Homeಮುಖಪುಟನ್ಯಾಯಮೂರ್ತಿ ಮುರಳೀಧರ್‌ಗೆ ಅವಮಾನ ಮಾಡಿದ್ದು ನ್ಯಾಯಾಂಗ ನಿಂದನೆಯಲ್ಲವೇ?

ನ್ಯಾಯಮೂರ್ತಿ ಮುರಳೀಧರ್‌ಗೆ ಅವಮಾನ ಮಾಡಿದ್ದು ನ್ಯಾಯಾಂಗ ನಿಂದನೆಯಲ್ಲವೇ?

- Advertisement -
- Advertisement -

ಖ್ಯಾತ ನ್ಯಾಯಮೂರ್ತಿಗಳಾದ ಮುರಳೀಧರ್‌ರವರನ್ನು ಬಿಜೆಪಿ ಬೆಂಬಲಿಗರಾದ ಗುರುಸ್ವಾಮಿ ಮತ್ತು ವಿವೇಕ್ ಅಗ್ನಿಹೋತ್ರಿಯವರು ದೇಶದ್ರೋಹಿಗಳ ಪರ ಇರುವವರು ಎಂದೆಲ್ಲಾ ಕರೆದು ಅವಮಾನ ಮಾಡಿದ್ದರು. ಆದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಏಕೆ ಪರಿಗಣಿಸಿಲ್ಲ ಎಂದು ಚಿಂತಕ ಶಿವಸುಂದರ್ ಪ್ರಶ್ನಿಸಿದ್ದಾರೆ.

ದೆಹಲಿ ಚುನಾವಣೆಯ ಸಂದರ್ಭದಲ್ಲಿ ಮತ್ತು ದೆಹಲಿ ಕೋಮುಗಲಭೆಗಳಲ್ಲಿ ಹಲವು ಬಿಜೆಪಿ ಮುಖಂಡರು ಬಹಿರಂಗವಾಗಿ ಕೋಮು ಪ್ರಚೋದಿತ ಹೇಳಿಕೆ ನೀಡಿದ್ದರು. ಆ ನಂತರ ಬಿಜೆಪಿಯ ನಾಯಕರ ಮೇಲೆ FIR ಹಾಕಲು ಕೂಡ ದೆಹಲಿ ಪೋಲೀಸರು ನಿರಾಕರಿಸಿದ್ದರು. ಆಗ ದೆಹಲಿ ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಕೂಡಲೇ ಅವರ ಮೇಲೆ FIR ದಾಖಲಿಸಬೇಕೆಂದು ಆದೇಶಿಸಿದ್ದು ನ್ಯಾಯಮೂರ್ತಿ ಮುರಳೀಧರ್. ಆ ಅಪರಾಧಕ್ಕಾಗಿ ಮೋದಿ ಸರ್ಕಾರದ “ಸಲಹೆ ಮೇರೆಗೆ” ಅವರನ್ನು ರಾತ್ರೋರಾತ್ರಿ ಪಂಜಾಬ್-ಹರ್ಯಾಣ ಹೈಕೋರ್ಟಿಗೆ ವರ್ಗಾವಣೆ ಮಾಡಲಾಯಿತು ಎಂದು ಶಿವಸುಂದರ್ ತಿಳಿಸಿದ್ದಾರೆ.

ನ್ಯಾಯಮೂರ್ತಿ ಮುರಳೀಧರ್ ಕಾಂಗ್ರೆಸ್ ಒಲವಿದ್ದವರೇನಲ್ಲ. ಸಿಖ್ ಹತ್ಯಾಕಾಂಡದಲ್ಲಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಗೆ ಕಠಿಣ ಶಿಕ್ಷೆಯನ್ನು ವಿಧಿಸಿದ್ದು ಕೂಡ ಇದೇ ನ್ಯಾಯಮೂರ್ತಿಗಳೇ… ತೃತೀಯ ಲಿಂಗಿಗಳ ಹಕ್ಕುಗಳನ್ನು ಎತ್ತಿಹಿಡಿದವರು ಹಾಗು ಮುಖ್ಯ ನ್ಯಾಯಮೂರ್ತಿಗಳ ಕಚೇರಿಯು RTI ಅಡಿ ತರಬೇಕೆಂದು ಆದೇಶಿಸಿದವರು, ಪಂಜಾಬ್ ಹೈಕೋರ್ಟಿನಲ್ಲಿ ವಕೀಲರು ತಮ್ಮನ್ನು “ಮೈ ಲಾರ್ಡ್” ಎಂದು ಸಂಬೋಧಿಸಬಾರದೆಂದು ವಿನಂತಿ ಮಾಡಿ ನ್ಯಾಯಾಂಗದಲ್ಲಿ ಮುಂದುವರೆದಿದ್ದ ವಸಾಹತುಶಾಹಿ ಪರಂಪರೆಯನ್ನು ನಿಲ್ಲಿಸಿದವರು….ಇದೇ ನ್ಯಾಯಮೂರ್ತಿಗಳೇ ಎಂದು ಶಿವಸುಂದರ್ ತಿಳಿಸಿದ್ದಾರೆ.

ಇಂಥಾ ನ್ಯಾಯನಿಷ್ಠುರ ನ್ಯಾಯಮೂರ್ತಿಯ ಮೇಲೆ- ಸಂಘಪರಿವಾರದ ಥಿಂಕ್ ಟ್ಯಾಂಕ್‌ನ ಸದಸ್ಯ ಹಾಗು “ತುಘಲಕ್ ” ಪತ್ರಿಕೆ ಸಂಪಾದಕ ಹಾಗು ಮೋದಿ ಸರ್ಕಾರ ಬಂದಮೇಲೆ RBI ನ ನಿರ್ದೇಶಕನಾಗಿಯೂ ನೇಮಕವಾಗಿರುವ- ಗುರುಸ್ವಾಮಿಯವರು ನ್ಯಾಯಮೂರ್ತಿ ಮುರಳೀಧರ ಅವರು “ದೇಶದ್ರೋಹಿ ಶಕ್ತಿಗಳ ಪರವಾಗಿರುವವರು” ಎಂಬರ್ಥದ ಟ್ವೀಟ್ ಮಾಡಿದ್ದರು.

ಗುರುಸ್ವಾಮಿ ಮಾತ್ರವಲ್ಲದೆ , “ಅರ್ಬನ್ ಸಂಘಿ” ಹಾಗೂ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಯಂತವರು ನೇರವಾಗಿ ನ್ಯಾಯಮೂರ್ತಿ ಅವರ ಮುರಳೀಧರ್ ಅವರ ಚಾರಿತ್ರ್ಯ ಹನನ ಮಾಡಲು ತೊಡಗಿದ್ದರು. ಆದರೆ ಸುಪ್ರೀಂ ಕೋರ್ಟ್ ಆಗಲಿ, ದೆಹಲಿ ಹೈಕೋರ್ಟು ಆಗಲಿ, ಪ್ರಶಾಂತ್ ಭೂಷಣ್ ಪ್ರಕರಣದಲ್ಲಿ ಮಾಡಿದಂತೆ ಗುರುಸ್ವಾಮಿಯ ವಿರುದ್ಧ ಸ್ವಯಂ ಪ್ರೇರಿತ ದೂರನ್ನೇನೂ ದಾಖಲಿಸಿಕೊಳ್ಳಲಿಲ್ಲ ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಬದಲಿಗೆ ರಾಜಶೇಖರ ರಾವ್ ಎಂಬ ವಕೀಲರು ಹೈಕೋರ್ಟಿನಲ್ಲಿ ಈ ಬಗ್ಗೆ ದೂರು ದಾಖಲಿಸಿದ ನಂತರ ಗುರುಸ್ವಾಮಿಯವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡಲಾಯಿತು. ಗುರುಸ್ವಾಮಿಯವರು ಆ ನೋಟೀಸನ್ನು ಹಾಗೂ “ನ್ಯಾಯಾಂಗ ನಿಂದನೆ” ಯನ್ನು ಶಿಕ್ಷಿಸುವ ಕ್ರಮವನ್ನು ಕೂಡ ಕೂಡ ಗೇಲಿ ಮಾಡುತ್ತಾ ಮತ್ತೊಂದು ಟ್ವೀಟ್ ಮಾಡಿದರು. ಇಷ್ಟಾದರೂ, ಒಂದು ವರ್ಷಗಳ ಕಾಲ ದೆಹಲಿ ಹೈಕೋರ್ಟು ಯಾವ ಕ್ರಮವನ್ನು ಕೈಗೊಳ್ಳಲಿಲ್ಲ ಎಂದು ಶಿವಸುಂದರ್ ತಿಳಿಸಿದ್ದಾರೆ.

ಒಂದು ವರ್ಷದ ನಂತರ ಗುರುಸ್ವಾಮಿಯವರು ತನ್ನ ಟ್ವೀಟಿನ ಬಗ್ಗೆ ಯಾವ ಪಶ್ಚಾತ್ತಾಪವನ್ನು ವ್ಯಕ್ತಪಡಿಸಡಿದ್ದರೂ… ಕೇವಲ ಟ್ವೀಟನ್ನು ವಾಪಸ್ ತೆಗೆದುಕೊಳ್ಳಬೇಕೆಂಬ ಏಕೈಕ ಷರತ್ತಿನ ಮೇಲೆ ಅವರ ಮೇಲಿನ ನ್ಯಾಯಾಂಗ ನಿಂದನೆಯ ಕೇಸನ್ನು ಹೈಕೋರ್ಟ್ ರದ್ದುಮಾಡಿತು! ಇನ್ನು ವಿವೇಕ್ ಅಗ್ನಿಹೋತ್ರಿ ಇನ್ನಿತರರ ಮೇಲೆ ತಾನೇ ಕೊಟ್ಟ ನೋಟೀಸು ಏನಾಯಿತೆಂದು ವಿಚಾರಿಸಲು ಸಹ ನ್ಯಾಯಾಲಯ ಇನ್ನೂ ಮನಸ್ಸು ಮಾಡಿಲ್ಲ ಎಂದು ಶಿವಸುಂದರ್ ತಿಳಿಸಿದ್ದಾರೆ.

ಏಕೆಂದರೆ ಗುರುಮೂರ್ತಿ ಹಾಗು ವಿವೇಕ್ ಅಗ್ನಿಹೋತ್ರಿ ಸಂಘಪರಿವಾರದ ಕಣ್ಮಣಿಗಳು… ಆದರೆ, ಪ್ರಶಾಂತ್ ಭೂಷಣ್ ಮೋದಿ ಸರ್ಕಾರಕ್ಕೆ ಹಾಗು ಸಂಘಪರಿವಾರಕ್ಕೆ ಮಗ್ಗಲ ಮುಳ್ಳು.. ಆದ್ದರಿಂದ ಒಂದು ಕಣ್ಣಿಗೆ ಸುಪ್ರೀಂ ಬೆಣ್ಣೆ …ಒಂದು ಕಣ್ಣಿಗೆ ಸುಪ್ರೀಂ ಸುಣ್ಣ .. ಇದು ಸರಿಯೇ, ಯುವರ್ ಆನರ್? ಜಸ್ಟ್ ಆಸ್ಕಿಂಗ್ ಎಂದು ಶಿವಸುಂದರ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ; ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...