Homeಕರೋನಾ ತಲ್ಲಣ’ಥೂ... ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

"ಸಿಇಒ ಪ್ರತಿದಿನ 300 ಮಂದಿಗೆ ಕೊರೊನಾ ರ್‍ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಿಸಬೇಕು ಎಂದು ಟಾರ್ಗೆಟ್ ನೀಡುತ್ತಿದ್ದರು, ಇದು ಮಾಡದಿದ್ದರೆ ಅವರನ್ನು ಏಕವಚನದಲ್ಲಿ ನಿಂದಿಸುತ್ತಿದ್ದರು. ಇದರಿಂದಾಗಿ ವೈದ್ಯ ನಾಗೇಂದ್ರ ಒತ್ತಡಕ್ಕೀಡಾಗಿದ್ದರು" ಎಂದು ವೈದ್ಯರ ಸಂಬಂಧಿಕರು ಹೇಳಿದ್ದಾರೆ.

- Advertisement -
- Advertisement -

ಅಸಹಜ ಸಾವೀಗೀಡಾಗಿದ್ದ ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಅವರ ಅಂತಿಮ ದರ್ಶನಕ್ಕೆ ಹೋಗಿದ್ದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ ಅವರಿಗೆ ಮಹಿಳಾ ವೈದ್ಯೆಯೊಬ್ಬರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಆಕ್ರೋಶಗೊಂಡಿದ್ದ ಮಹಿಳಾ ವೈದ್ಯೆ ‘”ನಿಮ್ಮ ನಮಸ್ಕಾರ, ನಿಮ್ಮ ಸರ್ಕಾರ ಬೇಕಿಲ್ಲ, ನಮಗೆ ನಾಗೇಂದ್ರ ಬೇಕು. ಕೊಡಿಸಕ್ಕಾಗುದಾದರೆ ಕೊಡಿಸಿ, ಇಲ್ಲಾಂದ್ರ ತೊಲಗಿ. ಬ್ರೇಕಿಂಗ್ ನ್ಯೂಸ್ ಹಾಕಿ ಹೋಗಿ. 30 ಲಕ್ಷ ಪರಿಹಾರ ಕೊಡ್ತೀರಾ? ಥೂ, ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ, ನಾವು ವೈದ್ಯರು ನಮ್ಮ ಒಂದು ತಿಂಗಳ ಸಂಬಳ ಕೊಟ್ಟರೆ ಹತ್ತುಕೋಟಿ ಆಗುತ್ತೆ. ನಾಚಿಕೆ ಆಗಲ್ವ ನಿಮಗೆ. ನಾಚಿಕೆ ಇಲ್ಲದೆ ಇಲ್ಲಿ ತನಕ ಬಂದಿದ್ದೀರ. ಯೋಗ್ಯತೆನೆ ಇಲ್ಲ. ನಿಮ್ಮನ್ನು ಬೇಡಿಕೊಳ್ಳಬೇಕಾ. ನನಗೆ ತುಂಬಾ ಒತ್ತಡ ಆಗುತ್ತಿದೆ ಅವರು ಹೇಳುತ್ತಿದ್ದರು ಯಾರೂ ಕೇಳಲಿಲ್ಲ. ಸಾಯಿಸಿಬಿಟ್ರಲ್ಲ, ಹೋಗಿ ಸಮಾಧಾನ ಆಯಿತಲ್ಲ. ನಮ್ಮನ್ನೆಲ್ಲ ಬಳಸಿಕೊಲ್ಳುವ ಯೋಗ್ಯತೆ ನಿಮಗಿಲ್ಲ. ನಮ್ಮಂತವರನ್ನು ಉಪಯೋಗಿಸಿಕೊಳ್ಳುವ ಯೋಗ್ಯತೆ ನಿಮಗಿಲ್ಲ.” ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಮೈಸೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

Posted by Naanu Gauri on Friday, August 21, 2020

ಮೃತ ನಾಗೇಂದ್ರ ಕುಟುಂಬಕ್ಕೆ ನಿನ್ನೆ 30 ಲಕ್ಷ ಪರಿಹಾರ ಕೊಡುವುದಾಗಿ ಘೋಷಿಸಿದ್ದ ಸಚಿವ ಸುಧಾಕರ್‌ ಇಂದು 50 ಲಕ್ಷ ಪರಿಹಾರ ಹಾಗು ವೈದ್ಯರ ಪತ್ನಿಗೆ ಸಬ್‌ರಿಜಿಸ್ಟ್ರಾರ್‌ ಹುದ್ದೆ ನೀಡುವುದಾಗಿ ಹೇಳಿದ್ದಾರೆ.

ನಂಜನಗೂಡಿನ ತಾಲ್ಲೂಕು ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ನಾಗೇಂದ್ರ ನಿನ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಇಒ ಪ್ರಶಾಂತ ಕುಮಾರ್ ಮಿಶ್ರಾ ನೀಡುತ್ತಿದ್ದ ಕಿರುಕುಳವೆ ಅವರ ಆತ್ಮಹತ್ಯೆಗೆ ಕಾರಣ ಎಂದು ಅವರ ಸಂಬಂಧಿಕರು ಆರೋಪಿಸಿದ್ದಾರೆ. ಅಲ್ಲದೇ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಎದುರು ಶವವನ್ನಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅಂತಿಮ ದರ್ಶನಕ್ಕೆ ಬಂದಿದ್ದ ಸಚಿವರಿಗೆ ಅಲ್ಲಿದ್ದವರು ಛೀಮಾರಿ ಹಾಕಿದ್ದಾರೆ.

ಈ ವೇಳೆ ನೆರೆದಿದ್ದ ಇತರ ವೈದ್ಯರು ಸರ್ಕಾರಕ್ಕೆ ದಿಕ್ಕಾರ ಕೂಗಿ ಇನ್ನು ಮುಂದೆ ನಾವು ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ಹೇಳಿದ್ದಾರೆ. ಸೋಮವಾರದಿಂದ ಪ್ರತಿಭಟನೆ ನಡೆಸುತ್ತೇವೆ ಎಂದು ಘೋಷಿಸಿದ್ದಾರೆ. ಇಡೀ ಘಟನೆಯಲ್ಲಿ ಸಚಿವ ಸುಧಾಕರ್ ಮೂಕ ಪ್ರೇಕ್ಷಕರಾಗಿ ನಿಂತೆ ಇದ್ದರು.‍

“ಸಿಇಒ ಪ್ರತಿದಿನ 300 ಮಂದಿಗೆ ಕೊರೊನಾ ರ್‍ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಿಸಬೇಕು ಎಂದು ಟಾರ್ಗೆಟ್ ನೀಡುತ್ತಿದ್ದರು, ಇದು ಮಾಡದಿದ್ದರೆ ಅವರನ್ನು ಏಕವಚನದಲ್ಲಿ ನಿಂದಿಸುತ್ತಿದ್ದರು. ಇದರಿಂದಾಗಿ ವೈದ್ಯ ನಾಗೇಂದ್ರ ಒತ್ತಡಕ್ಕೀಡಾಗಿದ್ದರು” ಎಂದು ವೈದ್ಯರ ಸಂಬಂಧಿಕರು ಹೇಳಿದ್ದಾರೆ.

ಘಟನೆ ಖಂಡಿಸಿ ಪ್ರಸ್ತುತ ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯರ, ಆರೋಗ್ಯ ಸಿಬ್ಬಂದಿ ಮುಷ್ಕರ ಹೂಡಿ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ ಎನ್ನಲಾಗಿದ್ದು, ಅಲ್ಲದೆ ಸೋಮವಾರದಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರಕ್ಕೆ ನಿರ್ಧರಿಸಲಾಗಿದ್ದು, ಕರ್ತವ್ಯಕ್ಕೆ ಗೈರುಹಾಜರಾಗಲಿದ್ದಾರೆ.

ನಿನ್ನೆ ಮೂವತ್ತು ಲಕ್ಷ ರುಪಾಯಿ ವೈದ್ಯರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಹೇಳಿದ್ದ ಸಚಿವ ಸುಧಾಕರ್ ಇದೀಗ 50 ಲಕ್ಷ ರೂ. ಪರಿಹಾರ ಧನ ಹಾಗು ಮೃತಪಟ್ಟ ವೈದ್ಯರ ಸಬ್ ರಿಜಿಸ್ಟ್ರಾರ್ ಉದ್ಯೋಗವನ್ನು ನೀಡಲು ಮುಖ್ಯಮಂತ್ರಿ ಒಪ್ಪಿಗೆ ನಿಡಿದ್ದಾರೆ. ಪ್ರಕರಣದ ಸಂಪೂರ್ಣ ತನಿಖೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಕೊರೊನಾ, ನಿರುದ್ಯೋಗದ ಕುರಿತು ಎಚ್ಚರಿಸಿದ್ದೆ, ಮಾಧ್ಯಮಗಳು ಅಣಕಿಸಿದ್ದವು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...