Homeಮುಖಪುಟವಿಮಾನ ನಿಲ್ದಾಣಗಳ ನಿರ್ವಹಣೆ ಗುತ್ತಿಗೆ ಅದಾನಿಗೆ: ಖಂಡಿಸಿ ಮೋದಿಗೆ ಪತ್ರ ಬರೆದ ಪಿಣರಾಯಿ

ವಿಮಾನ ನಿಲ್ದಾಣಗಳ ನಿರ್ವಹಣೆ ಗುತ್ತಿಗೆ ಅದಾನಿಗೆ: ಖಂಡಿಸಿ ಮೋದಿಗೆ ಪತ್ರ ಬರೆದ ಪಿಣರಾಯಿ

ಲಕ್ನೋ, ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರ ಮತ್ತು ಗುವಾಹಟಿ ವಿಮಾನ ನಿಲ್ದಾಣಗಳನ್ನು ಲೀಸ್ ಮೇಲೆ ನಿರ್ವಹಿಸುವ ಹಕ್ಕನ್ನು ಅದಾನಿ ಎಂಟರ್ ಪ್ರೈಸಸ್ ಪಡೆದುಕೊಂಡಿದೆ.

- Advertisement -
- Advertisement -

ತಿರುವನಂತಪುರಂ ಸೇರಿದಂತೆ ಮೂರು ವಿಮಾನ ನಿಲ್ದಾಣಗಳನ್ನು ಅದಾನಿ ಕಂಪನಿಗೆ 50 ವರ್ಷಗಳ ಕಾಲ ಹಸ್ತಾಂತರಿಸುವ ಕೇಂದ್ರದ ನಿರ್ಧಾರವನ್ನು ಕೇರಳದ ಎಲ್‌ಡಿಎಫ್ ಸರ್ಕಾರ ತೀವ್ರವಾಗಿ ಆಕ್ಷೇಪಿಸಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

“ಈ ನಿರ್ಣಯವು ನವದೆಹಲಿಯಲ್ಲಿ ನಡೆದಿದ್ದ ವೈಯಕ್ತಿಕ ಸಭೆಯಲ್ಲಿ ಪ್ರಧಾನಿ ಮೋದಿ ನೀಡಿದ ಆಶ್ವಾಸನೆಗೆ ವಿರುದ್ಧವಾಗಿದೆ” ಎಂದು ಪಿಣರಾಯಿ ವಿಜಯನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ಮತ್ತು ನಿರ್ವಹಣೆಯನ್ನು ರಾಜ್ಯ ಸರ್ಕಾರ ಪ್ರಮುಖ ಪಾಲುದಾರರಾಗಿರುವ ಸ್ಪೇಷಲ್ ಪರ್ಪಸ್ ವೆಹಿಕಲ್‌ಗೆ (ಎಸ್‌ಪಿವಿ) ವರ್ಗಾಯಿಸಬೇಕೆಂಬ ಕೇರಳದ ಪುನರಾವರ್ತಿತ ಮನವಿಯನ್ನು ತಳ್ಳಿಹಾಕಿ, ಅದಾನಿಗೆ ನೀಡಲಾಗಿದೆ ಎಂದು ಪತ್ರದಲ್ಲಿ ಪಿಣರಾಯಿ ಹೇಳಿದ್ದಾರೆ.

ಲಕ್ನೋ, ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರ ಮತ್ತು ಗುವಾಹಟಿ ವಿಮಾನ ನಿಲ್ದಾಣಗಳನ್ನು ಲೀಸ್ ಮೇಲೆ ನಿರ್ವಹಿಸುವ ಹಕ್ಕನ್ನು ಅದಾನಿ ಎಂಟರ್ ಪ್ರೈಸಸ್ ಪಡೆದುಕೊಂಡಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ ಜಾವಾಡೇಕರ್ ಬುಧವಾರ ದೆಹಲಿಯ ಸುದ್ಧಿಗೋಷ್ಠಿಯಲ್ಲಿ ಘೋಷಿಸಿದ್ದಾರೆ.

ಇದರ ಬಗ್ಗೆ ಅದಾನಿ ಸಂಸ್ಥೆಯೊಂದಿಗೆ 2020 ರ ಫೆಬ್ರವರಿಯಲ್ಲಿ ಒಪ್ಪಂದ ನಡೆದಿತ್ತು. ಅದರಂತೆ, ಆಗಸ್ಟ್ 12ರೊಳಗೆ ಪಡೆದುಕೊಳ್ಳಬೇಕು ಎಂದು ಟೆಂಡರ್ ನಲ್ಲಿ ಷರತ್ತು ವಿಧಿಸಲಾಗಿತ್ತು. ಆದರೆ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈ ಗಡುವನ್ನು ನವೆಂಬರ್ 12ಕ್ಕೆ  ವಿಸ್ತರಿಸಲಾಗಿದೆ ಎಂದು ಅವರು ಹೇಳಿದ್ದರು.

ಕೇಂದ್ರ ಸರ್ಕಾರ ಈ ಹಿಂದೆ 12 ವಿಮಾನ ನಿಲ್ದಾಣಗಳನ್ನು ಖಾಸಗಿಯವರಿಗೆ ವಹಿಸಿಕೊಡಲು ನಿರ್ಧರಿಸಿತ್ತು. ಈ ಪ್ರಕಾರ ಮೊದಲ ಹಂತದಲ್ಲಿ 6 ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ನಡೆದ ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಸಮೂಹ ಸಂಸ್ಥೆ ಅತ್ಯಧಿಕ ಮೊತ್ತ ನಮೂದಿಸುವ ಮೂಲಕ ಗೆದ್ದುಕೊಂಡಿದೆ ಎಂದು ಸರ್ಕಾರ ಹೇಳಿದೆ.

ಈ 6 ವಿಮಾನ ನಿಲ್ದಾಣಗಳಲ್ಲಿ, 3ರ ನಿರ್ವಹಣೆಯ ಹಕ್ಕನ್ನು ಅದಾನಿ ಸಂಸ್ಥೆಗೆ ವಹಿಸುವ ಕುರಿತ ಒಪ್ಪಂದಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ.

ತಿರುವನಂತಪುರಂ ವಿಮಾನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯಲ್ಲಿ ಖಾಸಗಿ ಕಂಪನಿಯೊಂದರ ಪಾಲ್ಗೊಳ್ಳುವಿಕೆಯು “2003 ರಲ್ಲಿ ಭಾರತ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯ ನೀಡಿದ ಆಶ್ವಾಸನೆಗೆ ವಿರುದ್ಧವಾಗಿದೆ” ಎಂದು ಪಿಣರಾಯಿ ವಿಜಯನ್ ಒತ್ತಿಹೇಳಿದ್ದಾರೆ.

ಕೇರಳ ಸರ್ಕಾರವು 2005 ರಲ್ಲಿ 23.57 ಎಕರೆಗಳನ್ನು ಉಚಿತವಾಗಿ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ, ಅಂತಾರಾಷ್ಟ್ರೀಯ ಟರ್ಮಿನಲ್ ನಿರ್ಮಾಣಕ್ಕಾಗಿ ಹಸ್ತಾಂತರಿಸಿತ್ತು.

ಕೇಂದ್ರ ಸಚಿವ ಸಂಪುಟ ಬುಧವಾರ ನಡೆಸಿದ “ಏಕಪಕ್ಷೀಯ ನಿರ್ಧಾರ”ದ ಅಡಿಯಲ್ಲಿ ರಾಜ್ಯ ಸರ್ಕಾರವು “ಸಂಪೂರ್ಣ ಸಹಕಾರ” ನೀಡಲು ಸಾಧ್ಯವಾಗುವುದಿಲ್ಲ ಎಂದ ವಿಜಯನ್ ಈ ಕುರಿತು ಪ್ರಧಾನಮಂತ್ರಿಗಳು ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದ್ದಾರೆ.

ಪತ್ರದಲ್ಲಿ ಕೊಚ್ಚಿ ಮತ್ತು ಕಣ್ಣೂರು ವಿಮಾನ ನಿಲ್ದಾಣಗಳ ಬಗ್ಗೆಯೂ ಉಲ್ಲೇಖಿಸಿದ್ದು, ಇವುಗಳನ್ನು ಸ್ಪೇಷಲ್ ಪರ್ಪಸ್ ವೆಹಿಕಲ್‌ ಮೂಲಕ ರಾಜ್ಯ ಸರ್ಕಾರವು ನಿರ್ವಹಿಸುತ್ತಿದೆ.

ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಗುತ್ತಿಗೆ ನೀಡುವ ಬಗ್ಗೆ ಚರ್ಚಿಸಲು ಕೇರಳದ ಮುಖ್ಯಮಂತ್ರಿ ಇಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ.

ವಿಶೇಷವೆಂದರೆ, ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಖಾಸಗಿ ಕಂಪನಿಗಳಿಗೆ ವಿಮಾನ ನಿಲ್ದಾಣವನ್ನು ನಿರ್ವಹಿಸಲು ಅವಕಾಶ ನೀಡುವ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

“ಸ್ಪರ್ಧಾತ್ಮಕವಾಗಿ ಕಾರ್ಯಾಚರಣೆ ನಡೆಸುವ ಖಾಸಗಿ ಘಟಕದ ಮೂಲಕ ಈ ವಿಮಾನ ನಿಲ್ದಾಣವು ಅಭಿವೃದ್ಧಿ ಹೊಂದುತ್ತದೆ. ಆದರೆ ಭೂಮಿ ಮತ್ತು ವಿಮಾನ ನಿಲ್ದಾಣದ ಮಾಲೀಕತ್ವ ಮತ್ತು ಎಟಿಸಿಯು ಜವಾಬ್ದಾರಿ, ಭದ್ರತೆ, ಕಸ್ಟಮ್ಸ್ ಮತ್ತು ವಲಸೆಯ ಜವಾಬ್ದಾರಿಗಳು ಇನ್ನೂ ಸರ್ಕಾರಿ ಸಂಸ್ಥೆಗಳೊಂದಿಗೆ ಉಳಿದಿವೆ” ಎಂದು ತರೂರ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸಂಸದ ವಿ ಮುರಳೀಧರನ್ ಕೂಡ ಈ ನಿರ್ಧಾರವನ್ನು ಸ್ವಾಗತಿಸಿದರು. “ಕೇಂದ್ರ ಕ್ಯಾಬಿನೆಟ್ ನಿರ್ಧಾರವು, ವಿಶ್ವ ದರ್ಜೆಯ ಪ್ರಯಾಣಿಕರ ಸೇವೆಗಳನ್ನು ಸಮಯಕ್ಕೆ ತಲುಪಿಸುತ್ತದೆ ಮತ್ತು ಸೌಲಭ್ಯಗಳನ್ನು ಸುಧಾರಿಸುತ್ತದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದ ಮಹಾದ್ರೋಹ-ಮಾರಾಟವಾಗುತ್ತಿರುವ ’ಮಹಾರತ್ನಗಳು’: ಚಿಂತಕ ಶಿವಸುಂದರ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...