Homeಕರ್ನಾಟಕಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

ಈ ನಡುವೆ ರಾಜ್ಯ ಸರ್ಕಾರದ ಆದೇಶದಂತೆ ಗಲಭೆಗೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ ಈವರೆಗೆ ಸಂಪೂರ್ಣ ಸ್ಪಷ್ಟತೆ ದೊರಕಿಲ್ಲ. ಅಲ್ಲದೆ, ರಾಜಕೀಯ ಪಕ್ಷಗಳು ಈ ಗಲಭೆಗೆ ಪರಸ್ಪರ ಹೊಣೆಗಾರರೆಂದು ಆರೋಪಿಸುತ್ತಾ ಕೆಸರೆರಚಾಟಕ್ಕೆ ಮುಂದಾಗಿವೆ.

- Advertisement -
- Advertisement -

ಪ್ರಸ್ತುತ ಮಾಧ್ಯಮಗಳಲ್ಲಿ ಬಹು ಚರ್ಚಿತವಾಗುತ್ತಿರುವುದು ಆಗಸ್ಟ್ 11 ರಂದು ಬೆಂಗಳೂರಿನ ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ. ಈ ಘಟನೆಯ ಕುರಿತು ಬರುತ್ತಿರುವ ವರದಿಗಳಲ್ಲಿ ಸತ್ಯಾಸತ್ಯತೆ ಏನಿದೆ ಎಂಬುದನ್ನು ಮಾಧ್ಯಮಗಳು ತಮ್ಮಂತೆ ತಾವೇ ಅಥವಾ ‘ಪೊಲೀಸ್ ವರದಿ’ಗಳನ್ನು ಉಲ್ಲೇಖಿಸಿ ಮಾಡುವ ‘ಸ್ಟೋರಿ’ಗಳಿಂದ ತಿಳಿಯುವುದು ಅಸಾಧ್ಯ.

ಅದರಲ್ಲೂ ಗಲಭೆಗಳು ನಡೆದರೆ ಹಬ್ಬವೆಂದು ಭಾವಿಸುವ ರೀತಿ ವರ್ತಿಸುವ, ಯಾರ ಮೇಲೋ ಗೂಬೆ ಕೂರಿಸುವ ಅಜೆಂಡಾ ಇಟ್ಟುಕೊಂಡಂತೆ ಕಾಣುವ ವರದಿಗಳಿಂದ ಏನು ತಿಳಿಯಲು ಸಾಧ್ಯ? ಹಾಗೆಂದು ‘ಸತ್ಯಶೋಧನೆ’ ಮಾಡುತ್ತೇವೆಂದು ಹೊರಡುವ ಕೆಲವು ಪ್ರಯತ್ನಗಳ ಹಿಂದೆಯೂ ಅಜೆಂಡಾ ಇರಲು ಸಾಧ್ಯವಿಲ್ಲವೇ? ಖಂಡಿತಾ ಸಾಧ್ಯ.

ಅದರಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಅಧ್ಯಯನ ಸಮಿತಿಗಳನ್ನು ರಚಿಸಿರುವಾಗ ಇಂತಹ ಪ್ರಶ್ನೆಗಳು ಇನ್ನಷ್ಟು ಏಳುತ್ತವೆ. ಹಾಗಾಗಿ ಸತ್ಯಶೋಧನೆಯು ಪಾರದರ್ಶಕವಾಗಿರುವುದು ಅತಿ ಮುಖ್ಯ. ಹೀಗಾಗಿ ವಿಶಿಷ್ಟ ರೀತಿಯ ಸತ್ಯಶೋಧನೆಯೊಂದನ್ನು ಬೆಂಗಳೂರಿನ ಹಲವು ನಾಗರಿಕ ಸಂಘಟನೆಗಳು ಮಾಡಲು ಯೋಜಿಸಿವೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಪ್ರದೇಶಗಳಲ್ಲಿ ಆಗಸ್ಟ್ 11 ರಂದು ರಾತ್ರಿ ನಡೆದ ಹಿಂಸೆ ಮತ್ತು ನಂತರದ ಘಟನಾವಳಿಗಳು ನಗರದ ಆ ಭಾಗವನ್ನು ಪ್ರಕ್ಷುಬ್ಧಗೊಳಿಸಿದೆ. ಅಲ್ಲದೆ ಈ ಗಲಭೆ ಸಂದರ್ಭದಲ್ಲಿ ನಡೆಸಲಾದ ಗೋಲಿಬಾರ್‌ನಲ್ಲಿ 4 ಜನ ಯುವಕರು ಬಲಿಯಾಗಿದ್ದಾರೆ. ಇನ್ನೂ ಹಲವರು ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಕಷ್ಟು ಆಸ್ತಿಪಾಸ್ತಿಗಳು ನಷ್ಟವಾಗಿದೆ. ನೂರಾರು ಜನರನ್ನು ಬಂಧಿಸಲಾಗಿವೆ;

ಡಿ.ಜೆ. ಹಳ್ಳಿ ಗಲಭೆ: ಹಿಂಸೆಗಿಳಿದವರು ಕೂಡಾ ಮಾಡಿದ್ದು ಪ್ರವಾದಿ ನಿಂದನೆಯೇ ಎಂದ ಮುಸ್ಲಿಂ ಸಂಘಟನೆಗಳು

ಅವರಲ್ಲಿ ಅಮಾಯಕರ ಸಂಖ್ಯೆ ಹೆಚ್ಚಿದೆಯೆಂಬ ಆರೋಪವೂ ಕೇಳಿ ಬಂದಿದೆ. ಹಾಗೆಯೇ ಸದರಿ ಗಲಭೆಯ ಹಿಂದೆ ಎಸ್‌ಡಿಪಿಐನ ಕೈವಾಡ ಇದೆಯೆಂದು ಬಿಜೆಪಿ ನಾಯಕರು ಮತ್ತು ಮಾಧ್ಯಮಗಳು ಆರೋಪಿಸುತ್ತಿವೆ.

ಈ ಗಲಭೆಗೆ ಮೂಲ ಕಾರಣ ನವೀನ್ ಎಂಬ ವ್ಯಕ್ತಿ ಮಹಮ್ಮದ್ ಪೈಗಂಬರ್ ವಿರುದ್ಧ ಫೇಸ್ ಬುಕ್ ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದು ಎಂದು ಹೇಳಲಾಗಿದೆ. ಆದರೆ, ಅದಕ್ಕೂ ಹಿಂದೆ ಬೇರೆ ಹುನ್ನಾರಗಳಿದ್ದವೇ ಎಂಬ ಪ್ರಶ್ನೆಗಳನ್ನು ಎತ್ತಲಾಗಿದೆ.

ಈ ನಡುವೆ ರಾಜ್ಯ ಸರ್ಕಾರದ ಆದೇಶದಂತೆ ಗಲಭೆಗೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ ಈವರೆಗೆ ಸಂಪೂರ್ಣ ಸ್ಪಷ್ಟತೆ ದೊರಕಿಲ್ಲ. ಅಲ್ಲದೆ, ರಾಜಕೀಯ ಪಕ್ಷಗಳು ಈ ಗಲಭೆಗೆ ಪರಸ್ಪರ ಹೊಣೆಗಾರರೆಂದು ಆರೋಪಿಸುತ್ತಾ ಕೆಸರೆರಚಾಟಕ್ಕೆ ಮುಂದಾಗಿವೆ.

ಡಿಜೆ ಹಳ್ಳಿ ಆಸುಪಾಸಿನ ಪ್ರದೇಶಗಳು ಸಾಮಾನ್ಯವಾಗಿ ಆರ್ಥಿಕ ಮತ್ತು ಸಾಮಾಜಿಕ ದುರ್ಬಲತೆಯಿಂದ ಕೂಡಿರುವ ಸಮುದಾಯದ ಜನರೇ ಇರುವ ಪ್ರದೇಶ. ಈ ಘಟನೆಯಿಂದ ಹಲವು ಬಡವರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಇಡೀ ವಿದ್ಯಮಾನದಲ್ಲಿ ಮಾಧ್ಯಮಗಳು ಯಾವ ಪಾತ್ರವನ್ನು ವಹಿಸಿದ್ದವು ಎಂಬುದು ಶೋಧನೆಗೊಳಗಾಗಬೇಕಿರುವ ಒಂದು ಆಯಾಮ. ಮಾಧ್ಯಮಗಳು ವರದಿ ಮಾಡಿದವೇ ಅಥವಾ ಪಾತ್ರ ವಹಿಸಿದವೇ?

ಇಂತಹ ಹತ್ತು ಹಲವು ಪ್ರಶ್ನೆಗಳನ್ನಿಟ್ಟುಕೊಂಡು ಸತ್ಯದ ಶೋಧನೆಗೆ ಹೊರಟಿರುವುದಲ್ಲದೇ, ಇಡೀ ಪ್ರಕ್ರಿಯೆಯನ್ನೂ ಪಾರದರ್ಶಕವಾಗಿ ನಡೆಸುತ್ತೇವೆಂದು ತಂಡವು ಹೇಳಿರುವುದು ವಿಶಿಷ್ಟವಾದ ಬೆಳವಣಿಗೆಯಾಗಿದೆ. ಸತ್ಯಶೋಧನೆಯನ್ನೂ ಒರೆಗೆ ಹಚ್ಚುತ್ತಾ, ಬೆಳವಣಿಗೆಗಳನ್ನು ನಾನುಗೌರಿ.ಕಾಂ ವರದಿ ಮಾಡಲಿದೆ.

ಅವರು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯ ಸಾರಾಂಶವು ಈ ಕೆಳಗಿನಂತಿದೆ.

ಸಂವಿಧಾನದ ಆಶಯಗಳನ್ನು ಎಲ್ಲಾ ಜನ ಸಮುದಾಯಗಳಿಗೂ ಖಾತ್ರಿಪಡಿಸುವ ಮತ್ತು ಶಾಂತಿ ಸೌಹಾರ್ದತೆಯನ್ನು ಪುನರ್ ಸ್ಥಾಪಿಸುವ ಉದ್ದೇಶಗಳೊಂದಿಗೆ ಈ ಸತ್ಯಶೋಧನಾ ಕೆಲಸವನ್ನು ಆರಂಭಿಸಲಾಗಿದೆ. ಈ ಸತ್ಯಶೋಧನಾ ತಂಡವು ಗಲಭೆ ನಡೆದ ಪ್ರದೇಶಗಳ ಎಲ್ಲಾ ಸಮುದಾಯಗಳ ನಿವಾಸಿಗಳನ್ನು, ತೊಂದರೆಗೆ ಒಳಗಾದ ಕುಟುಂಬದ ಸದಸ್ಯರನ್ನು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು, ಹಿಂಸೆಯ ಸಂದರ್ಭದಲ್ಲಿ ಗಾಯಗೊಂಡ ಮತ್ತು ಇತರ ಮಾಧ್ಯಮ ಪ್ರತಿನಿಧಿಗಳನ್ನು ಸೇರಿದಂತೆ ಹಲವರನ್ನು ಭೇಟಿ ಮಾಡಲಿದೆ.

ಈ ಸಂದರ್ಭದಲ್ಲಿ ತಂಡವು ಸರಿಯಾದ ಮಾಹಿತಿಯನ್ನು ಸಂಗ್ರಹಿಸಲಿದೆ. ಜೊತೆಗೆ, ದಿಕ್ಸೂಚಿ ಅಂಶಗಳನ್ನು ರೂಪಿಸಿಕೊಳ್ಳಲಾಗಿದ್ದು, ಅವುಗಳಿಗೆ ಬದ್ಧವಾಗಿದ್ದುಕೊಂಡು ಈ ಸತ್ಯಶೋಧನೆಯು ನಡೆಯಲಿದೆ. ಈ ಮೂಲಕ ಘಟನೆಗೆ ಸಂಬಂಧಿಸಿದಂತೆ ನೈಜ ಅಂಶಗಳನ್ನು ಬಯಲಿಗೆ ಎಳೆಯಲಾಗುವುದು.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷರಾದ ನೀನಾ ನಾಯಕ್, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ವಿ. ನಾಗರಾಜ್, ವಕೀಲರಾದ ನಿಯಾಜ್ ಮೂಸ, ಪತ್ರಕರ್ತರು ಹಾಗೂ ಪಾಲಿಸಿ ಸಂಶೋಧಕರಾದ ಸಿಂಥಿಯಾ ಸ್ಪೀಫೆನ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆಯ ಗಾಂಧಿಮಥಿ ಸೇರಿದಂತೆ ಅನೇಕ ಸಂಪನ್ಮೂಲ ವ್ಯಕ್ತಿಗಳು ಈ ಸಮಿತಿಯ ಭಾಗವಾಗಿದ್ದಾರೆ.


ಇದನ್ನೂ ಓದಿ: ಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...