Homeಕರ್ನಾಟಕಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

ಈ ನಡುವೆ ರಾಜ್ಯ ಸರ್ಕಾರದ ಆದೇಶದಂತೆ ಗಲಭೆಗೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ ಈವರೆಗೆ ಸಂಪೂರ್ಣ ಸ್ಪಷ್ಟತೆ ದೊರಕಿಲ್ಲ. ಅಲ್ಲದೆ, ರಾಜಕೀಯ ಪಕ್ಷಗಳು ಈ ಗಲಭೆಗೆ ಪರಸ್ಪರ ಹೊಣೆಗಾರರೆಂದು ಆರೋಪಿಸುತ್ತಾ ಕೆಸರೆರಚಾಟಕ್ಕೆ ಮುಂದಾಗಿವೆ.

- Advertisement -
- Advertisement -

ಪ್ರಸ್ತುತ ಮಾಧ್ಯಮಗಳಲ್ಲಿ ಬಹು ಚರ್ಚಿತವಾಗುತ್ತಿರುವುದು ಆಗಸ್ಟ್ 11 ರಂದು ಬೆಂಗಳೂರಿನ ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ. ಈ ಘಟನೆಯ ಕುರಿತು ಬರುತ್ತಿರುವ ವರದಿಗಳಲ್ಲಿ ಸತ್ಯಾಸತ್ಯತೆ ಏನಿದೆ ಎಂಬುದನ್ನು ಮಾಧ್ಯಮಗಳು ತಮ್ಮಂತೆ ತಾವೇ ಅಥವಾ ‘ಪೊಲೀಸ್ ವರದಿ’ಗಳನ್ನು ಉಲ್ಲೇಖಿಸಿ ಮಾಡುವ ‘ಸ್ಟೋರಿ’ಗಳಿಂದ ತಿಳಿಯುವುದು ಅಸಾಧ್ಯ.

ಅದರಲ್ಲೂ ಗಲಭೆಗಳು ನಡೆದರೆ ಹಬ್ಬವೆಂದು ಭಾವಿಸುವ ರೀತಿ ವರ್ತಿಸುವ, ಯಾರ ಮೇಲೋ ಗೂಬೆ ಕೂರಿಸುವ ಅಜೆಂಡಾ ಇಟ್ಟುಕೊಂಡಂತೆ ಕಾಣುವ ವರದಿಗಳಿಂದ ಏನು ತಿಳಿಯಲು ಸಾಧ್ಯ? ಹಾಗೆಂದು ‘ಸತ್ಯಶೋಧನೆ’ ಮಾಡುತ್ತೇವೆಂದು ಹೊರಡುವ ಕೆಲವು ಪ್ರಯತ್ನಗಳ ಹಿಂದೆಯೂ ಅಜೆಂಡಾ ಇರಲು ಸಾಧ್ಯವಿಲ್ಲವೇ? ಖಂಡಿತಾ ಸಾಧ್ಯ.

ಅದರಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಅಧ್ಯಯನ ಸಮಿತಿಗಳನ್ನು ರಚಿಸಿರುವಾಗ ಇಂತಹ ಪ್ರಶ್ನೆಗಳು ಇನ್ನಷ್ಟು ಏಳುತ್ತವೆ. ಹಾಗಾಗಿ ಸತ್ಯಶೋಧನೆಯು ಪಾರದರ್ಶಕವಾಗಿರುವುದು ಅತಿ ಮುಖ್ಯ. ಹೀಗಾಗಿ ವಿಶಿಷ್ಟ ರೀತಿಯ ಸತ್ಯಶೋಧನೆಯೊಂದನ್ನು ಬೆಂಗಳೂರಿನ ಹಲವು ನಾಗರಿಕ ಸಂಘಟನೆಗಳು ಮಾಡಲು ಯೋಜಿಸಿವೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಪ್ರದೇಶಗಳಲ್ಲಿ ಆಗಸ್ಟ್ 11 ರಂದು ರಾತ್ರಿ ನಡೆದ ಹಿಂಸೆ ಮತ್ತು ನಂತರದ ಘಟನಾವಳಿಗಳು ನಗರದ ಆ ಭಾಗವನ್ನು ಪ್ರಕ್ಷುಬ್ಧಗೊಳಿಸಿದೆ. ಅಲ್ಲದೆ ಈ ಗಲಭೆ ಸಂದರ್ಭದಲ್ಲಿ ನಡೆಸಲಾದ ಗೋಲಿಬಾರ್‌ನಲ್ಲಿ 4 ಜನ ಯುವಕರು ಬಲಿಯಾಗಿದ್ದಾರೆ. ಇನ್ನೂ ಹಲವರು ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಕಷ್ಟು ಆಸ್ತಿಪಾಸ್ತಿಗಳು ನಷ್ಟವಾಗಿದೆ. ನೂರಾರು ಜನರನ್ನು ಬಂಧಿಸಲಾಗಿವೆ;

ಡಿ.ಜೆ. ಹಳ್ಳಿ ಗಲಭೆ: ಹಿಂಸೆಗಿಳಿದವರು ಕೂಡಾ ಮಾಡಿದ್ದು ಪ್ರವಾದಿ ನಿಂದನೆಯೇ ಎಂದ ಮುಸ್ಲಿಂ ಸಂಘಟನೆಗಳು

ಅವರಲ್ಲಿ ಅಮಾಯಕರ ಸಂಖ್ಯೆ ಹೆಚ್ಚಿದೆಯೆಂಬ ಆರೋಪವೂ ಕೇಳಿ ಬಂದಿದೆ. ಹಾಗೆಯೇ ಸದರಿ ಗಲಭೆಯ ಹಿಂದೆ ಎಸ್‌ಡಿಪಿಐನ ಕೈವಾಡ ಇದೆಯೆಂದು ಬಿಜೆಪಿ ನಾಯಕರು ಮತ್ತು ಮಾಧ್ಯಮಗಳು ಆರೋಪಿಸುತ್ತಿವೆ.

ಈ ಗಲಭೆಗೆ ಮೂಲ ಕಾರಣ ನವೀನ್ ಎಂಬ ವ್ಯಕ್ತಿ ಮಹಮ್ಮದ್ ಪೈಗಂಬರ್ ವಿರುದ್ಧ ಫೇಸ್ ಬುಕ್ ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದು ಎಂದು ಹೇಳಲಾಗಿದೆ. ಆದರೆ, ಅದಕ್ಕೂ ಹಿಂದೆ ಬೇರೆ ಹುನ್ನಾರಗಳಿದ್ದವೇ ಎಂಬ ಪ್ರಶ್ನೆಗಳನ್ನು ಎತ್ತಲಾಗಿದೆ.

ಈ ನಡುವೆ ರಾಜ್ಯ ಸರ್ಕಾರದ ಆದೇಶದಂತೆ ಗಲಭೆಗೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ ಈವರೆಗೆ ಸಂಪೂರ್ಣ ಸ್ಪಷ್ಟತೆ ದೊರಕಿಲ್ಲ. ಅಲ್ಲದೆ, ರಾಜಕೀಯ ಪಕ್ಷಗಳು ಈ ಗಲಭೆಗೆ ಪರಸ್ಪರ ಹೊಣೆಗಾರರೆಂದು ಆರೋಪಿಸುತ್ತಾ ಕೆಸರೆರಚಾಟಕ್ಕೆ ಮುಂದಾಗಿವೆ.

ಡಿಜೆ ಹಳ್ಳಿ ಆಸುಪಾಸಿನ ಪ್ರದೇಶಗಳು ಸಾಮಾನ್ಯವಾಗಿ ಆರ್ಥಿಕ ಮತ್ತು ಸಾಮಾಜಿಕ ದುರ್ಬಲತೆಯಿಂದ ಕೂಡಿರುವ ಸಮುದಾಯದ ಜನರೇ ಇರುವ ಪ್ರದೇಶ. ಈ ಘಟನೆಯಿಂದ ಹಲವು ಬಡವರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಇಡೀ ವಿದ್ಯಮಾನದಲ್ಲಿ ಮಾಧ್ಯಮಗಳು ಯಾವ ಪಾತ್ರವನ್ನು ವಹಿಸಿದ್ದವು ಎಂಬುದು ಶೋಧನೆಗೊಳಗಾಗಬೇಕಿರುವ ಒಂದು ಆಯಾಮ. ಮಾಧ್ಯಮಗಳು ವರದಿ ಮಾಡಿದವೇ ಅಥವಾ ಪಾತ್ರ ವಹಿಸಿದವೇ?

ಇಂತಹ ಹತ್ತು ಹಲವು ಪ್ರಶ್ನೆಗಳನ್ನಿಟ್ಟುಕೊಂಡು ಸತ್ಯದ ಶೋಧನೆಗೆ ಹೊರಟಿರುವುದಲ್ಲದೇ, ಇಡೀ ಪ್ರಕ್ರಿಯೆಯನ್ನೂ ಪಾರದರ್ಶಕವಾಗಿ ನಡೆಸುತ್ತೇವೆಂದು ತಂಡವು ಹೇಳಿರುವುದು ವಿಶಿಷ್ಟವಾದ ಬೆಳವಣಿಗೆಯಾಗಿದೆ. ಸತ್ಯಶೋಧನೆಯನ್ನೂ ಒರೆಗೆ ಹಚ್ಚುತ್ತಾ, ಬೆಳವಣಿಗೆಗಳನ್ನು ನಾನುಗೌರಿ.ಕಾಂ ವರದಿ ಮಾಡಲಿದೆ.

ಅವರು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯ ಸಾರಾಂಶವು ಈ ಕೆಳಗಿನಂತಿದೆ.

ಸಂವಿಧಾನದ ಆಶಯಗಳನ್ನು ಎಲ್ಲಾ ಜನ ಸಮುದಾಯಗಳಿಗೂ ಖಾತ್ರಿಪಡಿಸುವ ಮತ್ತು ಶಾಂತಿ ಸೌಹಾರ್ದತೆಯನ್ನು ಪುನರ್ ಸ್ಥಾಪಿಸುವ ಉದ್ದೇಶಗಳೊಂದಿಗೆ ಈ ಸತ್ಯಶೋಧನಾ ಕೆಲಸವನ್ನು ಆರಂಭಿಸಲಾಗಿದೆ. ಈ ಸತ್ಯಶೋಧನಾ ತಂಡವು ಗಲಭೆ ನಡೆದ ಪ್ರದೇಶಗಳ ಎಲ್ಲಾ ಸಮುದಾಯಗಳ ನಿವಾಸಿಗಳನ್ನು, ತೊಂದರೆಗೆ ಒಳಗಾದ ಕುಟುಂಬದ ಸದಸ್ಯರನ್ನು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು, ಹಿಂಸೆಯ ಸಂದರ್ಭದಲ್ಲಿ ಗಾಯಗೊಂಡ ಮತ್ತು ಇತರ ಮಾಧ್ಯಮ ಪ್ರತಿನಿಧಿಗಳನ್ನು ಸೇರಿದಂತೆ ಹಲವರನ್ನು ಭೇಟಿ ಮಾಡಲಿದೆ.

ಈ ಸಂದರ್ಭದಲ್ಲಿ ತಂಡವು ಸರಿಯಾದ ಮಾಹಿತಿಯನ್ನು ಸಂಗ್ರಹಿಸಲಿದೆ. ಜೊತೆಗೆ, ದಿಕ್ಸೂಚಿ ಅಂಶಗಳನ್ನು ರೂಪಿಸಿಕೊಳ್ಳಲಾಗಿದ್ದು, ಅವುಗಳಿಗೆ ಬದ್ಧವಾಗಿದ್ದುಕೊಂಡು ಈ ಸತ್ಯಶೋಧನೆಯು ನಡೆಯಲಿದೆ. ಈ ಮೂಲಕ ಘಟನೆಗೆ ಸಂಬಂಧಿಸಿದಂತೆ ನೈಜ ಅಂಶಗಳನ್ನು ಬಯಲಿಗೆ ಎಳೆಯಲಾಗುವುದು.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷರಾದ ನೀನಾ ನಾಯಕ್, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ವಿ. ನಾಗರಾಜ್, ವಕೀಲರಾದ ನಿಯಾಜ್ ಮೂಸ, ಪತ್ರಕರ್ತರು ಹಾಗೂ ಪಾಲಿಸಿ ಸಂಶೋಧಕರಾದ ಸಿಂಥಿಯಾ ಸ್ಪೀಫೆನ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆಯ ಗಾಂಧಿಮಥಿ ಸೇರಿದಂತೆ ಅನೇಕ ಸಂಪನ್ಮೂಲ ವ್ಯಕ್ತಿಗಳು ಈ ಸಮಿತಿಯ ಭಾಗವಾಗಿದ್ದಾರೆ.


ಇದನ್ನೂ ಓದಿ: ಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...