Homeಅಂತರಾಷ್ಟ್ರೀಯಫ್ಯಾಕ್ಟ್‌‌ಚೆಕ್: ನ್ಯೂಜಿಲ್ಯಾಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಶ್ರೀಕೃಷ್ಟ ಹಾಗೂ ಭಗವದ್ಗೀತೆಯನ್ನು ಹೊಗಳಿದರೆ?

ಫ್ಯಾಕ್ಟ್‌‌ಚೆಕ್: ನ್ಯೂಜಿಲ್ಯಾಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಶ್ರೀಕೃಷ್ಟ ಹಾಗೂ ಭಗವದ್ಗೀತೆಯನ್ನು ಹೊಗಳಿದರೆ?

ಅವರು ತಮ್ಮ ವಿಡಿಯೋ ಸಂದೇಶದ ಜೊತೆಗೆ ಟ್ವೀಟ್‌ನಲ್ಲಿ ’ಜೈಶ್ರೀಕೃಷ್ಣ’ ಎಂದಿದ್ದು ನಿಜವೆ ?

- Advertisement -
- Advertisement -

ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ವಿದೇಶಿಯಂತೆ ಕಾಣುವ ಮಹಿಳೆಯೊಬ್ಬರು ಶ್ರೀಕೃಷ್ಣ ಮತ್ತು ಭಗವದ್ಗೀತೆಯನ್ನು ಹೊಗಳಿದ ವೈರಲ್ ವಿಡಿಯೋವೊಂದನ್ನು ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ವಿಡಿಯೋದಲ್ಲಿ ಮಹಿಳೆಯು, “… ಭಗವದ್ಗೀತೆ ಅಂದರೆ ’ದೇವರ ಹಾಡು ’. ಶ್ರೀ ಕೃಷ್ಣ ಹೇಳಿದ್ದ ಭಗವದ್ಗೀತೆಯು ಅತೀಂದ್ರಿಯ ಬುದ್ಧಿವಂತಿಕೆಯಿಂದ ತುಂಬಿದ್ದು, ಅದು 5,000 ವರ್ಷಗಳ ಹಿಂದೆ ಮಾತನಾಡುವಾಗ ಇದ್ದಂತೆಯೇ ಇಂದಿಗೂ ಪ್ರಸ್ತುತವಾಗಿದೆ” ಎಂದು ಹೇಳುತ್ತಾರೆ.

ಇದನ್ನೂ ಓದಿ: ಹಿಂದೂ ವಿರೋಧಿ ಪೋಸ್ಟ್‌ಗೆ ಉತ್ತರವಾಗಿ ಡಿಜೆ ಹಳ್ಳಿ ಗಲಭೆಯ ಆರೋಪಿ ಪಿ. ನವೀನ್ ಪ್ರವಾದಿ ನಿಂದನೆ ಪೋಸ್ಟ್ ಹಾಕಿದ್ದೆ? ಇದು ನಿಜವೆ ?

ಈ ವಿಡಿಯೋವನ್ನುಇಟ್ಟುಕೊಂಡು ಭಗವದ್ಗೀತೆಯ ಮಹತ್ವದ ಬಗ್ಗೆ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಮಾತನಾಡುತ್ತಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಹಲವರು ಬಳಕೆದಾರರು ಹೇಳುತ್ತಾ ಹಂಚಿಕೊಳ್ಳುತ್ತಿದ್ದಾರೆ. ವಿಡಿಯೋವನ್ನು ಹಲವಾರು ಫೇಸ್‌ಬುಕ್ ಹಾಗೂ ಟ್ವಿಟ್ಟರ್‌ ಬಳಕೆದಾರರು ಒಂದೇ ರೀತಿಯ ನಿರೂಪಣೆಯೊಂದಿಗೆ ಹಂಚಿಕೊಂಡಿದ್ದಾರೆ.

ಆರ್ಕೈವ್‌ ಇಲ್ಲಿದೆ.

ಫ್ಯಾಕ್ಟ್‌‌‌ಚೆಕ್

ವೀಡಿಯೊದಲ್ಲಿ ಇರುವುದು ವಿದೇಶಿ ಮಹಿಳೆ ಎಂಬುವುದು ನಿಜವಾಗಿದೆ. ಅದರಂತೆ ಈ ವಿಡಿಯೋ ಎಡಿಟ್ ಮಾಡಿದ ವಿಡಿಯೋ ಕೂಡಾ ಅಲ್ಲ. ಆದರೆ ವಿಡಿಯೋದಲ್ಲಿ ಇರುವ ಮಹಿಳೆಯು ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅಲ್ಲ, ಬದಲಾಗಿ ಅಮೆರಿಕಾದ ಜನಪ್ರತಿನಿಧಿ ತುಳಸಿ ಗಬ್ಬಾರ್ಡ್ ಎಂಬವರಾಗಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಆಗಸ್ಟ್ 11 ರಂದು ಕೃಷ್ಟ ಜನ್ಮಾಷ್ಟಮಿ ಸಂದರ್ಭದಲ್ಲಿ ತುಳಸಿ ಗಬ್ಬಾರ್ಡ್ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಹ್ಯಾಂಡಲ್‌ಗಳಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದ್ದರು.

ಅಷ್ಟೇ ಅಲ್ಲದೆ ತಮ್ಮ ಟ್ವಿಟ್ಟರ್‌ನಲ್ಲಿ “ಪ್ರಪಂಚದಾದ್ಯಂತ ಜನ್ಮಾಷ್ಟಮಿ ಆಚರಿಸುವ ಎಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ! ನಾವು ಯಾವಾಗಲೂ ಶ್ರೀ ಕೃಷ್ಣನ ಸ್ಮರಣೆ, ​​ಅವನ ಬೇಷರತ್ತಾದ ಪ್ರೀತಿ ಮತ್ತು ಅವನ ಅತೀಂದ್ರಿಯ ದೃಷ್ಟಿಯ ಆಶೀರ್ವದ ಪಡೆಯೋಣ. ಜೈ ಶ್ರೀ ಕೃಷ್ಣ! ” ಎಂದು ಬರೆದು ತಮ್ಮ ಈ ವಿಡಿಯೋವನ್ನು ಹಂಚಿದ್ದಾರೆ.

ತುಳಸಿ ಗಬ್ಬಾರ್ಡ್ ಡೆಮೋಕ್ರಾಟಿಕ್ ಪಕ್ಷದ ಅಮೇರಿಕನ್ ರಾಜಕಾರಣಿ, 2013 ರಿಂದ ಹವಾಯಿಯ 2 ನೇ ಕಾಂಗ್ರೆಸ್ ಜಿಲ್ಲೆಯ ಅಮೆರಿಕಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹವಾಯಿಯ ಒಂದು ಕ್ಷೇತ್ರವನ್ನು ಪ್ರತಿನಿಧಿಸುವ ಗಬ್ಬಾರ್ಡ್ ಭಾರತೀಯ ಮೂಲದವರಲ್ಲ ಮತ್ತು ಅವರ ಪೋಷಕರು ಇಬ್ಬರೂ ಹಿಂದೂಗಳಲ್ಲ, ಆದರೆ ಅವರು ಹಿಂದೂ ಧರ್ಮವನ್ನು ಆಚರಣೆ ಮಾಡುತ್ತಾರೆ.

ಇದನ್ನೂ ಓದಿ: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ನ್ಯೂಜಿಲೆಂಡ್ ಪ್ರಧಾನಿ ಮತ್ತು ಅಮೆರಿಕಾ ಪ್ರತಿನಿಧಿಯ ಮುಖದ ವ್ಯತ್ಯಾಸವನ್ನು ಕೆಳಗಿನ ಚಿತ್ರದಲ್ಲಿ ನೋಡಬಹುದಾಗಿದೆ.

PC: The Quint

ಆದರೆ ನ್ಯೂಜಿಲೆಂಡ್ ಪ್ರಧಾನಿ ಆಗಸ್ಟ್ 6 ರಂದು ಆಕ್ಲೆಂಡ್‌ನ ರಾಧಾ ಕೃಷ್ಣ ದೇವಸ್ಥಾನಕ್ಕೆ ಒಂದು ಸಣ್ಣ ಭೇಟಿ ನೀಡಿದ್ದರು.

ಅಮೆರಿಕಾದ ರಾಜಕಾರಣಿ ತುಳಸಿ ಗಬ್ಬಾರ್ಡ್ ಬಿಡುಗಡೆ ಮಾಡಿರುವ ವಿಡಿಯೋವನ್ನು ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರದ್ದೆಂದು ತಪ್ಪಾಗಿ ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡುತ್ತಿದ್ದಾರೆ.


ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...