Homeರಾಜಕೀಯಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ..... -ಎಚ್.ಎಸ್. ದೊರೆಸ್ವಾಮಿ

ಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ….. -ಎಚ್.ಎಸ್. ದೊರೆಸ್ವಾಮಿ

- Advertisement -
ಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ
-ಎಚ್.ಎಸ್. ದೊರೆಸ್ವಾಮಿ
ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮಹಾತ್ಮಾ ಗಾಂಧಿಯವರ ಕೊಡುಗೆ ಅಪಾರ. ಅವರು ಕಾಂಗ್ರೆಸ್ ಸೇರುವುದಕ್ಕೆ ಮೊದಲು ಕಾಂಗ್ರೆಸ್ ಒಂದು ‘ಕ್ಲಾಸ್ ಮೂವ್‍ಮೆಂಟ್’ ಆಗಿತ್ತು. ಆದರೆ ಅವರೆಲ್ಲ ಜನನಾಯಕರು, ವಿಚಾರವಂತರು, ಅಧಿಕಾರ ದಾಹ ಇಲ್ಲದವರು. ಕೊಲೆ-ಸುಲಿಗೆಯನ್ನು ಅರಿಯದ ಮಹನೀಯರಾಗಿದ್ದರು. ಇಂಗ್ಲಿಷರು ಕೂಡ ಅವರ ಬಗ್ಗೆ ಅಪಾರ ಗೌರವ ಇರಿಸಿಕೊಂಡಿದ್ದರು. ಮನವಿಪತ್ರ (ಮೆಮೋರಾಂಡಮ್) ನೀಡುವುದರ ಮೂಲಕವೇ ಭಾರತೀಯರಿಗೆ ಅನೇಕ ಅಧಿಕಾರ ಕೊಡಿಸಿದರು. ಆಗಿನ ಸ್ವಾತಂತ್ರ್ಯ ಸಂಗ್ರಾಮ ಸೀಮಿತವಾಗಿತ್ತು.
ಮಹಾತ್ಮಾ ಗಾಂಧಿಯವರು ಕಾಂಗ್ರೆಸಿನ ನಾಯಕತ್ವ ವಹಿಸಿಕೊಳ್ಳುವ ಮೊದಲು ಅವರ ಗುರು ಸ್ಥಾನದಲ್ಲಿದ್ದ ಗೋಪಾಲಕೃಷ್ಣ ಗೋಖಲೆಯವರನ್ನು ಭೇಟಿ ಮಾಡಿದರು. ಗೋಖಲೆಯವರು ಹೇಳಿದರು: “ಮುಂದೆ ನೀನು ಭಾರತ ರಾಷ್ಟ್ರೀಯ ಕಾಂಗ್ರೆಸಿನ ಚುಕ್ಕಾಣಿ ಹಿಡಿಯುವವನಿದ್ದೀಯೆ. ಅದಕ್ಕೆ ಮೊದಲು ನೀನು 3ನೇ ದರ್ಜೆ ರೈಲ್ವೆ ಡಬ್ಬಿಯಲ್ಲಿ ಕೂತು ಭಾರತವನ್ನು ಸುತ್ತಿ ಬಾ. ಭಾರತೀಯರು ಯಾವ ದುರವಸ್ಥೆಯಲ್ಲಿದ್ದಾರೆ, ಅದನ್ನು ಕಣ್ಣಾರೆ ಕಂಡು ಬಾ. ಆನಂತರ ಹೇಗೆ ಕಾಂಗ್ರೆಸನ್ನು ರೂಪಿಸಬೇಕು ಎಂದು ವಿಚಾರ ಮಾಡು.”
ಗಾಂಧೀಜಿ ಭಾರತ ಯಾತ್ರೆ ಆರಂಭ ಮಾಡಿದರು. ಭಾರತೀಯರ ಬಡತನವನ್ನು, ಅವರ ಮೇಲಾಗುತ್ತಿರುವ ಶೋಷಣೆ, ದಬ್ಬಾಳಿಕೆಯನ್ನು ಕಣ್ಣಾರೆ ಕಂಡು ಮಮ್ಮಲ ಮರುಗಿದರು. ನಾನು ಈ ದುರ್ದೈವಿ ಬಡಜನರ ಪ್ರತಿನಿಧಿಯಾಗಬೇಕಾದರೆ ನಾನೂ ಅವರಂತೆಯೇ ಜೀವನ ತೂಗಿಸಬೇಕಲ್ಲವೆ? ಸರಳತೆಯನ್ನು ಅಭ್ಯಾಸ ಮಾಡಬೇಕು. ಸ್ವಯಂ-ಪ್ರೇರಣೆಯಿಂದ ಬಡತನ ಅಪ್ಪಿಕೊಳ್ಳಬೇಕು ಎಂದು ದೃಢಸಂಕಲ್ಪ ಮಾಡಿದರು. ನುಡಿದಂತೆ ನಡೆದರು.
ಸ್ವಾತಂತ್ರ್ಯ ಸಂಗ್ರಾಮದ ಸ್ವರೂಪವನ್ನು ಕಾಲಕ್ರಮೇಣ ಬದಲಾಯಿಸಿದರು. ‘ಕ್ಲಾಸ್‍ವಾರ್  (ಛಿಟಚಿss ತಿಚಿಡಿ)’ ಆಗಿದ್ದ ಹೋರಾಟವನ್ನು ‘ಮಾಸ್‍ವಾರ್ (mಚಿss ತಿಚಿಡಿ)’ ಹೋರಾಟವನ್ನಾಗಿ ಮಾರ್ಪಡಿಸಿ ಜನಸಾಮಾನ್ಯರೂ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿಕೊಳ್ಳುವಂತೆ ಮಾಡಿದರು. ಬಡತನ ನಿರ್ಮೂಲನೆ ತನ್ನ ಆದ್ಯತೆ ಎಂದರು. 
ಗುಜರಾತಿನ ಜನ ಸ್ವಾತಂತ್ರ್ಯಕ್ಕಾಗಿ ಬಹಳ ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಮಹಾತ್ಮಾ ಗಾಂಧಿ, ವಲ್ಲಭಭಾಯಿ ಪಟೇಲ್, ವಿಠ್ಠಲಭಾಯಿ ಪಟೇಲ್, ಮೊರಾರ್ಜಿ ದೇಸಾಯಿ, ಮಹದೇವ ದೇಸಾಯಿ ಮುಂತಾದ ಮಹಾ ಪುರುಷರಿಗೆ ಜನ್ಮವಿತ್ತ ನಾಡು ಗುಜರಾತು. ಗಾಂಧೀಜಿ ಭಾರತವನ್ನು ಗುಲಾಮಗಿರಿಯಿಂದ ಪಾರು ಮಾಡಲು ತಮ್ಮ ಪ್ರಾಣವನ್ನೇ ಪಣವಾಗಿಟ್ಟರು. ಸರ್ದಾರ್ ಪಟೇಲರು 565 ರಾಜರುಗಳನ್ನು ಸಿಂಹಾಸನದಿಂದ ಕೆಳಗಿಳಿಸಿ ಅಖಂಡ ಭಾರತವನ್ನು ರೂಪಿಸಿದರು. ಸತ್ಯ, ಅಹಿಂಸೆ ಆಚರಣೆಯಿಂದ ಸ್ವರಾಜ್ಯ ಸ್ಥಾಪನೆ ಮಾಡಿದರು. ಈ ಇತಿಹಾಸ ಮೋದಿಜಿಗೆ ತಿಳಿದಿರಲಿಕ್ಕಿಲ್ಲ.
ಸ್ವಾತಂತ್ರ್ಯ ಪ್ರಾಪ್ತವಾದ ಕೂಡಲೇ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಬೇಕೆಂದರು ಗಾಂಧೀಜಿ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಕಾಂಗ್ರೆಸ್ ಸಂಸ್ಥೆ ಅಧಿಕಾರಕ್ಕಾಗಿ ಹಾತೊರೆಯದೆ ಒಂದು ಆದರ್ಶ ಸಂಸ್ಥೆಯಾಗಿ ಚಿರಸ್ಥಾಯಿಯಾಗಿ ಉಳಿಯಲಿ ಎಂಬುದು ಗಾಂಧೀಜಿಯವರ ಆಶಯವಾಗಿತ್ತು.
ಅಜ್ಞಾನಿ ಮೋದಿ ಅಂದುಕೊಂಡಿದ್ದಾರೆ: ‘ಭಾರತವನ್ನು ಮೋದಿಜಿಗೆ ಬಿಟ್ಟುಕೊಡಲೆಂದೇ ಗಾಂಧೀಜಿ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಹೇಳಿದ್ದಾರೆ’- “ಕಾಂಗ್ರೆಸ್ಸನ್ನು ಸರ್ವನಾಶ ಮಾಡುವುದೇ ನನ್ನ ಗುರಿ!” ಆದ್ದರಿಂದ ಅದನ್ನು ನಾಮಾವಶೇಷ ಮಾಡುವುದೇ ಇರುವ ಏಕೈಕ ಮಾರ್ಗ ಎನ್ನುತ್ತಾರೆ ಮೋದಿಜಿ. ಸರ್ವನಾಶ ಮಾಡಬೇಕೆಂದು ಹೊರಟ ರಾಕ್ಷಸರು ತಾವೇ ಸರ್ವನಾಶವಾದರು ಎಂದು ಪುರಾಣಗಳು ಹೇಳುತ್ತವೆ.
ಪ್ರಧಾನಿಯಾಗುವ ಆತುರದಲ್ಲಿ ಮೋದಿಜಿಗೆ ಇತಿಹಾಸ ಓದಲು ಪುರುಸೊತ್ತಿಲ್ಲವಾದರೂ, ಅವರಲ್ಲಿ ಮೌಢ್ಯ ಮತ್ತು ಅಧಿಕಾರ ಪಿಪಾಸೆ ಯಥೇಚ್ಛವಾಗಿದೆ!
ಗಾಂಧೀಜಿ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಏಕೆ ಹೇಳಿದರು? ಸ್ವಾತಂತ್ರ್ಯ ಪಡೆಯಲು ಬಲಿದಾನ ಮಾಡಿದ ಸಂಸ್ಥೆ, ದೇಶದಿಂದ ಇಂಗ್ಲಿಷರನ್ನು ಓಡಿಸಿ ಗುಲಾಮಗಿರಿಯಿಂದ ಭಾರತವನ್ನು ಪಾರು ಮಾಡಿದ ಕಾಂಗ್ರೆಸ್ ಸಂಸ್ಥೆಯ ಮುಂಚೂಣಿಯಲ್ಲಿರುವವರಿಗೆ ಸತತವಾಗಿ ಅಧಿಕಾರದಲ್ಲಿರಬೇಕು, ಅಧಿಕಾರ ಅನುಭವಿಸಬೇಕು ಎಂಬ ಹಂಬಲ ಸಹಜವಾಗಿಯೇ ಇರುತ್ತದೆ. ಕಾಂಗ್ರೆಸ್ ಅಧಿಕಾರ ದಾಹ ಬಿಟ್ಟು ರಾಜಕೀಯದಿಂದ ನಿವೃತ್ತಿ ಆಗಿ ಲೋಕಸೇವಾ ಸಂಘವಾಗಿ ಪರಿವರ್ತನೆಯಾಗಬೇಕು. ದುರಾಡಳಿತ ನಡೆಸುವ ಸರ್ಕಾರ ಮತ್ತು ಪಕ್ಷದ ಮೇಲೆ ಸಂಘರ್ಷ ನಡೆಸಬೇಕು.
ಭಾರತಕ್ಕೆ ಸ್ವಾತಂತ್ರ್ಯ ಪ್ರಾಪ್ತವಾದ ಕೂಡಲೇ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಗಾಂಧೀಜಿ ಹೇಳಿದ್ದು ಮೇಲಿನ ಕಾರಣಗಳಿಗಾಗಿ. ಕಾಂಗ್ರೆಸ್ ಧುರೀಣರು ಗಾಂಧೀಜಿಯವರ ಈ ಮಾತನ್ನು ಕೇಳಲಿಲ್ಲ. ಗಾಂಧೀಜಿ ಏಕೆ ಈ ಮಾತನ್ನು ಹೇಳಿದರು ಎಂಬುದು ಗೊತ್ತಿಲ್ಲ ಎಂದು ಮೋದಿಜೀ ಹೇಳುತ್ತಾರೆ.
ಇತಿಹಾಸದ ಅರಿವಿಲ್ಲದ ಮೋದಿಜಿಗೆ ಗಾಂಧೀಜಿಯವರ ಹಿರಿತನ, ಯೋಗ್ಯತೆ ಅರ್ಥವಾಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...