Homeಚಳವಳಿಪೂರ್ಣ ಓದಿ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ಪೂರ್ಣ ಓದಿ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ಅನ್ಯಮನಸ್ಕನಾಗಿ ಆ ಟ್ವೀಟ್‌ಗಳನ್ನು ನಾನು ಬರೆದಿಲ್ಲ. ಈ ನಮ್ಮ ಗಣರಾಜ್ಯದ ಐತಿಹಾಸಿಕ ಕಾಲಘಟ್ಟದಲ್ಲಿ ನಾನು ನಿರ್ವಹಿಸಬೇಕಿದ್ದ ಉನ್ನತ ಕರ್ತವ್ಯದ ಸಣ್ಣ ಭಾಗ ಆ ಟ್ವೀಟ್‌ಗಳು.

- Advertisement -
- Advertisement -

ಗೌರವಾನ್ವಿತ ನ್ಯಾಯಾಲಯದ ತೀರ್ಪನ್ನು ನಾನು ಓದಿದ್ದೇನೆ. ಮೂರು ದಶಕಗಳಿಂದ ಹೊಗಳುಭಟನಾಗಿಯಲ್ಲದೇ, ಆದರೆ ವಿನಮ್ರ ಕಾವಲುಗಾರನಾಗಿ, ಒಂದಷ್ಟು ವೈಯಕ್ತಿಕ ಮತ್ತು ವೃತ್ತಿಜೀವನದ ಹಿತಾಸಕ್ತಿಗಳನ್ನು ಬದಿಗಿಟ್ಟು ನಾನು ಯಾವ ನ್ಯಾಯಾಲಯದ ಘನತೆಯನ್ನು ಎತ್ತಿಹಿಡಿಯಲು ಪ್ರಯತ್ನಿಸಿದ್ದೇನೋ ಅದೇ ನ್ಯಾಯಾಂಗದ ನಿಂದನೆ ಮಾಡಿದ್ದೇನೆಂದು ನನ್ನನ್ನು ತಪ್ಪಿತಸ್ಥನಾಗಿಸಿರುವ ತೀರ್ಪು ನನಗೆ ನೋವು ತಂದಿದೆ.

ನನಗೆ ನೋವಾಗುತ್ತಿರುವುದು ಶಿಕ್ಷೆ ಆಗಬಹುದು ಎಂಬ ಕಾರಣಕ್ಕಲ್ಲ, ನನ್ನ ಆಶಯವನ್ನು ಸಂಪೂರ್ಣವಾಗಿ ಅಪಾರ್ಥ ಮಾಡಿಕೊಂಡಿರುವುದಕ್ಕಾಗುತ್ತಿದೆ. ನ್ಯಾಯದಾನದ ಸಂಸ್ಥೆಯ ಮೇಲೆ “ದುರುದ್ದೇಶಪೂರಿತವಾದ ಕೀಳುಮಟ್ಟದ, ಲೆಕ್ಕಾಚಾರದ ದಾಳಿ” ಮಾಡಿದ್ದೇನೆಂದು ನ್ಯಾಯಾಲಯ ನನ್ನನ್ನು ತಪ್ಪಿತಸ್ಥನನ್ನಾಗಿಸಿರುವುದನ್ನು ನೋಡಿ ನನಗೆ ಅಘಾತವಾಗಿದೆ.

ಇದನ್ನೂ ಓದಿ: ನೀವೆಷ್ಟೇ ಸಮಯ ನೀಡಿದರೂ ನನ್ನ ಹೇಳಿಕೆ ಬದಲಿಸುವುದಿಲ್ಲ: ಪ್ರಶಾಂತ್ ಭೂಷಣ್

ಈ ದಾಳಿಗಳನ್ನು ಮಾಡುವುದಕ್ಕೆ ನನಗಿದ್ದ ಉದ್ದೇಶಗಳೇನು ಎಂಬುದಕ್ಕೆ ಯಾವುದೇ ಸಾಕ್ಷ್ಯ ನೀಡದೆ ನ್ಯಾಯಾಲಯ ಈ ತೀರ್ಮಾನಕ್ಕೆ ಬಂದಿರುವುದು ನನ್ನನ್ನು ಕುಗ್ಗಿಸಿದೆ. ಸ್ವಯಂಪ್ರೇರಿತ ನೋಟಿಸ್ ನೀಡುವುದಕ್ಕೆ ಕಾರಣವಾದ ದೂರಿನ ಪ್ರತಿಯನ್ನು ಕೂಡ ಒದಗಿಸುವ ಅವಶ್ಯಕತೆ ಇಲ್ಲವೆಂದೂ, ನನ್ನ ಅಫಿಡವಿಟ್‌ನಲ್ಲಿ ಮಾಡಿದ ನಿರ್ದಿಷ್ಟ ಆರೋಪಗಳಿಗೆ ಅಥವಾ ನನ್ನ ಪರ ವಕೀಲರು ಸಲ್ಲಿಸಿದ ಅರ್ಜಿಗೆ ಉತ್ತರಿಸುವ ಅವಶ್ಯಕತೆ ಇಲ್ಲವೆಂದೂ ನ್ಯಾಯಾಲಯ ಬಗೆದಿರುವುದರಿಂದ ನನಗೆ ತೀವ್ರ ನಿರಾಶೆಯಾಗಿದೆ ಎಂದು ಸ್ಪಷ್ಟೀಕರಿಸುತ್ತೇನೆ.

ನನ್ನ ಟ್ವೀಟ್ “ಭಾರತದ ಪ್ರಜಾಪ್ರಭುತ್ವದ ಮುಖ್ಯ ಆಧಾರಸ್ತಂಭವನ್ನು ಅಲುಗಾಡಿಸುವ ಪರಿಣಾಮ ಉಂಟುಮಾಡಬಲ್ಲದು” ಎಂದು ನ್ಯಾಯಾಲಯಕ್ಕೆ ಕಂಡಿರುವುದನ್ನು ನಂಬಲು ಕಷ್ಟವಾಗುತ್ತಿದೆ. ಈ ಎರಡೂ ಟ್ವೀಟ್‌ಗಳು ನನ್ನ ಪ್ರಾಮಾಣಿಕ ನಂಬಿಕೆಯನ್ನು ಪ್ರತಿನಿಧಿಸಿದ್ದವು ಮತ್ತು ಆ ಅಭಿವ್ಯಕ್ತಿಗೆ ಪ್ರಜಾಪ್ರಭುತ್ವದಲ್ಲಿ ಅವಕಾಶವಿರಲೇಬೇಕು ಎಂದು ನಾನು ಇಲ್ಲಿ ಮತ್ತೆ ಪುನರುಚ್ಚರಿಸುತ್ತೇನೆ.

ಇದನ್ನೂ ಓದಿ: ಸಿಜೆಐ ಅಂದ್ರೆ ಸುಪ್ರೀಂ ಕೋರ್ಟ್ ಅಲ್ಲ: ನ್ಯಾಯಾಧೀಶರಿಗಿಂತ ನ್ಯಾಯಾಲಯ ದೊಡ್ಡದು – ಪ್ರಶಾಂತ್ ಭೂಷಣ್

ಅಲ್ಲದೆ, ನ್ಯಾಯಾಂಗದ ಆರೋಗ್ಯಕರ ನಿರ್ವಹಣೆಗೆ ಸಾರ್ವಜನಿಕ ಕಣ್ಗಾವಲು ಅತ್ಯವಶ್ಯ. ಸಾಂವಿಧಾನಿಕ ಸಮತೋಲನ ವ್ಯವಸ್ಥೆಯನ್ನು ಕಾಪಾಡಲು ಪ್ರಜಾಪ್ರಭುತ್ವದಲ್ಲಿ ಯಾವುದೇ ಸಂಸ್ಥೆಯ ಮುಕ್ತ ವಿಮರ್ಶೆ ಅತ್ಯವಶ್ಯ ಎಂದು ನಾನು ನಂಬಿದ್ದೇನೆ. ವೈಯಕ್ತಿಕ ಮತ್ತು ವೃತ್ತಿಪರ ಸೂಕ್ಷ್ಮಗಳಿಗಿಂತ ಸಾಂವಿಧಾನಿಕ ಸಮತೋಲನ ವ್ಯವಸ್ಥೆಯನ್ನು ಉಳಿಸುವುದು ಮೊದಲು ಆಗಬೇಕಾದ ಮತ್ತು ಭವಿಷ್ಯದ ಬಗ್ಗೆ ನಮ್ಮ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ವರ್ತಮಾನದ ಚಿಂತನೆಗಳು ಅಡ್ಡಿ ಬರಬಾರದ, ಉನ್ನತ ಆದರ್ಶಗಳು ನಮ್ಮ ದಿನನಿತ್ಯದ ವಹಿವಾಟುಗಳನ್ನು ತೊಡೆದುಹಾಕಬೇಕಿರುವ ಐತಿಹಾಸಿಕ ಕಾಲಘಟ್ಟದಲ್ಲಿ ನಾವು ಬದುಕಿದ್ದೇವೆ. ಇಂತಹ ಸಮಯದಲ್ಲಿ ಅದೂ ನ್ಯಾಯಾಲಯದ ಅಧಿಕಾರಿಯಾಗಿರುವ ನನ್ನಂತಹವನಿಗೆ ಮಾತನಾಡದೆ ಇರುವುದು ನನ್ನ ಕರ್ತವ್ಯದಿಂದ ವಿಮುಖನಾದಂತೆ.

ಈ ನಮ್ಮ ಗಣರಾಜ್ಯದ ಐತಿಹಾಸಿಕ ಕಾಲಘಟ್ಟದಲ್ಲಿ ನಾನು ನಿರ್ವಹಿಸಬೇಕಿದ್ದ ಉನ್ನತ ಕರ್ತವ್ಯದ ಸಣ್ಣ ಭಾಗ ಆ ಟ್ವೀಟ್‌ಗಳು. ಅನ್ಯಮನಸ್ಕನಾಗಿ ಆ ಟ್ವೀಟ್‌ಗಳನ್ನು ನಾನು ಬರೆದಿಲ್ಲ. ಆ ಟ್ವೀಟ್‌ಗಳಲ್ಲಿ ಅಭಿವ್ಯಕ್ತವಾಗಿರುವ ಸಂಗತಿಗಳು ನನ್ನ ಪ್ರಾಮಾಣಿಕ ನಂಬಿಕೆಯ ಭಾಗವಾಗಿದ್ದವು ಮತ್ತು ಈಗಲೂ ಆಗಿವೆ. ಹೀಗಿರುವಾಗ ಆ ಟ್ವೀಟ್‌ಗಳ ಬಗ್ಗೆ ಕ್ಷಮೆ ಕೇಳುವುದು ನನ್ನ ಕಡೆಯಿಂದ ಅಪ್ರಾಮಾಣಿಕ ಮತ್ತು ನಿಂದನೆಯ ನಡೆಯಾಗುತ್ತದೆ. ಆದುದರಿಂದ, ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರು ತಮ್ಮ ವಿಚಾರಣೆಯಲ್ಲಿ ಹೇಳಿದ ಮಾತುಗಳನ್ನು ವಿನಮ್ರತೆಯಿಂದ ಮತ್ತೊಂದು ರೀತಿಯಲ್ಲಿ ಹೇಳಬಯಸುತ್ತೇನೆ: ನಾನು ಕ್ಷಮಿಸಿರೆಂದು ಕೋರುವುದಿಲ್ಲ. ನೀವು ಉದಾತ್ತ ವೈಶಾಲ್ಯತೆಯನ್ನು ತೋರಿರೆಂದೂ ಕೇಳುವುದಿಲ್ಲ.

ಆದುದರಿಂದ, ಯಾವುದನ್ನು ನಾಗರಿಕನಾಗಿ ನನ್ನ ಅತ್ಯುನ್ನತ ಕರ್ತವ್ಯವೆಂದು ಭಾವಿಸಿದ್ದೇನೋ, ಅದನ್ನು ನ್ಯಾಯಾಲಯವು ಅಪರಾಧ ಎಂದು ಪರಿಗಣಿಸಿರುವ ಈ ಸಂದರ್ಭದಲ್ಲಿ, ಯಾವ ಶಿಕ್ಷೆಯನ್ನು ಕಾನೂನುಪ್ರಕಾರ ನೀಡಲಾಗುತ್ತದೆಯೋ ಅದನ್ನು ಸಂತೋಷದಿಂದ ಸ್ವೀಕರಿಸಲು ನಾನಿಲ್ಲಿ ನಿಂತಿದ್ದೇನೆ.


ಓದಿ: ಸುಪ್ರೀಂಕೋರ್ಟಿನ ನ್ಯಾಯಾಂಗ ನಿಂದನೆ ನೋಟೀಸಿಗೆ ವಕೀಲ ಪ್ರಶಾಂತ್ ಭೂಷಣ್ ಸ್ಫೋಟಕ ಉತ್ತರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...