Homeಮುಖಪುಟವಿನಾಯಕ ಚತುರ್ಥಿ: ತಮಿಳುನಾಡಿನಲ್ಲಿ ಮಿತ್ರಪಕ್ಷಗಳಾದ AIADMK ಮತ್ತು BJP ಟ್ವೀಟ್ ಸಮರ

ವಿನಾಯಕ ಚತುರ್ಥಿ: ತಮಿಳುನಾಡಿನಲ್ಲಿ ಮಿತ್ರಪಕ್ಷಗಳಾದ AIADMK ಮತ್ತು BJP ಟ್ವೀಟ್ ಸಮರ

ಬಿಜೆಪಿ ಪಕ್ಷದ ರಾಜ್ಯ ಕನ್ವೀನರ್ ಐಟಿ ಮತ್ತು ಸಾಮಾಜಿಕ ಜಾಲತಾಣದ ಸಿ.ಟಿ. ನಿರ್ಮಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಎಐಎಡಿಎಂಕೆ ನಾಯಕರು 30 ವರ್ಷಗಳ ಕಾಲ ‘ಸೀರೆಯ’ ಹಿಂದೆ ಅಡಗಿಕೊಂಡಿದ್ದಾರೆ ಎಂದು ಹೇಳಿ, ದಿವಂಗತ ಜೆ. ಜಯಲಲಿತಾ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

- Advertisement -
- Advertisement -

ಆಗಸ್ಟ್ 14 ರಂದು ತಮಿಳುನಾಡು ಸರ್ಕಾರವು ಕೊರೊನಾ ಹಿನ್ನಲೆಯಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮಾಡುವ ಸಾರ್ವಜನಿಕ ಆಚರಣೆಗಳು, ಮೆರವಣಿಗೆಗಳನ್ನು ನಿಷೇಧಿಸಿದೆ. ಇದು ಸಾಂಸ್ಕೃತಿಕ ಹಬ್ಬವಾಗಿರುವುದರಿಂದ ನಿಯಮಗಳನ್ನು ಸಡಿಲಿಸಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿದೆ.

ಮೇ 2021 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ತನಕ ತಮಿಳುನಾಡಿನ ಎಐಎಡಿಎಂಕೆ ಜೊತೆ ಸೌಹಾರ್ದಯುತ ಸಂಬಂಧವನ್ನು ಹೊಂದಲು ಬಿಜೆಪಿ ಬಯಸುತ್ತಿದೆ, ಆದರೆ ಗಣೇಶ ಚತುರ್ಥಿಗೆ ಸಂಬಂಧಿಸಿದಂತೆ ಆಡಳಿತರೂಢ AIADMK ಮತ್ತು BJP ನಡುವೆ ಟ್ವಿಟ್ಟರ್‌‌ನಲ್ಲಿ ಯುದ್ದ ನಡೆಯುತ್ತಿದೆ.

ಕೊರೊನಾ ಸಾಂಕ್ರಾಮಿಕದಿಂದಾಗಿ ಕೇಂದ್ರವು ಹೊರಡಿಸಿದ ಮಾರ್ಗಸೂಚಿಗಳಿಗೆ ಅನುಸಾರವಾಗಿ ಈ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ (ಆಗಸ್ಟ್ 20) ತನ್ನ ಸ್ಪಷ್ಟನೆಯಲ್ಲಿ ಹೇಳಿದೆ. ಅಲ್ಲದೆ ರಾಜ್ಯ ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಮದ್ರಾಸ್ ಹೈಕೋರ್ಟ್ ಸಾರ್ವಜನಿಕರಿಗೆ ನಿರ್ದೇಶನ ನೀಡಿದೆ.

AIADMK ಲಾಂಛನ (PC: Money Control)

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಎಚ್.ರಾಜಾ, ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡಿರುವ ಕರ್ನಾಟಕದ ರಾಜ್ಯ ಸರ್ಕಾರವನ್ನು “ಗಂಡು ಸರ್ಕಾರ” ಎಂದು ಟ್ವೀಟ್ ಮಾಡುವ ಮೂಲಕ ತಮಿಳುನಾಡು ಸರ್ಕಾರವನ್ನು ಅಣಕಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಎಐಎಡಿಎಂಕೆ ಐಟಿ ವಿಭಾಗದ ಕಾರ್ಯದರ್ಶಿಗಳಾದ ರಾಜ್ ಸತ್ಯನ್ ಮತ್ತು ಕೋವಾಯ್ ಸತ್ಯನ್, “ಎಚ್. ರಾಜಾ ಕನಿಷ್ಠ ಸ್ಕೌಟ್ ಚುನಾವಣೆಯಲ್ಲಿ ಗೆಲ್ಲುವ ಮೂಲಕ ತನ್ನ ‘ಪುರುಷತ್ವವನ್ನು’ ಸಾಬೀತುಪಡಿಸಬೇಕು” ಎಂದು ತಿರುಗೇಟು ನೀಡಿದ್ದಾರೆ.

ಎಚ್‌. ರಾಜಾ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ (ತಮಿಳುನಾಡು) ನ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸ್ಫರ್ಧಿಸಿ ಕೇವಲ 52 ಮತ ಪಡೆದು ಸೋತಿದ್ದರು.

ಬಿಜೆಪಿ ಪಕ್ಷದ ರಾಜ್ಯ ಕನ್ವೀನರ್ ಐಟಿ ಮತ್ತು ಸಾಮಾಜಿಕ ಜಾಲತಾಣದ ಸಿ.ಟಿ. ನಿರ್ಮಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಎಐಎಡಿಎಂಕೆ ನಾಯಕರು 30 ವರ್ಷಗಳ ಕಾಲ ‘ಸೀರೆಯ’ ಹಿಂದೆ ಅಡಗಿಕೊಂಡಿದ್ದಾರೆ ಎಂದು ಹೇಳಿ, ದಿವಂಗತ ಜೆ. ಜಯಲಲಿತಾ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

ಈ ಟ್ವೀಟ್ ಯುದ್ದವು ಇಲ್ಲಿಗೆ ಮುಗಿಯದೆ ಎಐಎಡಿಎಂಕೆ ಅಧಿಕೃತ ಟ್ವಿಟರ್ ಹ್ಯಾಂಡಲ್ ಕೂಡಾ ಯುದ್ಧಕ್ಕೆ ಸೇರಿದ್ದು, ಚುನಾವಣೆಯಲ್ಲಿ ’ನೋಟಾ’ವನ್ನು ಸೋಲಿಸಲು ಸಾಧ್ಯವಾಗದ ಒಬ್ಬರ ಕೋಮು ಹಿತಾಸಕ್ತಿಗಳಿಗಾಗಿ ತಮಿಳುನಾಡು ಸರ್ಕಾರ ತನ್ನ ಜನರ ಜೀವನವನ್ನು ಗಿರವಿಗೆ ಇಡುವುದಿಲ್ಲ ಎಂದು ಹೇಳಿದೆ. “ಅವರು ಚುನಾವಣೆಯಲ್ಲಿ ಸ್ವತಂತ್ರವಾಗಿ ಹೋರಾಡಲಿ ಮತ್ತು ಕನಿಷ್ಠ ತಮ್ಮ ಠೇವಣಿಗಳನ್ನು ಉಳಿಸಲಿ. ಈ ರೀತಿಯಾಗಿ ತಮ್ಮ ಪುರುಷತ್ವವನ್ನು ಸಾಬೀತುಪಡಿಸಲಿ” ಎಂದು ಅದು ಹೇಳಿದೆ.

ಈ ಎಲ್ಲ ಕಾದಾಟಗಳ ಮಧ್ಯೆ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ ಪನ್ನೀರ್‌ ಸೆಲ್ವಂ ಸೇರಿದಂತೆ ಪಕ್ಷದ ಉನ್ನತ ಮಟ್ಟದ ಮೌನವಾಗಿದ್ದಾರೆ. 2017 ರಲ್ಲಿ ತಮಿಳು ವಾರಪತ್ರಿಕೆ ತುಘ್ಲಕ್ ಸಂಪಾದಕರಾದ ಗುರುಮೂರ್ತಿ ಇದೇ ರೀತಿಯಲ್ಲಿ ಆಪಾದನೆ ಮಾಡಿದಾಗಲೂ ಉನ್ನತ ಮಟ್ಟದ ನಾಯಕರು ಮೌನವಾಗಿದ್ದರು.

ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ (PC: New Indian Express.)

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಮೀನುಗಾರಿಕೆ ಸಚಿವ ಡಿ.ಜಯಕುಮಾರ್, “ಎಐಎಡಿಎಂಕೆ ಸರ್ಕಾರ ಗಂಡಸು ಸರ್ಕಾರ. ಎಚ್. ರಾಜಾ ನಮ್ಮನ್ನು ತಪ್ಪು ದಾರಿಗೆ ತಳ್ಳಬಾರದು.” ಎಂದು ಹೇಳಿದ್ದಾರೆ. ವಿಶೇಷವೆಂದರೆ, 2017 ರಲ್ಲಿ ಪಕ್ಷದ ಉನ್ನತ ನಾಯಕರ ಪರವಾಗಿ ಗುರುಮೂರ್ತಿಯನ್ನು ಡಿ. ಜಯಕುಮಾರ್‌ ಎದುರಿಸಿದ್ದರು.

ಇಷ್ಟೆ ಅಲ್ಲದೆ ಹಿಂದೂ ಮುನ್ನನಿ ಎಂಬ ಬಲಪಂಥೀಯ ಸಂಘಟನೆಯೊಂದು ರಾಜ್ಯದ ಆದೇಶವನ್ನು ಧಿಕ್ಕರಿಸಿ ರಾಜ್ಯದಲ್ಲಿ ಸುಮಾರು 1.5 ಲಕ್ಷ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವುದಾಗಿ ಹೇಳಿದೆ.

ಆಗಸ್ಟ್ 18 ರಂದು ಹೈಕೋರ್ಟ್‌ನ ಮಧುರೈ ಪೀಠದಲ್ಲಿ ಸಲ್ಲಿಸಿದ್ದ ಅರ್ಜಿಯು ಸಾರ್ವಜನಿಕ ಸಂಭ್ರಮಾಚರಣೆಗೆ ಅನುಮತಿ ನಿಡುವಂತೆ ಹಿಂದು ಮುನ್ನನಿ ಕೋರಿತ್ತು. ನ್ಯಾಯಾಲಯವು ಅನುಮತಿಯನ್ನು ನಿರಾಕರಿಸಿದ್ದಲ್ಲದೆ, ಅರ್ಜಿಯನ್ನು ಹಿಂಪಡೆಯದಿದ್ದರೆ ಅರ್ಜಿದಾರರಿಗೆ ದಂಡ ವಿಧಿಸಲಾಗುವುದು ಎಂದು ಹೇಳಿದೆ.

ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷ ಎಲ್ ಮುರುಗನ್ ಮತ್ತು ಇತರ ಹಿರಿಯ ಮುಖಂಡರು ಮುಖ್ಯಮಂತ್ರಿ ಪಳನಿಸ್ವಾಮಿಯನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಕೆಲವು ನಿರ್ಬಂಧಗಳನ್ನು ಸರಾಗಗೊಳಿಸಿವಂತೆ ಕೇಳಿದ್ದರೂ ಅವರು ಒಪ್ಪಿಲ್ಲ.

ಹಿಂದೂ ಮುನ್ನನಿಯ ಹೇಳಿಕೆಯನ್ನು ಬೆಂಬಲಿಸಿದ ಬಿಜೆಪಿಯು “ಸಣ್ಣ ದೇವಾಲಯಗಳಲ್ಲಿ ಸಾರ್ವಜನಿಕ ಪೂಜೆಯನ್ನು ಮತ್ತು ಮದ್ಯದ ಅಂಗಡಿಗಳನ್ನು ತೆರೆಯಲು ರಾಜ್ಯವು ಅನುಮತಿ ನೀಡಿದಾಗ, ವಿನಾಯಕ ಚತುರ್ಥಿ ಆಚರಣೆಯನ್ನು ಸಾರ್ವಜನಿಕವಾಗಿ ಸರ್ಕಾರ ಏಕೆ ನಿರಾಕರಿಸುತ್ತಿದೆ. ಕೊರೊನಾ ಪ್ರಕರಣ ಮತ್ತು ಸಾವುಗಳು ಹೆಚ್ಚಿರುವ ಮಹಾರಾಷ್ಟ್ರ ಚತುರ್ಥಿ ರ್‍ಯಾಲಿಗಳಿಗೆ ಅವಕಾಶ ನೀಡಿದಾಗ, ತಮಿಳುನಾಡು ಸರ್ಕಾರವು ನಮಗೆ ಏಕೆ ಅನುಮತಿ ನೀಡಲು ಸಾಧ್ಯವಿಲ್ಲ?” ಎಂದು ಹೇಳಿದೆ.

ಆದರೆ ತಮಿಳುನಾಡು ಸರ್ಕಾರ ತಮ್ಮ ಮನೆಗಳಲ್ಲೇ ವಿನಾಯಕ ಚತುರ್ಥಿಯನ್ನು ಆಚರಿಸುವಂತೆ ರಾಜ್ಯದ ಜನತೆಯಲ್ಲಿ ವಿನಂತಿಸಿದೆ. ಕೇಂದ್ರದ ಸೂಚನೆಯಂತೆ ಧಾರ್ಮಿಕ ಹಬ್ಬಗಳು ಮತ್ತು ಸಾಮೂಹಿಕ ಪ್ರಾರ್ಥನೆಗಳನ್ನು ನಿಷೇಧಿಸಲಾಗಿದೆ ಎಂದು ಅದು ಪುನರುಚ್ಚರಿಸಿದೆ.


ಓದಿ: ’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...