Homeಅಂತರಾಷ್ಟ್ರೀಯಫೇಸ್‌ಬುಕ್‌ ಇಂಡಿಯಾ ಸಿಇಓ ಅಂಖಿ ದಾಸ್ ವಿರುದ್ದ ಸಿಡಿದೆದ್ದ ಸಹೋದ್ಯೋಗಿಗಳು!

ಫೇಸ್‌ಬುಕ್‌ ಇಂಡಿಯಾ ಸಿಇಓ ಅಂಖಿ ದಾಸ್ ವಿರುದ್ದ ಸಿಡಿದೆದ್ದ ಸಹೋದ್ಯೋಗಿಗಳು!

“ಭಾರತದಲ್ಲಿ ಮತ್ತು ಇತರೆಡೆ ನೀತಿ ನಿರೂಪಣಾ ತಂಡವು ವೈವಿಧ್ಯಮಯ ಪ್ರಾತಿನಿಧ್ಯವನ್ನು (ಹಲವು ಜಾತಿ, ಧರ್ಮ, ಲಿಂಗ, ಪ್ರದೇಶಗಳ ಅಧಿಕಾರಿಗಳನ್ನು) ಒಳಗೊಂಡಿರಬೇಕು” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

- Advertisement -
- Advertisement -

ಫೇಸ್‌ಬುಕ್‌ನ ಭಾರತದ ಕಾರ್ಯನಿರ್ವಾಹಕಿ ಅಂಖಿ ದಾಸ್ ಮತ್ತು ಬಿಜೆಪಿ ಪ್ರೇಮದ ಕುರಿತು ಪ್ರಶ್ನೆಗಳೆದ್ದಿರುವ ಸಮಯದಲ್ಲಿ ಭಾರತದಲ್ಲಿ ಎದ್ದ ರಾಜಕೀಯ ವಿಷಯವನ್ನು ಫೇಸ್‌‌ಬುಕ್‌ ಹೇಗೆ ನಿಯಂತ್ರಿಸುತ್ತದೆ ಎಂಬ ಬಗ್ಗೆ ಅದರ ನೌಕರರು ಪ್ರಶ್ನೆ ಮಾಡಿದ್ದಾರೆ.

ಮುಸ್ಲಿಮರನ್ನು ದೇಶದ್ರೋಹಿಗಳು ಎಂದು ಕರೆದ ಬಿಜೆಪಿಯ ರಾಜಕಾರಣಿಯ ಪೋಸ್ಟ್‌‌ಗಳಿಗೆ ಕಂಪನಿಯ ದ್ವೇಷ-ಭಾಷಣ ನಿಯಮಗಳನ್ನು ಅನ್ವಯಿಸುವುದನ್ನು ದಾಸ್ ವಿರೋಧಿಸಿದ್ದಾರೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದ ನಂತರ ವಿಶ್ವದ ಅತಿದೊಡ್ಡ ಸಾಮಾಜಿಕ ನೆಟ್‌ವರ್ಕ್ ಆದ ಫೇಸ್‌ಬುಕ್‌ ಭಾರತದಲ್ಲಿ ತೀವ್ರ ಟೀಕೆ ಎದುರಿಸುತ್ತಿದೆ.

ಫೇಸ್‌ಬುಕ್‌ ಈ ರೀತಿ ಒಂದು ಪಕ್ಷದ ಪರವಿರುವುದು ಸರಿಯೇ ಎಂದು ಅದರ ಉದ್ಯೋಗಿಗಳು ಪ್ರಶ್ನಿಸುತ್ತಿದ್ದಾರೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: ಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ವಿರುದ್ಧ ಎಫ್‌ಐಆರ್!

11 ಫೇಸ್‌ಬುಕ್ ಉದ್ಯೋಗಿಗಳು ಫೇಸ್‌ಬುಕ್‌ನ ಆಂತರಿಕ ವೇದಿಕೆಯೊಂದರಲ್ಲಿ ನಾಯಕತ್ವಕ್ಕೆ ಪತ್ರ ಬರೆದಿದ್ದು, ‘ಫೇಸ್‌ಬುಕ್‌ ನಾಯಕತ್ವವು ಮುಸ್ಲಿಂ ವಿರೋಧಿ ಧರ್ಮಾಂಧತೆಯನ್ನು ಖಂಡಿಸಬೇಕು ಮತ್ತು ಹೆಚ್ಚಿನ ನೀತಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಒತ್ತಾಯಿಸಿದ್ದಾರೆ.

“ಭಾರತದಲ್ಲಿ ಮತ್ತು ಇತರೆಡೆ ನೀತಿ ನಿರೂಪಣಾ ತಂಡವು ವೈವಿಧ್ಯಮಯ ಪ್ರಾತಿನಿಧ್ಯವನ್ನು (ಹಲವು ಜಾತಿ, ಧರ್ಮ, ಲಿಂಗ, ಪ್ರದೇಶಗಳ ಅಧಿಕಾರಿಗಳನ್ನು) ಒಳಗೊಂಡಿರಬೇಕು” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

“ನಾವು ಇದರಲ್ಲಿ ಒಬ್ಬಂಟಿಯಾಗಿಲ್ಲ ಎಂದು ನಮಗೆ ತಿಳಿದಿದೆ. ಕಂಪನಿಯಾದ್ಯಂತದ ಉದ್ಯೋಗಿಗಳು ಇದೇ ರೀತಿಯ ಭಾವನೆಯನ್ನು ವ್ಯಕ್ತಪಡಿಸುತ್ತಿದ್ದಾರೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ. “ಫೇಸ್‌ಬುಕ್‌ನಲ್ಲಿರುವ ಮುಸ್ಲಿಂ ಸಮುದಾಯವು ನಮ್ಮ ಪ್ರಶ್ನೆಗಳನ್ನು ಫೇಸ್‌ಬುಕ್ ನಾಯಕತ್ವದಿಂದ ಕೇಳಲು ಬಯಸುತ್ತದೆ.” ಎಂದು ಪತ್ರ ಉಲ್ಲೇಖಿಸಿದೆ. ಈ ಬಗ್ಗೆ ಫೇಸ್‌ಬುಕ್ ಮತ್ತು ಅಂಖಿ ದಾಸ್ ತಕ್ಷಣ ಸ್ಪಂದಿಸಿಲ್ಲ ಎಂದು ದಿ ವೈರ್ ಪತ್ರಿಕೆ‌ ಹೇಳಿದೆ.

ಇದನ್ನೂ ಓದಿ: ಫೇಸ್‌ಬುಕ್ ಇಂಡಿಯಾ ಬಗ್ಗೆ ವಿಚಾರಣೆ ನಡೆಸಿ: ಮಾರ್ಕ್ ಜುಕರ್‌ಬರ್ಗ್‌ಗೆ ಕೆ.ಸಿ.ವೇಣುಗೋಪಾಲ್ ಪತ್ರ

ನಕಲಿ ಸುದ್ದಿ, ಪ್ರಭುತ್ವ ಬೆಂಬಲಿತ ತಪ್ಪು ಮಾಹಿತಿ ಅಭಿಯಾನಗಳು ಮತ್ತು ಹಿಂಸಾತ್ಮಕ ವಿಷಯಗಳನ್ನು ಹರಡುವ ವಿಷಯದಲ್ಲಿ ಫೇಸ್‌ಬುಕ್‌ ಇತ್ತೀಚಿನ ವರ್ಷಗಳಲ್ಲಿ ಮುಂಚೂಣಿಯಲ್ಲಿದೆ.

ಪ್ರಧಾನಿ ನರೇಂದ್ರೆ ಮೋದಿಯ ಪಕ್ಷವಾದ ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಗೆ ಹತ್ತಿರವಿರುವ ರಾಜಕಾರಣಿಗಳಿಗೆ ದ್ವೇಷ-ಭಾಷಣ ನಿಯಮಗಳನ್ನು ಅನ್ವಯ ಮಾಡಿದರೆ “ದೇಶದಲ್ಲಿ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾಳುಮಾಡುತ್ತದೆ” ಎಂದು ಅಂಖಿ ದಾಸ್ ಸಿಬ್ಬಂದಿಗೆ ತಿಳಿಸಿದ್ದಾರೆ ಎಂದು ವಾಲ್‌ಸ್ಟ್ರೀಟ್‌ ಜರ್ನಲ್‌ ಲೇಖನ ಹೇಳಿತ್ತು.

ಈ ವರದಿಯ ನಂತರ ಫೇಸ್‌ಬುಕ್ ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ಸ್ಥಾನ ಅಥವಾ ಪಕ್ಷದ ಸಂಬಂಧವನ್ನು ಪರಿಗಣಿಸದೆ ಹಿಂಸಾಚಾರವನ್ನು ಪ್ರಚೋದಿಸುವ ಪೋಸ್ಟ್‌ಗಳ ವಿರುದ್ದ ನೀತಿಗಳನ್ನು ಜಾರಿಗೊಳಿಸುತ್ತೇವೆ ಎಂದು ಹೇಳಿದೆ.

“ಇನ್ನೂ ಹೆಚ್ಚಿನದನ್ನು ಮಾಡಬೇಕಾಗಿದೆ ಎಂದು ನಮಗೆ ತಿಳಿದಿದ್ದರೂ, ನಾವು ಜಾರಿಗೊಳಿಸುವಲ್ಲಿ ಪ್ರಗತಿಯನ್ನು ಸಾಧಿಸುತ್ತಿದ್ದೇವೆ ಮತ್ತು ನಿಯಮಿತವಾಗಿ ಇದರ ಬಗ್ಗೆ ಲೆಕ್ಕಪರಿಶೋಧನೆಯನ್ನು ನಡೆಸುತ್ತಿದ್ದೇವೆ” ಎಂದು ಭಾರತದಲ್ಲಿ 30 ಕೋಟಿಗೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಫೇಸ್‌ಬುಕ್ ಹೇಳಿದೆ. ನಿಜವಾಗಿಯೂ ಏನಾಯಿತು ಎಂಬುದರ ಕುರಿತು ಪರಿಶೀಲನೆ ನಡೆಯುತ್ತದೆ ಎಂದು ಹೇಳಲಾಗಿದೆ.


ಓದಿ: ಬಿಜೆಪಿ ನಾಯಕರ ದ್ವೇಷ ಭಾಷಣದ ನಿರ್ಲಕ್ಷ್ಯ ಆರೋಪ; ಫೇಸ್‌‌ಬುಕ್ ಸ್ಪಷ್ಟನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...