Homeಕರ್ನಾಟಕಸೆಪ್ಟೆಂಬರ್‌ 1 ರಿಂದ ಹಲವು ಗೊಂದಲಗಳ ನಡುವೆ ನಡೆಯಲಿದೆ ಪದವಿ ಪರೀಕ್ಷೆಗಳು

ಸೆಪ್ಟೆಂಬರ್‌ 1 ರಿಂದ ಹಲವು ಗೊಂದಲಗಳ ನಡುವೆ ನಡೆಯಲಿದೆ ಪದವಿ ಪರೀಕ್ಷೆಗಳು

ಕೊರೊನ ಸೋಂಕು ಹೆಚ್ಚುತ್ತಿರುವ ನಡುವೆಯೇ ರಾಜ್ಯದ ಎಲ್ಲಾ ವಿವಿಗಳು ಬಿಎ, ಬಿಎಸ್‌ಸಿ, ಬಿಕಾಂ, ಬಿಲಿಬ್ ಪದವಿಯ 6 ನೇ ಸೆಮಿಸ್ಟರ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.

- Advertisement -
- Advertisement -

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಅಂತಿಮ ವರ್ಷದ ಪರೀಕ್ಷೆಗಳು ಸೆ.1 ರಿಂದ 24 ರವರೆಗೆ ನಡೆಯಲಿವೆ. ಕೊರೊನ ಸೋಂಕು ಹೆಚ್ಚುತ್ತಿರುವ ನಡುವೆಯೇ ಬಿಎ, ಬಿಎಸ್‌ಸಿ, ಬಿಕಾಂ, ಬಿಲಿಬ್ ಪದವಿಯ 6 ನೇ ಸೆಮಿಸ್ಟರ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.

ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲಾ ವಿವಿಗಳು ಒಂದೇ ಭಾರಿಗೆ ಪರೀಕ್ಷೆಗಳನ್ನು ನಡೆಸುತ್ತಿದ್ದು ಏಕರೂಪ ಶಿಕ್ಷಣದ ಮೊದಲ ಹಂತ ಇದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ವಿಭಜಿತ ಬೆಂಗಳೂರು ವಿವಿಯ ನಾಲ್ಕು, ಮೈಸೂರು, ಕುವೆಂಪು, ತುಮಕೂರು, ಬಳ್ಳಾರಿಯ ಕೃಷ್ಣದೇವರಾಯ, ರಾಣಿಚೆನ್ನಮ್ಮ ಹೀಗೆ ಎಲ್ಲಾ ವಿವಿಗಳಲ್ಲೂ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದ್ದು ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಕಳೆದ ವರ್ಷ ನವೆಂಬರ್‌ನಿಂದ ಜನವರಿವರೆಗೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಈಗ ಐದು ತಿಂಗಳ ದೀರ್ಘಾವಧಿ ಕೊರೊನಾ ರಜೆಯ ಬಳಿಕ ಪರೀಕ್ಷೆಗಳನ್ನು ಎದುರಿಸಬೇಕಾಗಿ ಬಂದಿದೆ.

ಇದನ್ನೂ ಓದಿ: ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ.

“ಲಾಕ್‌ಡೌನ್ ಮಾಡುವ ಪೂರ್ವದಲ್ಲಿ ಆಫ್‌ಲೈನ್ ತರಗತಿಗಳು ನಡಿದ್ದವು. ಕೊರೊನಾ ಸೋಂಕು ಹರಡಿದ ಪರಿಣಾಮ ಮೂರು ತಿಂಗಳು ತರಗತಿಗಳು ನಡೆಯಲಿಲ್ಲ. ನಂತರ ವಿವಿಗಳು ಆನ್‌ಲೈನ್ ತರಗತಿ ನಡೆಸಿದವು. ಮೊಬೈಲ್ ಇದ್ದು ಸಿಗ್ನಲ್ ಸಿಕ್ಕವರು ತರಗತಿಯಲ್ಲಿ ಪಾಲ್ಗೊಂಡಿರಬಹುದು ಬಹುದು. ಆದರೆ ಮೊಬೈಲ್ ಇಲ್ಲದೇ ಇರುವವರು ಆನ್‌ಲೈನ್ ತರಗತಿಯಲ್ಲಿ ಪಾಠ ಕೇಳಲು ಸಾಧ್ಯವಾಗಿರಲಿಲ್ಲ. ನೇರ ಅಧ್ಯಾಪಕರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಲು ಬಸ್ ವ್ಯವಸ್ಥೆ ಇರಲಿಲ್ಲ. ನಗರದ ವಿದ್ಯಾರ್ಥಿಗಳು ಅಧ್ಯಾಪಕರನ್ನು ಭೇಟಿ ಮಾಡಿರಬಹುದು. ಆದರೆ ನಮಗೆ ಅಂತಹ ವ್ಯವಸ್ಥೆ ಇರಲಿಲ್ಲ” ಎಂದು ಗ್ರಾಮೀಣ ವಿದ್ಯಾರ್ಥಿಗಳು ದೂರಿದ್ದಾರೆ.

ತುಮಕೂರು ಮತ್ತು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬರುವ ವಿವಿಗಳಲ್ಲಿ ಶೇಕಡ 60 ರಷ್ಟು ಸಿಲಬಸ್ ಪೂರ್ಣಗೊಂಡಿಲ್ಲ. ಆದರೂ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಆದರೆ ಮಾರ್ಚ್ ವೇಳೆಗೆ ಶೇ. 80 ರಷ್ಟು ಸಿಲಬಸ್ ಪೂರ್ಣಗೊಂಡಿತ್ತು. ಪ್ರಶ್ನೆಪತ್ರಿಕೆಗಳ ರಚನೆಗೆ ಸಿದ್ದತೆ ನಡೆದಿತ್ತು ಎನ್ನುತ್ತವೆ ಅಧ್ಯಾಪಕ ವರ್ಗದ ಮೂಲಗಳು.

ಇದನ್ನೂ ಓದಿ: ಅರುಣ್ ಫೆರೇರ: ನತದೃಷ್ಟರ ಕಾನೂನು ನೆರವಿಗೆ ಸದಾ ಲಭ್ಯವಿದ್ದ ಕಾರ್ಯಕರ್ತ

ಈ ನಡುವೆ ಯುಜಿಸಿ ಕೂಡ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುವುದು. ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿಗಳು ಪರೀಕ್ಷೆ ಕಟ್ಟುವ ಅಗತ್ಯವಿಲ್ಲ. ಹಿಂದಿನ ಸೆಮಿಸ್ಟರ್‌ನಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಗ್ರೇಡ್‌ಗಳನ್ನು ನೀಡಲಾಗುವುದು ಎಂದು ಹೇಳಿತು. ಆದರೆ ಈಗ 2 ಮತ್ತು 4ನೇ ಸೆಮಿಸ್ಟರ್‌ಗೂ ಪರೀಕ್ಷೆ ನಡೆಸಲು ಶುಲ್ಕ ಕಟ್ಟಿಸಿಕೊಳ್ಳಲಾಗಿದೆ. ಇದು ವಿದ್ಯಾರ್ಥಿಗಳನ್ನು ಗೊಂದಲಕ್ಕೆ ದೂಡುವಂತೆ ಮಾಡಿದೆ. ಯುಜಿಸಿ ಮತ್ತು ವಿವಿಗಳ ತೀರ್ಮಾನಗಳು ಭಿನ್ನವಾಗಿರುವುದು ಇಂಥ ಗೊಂದಲಕ್ಕೆ ಕಾರಣವಾಗಿದೆ.

ಈ. ಶಿವಣ್ಣ (ಎಸ್‌ಎಫ್‌ಐ ತುಮಕೂರು ಜಿಲ್ಲಾಧ್ಯಕ್ಷ)

ಎಸ್‌ಎಫ್‌ಐ ತುಮಕೂರು ಜಿಲ್ಲಾಧ್ಯಕ್ಷ ಈ. ಶಿವಣ್ಣ ನಾನುಗೌರಿ.ಕಾಂ ಜೊತೆ ಮಾತನಾಡಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಬಿಡಿಸಿಟ್ಟರು. ಸಿಲಬಸ್ ಪೂರ್ಣಗೊಂಡಿಲ್ಲ, ವಿದ್ಯಾರ್ಥಿಗಳು ದೀರ್ಘಾವಧಿಯಾಗಿ ತರಗತಿಗೆ ಹೋಗಲು ಆಗಿಲ್ಲ. ಆದರೂ ಪರೀಕ್ಷೆಗಳನ್ನು ಅವೈಜ್ಞಾನಿಕವಾಗಿ ನಡೆಸಲಾಗುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತೀವ್ರ ಸಮಸ್ಯೆ ಎದುರಿಸಬೇಕಾಗುತ್ತದೆ. ಫಲಿತಾಂಶದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ 2 ಮತ್ತು 4ನೇ ಸೆಮ್ ವಿದ್ಯಾರ್ಥಿಗಳಿಗೆ ಹಿಂದಿನ ತರಗತಿಯ ಅಂಕಗಳ ಆಧಾರದ ಮೇಲೆ ಗ್ರೇಡ್ ನೀಡಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: ಬಡಜನರಿಗೆ ವಕೀಲೆಯಾಗಿದ್ದಕ್ಕೆ ಜೈಲಿಗೆ ಹೋದ ಐಐಟಿ ಪದವೀಧರೆ ಸುಧಾ ಭಾರದ್ವಾಜ್!

ಬೆಂಗಳೂರು ವ್ಯಾಪ್ತಿಯ ನಾಲ್ಕು ವಿವಿಗಳು ಮತ್ತು ತುಮಕೂರು ವಿಶ್ವವಿದ್ಯಾಲಯದಲ್ಲಿ ಸಾಕಷ್ಟು ಸಮಸ್ಯೆಗಳು ಇವೆ. ಈ ವಿವಿಗಳನ್ನು ಹೊರತುಪಡಿಸಿ ಬೇರೆ ವಿವಿಗಳಲ್ಲಿ ಆರನೇ ಸೆಮಿಸ್ಟರ್ ವಿದ್ಯಾರ್ಥಿಗಳು ಮೂರು ವರ್ಷದ ಎಲ್ಲಾ ಪರೀಕ್ಷೆಗಳಿಗೆ ಶುಲ್ಕ ಕಟ್ಟಿ ಬರೆಯಲು ಅವಕಾಶವಿದೆ. ಅಂದರೆ 2, 4 ಮತ್ತು 5ನೇ ಸೆಮ್ ಫೇಲ್ ಆಗಿದ್ದರೂ ಅವರು ಎಲ್ಲಾ ಪರೀಕ್ಷೆಗಳಿಗೆ ಏಕಕಾಲಕ್ಕೆ ಶುಲ್ಕ ಕಟ್ಟಬಹುದು.

ಆದರೆ ತುಮಕೂರು ಮತ್ತು ಬೆಂಗಳೂರು ವ್ಯಾಪ್ತಿ ವಿವಿಗಳಲ್ಲಿ 6ನೇ ಸಮಿಸ್ಟರ್ ವಿದ್ಯಾರ್ಥಿಗಳು 2, 3, 4 ಮತ್ತು 5ನೇ ಸೆಮಿಸ್ಟರ್‌ಗಳಲ್ಲಿ ಫೇಲಾಗಿದ್ದರೆ ಆ ಪರೀಕ್ಷೆಗಳಿಗೆ ಶುಲ್ಕ ಕಟ್ಟಲು ಅವಕಾಶವಿಲ್ಲ. ಇದು ವಿದ್ಯಾರ್ಥಿಗಳಿಗೆ ಒಂದು ವರ್ಷ ನಷ್ಟವಾಗುತ್ತದೆ. ಇದು ತಾಂತ್ರಿಕ ಸಮಸ್ಯೆ ಇದನ್ನು ಬಗೆಹರಿಸಬೇಕು ಎಂದು ಅವರು ಒತ್ತಾಯಿಸಿದರು.

‘ವಿಜಯೀಭವ’ ವೆಬ್ ಸೈಟ್‌ಗೆ ಹೋದರೆ ಎಲ್ಲಾ ವಿಷಯಗಳ ಆನ್‌ಲೈನ್ ತರಗತಿಗಳ  ಮಾಹಿತಿ ಸಿಗುತ್ತದೆ. ವಿದ್ಯಾರ್ಥಿಗಳು ಅದರ ಪ್ರಯೋಜ ಪಡೆಯುವ ವ್ಯವಸ್ಥೆ ಆಯಾ ವಿವಿಗಳು ಕಲ್ಪಿಸಿವೆ. ಸಮಸ್ಯೆ ಏನೆಂದರೆ ಆಂಡ್ರಾಯಿಡ್ ಮೊಬೈಲ್, ಇಂಟರ್ ನೆಟ್ ಸೌಲಭ್ಯವಿಲ್ಲದ ವಿದ್ಯಾರ್ಥಿಗಳು ಏನು ಮಾಡಬೇಕು. ಇದಕ್ಕೆ ಪ್ರಾಧ್ಯಾಪಕರು ಮತ್ತು ವಿವಿಗಳ ಬಳಿ ಉತ್ತರವಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.


ಓದಿ: ಭೀಮಾ ಕೋರೆಗಾಂವ್; ಪ್ರಾಧ್ಯಾಪಕರ ಮೇಲಿನ NIA ಕಿರುಕುಳಕ್ಕೆ ವಿದ್ಯಾರ್ಥಿಗಳ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...