Homeಚಳವಳಿಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ.

- Advertisement -
- Advertisement -

“ಮೂರು ದಶಕಗಳಿಂದ ಯಾವ ಘನ ನ್ಯಾಯಾಲಯದ ಗೌರವವನ್ನು ಎತ್ತಿ ಹಿಡಿಯಲು ಪ್ರಯತ್ನಿಸಿದೆನೊ ಅದೇ ನ್ಯಾಯಾಲಯ ನಿಂದನೆ ಪ್ರಕರಣದಲ್ಲಿ ನನ್ನನ್ನು ತಪ್ಪಿತಸ್ಥನೆಂದು ಘೋಷಿಸಲಾಗಿದೆ. ನನ್ನನ್ನು ನ್ಯಾಯಾಲಯವು ದೋಷಿ ಎಂದು ತೀರ್ಮಾನಿಸಿದ ಬಗ್ಗೆ ನನಗೆ ನೋವಿದೆ, ನನ್ನನ್ನು ಸಂಪೂರ್ಣವಾಗಿ ತಪ್ಪು ಅರ್ಥಮಾಡಿಕೊಂಡಿರುವುದಕ್ಕೆ ನನಗೆ ನೋವಿದೆ” ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ತಿಳಿಸಿದ್ದಾರೆ.

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ಶಿಕ್ಷೆ ಘೋಷಿಸುವ ವಿಚಾರಣೆ ಮುಂದೂಡಲು ಸಲ್ಲಿಸಿದ್ದ ಪ್ರಶಾಂತ್ ಭೂಷಣ್‌ರವರ ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿದೆ. ಈ ಸಂದರ್ಭದಲ್ಲಿ ತನ್ನ ಹೇಳಿಕೆ ದಾಖಲಿಸಿದ ಪ್ರಶಾಂತ್ ಭೂಷಣ್ “ಕ್ಷಮೆ ಕೇಳುವುದಿಲ್ಲ, ಶಿಕ್ಷೆ ಸ್ವೀಕರಿಸುತ್ತೇನೆ” ಎಂದು ಘೊಷಿಸಿದ್ದಾರೆ.

“ನನ್ನ ಉದ್ದೇಶವನ್ನು ಅರಿಯದೇ, ಸ್ವಷ್ಟ ವಿಚಾರಣೆ ನಡೆಸದೆ ನ್ಯಾಯಾಲಯವು ಈ ತೀರ್ಮಾನಕ್ಕೆ ಬಂದು ತಲುಪಿದ ಬಗ್ಗೆ ನನಗೆ ಆಘಾತವಾಗಿದೆ. ನನ್ನ ಟ್ವೀಟ್‌ಗಳು ನಾಗರಿಕನಾಗಿ ನನ್ನ ಕರ್ತವ್ಯವನ್ನು ನಿಭಾಯಿಸುವ ಉತ್ತಮ ಪ್ರಯತ್ನದ ಭಾಗವಾಗಿವೆ. ಇತಿಹಾಸದ ಈ ಹಂತದಲ್ಲಿ ನಾನು ಮಾತನಾಡದಿದ್ದರೆ ನಾನು ನನ್ನ ಕರ್ತವ್ಯದಲ್ಲಿ ವಿಫಲವಾಗುತ್ತಿದ್ದೆ. ನ್ಯಾಯಾಲಯವು ವಿಧಿಸಬಹುದಾದ ಯಾವುದೇ ದಂಡವನ್ನು ನಾನು ಸಲ್ಲಿಸುತ್ತೇನೆ. ಕ್ಷಮೆಯಾಚಿಸುವುದಿಲ್ಲ” ಎಂದು ಭೂಷಣ್ ತಿಳಿಸಿದ್ದಾರೆ.

“ನಾನು ಯಾವುದೇ ಕ್ಷಮೆಯನ್ನು ಕೋರುವುದಿಲ್ಲ. ಯಾವ ಮನವಿ ಸಹ ಮಾಡುವುದಿಲ್ಲ. ನ್ಯಾಯಾಲಯವು ನೀಡುವ ಯಾವುದೇ ಶಿಕ್ಷೆಯನ್ನು ಹೆಮ್ಮೆಯಿಂದ ಸ್ವೀಕರಿಸುತ್ತೇನೆ” ಎಂದು ಮಹಾತ್ಮ ಗಾಂಧಿಯನ್ನು ಉಲ್ಲೇಖಿಸಿ ಭೂಷಣ್ ಹೇಳಿದ್ದಾರೆ.

“ಸಾಂವಿಧಾನಿಕ ಕ್ರಮವನ್ನು ಕಾಪಾಡಲು ಯಾವುದೇ ಪ್ರಜಾಪ್ರಭುತ್ವದಲ್ಲಿ ಮುಕ್ತ ಟೀಕೆ ಅಗತ್ಯ ಎಂದು ನಾನು ನಂಬುತ್ತೇನೆ. ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ” ಎಂದು ಅವರು ಹೇಳಿದ್ದಾರೆ.

ಇಂದು ಪ್ರಶಾಂತ್ ಭೂಷಣ್‌ ಪರ ಹಿರಿಯ ವಕೀಲ ರಾಜೀವ್ ಧವನ್‌ ವಾದ ಮಂಡನೆ ಮಾಡಿದ್ದು ಮರುಪರಿಶೀಲನಾ ಅರ್ಜಿ ಸಲ್ಲಿಕೆಗೆ ಸಮಯಾವಕಾಶವಿರುವ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡುವಂತೆ ಮನವಿ ಮಾಡಿದರು.

“ನೀವು ಮರುಪರಿಶೀಲನಾ ಅರ್ಜಿಯನ್ನು ಆಗಸ್ಟ್‌ 17ರಂದೇ ಸಲ್ಲಿಸಲಾಗುವುದು ಎಂದು ಹೇಳಿದ್ದಿರಿ. ಸಲ್ಲಿಸಿಲ್ಲವೇ, ಇಷ್ಟರಲ್ಲಾಗಲೇ ಸಲ್ಲಿಸಬೇಕಿತ್ತು” ಎಂಬ ನ್ಯಾಯಮೂರ್ತಿ ಗವಾಯಿಯವರ ಪ್ರಶ್ನೆಗೆ ಭೂಷಣ್ ಪರ ಮತ್ತೊಬ್ಬ ವಕೀಲ ದುಷ್ಯಂತ್ ದವೆ ಉತ್ತರಿಸಿ, “ಅಂದೇ ಮರುಪರಿಶೀಲನೆ ಅರ್ಜಿಯನ್ನು ಸಲ್ಲಿಸುತ್ತೇವೆ ಎಂದು ಹೇಳಿರಲಿಲ್ಲ. ಶಾಸನಾತ್ಮಕವಾಗಿ 30 ದಿನಗಳ ಅವಕಾಶವಿದೆ ಎಂದಷ್ಟೆ ಹೇಳಿದ್ದೆವು” ಎಂದಿದ್ದಾರೆ.

ಇದಕ್ಕೆ “ಪೀಠದಲ್ಲಿರುವ ಒಬ್ಬರು ನ್ಯಾಯಮೂರ್ತಿಗಳು ನಿವೃತ್ತಿಯಾದ ನಂತರ ಅರ್ಜಿ ಸಲ್ಲಿಸುತ್ತಿರೋ” ಎಂದು ಗವಾಯಿ ಕೇಳಿದ್ದಾರೆ. ಮರುಪರಿಶೀಲನಾ ಅರ್ಜಿಯನ್ನು 30 ದಿನದ ಒಳಗೆ ಸಲ್ಲಿಸಬಹುದಾಗಿದೆ. “ನ್ಯಾ.ಮಿಶ್ರಾ ಅವರು ನಿವೃತ್ತಿಯಾಗುವವರೆಗೆ ಅರ್ಜಿ ಸಲ್ಲಿಕೆಯಾಗುವುದಿಲ್ಲ” ಎನ್ನುವ ಅಭಿಪ್ರಾಯ ಹೊಂದುವುದು ಬೇಡ ಎಂದು ದವೆ ಉತ್ತರಿಸಿದ್ದಾರೆ.

ನ್ಯಾ.ಮಿಶ್ರಾರವರು “ವಿಚಾರಣೆಯನ್ನು ಮುಂದೂಡಲು ನಾವು ಸಮ್ಮತಿಸುವುದಿಲ್ಲ” ಎಂದಾಗ “ನಾವು ಮುಂದೂಡಿಕೆ ಅರ್ಜಿ ಸಲ್ಲಿಸಿದ್ದೆವು. ನೀವು ತಿರಸ್ಕರಿಸಬಹುದು. ನಾನು ನಿಮ್ಮ ನಿರ್ಧಾರಕ್ಕೆ ತಲೆಬಾಗುತ್ತೇನೆ. ಕಾನೂನನ್ನು ಮಾತ್ರವೇ ನಾನು ಹೇಳಬಹುದು” ಎಂದು ದವೆ ತಿಳಿಸಿದ್ದಾರೆ.

“ನ್ಯಾಯಾಂಗ ಪರಿಶೀಲನೆಯಲ್ಲಿ ಮೇಲ್ಮನವಿ ಸರಿಯಾಗಿದೆ ಮತ್ತು ಶಿಕ್ಷೆ ಘೋಷಿಸುವುದನ್ನು ಮುಂದೂಡಬಹುದು. ಶಿಕ್ಷೆ ಮುಂದೂಡಲ್ಪಟ್ಟರೆ ಸ್ವರ್ಗವೇನು ಬಿದ್ದೋಗುವುದಿಲ್ಲ” ಎಂದು ದವೆ ಹೇಳಿದ್ದಾರೆ.

ಕೊನೆಗೆ ನ್ಯಾಯಮೂರ್ತಿಗಳು “ವಿಚಾರಣೆ ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ. ಮರುಪರಿಶೀಲನೆ ಕೋರುವ ನಿಮ್ಮ ಹಕ್ಕನ್ನು ಮನ್ನಿಸೋ‍ಣ. ಶಿಕ್ಷೆ ಬೇಕಾದರೆ ಆ ನಂತರವೇ ಜಾರಿಯಾಗಲಿ” ಎಂದಿದ್ದಾರೆ. ಶಿಕ್ಷೆ ಘೋಷಿಸುವ ವಾದ-ವಿವಾದ ಮುಂದುವರೆಯುತ್ತಿದೆ.


ಇದನ್ನೂ ಓದಿ: ನ್ಯಾಯಾಧೀಶರು ಹಾಗೂ ವಕೀಲರು ಸೇರಿದಂತೆ 3 ಸಾವಿರಕ್ಕೂ ಹೆಚ್ಚು ಜನರಿಂದ ಪ್ರಶಾಂತ್‌ ಭೂಷಣ್ ಪರ ಸಹಿ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...