Homeರಾಜಕೀಯಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ..... -ಎಚ್.ಎಸ್. ದೊರೆಸ್ವಾಮಿ

ಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ….. -ಎಚ್.ಎಸ್. ದೊರೆಸ್ವಾಮಿ

- Advertisement -
ಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ
-ಎಚ್.ಎಸ್. ದೊರೆಸ್ವಾಮಿ
ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮಹಾತ್ಮಾ ಗಾಂಧಿಯವರ ಕೊಡುಗೆ ಅಪಾರ. ಅವರು ಕಾಂಗ್ರೆಸ್ ಸೇರುವುದಕ್ಕೆ ಮೊದಲು ಕಾಂಗ್ರೆಸ್ ಒಂದು ‘ಕ್ಲಾಸ್ ಮೂವ್‍ಮೆಂಟ್’ ಆಗಿತ್ತು. ಆದರೆ ಅವರೆಲ್ಲ ಜನನಾಯಕರು, ವಿಚಾರವಂತರು, ಅಧಿಕಾರ ದಾಹ ಇಲ್ಲದವರು. ಕೊಲೆ-ಸುಲಿಗೆಯನ್ನು ಅರಿಯದ ಮಹನೀಯರಾಗಿದ್ದರು. ಇಂಗ್ಲಿಷರು ಕೂಡ ಅವರ ಬಗ್ಗೆ ಅಪಾರ ಗೌರವ ಇರಿಸಿಕೊಂಡಿದ್ದರು. ಮನವಿಪತ್ರ (ಮೆಮೋರಾಂಡಮ್) ನೀಡುವುದರ ಮೂಲಕವೇ ಭಾರತೀಯರಿಗೆ ಅನೇಕ ಅಧಿಕಾರ ಕೊಡಿಸಿದರು. ಆಗಿನ ಸ್ವಾತಂತ್ರ್ಯ ಸಂಗ್ರಾಮ ಸೀಮಿತವಾಗಿತ್ತು.
ಮಹಾತ್ಮಾ ಗಾಂಧಿಯವರು ಕಾಂಗ್ರೆಸಿನ ನಾಯಕತ್ವ ವಹಿಸಿಕೊಳ್ಳುವ ಮೊದಲು ಅವರ ಗುರು ಸ್ಥಾನದಲ್ಲಿದ್ದ ಗೋಪಾಲಕೃಷ್ಣ ಗೋಖಲೆಯವರನ್ನು ಭೇಟಿ ಮಾಡಿದರು. ಗೋಖಲೆಯವರು ಹೇಳಿದರು: “ಮುಂದೆ ನೀನು ಭಾರತ ರಾಷ್ಟ್ರೀಯ ಕಾಂಗ್ರೆಸಿನ ಚುಕ್ಕಾಣಿ ಹಿಡಿಯುವವನಿದ್ದೀಯೆ. ಅದಕ್ಕೆ ಮೊದಲು ನೀನು 3ನೇ ದರ್ಜೆ ರೈಲ್ವೆ ಡಬ್ಬಿಯಲ್ಲಿ ಕೂತು ಭಾರತವನ್ನು ಸುತ್ತಿ ಬಾ. ಭಾರತೀಯರು ಯಾವ ದುರವಸ್ಥೆಯಲ್ಲಿದ್ದಾರೆ, ಅದನ್ನು ಕಣ್ಣಾರೆ ಕಂಡು ಬಾ. ಆನಂತರ ಹೇಗೆ ಕಾಂಗ್ರೆಸನ್ನು ರೂಪಿಸಬೇಕು ಎಂದು ವಿಚಾರ ಮಾಡು.”
ಗಾಂಧೀಜಿ ಭಾರತ ಯಾತ್ರೆ ಆರಂಭ ಮಾಡಿದರು. ಭಾರತೀಯರ ಬಡತನವನ್ನು, ಅವರ ಮೇಲಾಗುತ್ತಿರುವ ಶೋಷಣೆ, ದಬ್ಬಾಳಿಕೆಯನ್ನು ಕಣ್ಣಾರೆ ಕಂಡು ಮಮ್ಮಲ ಮರುಗಿದರು. ನಾನು ಈ ದುರ್ದೈವಿ ಬಡಜನರ ಪ್ರತಿನಿಧಿಯಾಗಬೇಕಾದರೆ ನಾನೂ ಅವರಂತೆಯೇ ಜೀವನ ತೂಗಿಸಬೇಕಲ್ಲವೆ? ಸರಳತೆಯನ್ನು ಅಭ್ಯಾಸ ಮಾಡಬೇಕು. ಸ್ವಯಂ-ಪ್ರೇರಣೆಯಿಂದ ಬಡತನ ಅಪ್ಪಿಕೊಳ್ಳಬೇಕು ಎಂದು ದೃಢಸಂಕಲ್ಪ ಮಾಡಿದರು. ನುಡಿದಂತೆ ನಡೆದರು.
ಸ್ವಾತಂತ್ರ್ಯ ಸಂಗ್ರಾಮದ ಸ್ವರೂಪವನ್ನು ಕಾಲಕ್ರಮೇಣ ಬದಲಾಯಿಸಿದರು. ‘ಕ್ಲಾಸ್‍ವಾರ್  (ಛಿಟಚಿss ತಿಚಿಡಿ)’ ಆಗಿದ್ದ ಹೋರಾಟವನ್ನು ‘ಮಾಸ್‍ವಾರ್ (mಚಿss ತಿಚಿಡಿ)’ ಹೋರಾಟವನ್ನಾಗಿ ಮಾರ್ಪಡಿಸಿ ಜನಸಾಮಾನ್ಯರೂ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿಕೊಳ್ಳುವಂತೆ ಮಾಡಿದರು. ಬಡತನ ನಿರ್ಮೂಲನೆ ತನ್ನ ಆದ್ಯತೆ ಎಂದರು. 
ಗುಜರಾತಿನ ಜನ ಸ್ವಾತಂತ್ರ್ಯಕ್ಕಾಗಿ ಬಹಳ ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಮಹಾತ್ಮಾ ಗಾಂಧಿ, ವಲ್ಲಭಭಾಯಿ ಪಟೇಲ್, ವಿಠ್ಠಲಭಾಯಿ ಪಟೇಲ್, ಮೊರಾರ್ಜಿ ದೇಸಾಯಿ, ಮಹದೇವ ದೇಸಾಯಿ ಮುಂತಾದ ಮಹಾ ಪುರುಷರಿಗೆ ಜನ್ಮವಿತ್ತ ನಾಡು ಗುಜರಾತು. ಗಾಂಧೀಜಿ ಭಾರತವನ್ನು ಗುಲಾಮಗಿರಿಯಿಂದ ಪಾರು ಮಾಡಲು ತಮ್ಮ ಪ್ರಾಣವನ್ನೇ ಪಣವಾಗಿಟ್ಟರು. ಸರ್ದಾರ್ ಪಟೇಲರು 565 ರಾಜರುಗಳನ್ನು ಸಿಂಹಾಸನದಿಂದ ಕೆಳಗಿಳಿಸಿ ಅಖಂಡ ಭಾರತವನ್ನು ರೂಪಿಸಿದರು. ಸತ್ಯ, ಅಹಿಂಸೆ ಆಚರಣೆಯಿಂದ ಸ್ವರಾಜ್ಯ ಸ್ಥಾಪನೆ ಮಾಡಿದರು. ಈ ಇತಿಹಾಸ ಮೋದಿಜಿಗೆ ತಿಳಿದಿರಲಿಕ್ಕಿಲ್ಲ.
ಸ್ವಾತಂತ್ರ್ಯ ಪ್ರಾಪ್ತವಾದ ಕೂಡಲೇ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಬೇಕೆಂದರು ಗಾಂಧೀಜಿ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಕಾಂಗ್ರೆಸ್ ಸಂಸ್ಥೆ ಅಧಿಕಾರಕ್ಕಾಗಿ ಹಾತೊರೆಯದೆ ಒಂದು ಆದರ್ಶ ಸಂಸ್ಥೆಯಾಗಿ ಚಿರಸ್ಥಾಯಿಯಾಗಿ ಉಳಿಯಲಿ ಎಂಬುದು ಗಾಂಧೀಜಿಯವರ ಆಶಯವಾಗಿತ್ತು.
ಅಜ್ಞಾನಿ ಮೋದಿ ಅಂದುಕೊಂಡಿದ್ದಾರೆ: ‘ಭಾರತವನ್ನು ಮೋದಿಜಿಗೆ ಬಿಟ್ಟುಕೊಡಲೆಂದೇ ಗಾಂಧೀಜಿ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಹೇಳಿದ್ದಾರೆ’- “ಕಾಂಗ್ರೆಸ್ಸನ್ನು ಸರ್ವನಾಶ ಮಾಡುವುದೇ ನನ್ನ ಗುರಿ!” ಆದ್ದರಿಂದ ಅದನ್ನು ನಾಮಾವಶೇಷ ಮಾಡುವುದೇ ಇರುವ ಏಕೈಕ ಮಾರ್ಗ ಎನ್ನುತ್ತಾರೆ ಮೋದಿಜಿ. ಸರ್ವನಾಶ ಮಾಡಬೇಕೆಂದು ಹೊರಟ ರಾಕ್ಷಸರು ತಾವೇ ಸರ್ವನಾಶವಾದರು ಎಂದು ಪುರಾಣಗಳು ಹೇಳುತ್ತವೆ.
ಪ್ರಧಾನಿಯಾಗುವ ಆತುರದಲ್ಲಿ ಮೋದಿಜಿಗೆ ಇತಿಹಾಸ ಓದಲು ಪುರುಸೊತ್ತಿಲ್ಲವಾದರೂ, ಅವರಲ್ಲಿ ಮೌಢ್ಯ ಮತ್ತು ಅಧಿಕಾರ ಪಿಪಾಸೆ ಯಥೇಚ್ಛವಾಗಿದೆ!
ಗಾಂಧೀಜಿ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಏಕೆ ಹೇಳಿದರು? ಸ್ವಾತಂತ್ರ್ಯ ಪಡೆಯಲು ಬಲಿದಾನ ಮಾಡಿದ ಸಂಸ್ಥೆ, ದೇಶದಿಂದ ಇಂಗ್ಲಿಷರನ್ನು ಓಡಿಸಿ ಗುಲಾಮಗಿರಿಯಿಂದ ಭಾರತವನ್ನು ಪಾರು ಮಾಡಿದ ಕಾಂಗ್ರೆಸ್ ಸಂಸ್ಥೆಯ ಮುಂಚೂಣಿಯಲ್ಲಿರುವವರಿಗೆ ಸತತವಾಗಿ ಅಧಿಕಾರದಲ್ಲಿರಬೇಕು, ಅಧಿಕಾರ ಅನುಭವಿಸಬೇಕು ಎಂಬ ಹಂಬಲ ಸಹಜವಾಗಿಯೇ ಇರುತ್ತದೆ. ಕಾಂಗ್ರೆಸ್ ಅಧಿಕಾರ ದಾಹ ಬಿಟ್ಟು ರಾಜಕೀಯದಿಂದ ನಿವೃತ್ತಿ ಆಗಿ ಲೋಕಸೇವಾ ಸಂಘವಾಗಿ ಪರಿವರ್ತನೆಯಾಗಬೇಕು. ದುರಾಡಳಿತ ನಡೆಸುವ ಸರ್ಕಾರ ಮತ್ತು ಪಕ್ಷದ ಮೇಲೆ ಸಂಘರ್ಷ ನಡೆಸಬೇಕು.
ಭಾರತಕ್ಕೆ ಸ್ವಾತಂತ್ರ್ಯ ಪ್ರಾಪ್ತವಾದ ಕೂಡಲೇ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಗಾಂಧೀಜಿ ಹೇಳಿದ್ದು ಮೇಲಿನ ಕಾರಣಗಳಿಗಾಗಿ. ಕಾಂಗ್ರೆಸ್ ಧುರೀಣರು ಗಾಂಧೀಜಿಯವರ ಈ ಮಾತನ್ನು ಕೇಳಲಿಲ್ಲ. ಗಾಂಧೀಜಿ ಏಕೆ ಈ ಮಾತನ್ನು ಹೇಳಿದರು ಎಂಬುದು ಗೊತ್ತಿಲ್ಲ ಎಂದು ಮೋದಿಜೀ ಹೇಳುತ್ತಾರೆ.
ಇತಿಹಾಸದ ಅರಿವಿಲ್ಲದ ಮೋದಿಜಿಗೆ ಗಾಂಧೀಜಿಯವರ ಹಿರಿತನ, ಯೋಗ್ಯತೆ ಅರ್ಥವಾಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...