Homeಮುಖಪುಟಅಟಾರ್ನಿ ಜನರಲ್ ಹೆಸರನ್ನೇ ಕೈಬಿಟ್ಟ ಸುಪ್ರೀಂಕೋರ್ಟ್: ಭಿನ್ನ ಅಭಿಪ್ರಾಯಕ್ಕೆ ಕತ್ತರಿಯೇ?

ಅಟಾರ್ನಿ ಜನರಲ್ ಹೆಸರನ್ನೇ ಕೈಬಿಟ್ಟ ಸುಪ್ರೀಂಕೋರ್ಟ್: ಭಿನ್ನ ಅಭಿಪ್ರಾಯಕ್ಕೆ ಕತ್ತರಿಯೇ?

ಆದರೆ ಅಟಾರ್ನಿ ಜನರಲ್‌ರವರು ಪ್ರಶಾಂತ್ ಭೂಷಣ್‌ರವರಿಗೆ ಶಿಕ್ಷೆ ನೀಡಬೇಡಿ, ಅವರು ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪೀಠದ ಮುಂದೆ ಮನವಿ ಮಾಡಿದ್ದರು. ಆದರೆ ಪೀಠ ಅದನ್ನು ನಿರಾಕರಿಸಿತ್ತು.

- Advertisement -
- Advertisement -

ಖ್ಯಾತ ನ್ಯಾಯವಾದಿ ಪ್ರಶಾಂತ್ ಭೂಷಣ್‌ರವರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ‘ಭೂಷಣ್ ತಮ್ಮ ಹೇಳಿಕೆಯ ಕುರಿತು ಮರುಪರಿಶೀಲಿಸಲು’ ಮೂರು ದಿನಗಳ ಸಮಯ ನೀಡಿದೆ.

ಆಶ್ಚರ್ಯವೆಂದರೆ ಸುಪ್ರೀಂ ಕೋರ್ಟಿನ ಆರ್ಡರ್‌ ಶೀಟ್‌ಅನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ವಿಚಾರಣೆಯ ಸಂದರ್ಭದಲ್ಲಿ ಹಾಜರಿದ್ದ, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್‌ರವರನ್ನು ಅದರಲ್ಲಿ ಹೆಸರಿಸಲಾಗಿಲ್ಲ.

ಎರಡೂವರೆ ಗಂಟೆಗೂ ಹೆಚ್ಚು ವೇಳೆ ನಡೆದ ವಾದ-ವಿವಾದದಲ್ಲಿ ಅಟಾರ್ನಿ ಜನರಲ್ ಹಾಜರಿದ್ದರು ಮಾತ್ರವಲ್ಲ ಕೋರ್ಟಿಗೆ ಭೂಷಣ್ ಪರವಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದರು.

ಪ್ರಶಾಂತ್ ಭೂಷಣ್‌ರವರ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಆಗಸ್ಟ್ 5 ರಂದು ನಡೆದ ಮೊದಲ ವಿಚಾರಣೆಯಲ್ಲಿ ಸಂದರ್ಭದಲ್ಲಿ ಅವರು ಹಾಜರಿದ್ದುದ್ದನ್ನು ಅಂದಿನ ನಡಾವಳಿಗಳಲ್ಲಿ ದಾಖಲಿಸಲಾಗಿತ್ತು. ಆದರೆ ನಿನ್ನೆಯ ತೀರ್ಪು ನೀಡುವ ವಿಚಾರಣೆಯಲ್ಲಿ ಅವರನ್ನು ಕೈಬಿಟ್ಟಿರುವುದು ಏಕೆ ಎಂಬ ಪ್ರಶ್ನೆ ಉದ್ಭವವಾಗಿದೆ.

ವಿಚಾರಣೆಯ ಸಂದರ್ಭದಲ್ಲಿ ಪ್ರಶಾಂತ್ ಭೂಷಣ್‌ರವರು ತಮ್ಮ ಹೇಳಿಕೆಯನ್ನು ದಾಖಲಿಸಿದ ನಂತರ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠವೇ ‘ಭೂಷಣ್ ಅವರಿಗೆ ತಮ್ಮ ಹೇಳಿಕೆಯನ್ನು ಮರುಪರಿಶೀಲಿಸಲು ಸಮಯ ನೀಡಬಹುದೇ’ ಎಂದು ಅಟಾರ್ನಿ ಜನರಲ್‌ರವರ ಸಲಹೆ ಕೇಳಿತ್ತು. ಆಗ ಅವರು ಸಮಯ ನೀಡಬಹುದು ಎಂದು ಅಭಿಪ್ರಾಯಪಟ್ಟಿದ್ದರು.

ಆದರೆ ಅಟಾರ್ನಿ ಜನರಲ್‌ರವರು ಪ್ರಶಾಂತ್ ಭೂಷಣ್‌ರವರಿಗೆ ಶಿಕ್ಷೆ ನೀಡಬೇಡಿ, ಅವರು ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪೀಠದ ಮುಂದೆ ಮನವಿ ಮಾಡಿದ್ದರು. ಆದರೆ ಪೀಠ ಅದನ್ನು ನಿರಾಕರಿಸಿತ್ತು.

ಆಗಸ್ಟ್ 5 ರಂದು ನಡೆದ ವಿಚಾರಣೆಯಲ್ಲಿ ಅಟಾರ್ನಿ ಜನರಲ್ ಹೆಸರು ನಮೂದಿಸಿರುವುದು..

ವಿಚಾರಣೆಯ ಕೊನೆಯಲ್ಲಿ ಅಟಾರ್ನಿ ಜನರಲ್‌ರವರು “”ಉನ್ನತ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿರುವ 9 ನ್ಯಾಯಾಧೀಶರ ಪಟ್ಟಿ ನನ್ನ ಬಳಿ ಇದೆ. 1987ರಲ್ಲಿ ನಾನು ಕೂಡ ಹೇಳಿದ್ದೆ” ಎಂದು  ಹೇಳುತ್ತಿರುವಾಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಮಿಶ್ರಾರವರು “ಅದನ್ನೆಲ್ಲ ಕೇಳಲು ನಾವು ಇಲ್ಲಿ ಕೂತಿಲ್ಲ  ಮಿ.ಅಟಾರ್ನಿ” ಎಂದು ಹೇಳುವ ಮೂಲಕ ತಡೆದರು.

ವಿಚಾರಣೆಯ ಆರಂಭದಲ್ಲಿ ಭೂಷಣ್ ಪರ ವಕೀಲರಾದ ರಾಜೀವ್ ಧವನ್ ಮತ್ತು ದುಷ್ಯಂತ್ ದವೆಯವರು ಅಟಾರ್ನಿ ಜನರಲ್‌ರವರು ಸಹ ವಿಡಿಯೋ ಕಾನ್ಫರೆನ್ಸ್‌ನಲ್ಲಿದ್ದು, ತಮ್ಮ ಹೇಳಿಕೆಯನ್ನು ದಾಖಲಿಸಲು ಕಾಯುತ್ತಿದ್ದಾರೆ ಎಂದು ನೆನಪಿಸಿದ್ದರು. ಆದರೆ ನ್ಯಾಯಮೂರ್ತಿ ಮಿಶ್ರಾರವರು ಅದು ನಮಗೂ ಗೊತ್ತಿದೆ, ನೀವು ನೆನಪಿಸುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಒಟ್ಟಿನಲ್ಲಿ ಅಟಾರ್ನಿ ಜನರಲ್ ವಿಚಾರಣೆಯ ವೇಳೆ ಸಕ್ರಿಯರಾಗಿ ಭಾಗವಹಿಸಿದ್ದರು. ಅವರು ಪ್ರಶಾಂತ್ ಭೂಷಣ್ ಪರ ವಾದ ಮಂಡಿಸಿದರು. ನ್ಯಾಯಪೀಠ ಅವರ ಸಲಹೆಯನ್ನು ಸಹ ಪಡೆದುಕೊಂಡಿತು. ಆದರೆ ಸಂಜೆ ಪ್ರಕಟವಾದ ತೀರ್ಪು ಬರಹದಲ್ಲಿ ಮಾತ್ರ ಅವರ ಹೆಸರನ್ನು ನಮೂದಿಸಿಲ್ಲ.

ಒಂದು ವೇಳೆ ಅಟಾರ್ನಿಯವರ ಹೆಸರು ಹಾಕುವುದೇ ಇಲ್ಲ ಎಂದಾದಲ್ಲಿ, ಇದೇ ಕೇಸಿನಲ್ಲಿ ಹಿಂದೆ ಏಕೆ ಹಾಕಿದರು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಈ ದಿನದ ವಿಚಾರಣೆಯ ಸಂದರ್ಭದಲ್ಲಿ ಅವರ ಅಗತ್ಯವಿರಲಿಲ್ಲ ಎನ್ನುವುದಾದರೆ, ಸುಪ್ರೀಂಕೋರ್ಟಿನ ಪೀಠ ಅವರನ್ನು ಕರೆಸಿದ್ದೇಕೆ? ವಿಚಾರಣೆಯ ನಡುವೆ ಅವರ ಅನಿಸಿಕೆಯನ್ನು ಕೇಳಿದ್ದೇಕೆ ಎಂಬುದು ಸಹಜ ಪ್ರಶ್ನೆ.

ಅಂದರೆ ಸರ್ಕಾರದ ಪರವಾಗಿರುವ ವಕೀಲರೂ ಸಹಾ ಪ್ರಶಾಂತ್ ಭೂಷಣ್ ಹೇಳಿದ್ದನ್ನಾಗಲೀ, ಪ್ರಶಾಂತ್ ಭೂಷಣ್ ಅವರ ಕೊಡುಗೆಯನ್ನಾಗಲೀ ನಿರಾಕರಿಸುವ ಸ್ಥಿತಿಯಲ್ಲಿಲ್ಲ; ಬದಲಿಗೆ ಪೂರಕವಾದ ಮಾತುಗಳನ್ನಾಡಬೇಕಾದ ಅನಿವಾರ್ಯತೆ ಇದ್ದಂತಿದೆ. ಇದನ್ನು ನಿರೀಕ್ಷಿಸಿರದ ಪೀಠ ಎಡವಿಬಿಟ್ಟು, ಇದೀಗ ಆ ರೀತಿಯ ಭಿನ್ನ ಅಭಿಪ್ರಾಯವನ್ನು ದಾಖಲಿಸಿದ ಅಟಾರ್ನಿಯವರ ಹೆಸರನ್ನೇ ಆರ್ಡರ್ ಶೀಟ್‌ನಲ್ಲಿ ಕೈಬಿಟ್ಟಿದೆ.

ಈ ಕುರಿತು ನಾನುಗೌರಿ.ಕಾಂ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾದ ಸಂಜಯ್ ಹೆಗಡೆ ಮತ್ತು ಹಿರಿಯ ಕಾರ್ಮಿಕ ಮುಖಂಡರಾದ ಎಸ್‌.ಬಾಲನ್‌ರವರನ್ನು ಮಾತನಾಡಿಸಿತು. ಇದು ಸುಪ್ರೀಂ ಕೋರ್ಟ್ ಬೇಕಂತಲೇ ಮಾಡಿದ್ದಲ್ಲ, ಅಪ್ಪಿ ತಪ್ಪಿ ಆದ ತಪ್ಪಾಗಿದೆ. ಅದನ್ನು ಅವರು ಸರಿಪಡಿಸಿಕೊಳ್ಳಬಹುದು. ಆದರೆ ಉಳಿದ ವಿಷಯಗಳು ಚರ್ಚಾರ್ಹ ಎಂದಿದ್ದಾರೆ.


ಇದನ್ನೂ ಓದಿ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...