Homeಚಳವಳಿದ್ವಿಭಾಷಾ ನೀತಿ ಸಾಕು: ಹಿಂದಿ ಹೇರಿಕೆ ಬೇಡ - ಟ್ವಿಟ್ಟರ್ ಟ್ರೆಂಡಿಂಗ್

ದ್ವಿಭಾಷಾ ನೀತಿ ಸಾಕು: ಹಿಂದಿ ಹೇರಿಕೆ ಬೇಡ – ಟ್ವಿಟ್ಟರ್ ಟ್ರೆಂಡಿಂಗ್

- Advertisement -
- Advertisement -

ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಹಿಂದಿ ಹೇರಿಕೆ ವಿರೋಧಿ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಚಿತ್ರನಟರು-ರಾಜಕಾರಣಿಗಳ ಬೆಂಬಲ ಸಿಕ್ಕಿದೆ. ಹಾಗಾಗಿ ಇಂದು ಟ್ವಿಟ್ಟರ್‌ನಲ್ಲಿ #WeWantTwolanguagepolicy ಹ್ಯಾಸ್‌ಟ್ಯಾಗ್ ಟ್ರೆಂಡ್ ಆಗಿದೆ.

ರಾಜ್ಯಾದ್ಯಂತ ತ್ರಿಭಾಷಾ ಸೂತ್ರದ ಬದಲು ದ್ವಿಭಾಷಾ ನೀತಿಯನ್ನು ಅಳವಡಿಸಬೇಕು ಎಂದು ಆಗ್ರಹಿಸಿ ಟ್ವಿಟ್ಟರ್‌ನಲ್ಲಿ ಆಗ್ರಹ ಜೋರಾಗಿದೆ. ಉತ್ತರ ಭಾರತೀಯರು ತಮ್ಮ ಮಾತೃಭಾಷೆಯಾದ ಹಿಂದಿ ಜೊತೆಗೆ ವ್ಯವಹಾರಕ್ಕಾಗಿ ಇಂಗ್ಲಿಷ್ ಭಾಷೆ ಕಲಿಯುತ್ತಾರೆ. ತಮಿಳಿಗರು ಕೂಡ ತಮಿಳಿನ ಜೊತೆ ಇಂಗ್ಲಿಷ್ ಕಲಿಯುತ್ತಾರೆ. ಆದರೆ, ಕರ್ನಾಟಕದಲ್ಲಿ ಕನ್ನಡದ ಜೊತೆಗೆ ವ್ಯಾವಹಾರಿಕ ಭಾಷೆಯಾಗಿ ಇಂಗ್ಲಿಷ್ ಭಾಷೆಯನ್ನು ಕಲಿಯುತ್ತಾರೆ. ಆದರೂ ಮೂರನೇಯ ಭಾಷೆಯಾಗಿ ಹಿಂದಿ ಹೇರಿಕೆ ಏಕೆ ಎಂಬ ಪ್ರಶ್ನೆ ಕೇಳಿಬಂದಿದೆ.

ನಟ ವಸಿಷ್ಠ ಎನ್. ಸಿಂಹ, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ವೈಎಸ್‌ವಿ ದತ್ತ, ನಟ ಹಾಗೂ ಜೆಡಿಎಸ್‌ ಮುಖಂಡ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಅನೇಕರು ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಬೇಕು. ಅದಕ್ಕೆ ಹೊರತಾಗಿ ಬೇರೆ ಭಾಷೆಗಳನ್ನು ಕಲಿಯುವ ಆಯ್ಕೆ ಆಯಾ ವ್ಯಕ್ತಿಗಳದ್ದಾಗಿರುತ್ತದೆ. ಮೂರನೇ ಭಾಷೆಯ ಹೆಸರಿನಲ್ಲಿ ಯಾವ ಭಾಷೆಯನ್ನೂ ಹೇರುವ ಪ್ರಯತ್ನ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ’ಹಿಂದಿ’ ದಕ್ಷಿಣ ಭಾರತೀಯರ ಅವಕಾಶಗಳನ್ನು ಕಸಿದಿದೆ: ಎಚ್‌.ಡಿ ಕುಮಾರಸ್ವಾಮಿ

ಹಿಂದಿ ಹೇರಿಕೆಯ ಕೂಗು ಪ್ರಬಲವಾಗುತ್ತಿರುವ ದಿನಗಳಲ್ಲಿ ದ್ವಿಭಾಷಾ ನೀತಿಯು ಜಾರಿಗೆ ಬರಬೇಕು ಎನ್ನುವ ಕನ್ನಡಿಗರ ಧ್ವನಿ ಇನ್ನಷ್ಟು ಗಟ್ಟಿಯಾಗಬೇಕಿದೆ. 130 ಕೋಟಿ ಭಾರತೀಯರೆಲ್ಲರೂ ಹಿಂದಿ ಕಲಿಯಲೇ ಬೇಕು ಎನ್ನುವುದು ಮೂರ್ಖತನದ ಪರಮಾವಧಿ ಅಲ್ಲದೇ ಮತ್ತೇನು..? ಎಂದು ಸಂಸದ ಪ್ರಜ್ವಲ್ ರೇವಣ್ಣ ಪ್ರಶ್ನಿಸಿದ್ದಾರೆ.

ಹಿಂದಿ ನಮ್ಮ ರಾಜ್ಯದ ಮೇಲೆ ಉತ್ತರ ಭಾರತದಿಂದ ಹೇರಲ್ಪಟ್ಟ ಭಾಷೆ. ಅನಗತ್ಯವಾಗಿ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಹಿಂದಿಯನ್ನು ಪಠ್ಯಕ್ರಮದಲ್ಲಿ ಸೇರಿಸಿ ಮಕ್ಕಳನ್ನು ಒತ್ತಡಕ್ಕೆ ಒಳಗಾಗಿಸುತ್ತಿದ್ದೇವೆ. ಬದಲಿಗೆ ನಮ್ಮದೇ ರಾಜ್ಯದ ತುಳು, ಕೊಡವ ಭಾಷೆಗಳನ್ನು ಕಲಿಯುವ ಆಸಕ್ತಿ ಇದ್ದಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ಕೊಡಬಹುದು ಎಂದು ಮಾಜಿ ಶಾಸಕ ವೈಎಸ್‌ವಿ ದತ್ತ ಅಭಿಪ್ರಾಯಪಟ್ಟಿದ್ದಾರೆ.

ತ್ರಿಭಾಷಾ ಸೂತ್ರದ ವಿರುದ್ಧದ ಕೂಗು ಬಹಳ ಹಿಂದಿನದ್ದು. ಕುವೆಂಪು,ತೇಜಸ್ವಿ ಹಾಗೆ ಅನೇಕ ಸಾಹಿತಿಗಳು ತ್ರಿಭಾಷಾ ಸೂತ್ರದ ವಿರುದ್ಧ ಇದ್ದವರೇ, ಇಂದಿನ ಯುವಕರು ದ್ವಿಭಾಷಾ ಸೂತ್ರದ ಪರ ಧ್ವನಿ ಎತ್ತುವುದರೊಂದಿಗೆ ತ್ರಿಭಾಷಾ ಸೂತ್ರದ ವಿರುದ್ಧದ ಹೋರಾಟವನ್ನು ಮುನ್ನೆಲೆಗೆ ತೆಗೆದುಕೊಂಡು ಬಂದಿರುವುದು ಒಳ್ಳೆಯ ಬೆಳವಣಿಗೆ ಎಂದು ಅವರು ಹೇಳಿದ್ದಾರೆ.

ಹಲವು ದಶಕಗಳಿಂದ ಕರ್ನಾಟಕದ ಪಠ್ಯಕ್ರಮದಲ್ಲಿ ಹಿಂದಿ ವಿಷಯವನ್ನು ಕಡ್ಡಾಯವಾಗಿ ಕಲಿಯಲೇಬೇಕೆನ್ನುವ ನಿಯಮವಿದೆ. ಒಂದು ವಿಷಯವಾಗಿ ಕಡ್ಡಾಯವಾಗಿ ಹಿಂದಿಯನ್ನು ಕಲಿಯಲೇಬೇಕೆನ್ನುವ ನಿಯಮ ಹಿಂದಿ ಹೇರಿಕೆಯಲ್ಲದೆ ಮತ್ತೇನು? ಕರ್ನಾಟಕ ಪಠ್ಯದಲ್ಲಿ ಹಿಂದಿ ಸೇರಿಸಿರುವುದು ಹಿಂದಿ ಹೇರಿಕೆಯ ಮಹಾ ಹುನ್ನಾರ ಎಂದು ನಟ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ನೆರೆಯ ತಮಿಳುನಾಡು ಹಾಗೂ ಉತ್ತರದ ಕೆಲ ರಾಜ್ಯಗಳಂತೆ ಕರ್ನಾಟಕದಲ್ಲೂ ದ್ವಿಭಾಷಾನೀತಿ ಜಾರಿಗೆ ಬರಬೇಕು. ಇತರೆ (optional) ಭಾಷೆಗಳನ್ನು ಆಯ್ಕೆ ಮಾಡುವ ಅವಕಾಶ ಕಲಿಯುವವರದ್ದಾಗಿರಬೇಕು!! ಮೂರನೇ ಭಾಷೆಯ ಹೆಸರಿನಲ್ಲಿ ಯಾವ ಭಾಷೆಯನ್ನೂ ಹೇರುವ ಪ್ರಯತ್ನ ನಡೆಯಬಾರದು. ತ್ರಿಭಾಷಾನೀತಿ ಹೇರಣೆಯ ವಿರುದ್ಧ ಕೈಜೋಡಿಸೋಣ ಎಂದು ನಟ ವಸಿಷ್ಠ ಸಿಂಹ ಮನವಿ ಮಾಡಿದ್ದಾರೆ.

ಬಹಳಷ್ಟು ಕನ್ನಡಿಗರು ದ್ವಿಭಾಷಾ ನೀತಿ ಸಾಕು, ಹಿಂದಿ ಹೇರಿಕೆ ಬೇಡ ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...