Homeಮುಖಪುಟರಾಜಸ್ಥಾನ ಅವಿಶ್ವಾಸ ನಿರ್ಣಯಕ್ಕೆ ಗೈರು: ಶಾಸಕರಿಗೆ ಸಮನ್ಸ್ ನೀಡಿ ವಿವರಣೆ ಕೇಳಿದ ಬಿಜೆಪಿ

ರಾಜಸ್ಥಾನ ಅವಿಶ್ವಾಸ ನಿರ್ಣಯಕ್ಕೆ ಗೈರು: ಶಾಸಕರಿಗೆ ಸಮನ್ಸ್ ನೀಡಿ ವಿವರಣೆ ಕೇಳಿದ ಬಿಜೆಪಿ

ಅಂದು ಬೆಳಿಗ್ಗೆ ನಾನು ಸಭೆಯಲ್ಲಿದ್ದೆ. ಆದರೆ ಪದೇ ಪದೇ ಶೌಚಾಲಯಕ್ಕೆ ಹೋಗಬೇಕಾಗಿ ಬಂತು. ಇದು ಅಲ್ಲಿ ಸಾಧ್ಯವಿಲ್ಲದ್ದರಿಂದ, ಎಂಎಲ್‌ಎ ಕ್ವಾರ್ಟ್ರಸ್‌ಗೆ ಹೋಗಬೇಕಾಯಿತು. ಅಲ್ಲಿಗೆ ಹೊದ ಮೇಲೆ ವಿಶ್ವಾಸ ನಿರ್ಣಯದ ವಿಷಯ ತಿಳಿಯಿತು. ಹಾಗಾಗಿ ಅಲ್ಲಿಯೇ ನಿದ್ರೆಗೆ ಜಾರಿದೆ ಎಂದು ಗೋಪಿ ಚಂದ್ ಮೀನಾ ಹೇಳಿದ್ದಾರೆ.

- Advertisement -
- Advertisement -

ಆಗಸ್ಟ್ 14 ರಂದು ರಾಜಸ್ಥಾನ ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮಂಡಿಸಿದ ವಿಶ್ವಾಸ ನಿರ್ಣಯಕ್ಕೆ ಗೈರಾಗಿದ್ದ ರಾಜಸ್ಥಾನದ ನಾಲ್ಕು ಬಿಜೆಪಿ ಶಾಸಕರಿಗೆ ಪಕ್ಷವು ಸಮನ್ಸ್ ನೀಡಿ, ವಿವರಣೆಯನ್ನು ಕೇಳಿದೆ.

ಶಾಸಕರು ಪ್ರತಿಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಮತ್ತು ರಾಜ್ಯ ಪಕ್ಷದ ಅಧ್ಯಕ್ಷ ಸತೀಶ್ ಪೂನಿಯಾ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ.

ನಾಲ್ಕೂ ಶಾಸಕರಾದ ಗೋಪಿ ಚಂದ್ ಮೀನಾ, ಕೈಲಾಶ್ ಚಂದ್ರ ಮೀನಾ, ಹರೇಂದ್ರ ನಿನಾಮಾ ಮತ್ತು ಗೌತಮ್ ಲಾಲ್ ಅವರು ಆರಂಭದಲ್ಲಿ ಅಸೆಂಬ್ಲಿಯಲ್ಲಿ ಹಾಜರಿದ್ದೇವೆ, ಆದರೆ ಸಭೆಯನ್ನು ಮಧ್ಯಾಹ್ನ 1 ಗಂಟೆಯವರೆಗೆ ಮುಂದೂಡಿದ ನಂತರ ಗೈರಾದೆವು ಎಂದು ಹೇಳಿದ್ದಾರೆ.

ವಿಧಾನಸಭೆ ಅಧಿವೇಶನಕ್ಕೆ ಮುನ್ನ ಕುದುರೆ ವ್ಯಾಪರಾಕ್ಕೊಳಕ್ಕಾಗಬಹುದು ಎಂಬ ಭಯದಿಂದ ಗುಜರಾತ್‌ನ ರೆಸಾರ್ಟ್‌ಗೆ ಕಳುಹಿಸಲಾದ 18 ಬಿಜೆಪಿ ಶಾಸಕರಲ್ಲಿ ಈ ನಾಲ್ವರು ಸೇರಿದ್ದಾರೆ.

ರಾಜ್ಯ ಬಿಜೆಪಿ ಮುಖ್ಯಸ್ಥ ಪೂನಿಯಾ, “ಇದು ಅಷ್ಟಾಗಿ ಏನೂ ಗಂಭೀರವಾಗಿರಲಿಲ್ಲ. ಆದರೆ ಇದು ಅವರ ಅನುಪಸ್ಥಿತಿಯನ್ನು ಪರಿಗಣಿಸುತ್ತದೆ ಅಷ್ಟೆ. ಹಾಗಾಗಿ ನಾನು ಪ್ರತಿಪಕ್ಷದ ನಾಯಕನೊಂದಿಗೆ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

‘ಅತೃಪ್ತ ಶಾಸಕರು ಮತ್ತೆ ಒಂದಾಗಿದ್ದಾರೆ. ಹಾಗಾಗಿ ಬಿಜೆಪಿ ಅವಿಶ್ವಾಸ ನಿರ್ಣಯವನ್ನು ಕೈಬಿಟ್ಟು, ಕೊರೊನಾ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದರು. ನಾವು ಗೈರಾಗಲು ಇದೇ ಕಾರಣ’ ಎಂದು ಶಾಸಕ ಗೋಪಿ ಚಂದ್ ಮೀನಾ ಹೇಳಿದರು.

ಆರೋಗ್ಯ ಸರಿಯಿಲ್ಲದ ಕಾರಣ ಆಗಸ್ಟ್ 13 ರಂದು ಅತಿಸಾರ ಉಂಟಾಗಿ ನಾನು ಅಸ್ವಸ್ಥನಾಗಿದ್ದೆ. ತಮ್ಮ ಕ್ಷೇತ್ರವು ಜೈಪುರದಿಂದ 500 ಕಿ.ಮೀ ದೂರದಲ್ಲಿದೆ. ಗುಜರಾತ್‌ನಲ್ಲಿ ರಸ್ತೆ ಮೂಲಕ ಮತ್ತು ನಂತರ ರಾಜಸ್ಥಾನ ರಸ್ತೆ ಮೂಲಕ ಜೈಪುರಕ್ಕೆ ಪ್ರಯಾಣಿಸುವುದು ನನ್ನ ಆರೋಗ್ಯವನ್ನು ಹದಗೆಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಅಂದು ಬೆಳಿಗ್ಗೆ ನಾನು ಸಭೆಯಲ್ಲಿದ್ದೆ. ಆದರೆ ಪದೇ ಪದೇ ಶೌಚಾಲಯಕ್ಕೆ ಹೋಗಬೇಕಾಗಿ ಬಂತು. ಇದು ಅಲ್ಲಿ ಸಾಧ್ಯವಿಲ್ಲದ್ದರಿಂದ, ಎಂಎಲ್‌ಎ ಕ್ವಾರ್ಟ್ರಸ್‌ಗೆ ಹೋಗಬೇಕಾಯಿತು. ಅಲ್ಲಿಗೆ ಹೊದ ಮೇಲೆ ವಿಶ್ವಾಸ ನಿರ್ಣಯದ ವಿಷಯ ತಿಳಿಯಿತು. ಹಾಗಾಗಿ ಅಲ್ಲಿಯೇ ನಿದ್ರೆಗೆ ಜಾರಿದೆ ಎಂದು ಗೋಪಿ ಚಂದ್ ಮೀನಾ ಹೇಳಿದ್ದಾರೆ.

ಆದರೆ ಬಿಜೆಪಿಗಾಗಿ ದುಡಿದಿರುವ ನನಗೆ ಸಮನ್ಸ್ ನೀಡಿರುವುದು ಬೇಸರ ತಂದಿದೆ. ಅದರೂ ನನ್ನ ಆರೋಗ್ಯದ ಕಾರಣದಿಂದ ಆ ದಿನ ಸದನವನ್ನು ತೊರೆಯುವ ಮೂಲಕ ನಾನು ತಪ್ಪು ಮಾಡಿದ್ದೇನೆ ಎಂದು ನಾನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ನನ್ನ ಕಾರು ದುರಸ್ಥಿಯಲ್ಲಿತ್ತು. ಹಾಗಾಗಿ ನಾನು ಆಟೋ ರಿಕ್ಷಾದಲ್ಲಿ ಹೊರಟೆ. ಆದರೂ ಮಳೆಯಲ್ಲಿ ಸಿಲುಕಿಕೊಂಡೆ. ಹಾಗಾಗಿ ಸಭೆಗೆ ಹಾಜರಾಗಲು ತಡವಾಯಿತು ಎಂದು ಗರ್ಹಿ ಶಾಸಕ ಕೈಲಾಶ್ ಚಂದ್ರ ಹೇಳಿದ್ದಾರೆ.

ಮರುದಿನ ಸ್ವಾತಂತ್ರ್ಯ ದಿನಾಚರಣೆಗೆ ತಮ್ಮ ಕ್ಷೇತ್ರಕ್ಕೆ ಹೋಗಬೇಕೆಂದು ಕಾರ್ಯಕರ್ತರು ಒತ್ತಾಯಿಸಿದ್ದರಿಂದ, ಮತ್ತು ಸದನವನ್ನು 1 ಗಂಟೆಗೆ ಮುಂದೂಡಿದ್ದರಿಂದ ನಾನು ಗೈರಾಗಬೇಕಾಯಿತು ಎಂದು ಘಾಟೋಲ್ ಶಾಸಕ ಹರೇಂದ್ರ ನಿನಾಮಾ ವಿವರಣೆ ನೀಡಿದ್ದಾರೆ.

“ಅವಿಶ್ವಾಸ ನಿರ್ಣಯ ಮಂಡಿಸದಿರಲು ಪಕ್ಷ ನಿರ್ಧರಿಸಿತು. ಕಾಂಗ್ರೆಸ್ ಬಣಗಳು ಮತ್ತೆ ಒಂದಾಗಿದ್ದವು. ಆದ್ದರಿಂದ ಇನ್ನು ಏನೂ ಉಳಿದಿಲ್ಲ. ಇದಲ್ಲದೆ ನಾನು ಸ್ವಾತಂತ್ರ್ಯ ದಿನಾಚರಣೆಗೆ ನನ್ನ ಕ್ಷೇತ್ರದಲ್ಲಿ ಇರಬೇಕಾಗಿತ್ತು. ಆದ್ದರಿಂದ ಸದನವನ್ನು ಮುಂದೂಡಿದ ನಂತರ, ನಾನು ಎಂ ಎಲ್ ಎ ಕ್ವಾರ್ಟ್ರಸ್ ಗೆ ಮರಳಿದೆ. ಊಟದ ನಂತರ ಸ್ವಕ್ಷೇತ್ರಕ್ಕೆ ಹೊರಟೆ” ಎಂದು ಶಾಸಕ ಗೌತಮ್ ಲಾಲ್ ಹೇಳಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಮತ್ತು ಇತರ 18 ಶಾಸಕರ ಬಂಡಾಯದ ನಂತರ, ರಾಜಸ್ಥಾನದಲ್ಲಿ ಒಂದು ತಿಂಗಳ ಕಾಲ ರಾಜಕೀಯ ಬಿಕ್ಕಟ್ಟು ಸಂಭವಿಸಿತ್ತು. ಅಶೋಕ್ ಗೆಹ್ಲೋಟ್ ಶಿಬಿರದೊಂದಿಗೆ ಮತ್ತೆ ಒಂದಾದ ಅತೃಪ್ತರ ಬಣ ಆಗಸ್ಟ್ 14 ರಂದು ವಿಶ್ವಾಸಾರ್ಹ ನಿರ್ಣಯವನ್ನು ಮಂಡಿಸಿ, ಅದನ್ನು ಧ್ವನಿ ಮತದ ಮೂಲಕ ಗೆದ್ದುಕೊಂಡಿತು.

ರಾಜ್ಯ ಕಾಂಗ್ರೆಸ್‌ನಲ್ಲಿನ ದಂಗೆಯು ಬಿಜೆಪಿಯ ರಾಜ್ಯ ಘಟಕದೊಳಗೆ ಇರುವ ಬಿರುಕನ್ನು ಹೊರಗೆಳೆದಿದೆ. ಮಾಜಿ ಸಿಎಂ ವಸುಂಧರಾ ರಾಜೆ ಸುದೀರ್ಘ ಮೌನವನ್ನು ಕಾಯ್ದುಕೊಂಡಿದ್ದಾರೆ ಮತ್ತು ಅವರ ನಿಷ್ಠಾವಂತ ಮಾಜಿ ಸ್ಪೀಕರ್ ಕೈಲಾಶ್ ಮೇಘವಾಲ್ ಕುದುರೆ ವ್ಯಾಪಾರದ ವಿರುದ್ಧ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ: ರಾಜಸ್ಥಾನ ಬಿಕ್ಕಟ್ಟು: ವಿಶ್ವಾಸ ಮತ ಗೆದ್ದ ಗೆಹ್ಲೋಟ್; ಸರ್ಕಾರ ಭದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...