Homeಕರ್ನಾಟಕಚಿತ್ರದುರ್ಗದಲ್ಲಿ ಅಲೆಮಾರಿ ಜನಾಂಗದ ಮೂವರ ಕಗ್ಗೊಲೆ ಖಂಡಿಸಿ ಪ್ರತಿಭಟನೆ

ಚಿತ್ರದುರ್ಗದಲ್ಲಿ ಅಲೆಮಾರಿ ಜನಾಂಗದ ಮೂವರ ಕಗ್ಗೊಲೆ ಖಂಡಿಸಿ ಪ್ರತಿಭಟನೆ

'ಕೊಲೆಗೀಡಾದ ವ್ಯಕ್ತಿಗಳು ಹಂದಿ ಸಾಕಾಣಿಕೆ ಕಸುಬು ಮಾಡುತ್ತಿದ್ದರು. ಹಂದಿ ಕಳ್ಳತನ ಮಾಡುವ ಉದ್ದೇಶದಿಂದಲೇ ಅವರನ್ನು ಕಗ್ಗೊಲೆ ಮಾಡಲಾಗಿದೆ. ಅವರ ಜೀವಕ್ಕೆ ಬೆಲೆ ಇಲ್ಲವೇ? ಜಿಲ್ಲೆಯಲ್ಲಿ ಕಳ್ಳತನ ಮಾಡಲು ಕೊಲೆ ಮಾಡುವಂತಹ ಹೀನ ಪರಿಸ್ಥಿತಿ ಬಂದಿದೆಯೆಂದರೆ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದರ್ಥ.

- Advertisement -
- Advertisement -

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಗ್ರಾಮದಲ್ಲಿ ಕೊರಚ ಸಮುದಾಯಕ್ಕೆ ಸೇರಿದ ಅಲೆಮಾರಿ ಜನಾಂಗದ ಮೂವರ ಕಗ್ಗೊಲೆ ಖಂಡಿಸಿ, ಆರೋಪಿಗಳ ಪತ್ತೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಯಿತು.

ಅಲೆಮಾರಿ, ಅರೆ-ಅಲೆಮಾರಿ ಬುಡಕಟ್ಟು SC/ST ಮಹಾಸಭಾ, ಕರ್ನಾಟಕ ಶಾಂತಿ ಸೌಹಾರ್ದ ವೇದಿಕೆ ಮತ್ತು ಜಿಲ್ಲಾ ಸಿಳ್ಳೆ ಕ್ಯಾತಾರ ಸಂಘದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ನೂರಾರು ಜನರು ಭಾಗವಹಿಸಿ ಸರ್ಕಾರದ ವಿರುದ್ಧ ಕಿಡಿಕಾರಿದರು.

ದಲಿತರು, ಅಲೆಮಾರಿ ಬುಡಕಟ್ಟು ಜನಾಂಗದವರಿಗೆ ರಾಜ್ಯದಲ್ಲಿ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರಗಳು ದಲಿತರ ಹಕ್ಕುಗಳನ್ನು ದಮನ ಮಾಡುತ್ತಿವೆ. ದಲಿತರು ಕುಡಿಯಲು ನೀರು ಕೇಳಿದ್ರೆ ಜಾತಿ ನಿಂದನೆ ಮಾಡಿ ಅವಮಾನ ಮಾಡುತ್ತಿದ್ದಾರೆ. ಪೆಟ್ರೋಲ್ ಕೇಳಿದರೆ ಕಂಬಕ್ಕೆ ಕಟ್ಟಿ ಹೊಡೆಯುತ್ತಿದ್ದಾರೆ. ಇಷ್ಟಾದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.

ನಾಯಕನಹಟ್ಟಿಯಲ್ಲಿ ನಡೆದಿರುವ ಕೊಲೆ ಪ್ರಕರಣವು ಅಮಾನವೀಯ ಕೃತ್ಯವಾಗಿದೆ. ಈ ಕೂಡಲೇ ದೌರ್ಜನ್ಯ ಪ್ರಕರಣ ದಾಖಲಿಸಿ ನ್ಯಾಯಯುತ ತನಿಖೆ ನಡೆಸಬೇಕು. ಆರೋಪಿಗಳನ್ನು ಬಂಧಿಸುವ ಮೂಲಕ ನೊಂದವರಿಗೆ ನ್ಯಾಯ ಮತ್ತು ರಕ್ಷಣೆ ನೀಡಬೇಕೆಂದು ಅವರು ಆಗ್ರಹಿಸಿದರು.

ಪ್ರಗತಿಪರ ಹೋರಾಟಗಾರರಾದ ವಿಶ್ವಸಾಗರ್ ಮಾತನಾಡಿ “ನಾಯಕನಹಟ್ಟಿ ಕೊಲೆ ಪ್ರಕರಣವು ರಾಜ್ಯವೇ ಬೆಚ್ಚಿ ಬೀಳಿಸಿದ ಘಟನೆಯಾಗಿದೆ. ಪೊಲೀಸರು ತ್ವರಿತ ತನಿಖೆ ನಡೆಸಬೇಕು. ಶೋಷಿತರಿಗೆ ರಕ್ಷಣೆ ಕೊಡುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ಇಲಾಖೆಯದ್ದಾಗಿದೆ” ಎಂದರು.

ಕರ್ನಾಟಕ ಶಾಂತಿ & ಸೌಹಾರ್ದ ವೇದಿಕೆಯ ಅಧ್ಯಕ್ಷರಾದ ನರೇನಹಳ್ಳಿ ಅರುಣ್ ಕುಮಾರ್ ಮಾತನಾಡಿ ‘ಕೊಲೆಗೀಡಾದ ವ್ಯಕ್ತಿಗಳು ಹಂದಿ ಸಾಕಾಣಿಕೆ ಕಸುಬು ಮಾಡುತ್ತಿದ್ದರು. ಹಂದಿ ಕಳ್ಳತನ ಮಾಡುವ ಉದ್ದೇಶದಿಂದಲೇ ಅವರನ್ನು ಕಗ್ಗೊಲೆ ಮಾಡಲಾಗಿದೆ. ಅವರ ಜೀವಕ್ಕೆ ಬೆಲೆ ಇಲ್ಲವೇ? ಜಿಲ್ಲೆಯಲ್ಲಿ ಕಳ್ಳತನ ಮಾಡಲು ಕೊಲೆ ಮಾಡುವಂತಹ ಹೀನ ಪರಿಸ್ಥಿತಿ ಬಂದಿದೆಯೆಂದರೆ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದರ್ಥ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್ ಸಾಂಕ್ರಾಮಿಕ ರೋಗದ ಕಾರಣ ನೀಡಿ ಎಲ್ಲಾ ಹಂದಿ ಸಾಕುವವರನ್ನು ನಗರದಿಂದ ಹೊರಗೆ ಹಾಕಲಾಗಿದೆ. ಅವರಿಗೆ ನಗರ ಸಭೆ, ಪುರಸಭೆಗಳಿಂದ ಕಿರುಕುಳ ಕೊಡಲಾಗುತ್ತಿದೆ. ಲಾಕ್‌ಡೌನ್‌ ಕಾರಣದಿಂದ ಈಗಾಗಲೇ ಸಂಕಷ್ಟದಲ್ಲಿರುವ ಕೊರಚ ಸಮುದಾಯದ ಅಲೆಮಾರಿಗಳಿಗೆ ಬೇರೆ ಉದ್ಯೋಗವಿಲ್ಲ. ಹಾಗಾಗಿ ಊರ ಹೊರಗಿರುವವರಿಗೆ ಪೊಲೀಸ್ ರಕ್ಷಣೆ ನೀಡಬೇಕು. ಕೊಲೆಗೆ ಸಂಬಂಧಿಸಿದಂತೆ ಎಸ್‌ಎಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದರು.

ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ರಾಧಿಕಾ “ಕೊರಚ ಸಮುದಾಯದ ಕಗ್ಗೂಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು. ತೀವ್ರಗತಿಯಲ್ಲಿ ತನಿಖೆ ನಡೆಸಲಿದ್ದ, ಆರೋಪಿಗಳ ಬಂಧನಕ್ಕೆ ಪ್ರಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ” ಎಂದರು.

ಪ್ರತಿಭಟನೆಯಲ್ಲಿ ಅಲೆಮಾರಿ ಮಹಾಸಭಾದ ಜಿಲ್ಲಾಧ್ಯಕ್ಷ ಕೆ.ಎಂ.ನಾಗರಾಜ್, ಕೃಷ್ಣಪ್ಪ, ಗುರುಮೂರ್ತಿ,  ಸಿಳ್ಳೆಕ್ಯಾತಾರ್ ಸಂಘದ ಜಿಲ್ಲಾಧ್ಯಕ್ಷ ತ್ಯಾಗರಾಜ, ರವಿಕುಮಾರ್, ಬಿಎಸ್‌ಪಿ ಜಿಲ್ಲಾಧ್ಯಕ್ಷ ವೆಂಕಟೇ ಶ್ಐಹೊಳೆ, ಎನ್. ಪ್ರಕಾಶ್ ಹೊಳಲ್ಕೆರೆ ಮುಂತಾದವರು ಭಾಗವಹಿಸಿದ್ದರು.


ಇದನ್ನೂ ಓದಿ: KRS ಬುಡದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಸಿಎಂ ಎದುರು ಹೋರಾಟ: ಮುಖಂಡರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...