Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಮತಾಂಧರ ಸಮಾಜ ಒಡೆಯುವ ಕೆಲಸವನ್ನು ನಿಯಂತ್ರಿಸುತ್ತಿಲ್ಲ: ಎಚ್. ಎಸ್. ದೊರೆಸ್ವಾಮಿ

ಮತಾಂಧರ ಸಮಾಜ ಒಡೆಯುವ ಕೆಲಸವನ್ನು ನಿಯಂತ್ರಿಸುತ್ತಿಲ್ಲ: ಎಚ್. ಎಸ್. ದೊರೆಸ್ವಾಮಿ

ಭಾರತ ಈಗ ಸ್ವತಂತ್ರ ದೇಶವಾಗಿದೆ. ರಾಜ್ಯಾಂಗ ರಚನೆ ಮಾಡಿಕೊಂಡಿದ್ದೇವೆ. ನಮ್ಮದು ಜಾತ್ಯತೀತ ರಾಷ್ಟ್ರ. ಭಾರತೀಯರ ಮೂಲಭೂತ ಹಕ್ಕುಗಳನ್ನೂ ಸಮಾನತೆ, ಸಹಿಷ್ಣುತೆಗಳನ್ನೂ ನಮ್ಮ ರಾಜ್ಯಾಂಗ ಎತ್ತಿ ಹಿಡಿದಿದೆ.

- Advertisement -
- Advertisement -

ಈ ಮತಾಂಧರು ಸಮಾಜ ಒಡೆಯುವ ಕೆಲಸವನ್ನು ಅವ್ಯಾಹತವಾಗಿ ಮಾಡುತ್ತಿದ್ದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲದಿರುವುದು ತಲ್ಲಣಗೊಳಿಸುವ ವಿಚಾರ. ಪ್ರಸ್ತುತ ಭಾರತದ ಸ್ಥಿತಿಯ ಬಗ್ಗೆ ಎಚ್. ಎಸ್. ದೊರೆಸ್ವಾಮಿಯವರು ಹೀಗೆ ಬರೆಯುತ್ತಾರೆ.

ಅಂದು ದೇಶದ ಸ್ವಾತಂತ್ರಕ್ಕಾಗಿ ದುಡಿದ ಕ್ರಾಂತಿವೀರರು ಇಂದಿನ ಯುವಕರ ಹೀರೋಗಳಾಗಲಿ ಎಂದು ದಿಶಾಭಾರತ್ ಕೈಗೊಂಡಿರುವ ‘ನನ್ನ ಭಾರತ’ ಅಭಿಯಾನದ ಅಂಗವಾಗಿ ಫೇಸ್‌ಬುಕ್‌ನಲ್ಲಿ ದಿಶಾಭಾರತ್ ಪದಾಧಿಕಾರಿ ಗೋಖಲೆ ಉಪನ್ಯಾಸ ಮಾಡಿದರೆಂದು ಪ್ರಜಾವಾಣಿ ಪ್ರಕಟಿಸಿದೆ. ಬ್ರಿಟಿಷರನ್ನು ಮಣಿಸಲು ಶ್ಯಾಮಜಿ ಕೆ ವರ್ಮ ಯುವಕರನ್ನು ಲಂಡನ್ನಿಗೆ ಕಳಿಸಿ ಶಿಕ್ಷಣ ಕೊಡಿಸಿದರು. ಸಾವರ್ಕರ್ ಯುವಕರಲ್ಲಿ ಕ್ರಾಂತಿಯ ಕಿಡಿ ಹಚ್ಚಿದರು. ಮದನ್‌ಲಾಲ್ ಡಿಂಗ್ರಾ ಬ್ರಿಟಿಷ್ ಅಧಿಕಾರಿಯನ್ನು ಹತ್ಯೆಗೈದರು.

ಜಲಿಯನ್‌ವಾಲಾಬಾಗ್ ಹತ್ಯಾಕಾಂಡದ ಸೇಡುತೀರಿಸಿಕೊಳ್ಳಲು ಭಗತ್‌ಸಿಂಗ್, ಚಂದ್ರಶೇಖರ್ ಅಜಾದ್ ಮುಂತಾದವರು ಮುಂದಾದರು. ಭಗತ್‌ಸಿಂಗ್ ಸೆಂಟ್ರಲ್ ಅಸೆಂಬ್ಲಿಯಲ್ಲಿ ಬಾಂಬ್ ಎಸೆದು ಬ್ರಿಟಿಷ್ ಅಧಿಕಾರಿಯೊಬ್ಬ ಸತ್ತ. ಭಗತ್‌ಸಿಂಗ್ ಮತ್ತು ಅವನ ಇಬ್ಬರು ಸಹಚರರನ್ನು ಬ್ರಿಟಿಷರು ಗಲ್ಲಿಗೇರಿಸಿದರು.

ಚಂದ್ರಶೇಖರ್ ಅಜಾದ್, ಜಲಿಯಾಲಾಲಾಬಾಗ್ ಪೊದೆಯಲ್ಲಿ ಅಡಗಿಕೊಂಡಿದ್ದಾಗ ಬ್ರಿಟಿಷ್ ಸೈನಿಕರ ಗುಂಡಿಗೆ ಬಲಿಯಾದರು. ಇವರೆಲ್ಲರೂ ದೇಶಭಕ್ತರು ಎಂಬುದರಲ್ಲಿ ಎರಡು ಮಾತಿಲ್ಲ. ಸಾರ್ವಕರ್ ಅವರು ಕ್ರಾಂತಿಕಾರರಾಗಿದ್ದು ಮಾಂಡಲೆ ಸೆರೆಮನೆಯಲ್ಲಿ ಕರಿನೀರಿನ ಶಿಕ್ಷೆ ಅನುಭವಿಸುತ್ತಿದ್ದವರು. ಹಠಾತ್ತನೆ ಬ್ರಿಟಿಷರ ಕ್ಷಮಾಪಣೆ ಕೇಳಿ ಅವರು ಹಾಕಿದ ಕರಾರುಗಳಿಗೆ ಒಪ್ಪಿಕೊಂಡು ಸೆರೆಮನೆಯಿಂದ ಹೊರಬಿದ್ದದ್ದು ಕ್ರಾಂತಿಕಾರಿಯ ಲಕ್ಷಣವಲ್ಲದಿದ್ದರೂ ಅವರು ದೇಶಭಕ್ತರೇ. ಇರಲಿ.

ಸ್ವಾತಂತ್ರ್ಯ ಸಂಗ್ರಾಮ ಒಂದು ಮಹಾ ಸಮುದ್ರ. ಆ ಮಹಾಸುಮದ್ರದಲ್ಲಿ ಗಾಂಧಿಯವರದ್ದು ಮತ್ತು ಕಾಂಗ್ರೆಸ್ಸಿನವರದ್ದು ಸಿಂಹಪಾಲು. ಉಳಿದ ನೂರಾರು ಸಣ್ಣ ದೊಡ್ಡ ತೊರೆಗಳು ಸ್ವಾತಂತ್ರ್ಯ ಸಂಗ್ರಾಮವೆಂಬ ಮಹಾಸಮುದ್ರದಲ್ಲಿ ಲೀನವಾಗಿ ಪಾಲ್ಗೊಂಡವು. ಇವರೆಲ್ಲರ ಒಟ್ಟಿನ ಶ್ರಮದಿಂದ ಸಮರ್ಪಣ ಮನೋಭಾವದಿಂದ ಈ ಹೋರಾಟದಲ್ಲಿ ಜಯ ಲಭಿಸಿತು. ಈ ಹೋರಾಟಗಾರರು ಮಾತ್ರವಲ್ಲ ಕೊನೆಯ ಘಟ್ಟದಲ್ಲಿ ನೌಕಾದಳದ ಭಾರತೀಯ ಯೋಧರು ಬ್ರಿಟಿಷರ ಮೇಲೆ ಬಂಡಾಯ ಹೂಡಿದರು. ಆಗ ಲೇಬರ್ ಪಕ್ಷದ ನಾಯಕ ಅಟ್ಲೀ ಬ್ರಿಟಿಷ್ ಪ್ರಧಾನಿಯಾಗಿದ್ದರು.

ಅಟ್ಲೀ ಭಾರತ ಸ್ವಾತಂತ್ರ್ಯ ಘೋಷಿಸಿದಾಗ ಹಿಂದಿನ ಪ್ರಧಾನಿ ಚರ್ಚಿಲ್ ‘ಅನಾಯಾಸವಾಗಿ ಭಾರತದ ರಾಸ್ಕಲ್ಸ್ ಮತ್ತು ಸ್ಕೌಂಡ್ರೆಲ್‌ಗಳ ಕೈಲಿ ಅಧಿಕಾರ ನೀಡಿ ಹೊರಬಂದೆ’ ಎಂದು ಅಟ್ಲೀಯವರನ್ನು ಟೀಕಿಸಿದರು. ಆಗ ಅಟ್ಲೀ ‘ಭಾರತ ನೌಕಾಪಡೆ ಬಂಡಾಯ ಎದ್ದ ಮೇಲೆ ಅಲ್ಲಿ ಅಧಿಕಾರ ಮುಂದುವರೆಸುವುದು ವಿವೇಕವಲ್ಲ ಅದಕ್ಕಾಗಿ ಅಧಿಕಾರ ಹಸ್ತಾಂತರ ಮಾಡಿದೆ’ ಎಂದು ಉತ್ತರಿಸಿದರು. ಹೀಗಾಗಿ ಭಾರತೀಯ ಸೈನಿಕರೂ ಸ್ವರಾಜ್ಯ ಪ್ರಾಪ್ತಿಗೆ ಕೆಲಸ ಮಾಡಿದವರೇ.

ಇನ್ನು ಈ ಕ್ರಾಂತಿಕಾರಿಗಳ ಹೋರಾಟದ ಇತಿಹಾಸವನ್ನು ಕೆದಕೋಣ. ಕ್ರಾಂತಿಕಾರಿಗಳು ಬ್ರಿಟಿಷರ ಮೇಲೆ ಅಲ್ಲೊಂದು ಇಲ್ಲೊಂದು ಗೆರಿಲ್ಲಾ ಯುದ್ಧಗಳನ್ನು ನಡೆಸಿದರಾದರೂ ಅನೇಕ ಯುವಕರು ವಿದ್ಯಾರ್ಥಿಗಳು ಬ್ರಿಟಿಷ್ ಅಧಿಕಾರಿಗಳನ್ನು ಒಬ್ಬೊಬ್ಬರಾನ್ನಾಗಿ ಕೊಂದರೆ, ಅವರೇ ಗಂಟುಮೂಟೆ ಕಟ್ಟಿಕೊಂಡು ಬ್ರಿಟನ್‌ಗೆ ಓಡಿ ಹೋಗುತ್ತಾರೆ ಆಗ ದೇಶ ಸ್ವಾತಂತ್ರವಾಗುತ್ತದೆ, ನಮ್ಮದೇ ಆಗುತ್ತದೆ ಎಂದು ಭಾವಿಸಿದ್ದರು. ಅದರಂತೆ ನಾಲ್ಕಾರು ಬ್ರಿಟಿಷ್ ಅಧಿಕಾರಿಗಳ ಕೊಲೆಯೂ ಆಯಿತು. ಆದರೆ ಬ್ರಿಟಿಷರು ಹೆದರಿ ಓಡಿ ಹೋದರೆ? ಅಂದಿನ ಬ್ರಿಟಿಷ್ ಸರ್ಕಾರ ವಸಾಹತುಶಾಹಿ ನೀತಿಯನ್ನು ಅನುಸರಿಸಿ ಪ್ರಪಂಚದ ಅನೇಕ ರಾಷ್ಟ್ರಗಳನ್ನು ತನ್ನ ಅಡಿಯಾಳಾಗಿ ಮಾಡಿಕೊಂಡಿತ್ತು. The Sun Never Sets On The British Empire ಎಂಬುದು ಅಂದಿನ Slogan ಆಗಿತ್ತು. ಇಷ್ಟು ಪ್ರಬಲರಾದ ಇಂಗ್ಲಿಷರು ನಾಲ್ಕು ಜನ ಬ್ರಿಟಿಷ್ ಅಧಿಕಾರಿಗಳನ್ನು ಗುಂಡಿಕ್ಕಿ ಕೊಂದ ಮಾತ್ರಕ್ಕೆ ಹೆದರಿ ಹೋಗುತ್ತಾರೆ ಎಂದು ಆ ಕ್ರಾಂತಿಕಾರಿ ಯುವಕರು ಭ್ರಮಾಧೀನರಾದದ್ದು ಒಂದು ದುರಂತವೇ ಸರಿ.

ಈ ಕ್ರಾಂತಿಕಾರಿಗಳ ಅವಿವೇಕ ಯಾವ ಮಟ್ಟ ಮುಟ್ಟಿತು ಅಂದರೆ ಓಬ್ಬ ಕೈಗಾರಿಕೋದ್ಯಮಿಯ ಪುತ್ರ ಕೆಲ ಬ್ರಿಟಿಷ್ ಅಧಿಕಾರಿಗಳನ್ನು ಚಹಾಪಾನಕ್ಕೆ ಆಹ್ವಾನಿಸಿದ. ಆಹ್ವಾನಿತರೆಲ್ಲ ಬಂದು ಚಹಾಪಾನದಲ್ಲಿ ಪಾಲ್ಗೊಂಡರು. ಆಗ ಆ ಯುವಕ ಹಠಾತ್ತಾಗಿ ಬಂದೂಕು ತೆಗೆದು ಇಬ್ಬರು ಆಹ್ವಾನಿತ ಅಧಿಕಾರಿಗಳನ್ನು ಕೊಂದು ಹಾಕಿದ.

ಈ ಘಟನೆಯನ್ನು ತಿಳಿದುಕೊಂಡ ಮಹಾತ್ಮಾಗಾಂಧಿ, “ಚಹಾ ಪಾನಕ್ಕೆಂದು ಆಹ್ವಾನಿಸಿ ಅವರನ್ನು ಕೊಲೆ ಮಾಡಿದ್ದು ಹೀನಾಯ ಕೃತ್ಯ. ಅದರ ಬದಲು ಅವರ ಕೈಗೂ ಒಂದೊಂದು ಬಂದೂಕ ಕೊಟ್ಟು ಈ ಯುವಕ ಹೋರಾಟ ಮಾಡಿದ್ದರೆ ನಾನು ಅವನನ್ನು ಮೆಚ್ಚಿಕೊಳ್ಳುತ್ತಿದೆ” ಎಂದರು. ಇದು ಕ್ರಾಂತಿಕಾರಿ ಹುಡುಗರ ಇತಿಹಾಸ.

ಭಾರತ ಈಗ ಸ್ವತಂತ್ರ ದೇಶವಾಗಿದೆ. ರಾಜ್ಯಾಂಗ ರಚನೆ ಮಾಡಿಕೊಂಡಿದ್ದೇವೆ. ನಮ್ಮದು ಜಾತ್ಯತೀತ ರಾಷ್ಟ್ರ.

,

ಭಾರತೀಯರ ಮೂಲಭೂತ ಹಕ್ಕುಗಳನ್ನೂ ಸಮಾನತೆ, ಸಹಿಷ್ಣುತೆಗಳನ್ನೂ ನಮ್ಮ ರಾಜ್ಯಾಂಗ ಎತ್ತಿ ಹಿಡಿದಿದೆ.

ಈ ಸಂದರ್ಭದಲ್ಲಿ ಹಿಂದೂ ಮತಾಂಧ ಸಂಸ್ಥೆಗಳು, ಆರ್‌ಎಸ್‌ಎಸ್, ಬಿಜೆಪಿಗಳು ಈ ಸೆಕ್ಯುಲರ್ ಭಾರತವನ್ನು ಹಿಂದೂರಾಷ್ಟ್ರವನ್ನಾಗಿ ಘೋಷಿಸಲು ತುದಿಗಾಲ ಮೇಲೆ ನಿಂತಿದ್ದಾರೆ. ಈ ಸಂದರ್ಭದಲ್ಲಿ ಯುವಕರಿಗೆ ಹಿಂದಿನ ಕ್ರಾಂತಿವೀರರನ್ನು ನಿಮ್ಮ ಆದರ್ಶವಾಗಿ ಮಾಡಿಕೊಳ್ಳಿರಿ ಎಂದು ಬೋಧಿಸುತ್ತಾರೆ ಮತಾಂಧ ಗೋಖಲೆ ಅವರು.

ಆಗ ಆ ಕ್ರಾಂತಿವೀರರು ಬ್ರಿಟಿಷ್ ಅಧಿಕಾರಿಗಳನ್ನು ಒಬ್ಬೊಬ್ಬರನ್ನಾಗಿ ಕೊಲ್ಲಲು ಸಂಚು ಮಾಡಿದರು. ಈಗ ಮತಾಂಧ ಗೋಖಲೆಯವರು ಸಹಜವಾಗಿ ಹಿಂದು ಮತಾಂಧತೆಯನ್ನು ಒಪ್ಪದ ಜನರ ಮೇಲೆ ಉಗ್ರದಾಳಿ ಮಾಡಿ ಎಂದು ಯುವಕರನ್ನು ಬಾಲಿಷ ಭಾಷೆಯಲ್ಲಿ ಪ್ರಚೋದನೆ ಮಾಡಲು ತೊಡಗಿದ್ದಾರೆ. ಇವರನ್ನು ಕೂಡಲೇ ಬಂಧಿಸಿ ಖಟ್ಳೆ ಹೂಡಬೇಕು.

ಬ್ರಿಟಿಷರ ಕಾಲದಲ್ಲಿ ಆ ಯುವಕರನ್ನು ಪ್ರಚೋದನೆ ಮಾಡಿ ಅವರ ಕೈಲಿ ದುಷ್ಕೃತ್ಯ ಮಾಡಿಸಿದ್ದನ್ನು ಅಲ್ಲಿಗೆ ಸಮಾಪ್ತಿಗೊಳಿಸಿ ಹಿಂದುತ್ವ ಪ್ರತಿಪಾದನೆಯ ಭರದಲ್ಲಿ ಭಾರತದಲ್ಲಿ ಅಶಾಂತಿ ಉಂಟು ಮಾಡಿ ಸಾಲ್ಗೊಲೆಗೆ ಪ್ರಚೋದನೆ ನೀಡುವ ಅಮಾನುಷ ಬರ್ಬರ ನೀತಿಯನ್ನು ಗೋಖಲೆಯಂತಹ ತಲೆಕೆಟ್ಟ ಹಿಂದು ಮತಾಂಧ ಮಾಡಬಯಸಿದ್ದಾರೇನೋ ಎಂಬ ಆತಂಕ ನನ್ನ ಮನಸ್ಸನ್ನು ಆವರಿಸಿದೆ. ಅಂಥ ಮನಸ್ಸುಗಳಿಗೆ ದೇವರು ಶ್ರೀರಾಮ ಸದ್ಬುದ್ಧಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ.

ಮೋದಿ, ಷಾಗಳ ಸರ್ಕಾರ ಹಿಂದುತ್ವ ಪ್ರತಿಪಾದಕರ ಮೇಟಿಯಾಗಿದೆ. ಆದರೆ ಅವರ ಕಣ್ಮುಂದೆಯೇ ಯುವಕರನ್ನು ಹಿಂಸಾವೃತ್ತಿಗೆ ಪ್ರಚೋದಿಸುವ ಭಾಷಣಗಳು ನಡೆಯುತ್ತಿದ್ದರೂ ಅದನ್ನು ತಡೆಗಟ್ಟುವ ನೀತಿಯನ್ನು ಪಾಲಿಸದಿದ್ದರೆ ಅವರು ಭಾರತೀಯರ ವಿಶ್ವಾಸ ಕಳೆದುಕೊಳ್ಳುತ್ತಾರೆ. ಸರ್ಕಾರ ಕೆಲ ಮತೀಯ ವಿಷ ಹರಡುವ ದುಷ್ಟ ಶಕ್ತಿಗಳನ್ನು ತಮ್ಮ ಸಂಪುಟದ ಮಂತ್ರಿಗಳನ್ನಾಗಿ, ಎಂಪಿಗಳನ್ನಾಗಿ, ರಾಜ್ಯಗಳ ಮೇಲ್ಮನೆ ಸದಸ್ಯರಾಗಿ ನೇಮಕ ಮಾಡುತ್ತಿದ್ದಾರೆ. ಈ ಮತಾಂಧರು ಸಮಾಜ ಒಡೆಯುವ ಕೆಲಸವನ್ನು ಅವ್ಯಾಹತವಾಗಿ ಮಾಡುತ್ತಿದ್ದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲದಿರುವುದು ತಲ್ಲಣಗೊಳಿಸುವ ವಿಚಾರ.

-ಎಚ್.ಎಸ್. ದೊರೆಸ್ವಾಮಿ


ಇದನ್ನೂ ಓದಿ: ವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...