‌ಐ ತುಮಕೂರು ಜಿಲ್ಲಾಧ್ಯಕ್ಷ)

ಎಸ್‌ಎಫ್‌ಐ ತುಮಕೂರು ಜಿಲ್ಲಾಧ್ಯಕ್ಷ ಈ. ಶಿವಣ್ಣ ನಾನುಗೌರಿ.ಕಾಂ ಜೊತೆ ಮಾತನಾಡಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಬಿಡಿಸಿಟ್ಟರು. ಸಿಲಬಸ್ ಪೂರ್ಣಗೊಂಡಿಲ್ಲ, ವಿದ್ಯಾರ್ಥಿಗಳು ದೀರ್ಘಾವಧಿಯಾಗಿ ತರಗತಿಗೆ ಹೋಗಲು ಆಗಿಲ್ಲ. ಆದರೂ ಪರೀಕ್ಷೆಗಳನ್ನು ಅವೈಜ್ಞಾನಿಕವಾಗಿ ನಡೆಸಲಾಗುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತೀವ್ರ ಸಮಸ್ಯೆ ಎದುರಿಸಬೇಕಾಗುತ್ತದೆ. ಫಲಿತಾಂಶದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ 2 ಮತ್ತು 4ನೇ ಸೆಮ್ ವಿದ್ಯಾರ್ಥಿಗಳಿಗೆ ಹಿಂದಿನ ತರಗತಿಯ ಅಂಕಗಳ ಆಧಾರದ ಮೇಲೆ ಗ್ರೇಡ್ ನೀಡಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: ಬಡಜನರಿಗೆ ವಕೀಲೆಯಾಗಿದ್ದಕ್ಕೆ ಜೈಲಿಗೆ ಹೋದ ಐಐಟಿ ಪದವೀಧರೆ ಸುಧಾ ಭಾರದ್ವಾಜ್!

ಬೆಂಗಳೂರು ವ್ಯಾಪ್ತಿಯ ನಾಲ್ಕು ವಿವಿಗಳು ಮತ್ತು ತುಮಕೂರು ವಿಶ್ವವಿದ್ಯಾಲಯದಲ್ಲಿ ಸಾಕಷ್ಟು ಸಮಸ್ಯೆಗಳು ಇವೆ. ಈ ವಿವಿಗಳನ್ನು ಹೊರತುಪಡಿಸಿ ಬೇರೆ ವಿವಿಗಳಲ್ಲಿ ಆರನೇ ಸೆಮಿಸ್ಟರ್ ವಿದ್ಯಾರ್ಥಿಗಳು ಮೂರು ವರ್ಷದ ಎಲ್ಲಾ ಪರೀಕ್ಷೆಗಳಿಗೆ ಶುಲ್ಕ ಕಟ್ಟಿ ಬರೆಯಲು ಅವಕಾಶವಿದೆ. ಅಂದರೆ 2, 4 ಮತ್ತು 5ನೇ ಸೆಮ್ ಫೇಲ್ ಆಗಿದ್ದರೂ ಅವರು ಎಲ್ಲಾ ಪರೀಕ್ಷೆಗಳಿಗೆ ಏಕಕಾಲಕ್ಕೆ ಶುಲ್ಕ ಕಟ್ಟಬಹುದು.

ಆದರೆ ತುಮಕೂರು ಮತ್ತು ಬೆಂಗಳೂರು ವ್ಯಾಪ್ತಿ ವಿವಿಗಳಲ್ಲಿ 6ನೇ ಸಮಿಸ್ಟರ್ ವಿದ್ಯಾರ್ಥಿಗಳು 2, 3, 4 ಮತ್ತು 5ನೇ ಸೆಮಿಸ್ಟರ್‌ಗಳಲ್ಲಿ ಫೇಲಾಗಿದ್ದರೆ ಆ ಪರೀಕ್ಷೆಗಳಿಗೆ ಶುಲ್ಕ ಕಟ್ಟಲು ಅವಕಾಶವಿಲ್ಲ. ಇದು ವಿದ್ಯಾರ್ಥಿಗಳಿಗೆ ಒಂದು ವರ್ಷ ನಷ್ಟವಾಗುತ್ತದೆ. ಇದು ತಾಂತ್ರಿಕ ಸಮಸ್ಯೆ ಇದನ್ನು ಬಗೆಹರಿಸಬೇಕು ಎಂದು ಅವರು ಒತ್ತಾಯಿಸಿದರು.

‘ವಿಜಯೀಭವ’ ವೆಬ್ ಸೈಟ್‌ಗೆ ಹೋದರೆ ಎಲ್ಲಾ ವಿಷಯಗಳ ಆನ್‌ಲೈನ್ ತರಗತಿಗಳ  ಮಾಹಿತಿ ಸಿಗುತ್ತದೆ. ವಿದ್ಯಾರ್ಥಿಗಳು ಅದರ ಪ್ರಯೋಜ ಪಡೆಯುವ ವ್ಯವಸ್ಥೆ ಆಯಾ ವಿವಿಗಳು ಕಲ್ಪಿಸಿವೆ. ಸಮಸ್ಯೆ ಏನೆಂದರೆ ಆಂಡ್ರಾಯಿಡ್ ಮೊಬೈಲ್, ಇಂಟರ್ ನೆಟ್ ಸೌಲಭ್ಯವಿಲ್ಲದ ವಿದ್ಯಾರ್ಥಿಗಳು ಏನು ಮಾಡಬೇಕು. ಇದಕ್ಕೆ ಪ್ರಾಧ್ಯಾಪಕರು ಮತ್ತು ವಿವಿಗಳ ಬಳಿ ಉತ್ತರವಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.


ಓದಿ: ಭೀಮಾ ಕೋರೆಗಾಂವ್; ಪ್ರಾಧ್ಯಾಪಕರ ಮೇಲಿನ NIA ಕಿರುಕುಳಕ್ಕೆ ವಿದ್ಯಾರ್ಥಿಗಳ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...