Homeಮುಖಪುಟಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್‌ನ ಪ್ರಿಯಾಂಕ ಗಾಂಧಿ, ಬಿಎಸ್‌ಪಿಯ ಮಾಯಾವತಿ ಟೀಕಿಸಿದ್ದಾರೆ.

- Advertisement -
- Advertisement -

ದೆಹಲಿ ಮೂಲಕ 25 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊರ್ವಳು ಉತ್ತರ ಪ್ರದೇಶದ ಆಗ್ರಾದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆಕೆಯ ಕಾಲೇಜಿನಿಂದ ಕೆಲವೇ ಕಿ.ಮೀ ಗಳ ದೂರದಲ್ಲಿ ಶವ ಪತ್ತೆಯಾಗಿದ್ದು, ಆಕೆಯ ಕಾಲೇಜಿನ ವೈದ್ಯರೊಬ್ಬರು ಕಿರುಕುಳ ಕೊಟ್ಟಿರುವುದೇ ಸಾವಿಗೆ ಕಾರಣವೆಂದು ಆಕೆಯ ಕುಟುಂಬ ಆರೋಪಿಸಿದೆ.

ಬುಧವಾರ ಬೆಳಿಗ್ಗೆ ವಿದ್ಯಾರ್ಥಿನಿಯ ಶವ ಪತ್ತೆಯಾಗುವ ಮೊದಲು ಕೆಲವೇ ಗಂಟೆಗಳ ಹಿಂದೆ ಆಕೆಯ ಕುಟುಂಬ ಕಾಣೆಯಾಗಿದ್ದಾಳೆ ಎಂದು ದೂರು ನೀಡಿತ್ತು. ವೈದ್ಯರ ಕಿರುಕುಳದಿಂದಲೇ ಆಕೆಯ ಸಾವು ಸಂಭವಿಸಿದೆ ಎಂಬ ಕುಟುಂಬದ ಆರೋಪದ ಹಿನ್ನೆಲೆಯಲ್ಲಿ ವೈದ್ಯನೊಬ್ಬನ್ನನ್ನು ಪೊಲೀಸರು ಬಂಧಿಸಿದ್ದಾರೆ.

ಸ್ನಾತಕೋತ್ತರ ವೈದ್ಯ ಪದವಿ ಪಡೆಯಲು ದೆಹಲಿಯಿಂದ ಆಗ್ರಾಕ್ಕೆ ವಿದ್ಯಾರ್ಥಿನಿಯನ್ನು ಕಳಿಸಲಾಗಿತ್ತು. ಮಂಗಳವಾರ ಸಂಜೆಯಿಂದಲೇ ಕಾಣೆಯಾಗಿದ್ದಾಳೆ ಎಂದು ಆಕೆಯ ಕುಟುಂಬ ತಿಳಿಸಿದೆ.

ಬುಧವಾರ ಬೆಳಿಗ್ಗೆ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಆಕೆಯ ತಲೆ ಮತ್ತು ಕುತ್ತಿಗೆಗೆ ಪೆಟ್ಟುಗಳಾಗಿವೆ. ಆಕೆ ಸಾವಿಗೆ ಮುನ್ನ ಪ್ರತಿರೋಧಿಸಿರುವ ಲಕ್ಷಣಗಳಿವೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದೇವೆ. ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದೇವೆ. ಸುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆದು ತನಿಖೆ ನಡೆಸುತ್ತೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೆಲವು ವಾರಗಳಲ್ಲಿ ಕೊಲೆ, ಅತ್ಯಾಚಾರ ಘಟನೆಗಳು ವಿಪರೀತವಾಗಿವೆ. ಅದರಲ್ಲಿಯೂ ಮಹಿಳೆಯರು, ಹೆಣ್ಣು ಮಕ್ಕಳ ಮೇಲಿನ ಹಿಂಸೆಗಳು ಮಿತಿ ಮೀರಿವೆ ಎಂದು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವನ್ನು ಪ್ರತಿಪಕ್ಷಗಳು ಟೀಕಿಸಿವೆ.

ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ, ಬಿಎಸ್‌ಪಿಯ ಮಾಯಾವತಿ ಟೀಕಿಸಿದ್ದಾರೆ.

ಬುಲಂದ್‌ಶಹರ್, ಹಾಪುರ್, ಲಕ್ಷ್ಮಿಪುರ್ ಖೇರಿ ಮತ್ತು ಗೋರಕ್ ಪುರ್ ಈ ಎಲ್ಲಾ ಕಡೆ ಕೊಲೆ ಅತ್ಯಾಚಾರಗಳು ನಡೆದಿವೆ. ಇದು ಸರ್ಕಾರದ ನಿರ್ಲಕ್ಷ್ಯತನ ಮತ್ತು ವಿಫಲತೆಯನ್ನು ತೋರಿಸುತ್ತದೆ ಎಂದು ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ.

ನಿನ್ನೆ ತಾನೇ ವಯಸ್ಕ ಹುಡುಗಿಯೊಬ್ಬಳು ಯುಪಿಯ ಬದೋಯಿಯಿಂದ ಕಾಣೆಯಾಗಿದ್ದು, ಶವವಾಗಿ ಪತ್ತೆಯಾಗಿದ್ದಳು. ಶವದ ದೇಹ ಸುಟ್ಟಗಾಯಗಳಿಂದ ಕೂಡಿತ್ತು. ಕಳೆದ ವಾರದ ಲಕ್ಷ್ಮಿಪುರ ಖೇರಿಯ 13 ವರ್ಷದ ಬಾಲಕಿಯೊಬ್ಬಳನ್ನು ಅಮಾನವೀಯವಾಗಿ ಅತ್ಯಾಚಾರವೆಸಗಿ ಕೊಲ್ಲಲಾಗಿತ್ತು. ಆಕೆಯ ನಾಲಿಗೆ ಕತ್ತರಿಸಿ, ಕಣ್ಣು ಕೀಳಲಾಗಿತ್ತು ಎಂದು ಆಕೆಯ ತಂದೆ ತಿಳಿಸಿದ್ದರು. ಈ ತಿಂಗಳ ಆರಂಭದಲ್ಲಿ ಯುಪಿಯ ಹಾಪುರ್‌ನಲ್ಲಿ 6 ವರ್ಷದ ಮಗುವನ್ನು ಅಪಹರಿಸಿ ಅತ್ಯಾಚಾರವೆಸಗಲಾಗಿತ್ತು. ಕಳೆದ ವಾರ ಆರೋಪಿಯನ್ನು ಬಂಧಿಸಲಾಗಿದೆ. ಆಗಸ್ಟ್ 10 ರಂದು ಬುಲಂದ್‌ಶಹರ್‌ನಲ್ಲಿ ಸಂಶೋಧನಾ ವಿದ್ಯಾರ್ಥಿನಿಯೊರ್ವಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಳು. ಇಬ್ಬರು ಕಿಡಿಗೇಡಿಗಳು ಆಕೆಗೆ ಕಿರುಕುಳ ನೀಡಿದ್ದರು ಎಂದು ಆಕೆಯ ಕುಟುಂಬ ಆರೋಪಿಸಿತ್ತು.

ಒಟ್ಟಿನಲ್ಲಿ ಪ್ರತಿನಿತ್ಯ ಮಹಿಳಾ ಕಿರುಕುಳ, ಕೊಲೆ ಅತ್ಯಾಚಾರಗಳು ಉತ್ತರ ಪ್ರದೇಶದಲ್ಲಿ ವರದಿಯಾಗುತ್ತಿದ್ದರೂ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿಲ್ಲ ಮತ್ತು ಮಹಿಳೆಯರಿಗೆ ಸುರಕ್ಷತೆ ಒದಗಿಸಲು ಮುಂದಾಗಿಲ್ಲ ಎಂಬುದು ಬಹಳಷ್ಟು ಜನರ ಅಭಿಪ್ರಾಯವಾಗಿದೆ.


ಇದನ್ನೂ ಓದಿ; ಉತ್ತರ ಪ್ರದೇಶದ 13 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ನಾಲಿಗೆ ಕತ್ತರಿಸಿ, ಕಣ್ಣು ಕಿತ್ತ ಪಾಪಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...