Homeಕರ್ನಾಟಕಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

ಈ ನಡುವೆ ರಾಜ್ಯ ಸರ್ಕಾರದ ಆದೇಶದಂತೆ ಗಲಭೆಗೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ ಈವರೆಗೆ ಸಂಪೂರ್ಣ ಸ್ಪಷ್ಟತೆ ದೊರಕಿಲ್ಲ. ಅಲ್ಲದೆ, ರಾಜಕೀಯ ಪಕ್ಷಗಳು ಈ ಗಲಭೆಗೆ ಪರಸ್ಪರ ಹೊಣೆಗಾರರೆಂದು ಆರೋಪಿಸುತ್ತಾ ಕೆಸರೆರಚಾಟಕ್ಕೆ ಮುಂದಾಗಿವೆ.

- Advertisement -
- Advertisement -

ಪ್ರಸ್ತುತ ಮಾಧ್ಯಮಗಳಲ್ಲಿ ಬಹು ಚರ್ಚಿತವಾಗುತ್ತಿರುವುದು ಆಗಸ್ಟ್ 11 ರಂದು ಬೆಂಗಳೂರಿನ ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ. ಈ ಘಟನೆಯ ಕುರಿತು ಬರುತ್ತಿರುವ ವರದಿಗಳಲ್ಲಿ ಸತ್ಯಾಸತ್ಯತೆ ಏನಿದೆ ಎಂಬುದನ್ನು ಮಾಧ್ಯಮಗಳು ತಮ್ಮಂತೆ ತಾವೇ ಅಥವಾ ‘ಪೊಲೀಸ್ ವರದಿ’ಗಳನ್ನು ಉಲ್ಲೇಖಿಸಿ ಮಾಡುವ ‘ಸ್ಟೋರಿ’ಗಳಿಂದ ತಿಳಿಯುವುದು ಅಸಾಧ್ಯ.

ಅದರಲ್ಲೂ ಗಲಭೆಗಳು ನಡೆದರೆ ಹಬ್ಬವೆಂದು ಭಾವಿಸುವ ರೀತಿ ವರ್ತಿಸುವ, ಯಾರ ಮೇಲೋ ಗೂಬೆ ಕೂರಿಸುವ ಅಜೆಂಡಾ ಇಟ್ಟುಕೊಂಡಂತೆ ಕಾಣುವ ವರದಿಗಳಿಂದ ಏನು ತಿಳಿಯಲು ಸಾಧ್ಯ? ಹಾಗೆಂದು ‘ಸತ್ಯಶೋಧನೆ’ ಮಾಡುತ್ತೇವೆಂದು ಹೊರಡುವ ಕೆಲವು ಪ್ರಯತ್ನಗಳ ಹಿಂದೆಯೂ ಅಜೆಂಡಾ ಇರಲು ಸಾಧ್ಯವಿಲ್ಲವೇ? ಖಂಡಿತಾ ಸಾಧ್ಯ.

ಅದರಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಅಧ್ಯಯನ ಸಮಿತಿಗಳನ್ನು ರಚಿಸಿರುವಾಗ ಇಂತಹ ಪ್ರಶ್ನೆಗಳು ಇನ್ನಷ್ಟು ಏಳುತ್ತವೆ. ಹಾಗಾಗಿ ಸತ್ಯಶೋಧನೆಯು ಪಾರದರ್ಶಕವಾಗಿರುವುದು ಅತಿ ಮುಖ್ಯ. ಹೀಗಾಗಿ ವಿಶಿಷ್ಟ ರೀತಿಯ ಸತ್ಯಶೋಧನೆಯೊಂದನ್ನು ಬೆಂಗಳೂರಿನ ಹಲವು ನಾಗರಿಕ ಸಂಘಟನೆಗಳು ಮಾಡಲು ಯೋಜಿಸಿವೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಪ್ರದೇಶಗಳಲ್ಲಿ ಆಗಸ್ಟ್ 11 ರಂದು ರಾತ್ರಿ ನಡೆದ ಹಿಂಸೆ ಮತ್ತು ನಂತರದ ಘಟನಾವಳಿಗಳು ನಗರದ ಆ ಭಾಗವನ್ನು ಪ್ರಕ್ಷುಬ್ಧಗೊಳಿಸಿದೆ. ಅಲ್ಲದೆ ಈ ಗಲಭೆ ಸಂದರ್ಭದಲ್ಲಿ ನಡೆಸಲಾದ ಗೋಲಿಬಾರ್‌ನಲ್ಲಿ 4 ಜನ ಯುವಕರು ಬಲಿಯಾಗಿದ್ದಾರೆ. ಇನ್ನೂ ಹಲವರು ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಕಷ್ಟು ಆಸ್ತಿಪಾಸ್ತಿಗಳು ನಷ್ಟವಾಗಿದೆ. ನೂರಾರು ಜನರನ್ನು ಬಂಧಿಸಲಾಗಿವೆ;

ಡಿ.ಜೆ. ಹಳ್ಳಿ ಗಲಭೆ: ಹಿಂಸೆಗಿಳಿದವರು ಕೂಡಾ ಮಾಡಿದ್ದು ಪ್ರವಾದಿ ನಿಂದನೆಯೇ ಎಂದ ಮುಸ್ಲಿಂ ಸಂಘಟನೆಗಳು

ಅವರಲ್ಲಿ ಅಮಾಯಕರ ಸಂಖ್ಯೆ ಹೆಚ್ಚಿದೆಯೆಂಬ ಆರೋಪವೂ ಕೇಳಿ ಬಂದಿದೆ. ಹಾಗೆಯೇ ಸದರಿ ಗಲಭೆಯ ಹಿಂದೆ ಎಸ್‌ಡಿಪಿಐನ ಕೈವಾಡ ಇದೆಯೆಂದು ಬಿಜೆಪಿ ನಾಯಕರು ಮತ್ತು ಮಾಧ್ಯಮಗಳು ಆರೋಪಿಸುತ್ತಿವೆ.

ಈ ಗಲಭೆಗೆ ಮೂಲ ಕಾರಣ ನವೀನ್ ಎಂಬ ವ್ಯಕ್ತಿ ಮಹಮ್ಮದ್ ಪೈಗಂಬರ್ ವಿರುದ್ಧ ಫೇಸ್ ಬುಕ್ ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದು ಎಂದು ಹೇಳಲಾಗಿದೆ. ಆದರೆ, ಅದಕ್ಕೂ ಹಿಂದೆ ಬೇರೆ ಹುನ್ನಾರಗಳಿದ್ದವೇ ಎಂಬ ಪ್ರಶ್ನೆಗಳನ್ನು ಎತ್ತಲಾಗಿದೆ.

ಈ ನಡುವೆ ರಾಜ್ಯ ಸರ್ಕಾರದ ಆದೇಶದಂತೆ ಗಲಭೆಗೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ ಈವರೆಗೆ ಸಂಪೂರ್ಣ ಸ್ಪಷ್ಟತೆ ದೊರಕಿಲ್ಲ. ಅಲ್ಲದೆ, ರಾಜಕೀಯ ಪಕ್ಷಗಳು ಈ ಗಲಭೆಗೆ ಪರಸ್ಪರ ಹೊಣೆಗಾರರೆಂದು ಆರೋಪಿಸುತ್ತಾ ಕೆಸರೆರಚಾಟಕ್ಕೆ ಮುಂದಾಗಿವೆ.

ಡಿಜೆ ಹಳ್ಳಿ ಆಸುಪಾಸಿನ ಪ್ರದೇಶಗಳು ಸಾಮಾನ್ಯವಾಗಿ ಆರ್ಥಿಕ ಮತ್ತು ಸಾಮಾಜಿಕ ದುರ್ಬಲತೆಯಿಂದ ಕೂಡಿರುವ ಸಮುದಾಯದ ಜನರೇ ಇರುವ ಪ್ರದೇಶ. ಈ ಘಟನೆಯಿಂದ ಹಲವು ಬಡವರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಇಡೀ ವಿದ್ಯಮಾನದಲ್ಲಿ ಮಾಧ್ಯಮಗಳು ಯಾವ ಪಾತ್ರವನ್ನು ವಹಿಸಿದ್ದವು ಎಂಬುದು ಶೋಧನೆಗೊಳಗಾಗಬೇಕಿರುವ ಒಂದು ಆಯಾಮ. ಮಾಧ್ಯಮಗಳು ವರದಿ ಮಾಡಿದವೇ ಅಥವಾ ಪಾತ್ರ ವಹಿಸಿದವೇ?

ಇಂತಹ ಹತ್ತು ಹಲವು ಪ್ರಶ್ನೆಗಳನ್ನಿಟ್ಟುಕೊಂಡು ಸತ್ಯದ ಶೋಧನೆಗೆ ಹೊರಟಿರುವುದಲ್ಲದೇ, ಇಡೀ ಪ್ರಕ್ರಿಯೆಯನ್ನೂ ಪಾರದರ್ಶಕವಾಗಿ ನಡೆಸುತ್ತೇವೆಂದು ತಂಡವು ಹೇಳಿರುವುದು ವಿಶಿಷ್ಟವಾದ ಬೆಳವಣಿಗೆಯಾಗಿದೆ. ಸತ್ಯಶೋಧನೆಯನ್ನೂ ಒರೆಗೆ ಹಚ್ಚುತ್ತಾ, ಬೆಳವಣಿಗೆಗಳನ್ನು ನಾನುಗೌರಿ.ಕಾಂ ವರದಿ ಮಾಡಲಿದೆ.

ಅವರು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯ ಸಾರಾಂಶವು ಈ ಕೆಳಗಿನಂತಿದೆ.

ಸಂವಿಧಾನದ ಆಶಯಗಳನ್ನು ಎಲ್ಲಾ ಜನ ಸಮುದಾಯಗಳಿಗೂ ಖಾತ್ರಿಪಡಿಸುವ ಮತ್ತು ಶಾಂತಿ ಸೌಹಾರ್ದತೆಯನ್ನು ಪುನರ್ ಸ್ಥಾಪಿಸುವ ಉದ್ದೇಶಗಳೊಂದಿಗೆ ಈ ಸತ್ಯಶೋಧನಾ ಕೆಲಸವನ್ನು ಆರಂಭಿಸಲಾಗಿದೆ. ಈ ಸತ್ಯಶೋಧನಾ ತಂಡವು ಗಲಭೆ ನಡೆದ ಪ್ರದೇಶಗಳ ಎಲ್ಲಾ ಸಮುದಾಯಗಳ ನಿವಾಸಿಗಳನ್ನು, ತೊಂದರೆಗೆ ಒಳಗಾದ ಕುಟುಂಬದ ಸದಸ್ಯರನ್ನು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು, ಹಿಂಸೆಯ ಸಂದರ್ಭದಲ್ಲಿ ಗಾಯಗೊಂಡ ಮತ್ತು ಇತರ ಮಾಧ್ಯಮ ಪ್ರತಿನಿಧಿಗಳನ್ನು ಸೇರಿದಂತೆ ಹಲವರನ್ನು ಭೇಟಿ ಮಾಡಲಿದೆ.

ಈ ಸಂದರ್ಭದಲ್ಲಿ ತಂಡವು ಸರಿಯಾದ ಮಾಹಿತಿಯನ್ನು ಸಂಗ್ರಹಿಸಲಿದೆ. ಜೊತೆಗೆ, ದಿಕ್ಸೂಚಿ ಅಂಶಗಳನ್ನು ರೂಪಿಸಿಕೊಳ್ಳಲಾಗಿದ್ದು, ಅವುಗಳಿಗೆ ಬದ್ಧವಾಗಿದ್ದುಕೊಂಡು ಈ ಸತ್ಯಶೋಧನೆಯು ನಡೆಯಲಿದೆ. ಈ ಮೂಲಕ ಘಟನೆಗೆ ಸಂಬಂಧಿಸಿದಂತೆ ನೈಜ ಅಂಶಗಳನ್ನು ಬಯಲಿಗೆ ಎಳೆಯಲಾಗುವುದು.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷರಾದ ನೀನಾ ನಾಯಕ್, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ವಿ. ನಾಗರಾಜ್, ವಕೀಲರಾದ ನಿಯಾಜ್ ಮೂಸ, ಪತ್ರಕರ್ತರು ಹಾಗೂ ಪಾಲಿಸಿ ಸಂಶೋಧಕರಾದ ಸಿಂಥಿಯಾ ಸ್ಪೀಫೆನ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆಯ ಗಾಂಧಿಮಥಿ ಸೇರಿದಂತೆ ಅನೇಕ ಸಂಪನ್ಮೂಲ ವ್ಯಕ್ತಿಗಳು ಈ ಸಮಿತಿಯ ಭಾಗವಾಗಿದ್ದಾರೆ.


ಇದನ್ನೂ ಓದಿ: ಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...