Homeಕರ್ನಾಟಕಶೃಂಗೇರಿಯಲ್ಲಿ ಅಶಾಂತಿ ಸೃಸ್ಟಿಸಲು ಯತ್ನಿಸಿದ ಮಾಜಿ ಶಾಸಕ ಜೀವರಾಜ್ ಮತ್ತು ಸಂಗಡಿಗರನ್ನು ಬಂಧಿಸಿ: ಎಸ್‌ಡಿಪಿಐ

ಶೃಂಗೇರಿಯಲ್ಲಿ ಅಶಾಂತಿ ಸೃಸ್ಟಿಸಲು ಯತ್ನಿಸಿದ ಮಾಜಿ ಶಾಸಕ ಜೀವರಾಜ್ ಮತ್ತು ಸಂಗಡಿಗರನ್ನು ಬಂಧಿಸಿ: ಎಸ್‌ಡಿಪಿಐ

ಕೃತ್ಯ ಎಸಗಿದ ಮಿಲಿಂದ್ ಮೇಲೆ ಇನ್ನೂ ಎಫ್‌ಐಆರ್‌ ದಾಖಲಿಸದೆ ಇರುವುದನ್ನು ಪಕ್ಷವು ಖಂಡಿಸಿದೆ.

- Advertisement -
- Advertisement -

ಶೃಂಗೇರಿಯಲ್ಲಿ ಶಂಕರಾಚಾರ್ಯ ಗೋಪುರದ ಮೇಲೆ ಬಾವುಟವನ್ನು ಹಾಕಿದ್ದನ್ನು ಎಸ್ಡಿಪಿಐ ಪಕ್ಷದ ಹಾಗೂ ಸ್ಥಳೀಯ ಮುಸ್ಲಿಂ ಸಮುದಾಯದ ತಲೆಗೆ ಕಟ್ಟಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಮಾಜಿ ಶಾಸಕ ಜೀವರಾಜ್ ಹಾಗೂ ಸಂಗಡಿಗರ ಮೇಲೆ ಕೇಸ್ ದಾಖಲಿಸಿ ಬಂಧಿಸಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ರಾಜ್ಯ ಸಮಿತಿ ಆಗ್ರಹಿಸಿದೆ.

ಘಟನೆಯನ್ನು ಅತ್ಯಂತ ಕಳವಳಕಾರಿಯೂ ಗಂಭೀರವೂ ಆಗಿದೆ ಎಂದಿರುವ ಪಕ್ಷವು ಇದು ಸಮಾಜದಲ್ಲಿ ಮುಸ್ಲಿಮರ ಬಗ್ಗೆ ದ್ವೇಷ ಹುಟ್ಟಿಸುವ ಉದ್ದೇಶಪೂರ್ವಕ ಕೃತ್ಯವಾಗಿದೆ ಹಾಗೂ ಕೋಮು ಸೌಹಾರ್ದತೆಯನ್ನು ಕೆಡಿಸಿ ಸಮಾಜದ ಶಾಂತಿ ಹಾಗೂ ನೆಮ್ಮದಿ ಕೆಡಿಸುವ ಷಡ್ಯಂತ್ರವೂ ಆಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಶೃಂಗೇರಿ ಘಟನೆಯ ಸಿಸಿಟಿವಿ ವಿಡಿಯೋ ನೋಡಿ: ಮಸೀದಿಯಿಂದ ಧ್ವಜ ಕದ್ದುಕೊಂಡು ಹೋದದ್ದು ಯಾರು?

ಕೃತ್ಯ ಎಸಗಿದ ಮಿಲಿಂದ್ ಮೇಲೆ ಇನ್ನೂ ಎಫ್‌ಐಆರ್‌ ದಾಖಲಿಸದೆ ಇರುವುದನ್ನು ಉಲ್ಲೇಖಿಸಿದ ಪಕ್ಷವು, “ಅವರ ಮೇಲೆ ಸ್ವಯಂ ಪ್ರಕರಣ ದಾಖಲಿಸಬೇಕಾದ ಪ್ರಕರಣ ಇದಾಗಿದ್ದರೂ ಪೋಲೀಸರಿಂದ ಇನ್ನೂ ದೂರು ದಾಖಲಾಗಿಲ್ಲ. ಮುಸ್ಲಿಮರು ಕೂಡಾ ದೂರು ದಾಖಲು ಮಾಡಿದ್ದರು ಈವರೆಗೂ ಪೋಲೀಸರು ಎಫ್ಐಆರ್ ದಾಖಲಿಸಲಿಲ್ಲ. ಪೋಲೀಸರಿಗೆ ಧಮಕಿ ಹಾಕಿದ ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಯತ್ನಿಸದ ಜೀವರಾಜ್ ಹಾಗೂ ಆತನ ಸಂಗಡಿಗರ ಮೇಲೆ ದೂರು ದಾಖಲಿಸಿದರೂ ಪೊಲೀಸರು ಎಫ್ಐಆರ್ ಮಾಡಿಲ್ಲ. ಇದು ಅತ್ಯಂತ ಅನ್ಯಾಯವಾಗಿದೆಯಲ್ಲದೆ ಕಾನೂನು ಸುವ್ಯವಸ್ಥೆಯ ಬಗ್ಗೆ ಜನರಲ್ಲಿ ಅಭದ್ರತೆಯನ್ನು ಹಾಗೂ ಪ್ರಶ್ನೆಯನ್ನು ಹುಟ್ಟುಹಾಕಿದೆ” ಎಂದು ಹೇಳಿದೆ.

“ಪೊಲೀಸರು ಸ್ಥಳೀಯ ಮೂವರು ಮುಸ್ಲಿಂ ಯುವಕರ ಮೇಲೆ ಎಫ್ಐಆರ್ ದಾಖಲಿಸಿ ಅಂದು ರಾತ್ರಿ ಇಡೀ ಠಾಣೆಯಲ್ಲಿ ಕೂಡಿಹಾಕಿದ್ದರು. ಆ ಬಾವುಟವು ಎಸ್ಡಿಪಿಐ ಪಕ್ಷದ್ದಾಗಿರಲಿಲ್ಲ. ಅದು ಶೃಂಗೇರಿಯ ಮಸೀದಿಯಲ್ಲಿ ಕಟ್ಟಿದ ಬಾವುಟವಾಗಿತ್ತು. ಮಸೀದಿಯ ಸಿಸಿಟಿವಿಯನ್ನು ಪರಿಶೀಲಿಸಿದಾಗ ಮನೋಹರ್ ಯಾನೆ ಮಿಲಿಂದ್ ಎಂಬಾತನು ಮಾಡಿದ್ದು ಕಂಡು ಬಂತು. ಒಂದು ವೇಳೆ ಮಸೀದಿಯಲ್ಲಿ ಸಿಸಿಟಿವಿ ಇಲ್ಲದಿದ್ದಲ್ಲಿ ಆ ಕೃತ್ಯ ಮುಸ್ಲಿಂ ಹುಡುಗರು ಮಾಡಿದ್ದೆಂದು ಮತ್ತು ಅದರಿಂದ ಶೃಂಗೇರಿಯಲ್ಲಿ ಅಶಾಂತಿಗೆ ಕಾರಣವಾಗುವ ಸಾಧ್ಯತೆ ಇತ್ತು.” ಎಂದು ಪಕ್ಷ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆ ಮೇಲೆ ಹಸಿರು ಬಾವುಟ; ಕೋಮು ಗಲಭೆ ಸೃಷ್ಟಿಸಲು ಸಂಚು?

ಶೃಂಗೇರಿಯಲ್ಲಿ ದ್ವೇಷ ಮತ್ತು ಅಶಾಂತಿಯನ್ನು ಸೃಷ್ಟಿಸಲು ಸಂಚು ಹೂಡಿದ ಮಿಲಿಂದ್, ಜೀವರಾಜ್ ಮತ್ತು ಅವರ ಸಂಗಡಿಗರ ಮೇಲೆ ಪ್ರಕರಣ ದಾಖಲಿಸಲು ಪೊಲೀಸ್ ಇಲಾಖೆಗೆ ಅಡ್ಡಿಯಾಗಿರುವುದು ಏನು ಎನ್ನುದನ್ನು ಸ್ಪಷ್ಟಪಡಿಸುವಂತೆ ಆಗ್ರಹಿಸಿದ ಪಕ್ಷವು ಮಿಲಿಂದ್, ಜೀವರಾಜ್ ಮತ್ತು ಸಂಗಡಿಗರ ಮೇಲೆ ಕೂಡಲೇ ಎಫ್ಐಆರ್ ದಾಖಲಿಸಬೇಕು ಹಾಗೂ ಅವರನ್ನು ಬಂಧಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲೆತ್ನಿಸಿದ ಅವರ ಸಂಚನ್ನು ಹಾಗೂ ಅವರ ಹಿಂದಿರುವ ಶಕ್ತಿಯನ್ನು ಪೊಲೀಸರು ಬಯಲಿಗೆಳೆಯಬೇಕೆಂದು ಕೋರಿದೆ.

ಚಿಕ್ಕಮಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಫರಂಗಿಪೇಟೆ, ಎಸ್ಡಿಪಿಐ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾದ ಅಝ್ಮತ್ ಪಾಷಾ, ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಸಿಕಂದರ್ ಪಾಷಾ ಉಪಸ್ಥಿತರಿದ್ದರು.


ಓದಿ: ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನ ಮತ್ತು ಶೃಂಗೇರಿಯಲ್ಲಿ ತಾಲಿಬಾನಿಗಳು – ಬಿ.ಚಂದ್ರೇಗೌಡ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...