Homeರಾಜಕೀಯಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ..... -ಎಚ್.ಎಸ್. ದೊರೆಸ್ವಾಮಿ

ಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ….. -ಎಚ್.ಎಸ್. ದೊರೆಸ್ವಾಮಿ

- Advertisement -
ಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ
-ಎಚ್.ಎಸ್. ದೊರೆಸ್ವಾಮಿ
ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮಹಾತ್ಮಾ ಗಾಂಧಿಯವರ ಕೊಡುಗೆ ಅಪಾರ. ಅವರು ಕಾಂಗ್ರೆಸ್ ಸೇರುವುದಕ್ಕೆ ಮೊದಲು ಕಾಂಗ್ರೆಸ್ ಒಂದು ‘ಕ್ಲಾಸ್ ಮೂವ್‍ಮೆಂಟ್’ ಆಗಿತ್ತು. ಆದರೆ ಅವರೆಲ್ಲ ಜನನಾಯಕರು, ವಿಚಾರವಂತರು, ಅಧಿಕಾರ ದಾಹ ಇಲ್ಲದವರು. ಕೊಲೆ-ಸುಲಿಗೆಯನ್ನು ಅರಿಯದ ಮಹನೀಯರಾಗಿದ್ದರು. ಇಂಗ್ಲಿಷರು ಕೂಡ ಅವರ ಬಗ್ಗೆ ಅಪಾರ ಗೌರವ ಇರಿಸಿಕೊಂಡಿದ್ದರು. ಮನವಿಪತ್ರ (ಮೆಮೋರಾಂಡಮ್) ನೀಡುವುದರ ಮೂಲಕವೇ ಭಾರತೀಯರಿಗೆ ಅನೇಕ ಅಧಿಕಾರ ಕೊಡಿಸಿದರು. ಆಗಿನ ಸ್ವಾತಂತ್ರ್ಯ ಸಂಗ್ರಾಮ ಸೀಮಿತವಾಗಿತ್ತು.
ಮಹಾತ್ಮಾ ಗಾಂಧಿಯವರು ಕಾಂಗ್ರೆಸಿನ ನಾಯಕತ್ವ ವಹಿಸಿಕೊಳ್ಳುವ ಮೊದಲು ಅವರ ಗುರು ಸ್ಥಾನದಲ್ಲಿದ್ದ ಗೋಪಾಲಕೃಷ್ಣ ಗೋಖಲೆಯವರನ್ನು ಭೇಟಿ ಮಾಡಿದರು. ಗೋಖಲೆಯವರು ಹೇಳಿದರು: “ಮುಂದೆ ನೀನು ಭಾರತ ರಾಷ್ಟ್ರೀಯ ಕಾಂಗ್ರೆಸಿನ ಚುಕ್ಕಾಣಿ ಹಿಡಿಯುವವನಿದ್ದೀಯೆ. ಅದಕ್ಕೆ ಮೊದಲು ನೀನು 3ನೇ ದರ್ಜೆ ರೈಲ್ವೆ ಡಬ್ಬಿಯಲ್ಲಿ ಕೂತು ಭಾರತವನ್ನು ಸುತ್ತಿ ಬಾ. ಭಾರತೀಯರು ಯಾವ ದುರವಸ್ಥೆಯಲ್ಲಿದ್ದಾರೆ, ಅದನ್ನು ಕಣ್ಣಾರೆ ಕಂಡು ಬಾ. ಆನಂತರ ಹೇಗೆ ಕಾಂಗ್ರೆಸನ್ನು ರೂಪಿಸಬೇಕು ಎಂದು ವಿಚಾರ ಮಾಡು.”
ಗಾಂಧೀಜಿ ಭಾರತ ಯಾತ್ರೆ ಆರಂಭ ಮಾಡಿದರು. ಭಾರತೀಯರ ಬಡತನವನ್ನು, ಅವರ ಮೇಲಾಗುತ್ತಿರುವ ಶೋಷಣೆ, ದಬ್ಬಾಳಿಕೆಯನ್ನು ಕಣ್ಣಾರೆ ಕಂಡು ಮಮ್ಮಲ ಮರುಗಿದರು. ನಾನು ಈ ದುರ್ದೈವಿ ಬಡಜನರ ಪ್ರತಿನಿಧಿಯಾಗಬೇಕಾದರೆ ನಾನೂ ಅವರಂತೆಯೇ ಜೀವನ ತೂಗಿಸಬೇಕಲ್ಲವೆ? ಸರಳತೆಯನ್ನು ಅಭ್ಯಾಸ ಮಾಡಬೇಕು. ಸ್ವಯಂ-ಪ್ರೇರಣೆಯಿಂದ ಬಡತನ ಅಪ್ಪಿಕೊಳ್ಳಬೇಕು ಎಂದು ದೃಢಸಂಕಲ್ಪ ಮಾಡಿದರು. ನುಡಿದಂತೆ ನಡೆದರು.
ಸ್ವಾತಂತ್ರ್ಯ ಸಂಗ್ರಾಮದ ಸ್ವರೂಪವನ್ನು ಕಾಲಕ್ರಮೇಣ ಬದಲಾಯಿಸಿದರು. ‘ಕ್ಲಾಸ್‍ವಾರ್  (ಛಿಟಚಿss ತಿಚಿಡಿ)’ ಆಗಿದ್ದ ಹೋರಾಟವನ್ನು ‘ಮಾಸ್‍ವಾರ್ (mಚಿss ತಿಚಿಡಿ)’ ಹೋರಾಟವನ್ನಾಗಿ ಮಾರ್ಪಡಿಸಿ ಜನಸಾಮಾನ್ಯರೂ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿಕೊಳ್ಳುವಂತೆ ಮಾಡಿದರು. ಬಡತನ ನಿರ್ಮೂಲನೆ ತನ್ನ ಆದ್ಯತೆ ಎಂದರು. 
ಗುಜರಾತಿನ ಜನ ಸ್ವಾತಂತ್ರ್ಯಕ್ಕಾಗಿ ಬಹಳ ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಮಹಾತ್ಮಾ ಗಾಂಧಿ, ವಲ್ಲಭಭಾಯಿ ಪಟೇಲ್, ವಿಠ್ಠಲಭಾಯಿ ಪಟೇಲ್, ಮೊರಾರ್ಜಿ ದೇಸಾಯಿ, ಮಹದೇವ ದೇಸಾಯಿ ಮುಂತಾದ ಮಹಾ ಪುರುಷರಿಗೆ ಜನ್ಮವಿತ್ತ ನಾಡು ಗುಜರಾತು. ಗಾಂಧೀಜಿ ಭಾರತವನ್ನು ಗುಲಾಮಗಿರಿಯಿಂದ ಪಾರು ಮಾಡಲು ತಮ್ಮ ಪ್ರಾಣವನ್ನೇ ಪಣವಾಗಿಟ್ಟರು. ಸರ್ದಾರ್ ಪಟೇಲರು 565 ರಾಜರುಗಳನ್ನು ಸಿಂಹಾಸನದಿಂದ ಕೆಳಗಿಳಿಸಿ ಅಖಂಡ ಭಾರತವನ್ನು ರೂಪಿಸಿದರು. ಸತ್ಯ, ಅಹಿಂಸೆ ಆಚರಣೆಯಿಂದ ಸ್ವರಾಜ್ಯ ಸ್ಥಾಪನೆ ಮಾಡಿದರು. ಈ ಇತಿಹಾಸ ಮೋದಿಜಿಗೆ ತಿಳಿದಿರಲಿಕ್ಕಿಲ್ಲ.
ಸ್ವಾತಂತ್ರ್ಯ ಪ್ರಾಪ್ತವಾದ ಕೂಡಲೇ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಬೇಕೆಂದರು ಗಾಂಧೀಜಿ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಕಾಂಗ್ರೆಸ್ ಸಂಸ್ಥೆ ಅಧಿಕಾರಕ್ಕಾಗಿ ಹಾತೊರೆಯದೆ ಒಂದು ಆದರ್ಶ ಸಂಸ್ಥೆಯಾಗಿ ಚಿರಸ್ಥಾಯಿಯಾಗಿ ಉಳಿಯಲಿ ಎಂಬುದು ಗಾಂಧೀಜಿಯವರ ಆಶಯವಾಗಿತ್ತು.
ಅಜ್ಞಾನಿ ಮೋದಿ ಅಂದುಕೊಂಡಿದ್ದಾರೆ: ‘ಭಾರತವನ್ನು ಮೋದಿಜಿಗೆ ಬಿಟ್ಟುಕೊಡಲೆಂದೇ ಗಾಂಧೀಜಿ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಹೇಳಿದ್ದಾರೆ’- “ಕಾಂಗ್ರೆಸ್ಸನ್ನು ಸರ್ವನಾಶ ಮಾಡುವುದೇ ನನ್ನ ಗುರಿ!” ಆದ್ದರಿಂದ ಅದನ್ನು ನಾಮಾವಶೇಷ ಮಾಡುವುದೇ ಇರುವ ಏಕೈಕ ಮಾರ್ಗ ಎನ್ನುತ್ತಾರೆ ಮೋದಿಜಿ. ಸರ್ವನಾಶ ಮಾಡಬೇಕೆಂದು ಹೊರಟ ರಾಕ್ಷಸರು ತಾವೇ ಸರ್ವನಾಶವಾದರು ಎಂದು ಪುರಾಣಗಳು ಹೇಳುತ್ತವೆ.
ಪ್ರಧಾನಿಯಾಗುವ ಆತುರದಲ್ಲಿ ಮೋದಿಜಿಗೆ ಇತಿಹಾಸ ಓದಲು ಪುರುಸೊತ್ತಿಲ್ಲವಾದರೂ, ಅವರಲ್ಲಿ ಮೌಢ್ಯ ಮತ್ತು ಅಧಿಕಾರ ಪಿಪಾಸೆ ಯಥೇಚ್ಛವಾಗಿದೆ!
ಗಾಂಧೀಜಿ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಏಕೆ ಹೇಳಿದರು? ಸ್ವಾತಂತ್ರ್ಯ ಪಡೆಯಲು ಬಲಿದಾನ ಮಾಡಿದ ಸಂಸ್ಥೆ, ದೇಶದಿಂದ ಇಂಗ್ಲಿಷರನ್ನು ಓಡಿಸಿ ಗುಲಾಮಗಿರಿಯಿಂದ ಭಾರತವನ್ನು ಪಾರು ಮಾಡಿದ ಕಾಂಗ್ರೆಸ್ ಸಂಸ್ಥೆಯ ಮುಂಚೂಣಿಯಲ್ಲಿರುವವರಿಗೆ ಸತತವಾಗಿ ಅಧಿಕಾರದಲ್ಲಿರಬೇಕು, ಅಧಿಕಾರ ಅನುಭವಿಸಬೇಕು ಎಂಬ ಹಂಬಲ ಸಹಜವಾಗಿಯೇ ಇರುತ್ತದೆ. ಕಾಂಗ್ರೆಸ್ ಅಧಿಕಾರ ದಾಹ ಬಿಟ್ಟು ರಾಜಕೀಯದಿಂದ ನಿವೃತ್ತಿ ಆಗಿ ಲೋಕಸೇವಾ ಸಂಘವಾಗಿ ಪರಿವರ್ತನೆಯಾಗಬೇಕು. ದುರಾಡಳಿತ ನಡೆಸುವ ಸರ್ಕಾರ ಮತ್ತು ಪಕ್ಷದ ಮೇಲೆ ಸಂಘರ್ಷ ನಡೆಸಬೇಕು.
ಭಾರತಕ್ಕೆ ಸ್ವಾತಂತ್ರ್ಯ ಪ್ರಾಪ್ತವಾದ ಕೂಡಲೇ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಗಾಂಧೀಜಿ ಹೇಳಿದ್ದು ಮೇಲಿನ ಕಾರಣಗಳಿಗಾಗಿ. ಕಾಂಗ್ರೆಸ್ ಧುರೀಣರು ಗಾಂಧೀಜಿಯವರ ಈ ಮಾತನ್ನು ಕೇಳಲಿಲ್ಲ. ಗಾಂಧೀಜಿ ಏಕೆ ಈ ಮಾತನ್ನು ಹೇಳಿದರು ಎಂಬುದು ಗೊತ್ತಿಲ್ಲ ಎಂದು ಮೋದಿಜೀ ಹೇಳುತ್ತಾರೆ.
ಇತಿಹಾಸದ ಅರಿವಿಲ್ಲದ ಮೋದಿಜಿಗೆ ಗಾಂಧೀಜಿಯವರ ಹಿರಿತನ, ಯೋಗ್ಯತೆ ಅರ್ಥವಾಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...