Homeಎಕಾನಮಿಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾದ ಸಹಕಾರಿ ಬ್ಯಾಂಕುಗಳನ್ನು ರಕ್ಷಿಸಿ: ಶರದ್ ಪವಾರ್

ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾದ ಸಹಕಾರಿ ಬ್ಯಾಂಕುಗಳನ್ನು ರಕ್ಷಿಸಿ: ಶರದ್ ಪವಾರ್

2019-20ರ ಆರ್ಥಿಕ ವರ್ಷದಲ್ಲಿ ಆರ್‌ಬಿಐ ಪ್ರಕಾರ, ಸಾರ್ವಜನಿಕ ವಲಯ ಮತ್ತು ಖಾಸಗಿ ವಲಯದ ಬ್ಯಾಂಕುಗಳು 3,766 ಮತ್ತು 2,010 ವಂಚನೆ ಪ್ರಕರಣಗಳನ್ನು ವರದಿ ಮಾಡಿದ್ದರೆ, ಸಹಕಾರಿ ಬ್ಯಾಂಕುಗಳು ಕೇವಲ 181 ವಂಚನೆಗಳನ್ನು ವರದಿ ಮಾಡಿವೆ ಎಂದು ಅವರು ತಿಳಿಸಿದ್ದಾರೆ.

- Advertisement -
- Advertisement -

ಸಹಕಾರಿ ಬ್ಯಾಂಕುಗಳು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಅವುಗಳ ಅಸ್ತಿತ್ವ ಮತ್ತು ಸಹಕಾರಿ ಗುಣವನ್ನು ರಕ್ಷಿಸಬೇಕು ಎಂದು ಕೋರಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ,

‘ಇತರೆ ಬ್ಯಾಂಕುಗಳಿಗಿಂತ ಸಹಕಾರಿ ಬ್ಯಾಂಕುಗಳು ಇಂದು ಕೆಟ್ಟ ಪರಿಸ್ಥಿತಿಯಲ್ಲಿದೆ. ಅವುಗಳನ್ನು ಖಾಸಗಿ ಘಟಕಗಳಾಗಿ ಪರಿವರ್ತಿಸುವುದರಿಂದ ವಂಚನೆಗಳು ಅಥವಾ ಅಕ್ರಮಗಳು ಕೊನೆಗೊಳ್ಳುತ್ತವೆ ಎಂಬ ಅಭಿಪ್ರಾಯ ಸರಿಯಲ್ಲ’ ಎಂದು ಮಾಜಿ ಕೇಂದ್ರ ಸಚಿವರಾದ ಶರದ್ ಪವಾರ್ ಹೇಳಿದ್ದಾರೆ.

ಪವಾರ್ ಅವರು ಮಂಗಳವಾರ ರಾತ್ರಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಆಗಸ್ಟ್ 15 ರ ಈ ಪತ್ರವನ್ನು ಪ್ರಕಟಿಸಿದ್ದಾರೆ. ಈ ಪತ್ರವು ಮೋದಿಯವರ ಸ್ವಾತಂತ್ರ್ಯ ದಿನದ ಭಾಷಣವನ್ನು ಸಹ ಉಲ್ಲೇಖಿಸಿದೆ.

“ಮಧ್ಯಮ ವರ್ಗದ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಸಹಕಾರಿ ಬ್ಯಾಂಕುಗಳನ್ನು ರಿಸರ್ವ್ ಬ್ಯಾಂಕಿನ ಮೇಲ್ವಿಚಾರಣೆಗೆ ತರಲಾಗುತ್ತದೆ ಎಂದು ನೀವು ಹೇಳಿದ್ದೀರಿ. ನಾನು ಆ ಉದ್ದೇಶವನ್ನು ಸ್ವಾಗತಿಸುತ್ತೇನೆ ಮತ್ತು ಪ್ರಶಂಸಿಸುತ್ತೇನೆ. ಅದೇ ಸಮಯದಲ್ಲಿ, ಸಹಕಾರಿ ಬ್ಯಾಂಕುಗಳ ಅಸ್ತಿತ್ವ ಮತ್ತು ಅವುಗಳ ಸಹಕಾರಿ ಪಾತ್ರವನ್ನು ಸಂರಕ್ಷಿಸಲಾಗುವುದು ಎಂದು ನಾನು ಪ್ರಾಮಾಣಿಕವಾಗಿ ಭಾವಿಸುತ್ತೇನೆ. ಸಹಕಾರಿ ಬ್ಯಾಂಕಿಂಗ್ ಕ್ಷೇತ್ರವು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದೆ” ಎಂದು ಪವಾರ್ ಹೇಳಿದ್ದಾರೆ.

ರಿಸರ್ವ್ ಬ್ಯಾಂಕಿನ ವ್ಯಾಪಕವಾದ ಕಾರ್ಯ ನಿರ್ವಹಣೆಯಿಂದಾಗಿ ಪ್ರತಿ ವರ್ಷ, ದೇಶದ ಎಲ್ಲಾ ನಗರ ಸಹಕಾರಿ ಬ್ಯಾಂಕುಗಳ (ಯುಸಿಬಿ) ತಪಾಸಣೆ ನಡೆಸುವುದು ಅಸಾಧ್ಯವೆಂದು ರಿಸರ್ವ್ ಬ್ಯಾಂಕ್ (ಆರ್‌ಬಿಐ) ಕಂಡುಕೊಂಡಿದೆ. ಸೆಂಟ್ರಲ್ ಬ್ಯಾಂಕ್ 1993 ರಿಂದ ಯುಸಿಬಿಗಳನ್ನು ಖಾಸಗಿ ಬ್ಯಾಂಕುಗಳಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ, ಆದರೆ ಅದು ಯಶಸ್ವಿಯಾಗಲಿಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ.

“ಬ್ಯಾಂಕುಗಳಲ್ಲಿ ಹಣಕಾಸಿನ ಶಿಸ್ತು ಇರಬೇಕು ಎಂಬ ನಿಮ್ಮ ಮಾತನ್ನು ಒಪ್ಪುತ್ತೇನೆ. ಆದರೆ ಖಂಡಿತವಾಗಿಯೂ ಸಹಕಾರಿ ವಲಯವನ್ನು ಖಾಸಗಿ ವಲಯಕ್ಕೆ ಪರಿವರ್ತಿಸುವುದರಿಂದ ಹಣ, ಹಣಕಾಸಿನ ಅಕ್ರಮಗಳು ಮತ್ತು ವಂಚನೆಗಳನ್ನು ಸಂಪೂರ್ಣವಾಗಿ ಅಥವಾ ಭಾಗಶಃ ತಡೆಯುತ್ತದೆ ಎಂದು ಹೇಳುವುದು ತಪ್ಪಾಗುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

2019-20ರ ಆರ್ಥಿಕ ವರ್ಷದಲ್ಲಿ ಆರ್‌ಬಿಐ ಪ್ರಕಾರ, ಸಾರ್ವಜನಿಕ ವಲಯ ಮತ್ತು ಖಾಸಗಿ ವಲಯದ ಬ್ಯಾಂಕುಗಳು 3,766 ಮತ್ತು 2,010 ವಂಚನೆ ಪ್ರಕರಣಗಳನ್ನು ವರದಿ ಮಾಡಿದ್ದರೆ, ಸಹಕಾರಿ ಬ್ಯಾಂಕುಗಳು ಕೇವಲ 181 ವಂಚನೆಗಳನ್ನು ವರದಿ ಮಾಡಿವೆ ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿನ ವಂಚನೆಯ ಮೊತ್ತವು 64,509.90 ಕೋಟಿ ರೂ. ಅಥವಾ ಹಣಕಾಸಿನ ಅವಧಿಯಲ್ಲಿ ವಂಚನೆಗಳಲ್ಲಿ ಭಾಗಿಯಾಗಿರುವ ಒಟ್ಟು ಮೊತ್ತದ 90.20ರಷ್ಟಿದೆ. ಖಾಸಗಿ ವಲಯದ ಬ್ಯಾಂಕುಗಳಲ್ಲಿ 5,515.10 ಕೋಟಿ ರೂ. ಅಥವಾ ಶೇ 7.69 ರಷ್ಟಿದೆ ಎಂದು ಅವರು ಹೇಳಿದರು.

“2019-20ರ ಆರ್ಥಿಕ ವರ್ಷದಲ್ಲಿ, ಪಿಎಂಸಿ ಬ್ಯಾಂಕ್ ಹಗರಣದಲ್ಲಿ 4,355 ಕೋಟಿ ರೂ.ಗಳ ವಂಚನೆ ಕಂಡುಬಂದಿದೆ. ಆದರೆ ಮೊದಲ ಅರ್ಧ ವರ್ಷದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸುಮಾರು 95,700 ಕೋಟಿ ರೂ.ಗಳ ವಂಚನೆ ವರದಿಯಾಗಿದೆ” ಎಂದು ಪವಾರ್ ಹೇಳಿದ್ದಾರೆ. ಆದ್ದರಿಂದ, ಸಹಕಾರಿ ಬ್ಯಾಂಕುಗಳಲ್ಲಿ ಮಾತ್ರ ನಿಧಿಯ ದುರುಪಯೋಗ ಅಥವಾ ಹಣಕಾಸಿನ ಅಕ್ರಮಗಳನ್ನು ಗಮನಿಸಲಾಗಿದೆ ಎಂದು ಹೇಳುವುದು ಸರಿಯಲ್ಲ ಎಂದೂ ಹೇಳಿದ್ದಾರೆ.

“ಆದರೂ ಸ್ವತಃ ಆರ್‌ಬಿಐನ ಮಾಹಿತಿಯ ಪ್ರಕಾರ, ವಾಣಿಜ್ಯ ಬ್ಯಾಂಕುಗಳ ಒಟ್ಟು ಮತ್ತು ನಿವ್ವಳ ಎನ್‌ಪಿಎ ಶೇಕಡಾ 9.68 ಮತ್ತು ಶೇಕಡಾ 5.31 ರಷ್ಟಿದೆ. ಮತ್ತೊಂದೆಡೆ, ಯುಸಿಬಿಗಳ ಒಟ್ಟು ಮತ್ತು ನಿವ್ವಳ ಎನ್‌ಪಿಎ ಶೇಕಡಾ 7.51 ಮತ್ತು ಶೇಕಡಾ 2.53 ಇದೆ. ಇದರಲ್ಲಿ 1,544 ಯುಸಿಬಿಗಳಲ್ಲಿ 70 ಮಾತ್ರ `ಡಿ ‘ವಿಭಾಗದಲ್ಲಿವೆ. ಆದ್ದರಿಂದ” ಸಹಕಾರಿ ಬ್ಯಾಂಕುಗಳಲ್ಲಿ ವೃತ್ತಿಪರತೆ ಇಲ್ಲ ಎಂದು ಹೇಳುವುದು ಹಾಸ್ಯಾಸ್ಪದವಾಗಿದೆ “ಎಂದು ಪವಾರ್ ಹೇಳಿದ್ದಾರೆ.

ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ (ಪಿಎಮ್‌ಸಿ) ಬ್ಯಾಂಕಿನಲ್ಲಿ ನಡೆದದ್ದು ಒಂದು ವಂಚನೆ ಪ್ರಕರಣವಷ್ಟೆ. ಅದು ಸಹಕಾರಿ ಬ್ಯಾಂಕುಗಳ ವ್ಯವಹಾರ ವೈಫಲ್ಯವಲ್ಲ. ಆದ್ದರಿಂದ, ಈ ವಿಷಯವನ್ನು ವೈಯಕ್ತಿಕವಾಗಿ ಗಮನಿಸಿ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ನ್ಯಾಯ ಒದಗಿಸಬೇಕೆಂದು ನಾನು ಮನಃಪೂರ್ವಕವಾಗಿ ವಿನಂತಿಸುತ್ತೇನೆ” ಎಂದು ಪವಾರ್ ಪತ್ರದಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಐದೇ ದಿನದಲ್ಲಿ ಶಾ ಅಧಿಕಾರದ ಡಿಸಿಸಿ ಬ್ಯಾಂಕ್‍ಗಳಲ್ಲಿ 3118 ಕೋಟಿ ರೂ. ಜಮೆ ಇದು ಗುಜರಾತ್ ಮಾಡೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...