Homeಮುಖಪುಟಕೊರೊನಾ, ನಿರುದ್ಯೋಗದ ಕುರಿತು ಎಚ್ಚರಿಸಿದ್ದೆ, ಮಾಧ್ಯಮಗಳು ಅಣಕಿಸಿದ್ದವು: ರಾಹುಲ್ ಗಾಂಧಿ

ಕೊರೊನಾ, ನಿರುದ್ಯೋಗದ ಕುರಿತು ಎಚ್ಚರಿಸಿದ್ದೆ, ಮಾಧ್ಯಮಗಳು ಅಣಕಿಸಿದ್ದವು: ರಾಹುಲ್ ಗಾಂಧಿ

ಇಂದು ನಾನು ಹೇಳುತ್ತಿದ್ದೇನೆ ನಮ್ಮ ದೇಶವು ಯುವಜನರಿಗೆ ಉದ್ಯೋಗಗಳನ್ನು ನೀಡಲು ಸಾಧ್ಯವಿಲ್ಲ. ನೀವು ಇದನ್ನು ಒಪ್ಪದಿದ್ದರೆ ಆರು-ಏಳು ತಿಂಗಳು ಕಾಯಿರಿ" ಎಂದು ರಾಹುಲ್ ಎಚ್ಚರಿಸಿದ್ದಾರೆ.

- Advertisement -
- Advertisement -

ಮುಂಬರುವ ದಿನಗಳಲ್ಲಿ ಭಾರತವು ತನ್ನ ಯುವಜನರಿಗೆ ಉದ್ಯೋಗ ನೀಡಲು ಸಾಧ್ಯವಾಗುವುದಿಲ್ಲ ಎಂದು ರಾಹುಲ್ ಗಾಂಧಿ ಭವಿಷ್ಯ ನುಡಿದಿದ್ದಾರೆ. ಕೊರೊನಾ, ನಿರುದ್ಯೋಗದ ಕುರಿತು ಎಚ್ಚರಿಸಿದ್ದೆ, ಮಾಧ್ಯಮಗಳು ಅಣಕಿಸಿದ್ದವು ಎಂದು ಅವರು ಹೇಳಿದರು.

ನರೇಂದ್ರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ಮುಂದಿನ 6-7 ತಿಂಗಳಲ್ಲಿ ನಿರುದ್ಯೋಗ ಬಿಕ್ಕಟ್ಟು ಮನೆಯ ಬಾಗಿಲಿಗೆ ಬರಲಿದೆ. ಭಾರತವು ಯುವಜನರಿಗೆ ಉದ್ಯೋಗವನ್ನು ಒದಗಿಸಲು ಸಾಧ್ಯವಿಲ್ಲವೆಂಬುದು ಸ್ಪಷ್ಟವಾಗಿದೆ. 70 ವರ್ಷಗಳಲ್ಲಿ ನಮ್ಮ ದೇಶವು ಇಂಥ ಪರಿಸ್ಥಿತಿಯನ್ನು ಎದುರಿಸಿರಲಿಲ್ಲ” ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

“ಕೊರೊನಾದಿಂದ ಭಾರೀ ನಷ್ಟವಾಗಲಿದೆ ಎಂದು ನಾನು ದೇಶಕ್ಕೆ ಎಚ್ಚರಿಕೆ ನೀಡಿದಾಗ ಮಾಧ್ಯಮಗಳು ನನ್ನನ್ನು ಗೇಲಿ ಮಾಡಿದ್ದವು. ನೀವು ನನ್ನನ್ನು ನಂಬದಿದ್ದರೆ, ನನ್ನ ಮಾತನ್ನು ಕೇಳಬೇಡಿ. ಇಂದು ನಾನು ಹೇಳುತ್ತಿದ್ದೇನೆ ನಮ್ಮ ದೇಶವು ಯುವಜನರಿಗೆ ಉದ್ಯೋಗಗಳನ್ನು ನೀಡಲು ಸಾಧ್ಯವಿಲ್ಲ. ನೀವು ಇದನ್ನು ಒಪ್ಪದಿದ್ದರೆ ಆರು-ಏಳು ತಿಂಗಳು ಕಾಯಿರಿ” ಎಂದು ಅವರು ಎಚ್ಚರಿಸಿದ್ದಾರೆ.

ಅಸಂಘಟಿತ ವಲಯದಲ್ಲಿ ಉದ್ಯೋಗ ನೀಡುವವರು ಆರ್ಥಿಕ ಬಿಕ್ಕಟ್ಟಿನಿಂದ ಮುಗ್ಗರಿಸಿರುವುದೇ ಇದಕ್ಕೆ ಕಾರಣ ಎಂದು ಅವರು ವಿವರಿಸಿದರು. “90% ಉದ್ಯೋಗವು ಅಸಂಘಟಿತ ವಲಯದಲ್ಲಿದೆ. ಪಿಎಂ ಮೋದಿ ಈ ವ್ಯವಸ್ಥೆಯನ್ನು ನಾಶಪಡಿಸಿದ್ದಾರೆ. ಕಂಪನಿಗಳು ಒಂದರ ನಂತರ ಒಂದರಂತೆ ಮುಚ್ಚುತ್ತಿರುವುದನ್ನು ನೀವು ನೋಡುತ್ತಿದ್ದೀರಿ. ಮೊರೊಟೋರಿಯಂ ಅವಧಿಯ ನಂತರ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಂಎಸ್‌ಎಂಇ) ನಾಶವಾಗುತ್ತವೆ ಎಂದು ಹೇಳಿದರು.

COVID-19 ವಿರುದ್ಧದ ದೇಶದ ಹೋರಾಟದ ನಡುವೆ ಕಂಪನಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಾಣಿಜ್ಯ ಬ್ಯಾಂಕುಗಳು ಮತ್ತು ಬ್ಯಾಂಕೇತರ ಹಣಕಾಸು ಉದ್ಯಮಗಳಿಗೆ ಸಾಲ ಮರುಪಾವತಿಯನ್ನು 6 ತಿಂಗಳವರೆಗೆ ನಿಷೇಧಿಸಿತ್ತು. ಆದರೆ, ಈ ನಿಷೇಧದಿಂದ ಉದ್ಯಮಗಳಿಗೆ ಯಾವುದೇ ಉಪಯೋಗವಿಲ್ಲ. ಇಂತಹ ಸಂದರ್ಭದಲ್ಲಿ ಬಡ್ಡಿ ಸಾಲ ನೀಡುವುದು ಸರ್ಕಾರದ ಕೆಲಸವಲ್ಲ ಎಂದಿದ್ದಾರೆ.

ವೈರಸ್ ಹರಡುವಿಕೆಯನ್ನು ನಿಧಾನಗೊಳಿಸಲು ವಿಸ್ತೃತ ಲಾಕ್‌ಡೌನ್‌ನಿಂದ ಅನೇಕ ವ್ಯವಹಾರಗಳಿಗೆ ದೊಡ್ಡ ಹೊಡೆತ ಬಿದ್ದಿದೆ. ಕಳೆದ ನಾಲ್ಕು ತಿಂಗಳಲ್ಲಿ ಸುಮಾರು ಎರಡು ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ನಿರುದ್ಯೋಗದ ಬಗ್ಗೆ ಸತ್ಯವನ್ನು ದೇಶದಿಂದ ಮರೆಮಾಡಲು ಸಾಧ್ಯವಿಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.

2 ಕೋಟಿ ಕುಟುಂಬಗಳ ಭವಿಷ್ಯವು ಕತ್ತಲೆಯಲ್ಲಿದೆ. ಫೇಸ್‌ಬುಕ್‌ನಲ್ಲಿ ನಕಲಿ ಸುದ್ದಿ ಮತ್ತು ದ್ವೇಷವನ್ನು ಹರಡುವ ಮೂಲಕ ನಿರುದ್ಯೋಗ ಮತ್ತು ಆರ್ಥಿಕತೆಯ ವಿನಾಶದ ಬಗ್ಗೆ ಸತ್ಯವನ್ನು ದೇಶದಿಂದ ಮರೆಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕೆಲವು ಬಿಜೆಪಿ ನಾಯಕರ ಪೋಸ್ಟ್‌ಗಳಿಗೆ ದ್ವೇಷ ಭಾಷಣ ನಿಯಮಗಳನ್ನು ಅನ್ವಯಿಸುವುದನ್ನು ಹಿರಿಯ ಫೇಸ್‌ಬುಕ್ ಅಧಿಕಾರಿಗಳು ವಿರೋಧಿಸಿದ್ದಾರೆ ಎಂದು ವಾಲ್ ಸ್ಟ್ರೀಟ್ ಜರ್ನಲ್ (ಡಬ್ಲ್ಯುಎಸ್‌ಜೆ) ವರದಿಯನ್ನು ಅವರು ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಬಂಗಾಳದ ನಿರುದ್ಯೋಗ ದರ, ದೇಶದ ಒಟ್ಟು ನಿರುದ್ಯೋಗ ದರಕ್ಕಿಂತ ಉತ್ತಮ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...