HomeಚಳವಳಿKRS ಬುಡದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಸಿಎಂ ಎದುರು ಹೋರಾಟ: ಮುಖಂಡರ ಬಂಧನ

KRS ಬುಡದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಸಿಎಂ ಎದುರು ಹೋರಾಟ: ಮುಖಂಡರ ಬಂಧನ

ಕೆಆರ್‌ಎಸ್ ನಿರ್ಮಾಣವಾಗಿ ಇನ್ನೂ ಒಂದು ಶತಮಾನವೂ ಕಳೆದಿಲ್ಲ ಆದರೀಗ ಅದು ಶಿಥಿಲೀಕರಣದ ಸುಳಿಗೆ ಸಿಲುಕುತ್ತಿದೆ. ಜಲಾಶಯ ನಿಂತಿರುವುದೇ ಸುತ್ತ-ಮುತ್ತಲ ಬೆಟ್ಟಗಳ ಆಧಾರದಿಂದ. ಅದೇ ಬೆಟ್ಟಗಳ ಸರಣಿಯ ಇನ್ನೊಂದು ಕಡೆ ಗುಡ್ಡ ಕರಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ.

- Advertisement -
- Advertisement -

KRS ಬುಡದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಒತ್ತಾಯಿಸಿ ರೈತಸಂಘ, ದಲಿತ ಸಂಘರ್ಷ ಸಮಿತಿ, ಸ್ವರಾಜ್ ಇಂಡಿಯಾ ಪಕ್ಷ ಹಾಗೂ ಜನಾಂದೋಲನಗಳ ಮಹಾಮೈತ್ರಿ ಸಂಘಟನೆಗಳು ಹೋರಾಟಕ್ಕಿಳಿದಿವೆ. ಇಂದು ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಿಗೆ ಬಾಗಿನ ಅರ್ಪಿಸಲು ಆಗಮಿಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕಪ್ಪು ಬಾವುಟ ತೋರಿಸಲು ರೈತರು ಸಜ್ಜಾಗಿದ್ದಾರೆ.

ಜಲಾಶಯ
ಕೃಪೆ: ಸ್ಟಾರ್ ಆಫ್ ಮೈಸೂರು

ಬುಧವಾರ ನಡೆದ ಜಂಟಿ ಸುದ್ಧಿಗೋಷ್ಟಿಯಲ್ಲಿ ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹಾಗೂ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಮಾತನಾಡಿ, ಭೂ ಸುಧಾರಣೆ, ಎಪಿಎಂಸಿ, ಕಾರ್ಮಿಕ, ವಿದ್ಯುತ್ ಕಾಯ್ದೆಗಳಿಗೆ ತಿದ್ದುಪಡಿ ಮಾಡುತ್ತಿರುವುದನ್ನು ವಿರೋಧಿಸಿ, ಮತ್ತು ಕೆಆರ್‌ಎಸ್‌ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ಶಾಶ್ವತ ನಿಷೇ‍ಧಕ್ಕೆ ಮತ್ತು ನಾಲ್ವಡಿಯವರ ಏಕ ಪ್ರತಿಮೆಗೆ ಒತ್ತಾಯಿಸಿ ಸಿಎಂಗೆ ಕಪ್ಪ ಬಾವುಟ ಪ್ರದರ್ಶಿಸಲಾಗುವುದು ಎಂದು ಹೇಳಿದ್ದರು.

ಇಂದು ಮಧ್ಯಾಹ್ನದ ವೇಳೆಗೆ ಸಿಎಂ ಕೆಆರ್‌ಎಸ್‌ಗೆ ಆಗಮಿಸಲಿದ್ದು ಬಾಗಿನ ಅರ್ಪಿಸಲಿದ್ದಾರೆ. ಹಾಗಾಗಿ ಈಗಾಗಲೇ ಸ್ಥಳಕ್ಕೆ ಆಗಮಿಸುತ್ತಿರುವ ನೂರಾರು ಪ್ರತಿಭಟನಾಕಾರರನ್ನು ಜಿಲ್ಲಾ ಪೋಲೀಸರು ತಡೆದಿದ್ದಾರೆ. ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಮತ್ತು ರವೀಂದ್ರ ಅವರನ್ನು ಈಗಾಗಲೆ ಬಂಧಿಸಿದ್ದಾರೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ನಾನುಗೌರಿ.ಕಾಂಗೆ ತಿಳಿಸಿದರು. ನಮ್ಮನ್ನೂ ಬಂಧಿಸುವುದಾಗಿ ಪೋಲೀಸರು ಹೇಳಿದ್ದಾರೆ. ಆದರೂ ನಾವು ಕಛೇರಿಯ ಬಳಿಯೇ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.

ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಸೇರಿದಂತೆ ಸುಮಾರು 250ಕ್ಕೂ ಹೆಚ್ಚು ಹೋರಾಟಗಾರರನ್ನು ಸಹ ಕೆಆರ್‌ಎಸ್‌ಗೆ ಹೋಗುವಾಗ ಹೊಸೂರ್ ಗೇಟ್ ಬಳಿ ಬಂಧಿಸಲಾಗಿದೆ. ಕೆಆರ್‌ಎಸ್‌ಗೆ ಪ್ರತಿಭಟನೆಗೆ ಬರುತ್ತಿದ್ದವರನ್ನು ದಾರಿ ಮಧ್ಯೆಯೆ ತಡೆದು ಬಂಧಿಸಿದ್ದಾರೆ ಎಂದ ರೈತ ಸಂಘದ ಅಧ್ಯಕ್ಷರು ಹೇಳಿದ್ದಾರೆ.

ಬಡಗಲಪುರ ನಾಗೇಂದ್ರ
ಬಡಗಲಪುರ ನಾಗೇಂದ್ರ. ಫೋಟೊ ಕೃಪೆ: ಪ್ರಜಾವಾಣಿ

2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದಾಗ, ‘KRS ಜಲಾಶಯದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸದಿದ್ದರೆ, ರಾಜ್ಯ ಮಟ್ಟದಲ್ಲಿ ದೊಡ್ಡ ಹೋರಾಟ ಹಮ್ಮಿಕೊಳ್ಳುವುದಾಗಿ ಯಡಿಯೂರಪ್ಪನವರು ಎಚ್ಚರಿಕೆ ನೀಡಿದ್ದರು. ಆದರೆ ಈಗ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ವರ್ಷ ಕಳೆದರೂ ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಹಾಗಾಗಿಯೇ ಈ ಪ್ರತಿಭಟನೆ ಎಂದು ಕೆಂಪೂಗೌಡರು ಹೇಳಿದರು.

ಕೆ ಆರ್ ಎಸ್ ಬಳಿ ಗಣಿಗಾರಿಕೆ
ಕೃಪೆ: ಸ್ಟಾರ್ ಆಫ್ ಮೈಸೂರು

ಗಣಿಗಾರಿಕೆಯಿಂದ ಸುತ್ತಮುತ್ತಲಿನ ಕೃಷಿ ಪರಿಸರಕ್ಕೆ, ಅರಣ್ಯ ಪ್ರದೇಶಕ್ಕೆ ಮತ್ತು ಜಲಾಶಯಕ್ಕೆ ಹೆಚ್ಚಿನ ತೊಂದರೆಯಾಗಲಿದೆ. ಇಲ್ಲಿನ ಗಣಿಗಾರಿಕೆಯ ನಿಷೇಧದ ಕೂಗು ಹಲವು ವರ್ಷಗಳಿಂದ ಕೇಳಿಬರುತ್ತಿದ್ದರೂ, ಸರ್ಕಾರ ಈ ಕೆಲಸಕ್ಕೆ ಕೈ ಹಾಕುತ್ತಿಲ್ಲ ಎಂದು ಹಲವು ಹೋರಾಟಗಾರರು ಅಸಮಧಾನ ವ್ಯಕ್ತಪಡಿಸಿದರು.

ದಕ್ಷಿಣ ಕರ್ನಾಟಕದ ಪ್ರಮುಖ ಜಿಲ್ಲೆಗಳ ಜನರಿಗೆ ನೀರುಣಿಸುತ್ತಾ, ರೈತದ ಬದುಕನ್ನು ಮುನ್ನಡೆಸುತ್ತಿರುವ KRS ಜಲಾಶಯಕ್ಕೇ ಅಪಾಯವೊದಗಿದೆ. ಕೆಆರ್‌ಎಸ್‍ನಿಂದ 10.5ಕಿ.ಮೀ ದೂರದಲ್ಲಿರುವ ನೂರಾರು ಎಕರೆಯಿರುವ ಬೇಬಿಬೆಟ್ಟದ ಕಾವಲಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ಸ್ಫೋಟದಿಂದ ಹೊರಟ ಕಂಪನಗಳು 2018ರ ಸೆಪ್ಟೆಂಬರ್ 25ರಂದು ಕೆಆರ್‌ಎಸ್ ಬುಡದಲ್ಲಿರುವ ಭೂಕಂಪ ಮಾಪನ ಯಂತ್ರದಲ್ಲಿ ದಾಖಲಾಗಿದೆ.

ಕೆಆರ್‌ಎಸ್ ನಿರ್ಮಾಣವಾಗಿ ಇನ್ನೂ ಒಂದು ಶತಮಾನವೂ ಕಳೆದಿಲ್ಲ ಆದರೀಗ ಅದು ಶಿಥಿಲೀಕರಣದ ಸುಳಿಗೆ ಸಿಲುಕುತ್ತಿದೆ. ಜಲಾಶಯ ನಿಂತಿರುವುದೇ ಸುತ್ತ-ಮುತ್ತಲ ಬೆಟ್ಟಗಳ ಆಧಾರದಿಂದ. ಅದೇ ಬೆಟ್ಟಗಳ ಸರಣಿಯ ಇನ್ನೊಂದು ಕಡೆ ಗುಡ್ಡ ಕರಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ.

ಈ ಕಂಪನ ಭೂಕಂಪವಲ್ಲ, ಹಾಗಾಗಿ ಅಂತಹ ತೊಂದರೆಯಿಲ್ಲ ಎಂಬ ವರದಿಯನ್ನು ನೈಸರ್ಗಿಕ ವಿಕೋಪ ಸಂಸ್ಥೆಯು ನೀಡಿ ಹಲವು ಎಚ್ಚರಿಕೆಯ ಮಾತುಗಳನ್ನು ಹೇಳಿದೆ. ಕೆಆರ್‌ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ಮೆಗಾಬ್ಲಾಸ್ಟ್‌ಗೆ ಅನುಮತಿ ಇಲ್ಲದಿದ್ದರೂ ಬೇಬಿ ಬೆಟ್ಟದಲ್ಲಿ ಸಿಡಿಸಿದ ಮೆಗಾಬ್ಲಾಸ್ಟ್‌ನಿಂದಾಗಿ ಈ ಕಂಪನ ಉಂಟಾಗಿದೆ. ಈ ಸದ್ಯ ಅಪಾಯವಾಗಿಲ್ಲ ಎಂಬುದನ್ನು, ಮುಂದೆಯೂ ಅಪಾಯವಾಗುವುದಿಲ್ಲವೆಂದು ವ್ಯಾಖ್ಯಾನಿಸುತ್ತಿರುವ ಗಣಿ ಮಾಲೀಕರು ನಿರಂತರ ಲೂಟಿಗೆ ಮುಂದಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವವೆ.

ಈಗಾಗಲೇ ಇಂತಹ ಮೈನಿಂಗ್ ಮಾಫಿಯಾ, ದರೋಡೆ, ಲೂಟಿಗಳಂತಹ ಕಾರಣಗಳಿಂದಾಗಿ ದೇಶದ 36 ಜಲಾಶಯಗಳು ಶಿಥಿಲಗೊಂಡಿವೆ. ಹಾಗಾಗಿ 87 ವರ್ಷ ಹಳೆಯದಾದ ಕೆಆರ್‌ಎಸ್ ಕೂಡ ಈ ಪಟ್ಟಿಗೆ ಸೇರುವ ದಿನಗಳು ದೂರವಿಲ್ಲ.

ಸ್ವತಃ ರಾಜ್ಯದ ಪ್ರಕೃತಿ ವಿಕೋಪ ನಿರ್ವಹಣಾ ಇಲಾಖೆಯೇ KRS ಜಲಾಶಯ ಅಪಾದಲ್ಲಿದೆ ಎಂದು ವರದಿ ಸಲ್ಲಿಸಿದ್ದರೂ ಸಹ ರಾಜ್ಯ ಸರ್ಕಾರ ಗಣಿಗಾರಿಕೆಯ ನಿಷೇಧಕ್ಕೆ ಮುಂದಾಗುತ್ತಿಲ್ಲ. ಜಲಾಶಯಕ್ಕೆ ಏನಾದರೂ ಹಾನಿಯಾದರೆ ಬೆಂಗಳೂರು ಸೇರಿದಂತೆ ಸುಮಾರು 8 ಜಿಲ್ಲೆಗಳಿಗೆ ತೊಂದರೆಯಾಗಲಿದೆ. ವಿರೋಧ ಪಕ್ಷದಲ್ಲಿದ್ದಾಗ ಯಡಿಯೂರಪ್ಪನವರು ಹೇಳಿದ ಮಾತನ್ನು ನೆನಪಿಸುವ ಸಲುವಾಗಿ ಈ ಹೋರಾಟ ಮಾಡುತ್ತಿದ್ದೇವ ಎಂದು ಹೋರಾಟಗಾರರಾದ ಸುರೇಶ್ ಶಂಭುನಹಳ್ಳಿ ಹೇಳಿದರು.

ಇಂದು ಬಂಧನಕ್ಕೆ ಒಳಗಾಗಿರುವ ಮತ್ತೋರ್ವ ಹೋರಾಟಗಾರರಾದ ಅಭಿ ಹನಕೆರೆ ಮಾತನಾಡಿ, KRS ಉಳಿವಿಗಾಗಿ ಪ್ರತಿಭಟಿಸುತ್ತೇವೆ ಎಂದು ತಿಳಿದ ತಕ್ಷಣ ನೆನ್ನೆ ರಾತ್ರಿಯಿಂದಲೇ ಮಂಡ್ಯದಾದ್ಯಂತ ಇರುವ ಬಹುತೇಕ ಎಲ್ಲಾ ನಾಯಕರನ್ನೂ ಬಂಧಿಸಲಾಗಿದೆ. ಇದರ ಮೂಲಕ ಸರ್ಕಾರ ಸರ್ವಾಧಿಕಾರಿ ಧೋರಣೆಯನ್ನು ಮೆರೆಯುತ್ತಿದೆ. ಇಂಥಾ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಬಾಗಿನ ಬಿಡುವಂತಹ ಕಂದಾಚಾರಗಳನ್ನು ಮಾಡಬೇಕೇ? ಎಂದು ಆಕ್ರೋಶ ವ್ಯಕ್ತಪಡಿಸಿದರು. 


ಇದನ್ನೂ ಓದಿ: ಕೆಆರ್‌ಎಸ್ ಬುಡದಲ್ಲಿ ಗಣಿಗಾರಿಕೆ ಕಂಪನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...