Homeಮುಖಪುಟಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಈ ಮನೆಯನ್ನು 1936 ರಲ್ಲಿ ಖರೀದಿಸಿ, ಬಿಸ್ಮಿಲ್ಲಾ ಖಾನ್ ತಮ್ಮ ಜೀವನದುದ್ದಕ್ಕೂ ಇಲ್ಲಿಯೇ ವಾಸಿಸುತ್ತಿದ್ದರು. ಅವರು ಅಮೇರಿಕಾದಲ್ಲಿ ನೆಲೆಸಲು ತಮ್ಮ ಶಿಷ್ಯರು ನೀಡಿದ ಕರೆಯನ್ನು ಸಹ ತಿರಸ್ಕರಿಸಿದ್ದರು.

- Advertisement -
- Advertisement -

ಮೂರು ಅಂತಸ್ತಿನ ಕಮರ್ಷಿಯಲ್ ಕಾಂಪ್ಲೆಕ್ಸ್ ಕಟ್ಟುವ ಸಲುವಾಗಿ ವಾರಣಾಸಿಯ ಬೆನಿಯಾ ಬಾಗ್‌ನಲ್ಲಿರುವ ಶಹನಾಯ್ ವಿದ್ವಾನ್ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಮನೆಯನ್ನು ಕೆಡವಲಾಗುತ್ತಿದೆ.

ಈ ಮನೆಯನ್ನು 1936 ರಲ್ಲಿ ಖರೀದಿಸಿದ್ದ ಬಿಸ್ಮಿಲ್ಲಾ ಖಾನ್, ತಮ್ಮ ಜೀವನದುದ್ದಕ್ಕೂ ಅಲ್ಲಿಯೇ ವಾಸಿಸಿದ್ದರು. ಅವರು ಅಮೇರಿಕಾದಲ್ಲಿ ನೆಲೆಸಲು ತಮ್ಮ ಶಿಷ್ಯರು ನೀಡಿದ ಕರೆಯನ್ನು ಸಹ ತಿರಸ್ಕರಿಸಿದ್ದರು.

ಈ ಮನೆ ಈಗ ಬಿಸ್ಮಿಲ್ಲಾಖಾನ್ ಮೊಮ್ಮಕ್ಕಳ ಒಡೆತನದಲ್ಲಿದೆ. ಬಿಸ್ಮಿಲ್ಲಾಖಾನ್ ಅವರ ಐದು ಗಂಡು ಮಕ್ಕಳಲ್ಲಿ ದಿವಂಗತ ಮೆಹ್ತಾಬ್ ಹುಸೇನ್ ಒಬ್ಬರು. ಅವರ ಮಗನಾದ ಮತ್ತು ಖಾನ್‌ ಮೊಮ್ಮಗನಾದ ಸೂಫಿ, ಆರ್ಥಿಕ ವಿಷಯಕ್ಕಾಗಿ ಮನೆಯನ್ನು ನೆಲಸಮ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

“ಮೂರು ಅಂತಸ್ತಿನ ಕಮರ್ಷಿಯಲ್ ಅಪಾರ್ಟ್ಮೆಂಟ್ ನಿರ್ಮಿಸಲಾಗುವುದು. ಕಟ್ಟಡದ ಒಂದು ಭಾಗದಲ್ಲಿ ನಾವು ಬಿಸ್ಮಿಲ್ಲಾ ಖಾನ್ ಅವರ ವಸ್ತುಸಂಗ್ರಹಾಲಯವನ್ನು ನಿರ್ಮಿಸುತ್ತೇವೆ. ಅವರ ಎಲ್ಲಾ ವೈಯಕ್ತಿಕ ವಸ್ತುಗಳು, ಪ್ರಶಸ್ತಿಗಳು, ಪ್ರಶಂಸೆಗಳು ಇತ್ಯಾದಿಗಳನ್ನು ನಾವು ಈ ವಸ್ತು ಸಂಗ್ರಹಾಲಯದಲ್ಲಿ ಇಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಖಾನ್ ಅವರ ಶಿಷ್ಯೆ ಮತ್ತು ಸಾಕು ಮಗಳು, ಗಾಯಕಿ ಸೋಮಾ ಘೋಷ್, ಮನೆಯನ್ನು ಕೆಡವುತ್ತಿರುವ ವಿಷಯ ತಿಳಿದು ಆಘಾತಕ್ಕೊಳಗಾಗಿದ್ದೇನೆ ಎಂದು ಹೇಳಿದ್ದಾರೆ.

‘ಬಾಬಾ’ (ಬಿಸ್ಮಿಲ್ಲಾಖಾನ್) ಅವರ ಕೊಠಡಿಯನ್ನು ಕೆಡವಿ, ಅವರ ವಸ್ತುಗಳನ್ನು ಎಸೆಯಲಾಗಿದೆ ಎಂದು ತಿಳಿದಾಗ ನನಗೆ ಆಘಾತವಾಯಿತು. ಅದು ಕೇವಲ ಒಂದು ಕೋಣೆಯಾಗಿರಲಿಲ್ಲ. ಅದು ಸಂಗೀತ ಪ್ರಿಯರಿಗೆ ಪೂಜಾ ಸ್ಥಳವಾಗಿದೆ. ಇದು ಒಂದು ಪರಂಪರೆ. ಅದನ್ನು ಸಂರಕ್ಷಿಸಿ ಎಂದು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ” ಅವರು ಹೇಳಿದ್ದಾರೆ.

ಆಗಸ್ಟ್ 21 ರಂದು ಬಿಸ್ಮಿಲ್ಲಾ ಖಾನ್ ಅವರ 14ನೇ ನೆನಪಿನ ವಾರ್ಷಿಕೋತ್ಸವದ ಕೆಲವೇ ದಿನಗಳ ಮೊದಲು ಕೆಡವುವಿಕೆಯ ಪ್ರಕ್ರಿಯೆ ಪ್ರಾರಂಭವಾಗಿದೆ. 2006 ರಲ್ಲಿ ನಿಧನರಾದ ಬಿಸ್ಮಿಲ್ಲಾಖಾನ್ ಗೆ 2001 ರಲ್ಲಿ ಭಾರತ್ ರತ್ನ ಪ್ರಶಸ್ತಿ ನೀಡಲಾಗಿತ್ತು.

ಬಿಸ್ಮಿಲ್ಲಾ ಖಾನ್ ಆಗಸ್ಟ್ 15, 1947 ರಂದು ಕೆಂಪು ಕೋಟೆಯಲ್ಲಿ ಶಹನಾಯ್ ಕಾರ್ಯಕ್ರಮ ನೀಡಿ ಗಮನ ಸೆಳೆದಿದ್ದರು. ಇದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ.

ರಾಜ್ ಕುಮಾರ್ ಅಭಿನಯದ ‘ಸನಾದಿ ಅಪ್ಪಣ್ಣ’ ಎನ್ನುವ ಕನ್ನಡ ಚಿತ್ರಕ್ಕೆ ಶಹನಾಯ್ ನುಡಿಸಿ ಸಾಕಷ್ಟು ಜನಪ್ರಿಯರಾಗಿದ್ದರು.

2017 ರ ಜನವರಿಯಲ್ಲಿ, ಅವರ ಮೊಮ್ಮಗ ಬಿಸ್ಮಿಲ್ಲಾಖಾನರ ನಾಲ್ಕು ಶಹನಾಯ್ ಗಳನ್ನು ಕದ್ದಿದ್ದು, ಅದರಲ್ಲಿ ಮೂರು ಬೆಳ್ಳಿಯಿಂದ ಮಾಡಲ್ಪಟ್ಟಿತ್ತು. ಅವುಗಳನ್ನು ಸ್ಥಳೀಯ ಆಭರಣ ವ್ಯಾಪಾರಿಗಳಿಗೆ 17,000 ರೂ.ಗೆ ಮಾರಾಟ ಮಾಡಿದ್ದಾನೆ ಎನ್ನಲಾಗಿದೆ.

ಉತ್ತರ ಪ್ರದೇಶದ ಎಸ್‌ಟಿಎಫ್, ಅವರ ಮೊಮ್ಮಗ ಮತ್ತು ಇಬ್ಬರು ಆಭರಣ ವ್ಯಾಪಾರಿಗಳನ್ನು ಬಂಧಿಸಿ ಕರಗಿದ ಬೆಳ್ಳಿಯನ್ನು ವಶಪಡಿಸಿಕೊಂಡಿತ್ತು. ಮೂರು ಬೆಳ್ಳಿ ಶಹನಾಯ್ ಗಳನ್ನು ಮಾಜಿ ಪ್ರಧಾನಿ ಪಿ.ವಿ. ನರಸಿಂಹ ರಾವ್, ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಅವರು ಬಳುವಳಿಯಾಗಿ ನೀಡಿದ್ದರು.


ಇದನ್ನೂ ಓದಿ: ಕೇಂದ್ರ ಸರ್ಕಾರದ ನೇಮಕಾತಿಗಳಿಗೆ ‘ಒಂದೇ’ ಸಾಮಾನ್ಯ ಅರ್ಹತಾ ಪರೀಕ್ಷೆ: ಸಂಸತ್ತು ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...