Homeಮುಖಪುಟನ್ಯಾಯಮೂರ್ತಿ ಮುರಳೀಧರ್‌ಗೆ ಅವಮಾನ ಮಾಡಿದ್ದು ನ್ಯಾಯಾಂಗ ನಿಂದನೆಯಲ್ಲವೇ?

ನ್ಯಾಯಮೂರ್ತಿ ಮುರಳೀಧರ್‌ಗೆ ಅವಮಾನ ಮಾಡಿದ್ದು ನ್ಯಾಯಾಂಗ ನಿಂದನೆಯಲ್ಲವೇ?

- Advertisement -
- Advertisement -

ಖ್ಯಾತ ನ್ಯಾಯಮೂರ್ತಿಗಳಾದ ಮುರಳೀಧರ್‌ರವರನ್ನು ಬಿಜೆಪಿ ಬೆಂಬಲಿಗರಾದ ಗುರುಸ್ವಾಮಿ ಮತ್ತು ವಿವೇಕ್ ಅಗ್ನಿಹೋತ್ರಿಯವರು ದೇಶದ್ರೋಹಿಗಳ ಪರ ಇರುವವರು ಎಂದೆಲ್ಲಾ ಕರೆದು ಅವಮಾನ ಮಾಡಿದ್ದರು. ಆದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಏಕೆ ಪರಿಗಣಿಸಿಲ್ಲ ಎಂದು ಚಿಂತಕ ಶಿವಸುಂದರ್ ಪ್ರಶ್ನಿಸಿದ್ದಾರೆ.

ದೆಹಲಿ ಚುನಾವಣೆಯ ಸಂದರ್ಭದಲ್ಲಿ ಮತ್ತು ದೆಹಲಿ ಕೋಮುಗಲಭೆಗಳಲ್ಲಿ ಹಲವು ಬಿಜೆಪಿ ಮುಖಂಡರು ಬಹಿರಂಗವಾಗಿ ಕೋಮು ಪ್ರಚೋದಿತ ಹೇಳಿಕೆ ನೀಡಿದ್ದರು. ಆ ನಂತರ ಬಿಜೆಪಿಯ ನಾಯಕರ ಮೇಲೆ FIR ಹಾಕಲು ಕೂಡ ದೆಹಲಿ ಪೋಲೀಸರು ನಿರಾಕರಿಸಿದ್ದರು. ಆಗ ದೆಹಲಿ ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಕೂಡಲೇ ಅವರ ಮೇಲೆ FIR ದಾಖಲಿಸಬೇಕೆಂದು ಆದೇಶಿಸಿದ್ದು ನ್ಯಾಯಮೂರ್ತಿ ಮುರಳೀಧರ್. ಆ ಅಪರಾಧಕ್ಕಾಗಿ ಮೋದಿ ಸರ್ಕಾರದ “ಸಲಹೆ ಮೇರೆಗೆ” ಅವರನ್ನು ರಾತ್ರೋರಾತ್ರಿ ಪಂಜಾಬ್-ಹರ್ಯಾಣ ಹೈಕೋರ್ಟಿಗೆ ವರ್ಗಾವಣೆ ಮಾಡಲಾಯಿತು ಎಂದು ಶಿವಸುಂದರ್ ತಿಳಿಸಿದ್ದಾರೆ.

ನ್ಯಾಯಮೂರ್ತಿ ಮುರಳೀಧರ್ ಕಾಂಗ್ರೆಸ್ ಒಲವಿದ್ದವರೇನಲ್ಲ. ಸಿಖ್ ಹತ್ಯಾಕಾಂಡದಲ್ಲಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಗೆ ಕಠಿಣ ಶಿಕ್ಷೆಯನ್ನು ವಿಧಿಸಿದ್ದು ಕೂಡ ಇದೇ ನ್ಯಾಯಮೂರ್ತಿಗಳೇ… ತೃತೀಯ ಲಿಂಗಿಗಳ ಹಕ್ಕುಗಳನ್ನು ಎತ್ತಿಹಿಡಿದವರು ಹಾಗು ಮುಖ್ಯ ನ್ಯಾಯಮೂರ್ತಿಗಳ ಕಚೇರಿಯು RTI ಅಡಿ ತರಬೇಕೆಂದು ಆದೇಶಿಸಿದವರು, ಪಂಜಾಬ್ ಹೈಕೋರ್ಟಿನಲ್ಲಿ ವಕೀಲರು ತಮ್ಮನ್ನು “ಮೈ ಲಾರ್ಡ್” ಎಂದು ಸಂಬೋಧಿಸಬಾರದೆಂದು ವಿನಂತಿ ಮಾಡಿ ನ್ಯಾಯಾಂಗದಲ್ಲಿ ಮುಂದುವರೆದಿದ್ದ ವಸಾಹತುಶಾಹಿ ಪರಂಪರೆಯನ್ನು ನಿಲ್ಲಿಸಿದವರು….ಇದೇ ನ್ಯಾಯಮೂರ್ತಿಗಳೇ ಎಂದು ಶಿವಸುಂದರ್ ತಿಳಿಸಿದ್ದಾರೆ.

ಇಂಥಾ ನ್ಯಾಯನಿಷ್ಠುರ ನ್ಯಾಯಮೂರ್ತಿಯ ಮೇಲೆ- ಸಂಘಪರಿವಾರದ ಥಿಂಕ್ ಟ್ಯಾಂಕ್‌ನ ಸದಸ್ಯ ಹಾಗು “ತುಘಲಕ್ ” ಪತ್ರಿಕೆ ಸಂಪಾದಕ ಹಾಗು ಮೋದಿ ಸರ್ಕಾರ ಬಂದಮೇಲೆ RBI ನ ನಿರ್ದೇಶಕನಾಗಿಯೂ ನೇಮಕವಾಗಿರುವ- ಗುರುಸ್ವಾಮಿಯವರು ನ್ಯಾಯಮೂರ್ತಿ ಮುರಳೀಧರ ಅವರು “ದೇಶದ್ರೋಹಿ ಶಕ್ತಿಗಳ ಪರವಾಗಿರುವವರು” ಎಂಬರ್ಥದ ಟ್ವೀಟ್ ಮಾಡಿದ್ದರು.

ಗುರುಸ್ವಾಮಿ ಮಾತ್ರವಲ್ಲದೆ , “ಅರ್ಬನ್ ಸಂಘಿ” ಹಾಗೂ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಯಂತವರು ನೇರವಾಗಿ ನ್ಯಾಯಮೂರ್ತಿ ಅವರ ಮುರಳೀಧರ್ ಅವರ ಚಾರಿತ್ರ್ಯ ಹನನ ಮಾಡಲು ತೊಡಗಿದ್ದರು. ಆದರೆ ಸುಪ್ರೀಂ ಕೋರ್ಟ್ ಆಗಲಿ, ದೆಹಲಿ ಹೈಕೋರ್ಟು ಆಗಲಿ, ಪ್ರಶಾಂತ್ ಭೂಷಣ್ ಪ್ರಕರಣದಲ್ಲಿ ಮಾಡಿದಂತೆ ಗುರುಸ್ವಾಮಿಯ ವಿರುದ್ಧ ಸ್ವಯಂ ಪ್ರೇರಿತ ದೂರನ್ನೇನೂ ದಾಖಲಿಸಿಕೊಳ್ಳಲಿಲ್ಲ ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಬದಲಿಗೆ ರಾಜಶೇಖರ ರಾವ್ ಎಂಬ ವಕೀಲರು ಹೈಕೋರ್ಟಿನಲ್ಲಿ ಈ ಬಗ್ಗೆ ದೂರು ದಾಖಲಿಸಿದ ನಂತರ ಗುರುಸ್ವಾಮಿಯವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡಲಾಯಿತು. ಗುರುಸ್ವಾಮಿಯವರು ಆ ನೋಟೀಸನ್ನು ಹಾಗೂ “ನ್ಯಾಯಾಂಗ ನಿಂದನೆ” ಯನ್ನು ಶಿಕ್ಷಿಸುವ ಕ್ರಮವನ್ನು ಕೂಡ ಕೂಡ ಗೇಲಿ ಮಾಡುತ್ತಾ ಮತ್ತೊಂದು ಟ್ವೀಟ್ ಮಾಡಿದರು. ಇಷ್ಟಾದರೂ, ಒಂದು ವರ್ಷಗಳ ಕಾಲ ದೆಹಲಿ ಹೈಕೋರ್ಟು ಯಾವ ಕ್ರಮವನ್ನು ಕೈಗೊಳ್ಳಲಿಲ್ಲ ಎಂದು ಶಿವಸುಂದರ್ ತಿಳಿಸಿದ್ದಾರೆ.

ಒಂದು ವರ್ಷದ ನಂತರ ಗುರುಸ್ವಾಮಿಯವರು ತನ್ನ ಟ್ವೀಟಿನ ಬಗ್ಗೆ ಯಾವ ಪಶ್ಚಾತ್ತಾಪವನ್ನು ವ್ಯಕ್ತಪಡಿಸಡಿದ್ದರೂ… ಕೇವಲ ಟ್ವೀಟನ್ನು ವಾಪಸ್ ತೆಗೆದುಕೊಳ್ಳಬೇಕೆಂಬ ಏಕೈಕ ಷರತ್ತಿನ ಮೇಲೆ ಅವರ ಮೇಲಿನ ನ್ಯಾಯಾಂಗ ನಿಂದನೆಯ ಕೇಸನ್ನು ಹೈಕೋರ್ಟ್ ರದ್ದುಮಾಡಿತು! ಇನ್ನು ವಿವೇಕ್ ಅಗ್ನಿಹೋತ್ರಿ ಇನ್ನಿತರರ ಮೇಲೆ ತಾನೇ ಕೊಟ್ಟ ನೋಟೀಸು ಏನಾಯಿತೆಂದು ವಿಚಾರಿಸಲು ಸಹ ನ್ಯಾಯಾಲಯ ಇನ್ನೂ ಮನಸ್ಸು ಮಾಡಿಲ್ಲ ಎಂದು ಶಿವಸುಂದರ್ ತಿಳಿಸಿದ್ದಾರೆ.

ಏಕೆಂದರೆ ಗುರುಮೂರ್ತಿ ಹಾಗು ವಿವೇಕ್ ಅಗ್ನಿಹೋತ್ರಿ ಸಂಘಪರಿವಾರದ ಕಣ್ಮಣಿಗಳು… ಆದರೆ, ಪ್ರಶಾಂತ್ ಭೂಷಣ್ ಮೋದಿ ಸರ್ಕಾರಕ್ಕೆ ಹಾಗು ಸಂಘಪರಿವಾರಕ್ಕೆ ಮಗ್ಗಲ ಮುಳ್ಳು.. ಆದ್ದರಿಂದ ಒಂದು ಕಣ್ಣಿಗೆ ಸುಪ್ರೀಂ ಬೆಣ್ಣೆ …ಒಂದು ಕಣ್ಣಿಗೆ ಸುಪ್ರೀಂ ಸುಣ್ಣ .. ಇದು ಸರಿಯೇ, ಯುವರ್ ಆನರ್? ಜಸ್ಟ್ ಆಸ್ಕಿಂಗ್ ಎಂದು ಶಿವಸುಂದರ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ; ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...