Homeಮುಖಪುಟವಿನಾಯಕ ಚತುರ್ಥಿ: ತಮಿಳುನಾಡಿನಲ್ಲಿ ಮಿತ್ರಪಕ್ಷಗಳಾದ AIADMK ಮತ್ತು BJP ಟ್ವೀಟ್ ಸಮರ

ವಿನಾಯಕ ಚತುರ್ಥಿ: ತಮಿಳುನಾಡಿನಲ್ಲಿ ಮಿತ್ರಪಕ್ಷಗಳಾದ AIADMK ಮತ್ತು BJP ಟ್ವೀಟ್ ಸಮರ

ಬಿಜೆಪಿ ಪಕ್ಷದ ರಾಜ್ಯ ಕನ್ವೀನರ್ ಐಟಿ ಮತ್ತು ಸಾಮಾಜಿಕ ಜಾಲತಾಣದ ಸಿ.ಟಿ. ನಿರ್ಮಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಎಐಎಡಿಎಂಕೆ ನಾಯಕರು 30 ವರ್ಷಗಳ ಕಾಲ ‘ಸೀರೆಯ’ ಹಿಂದೆ ಅಡಗಿಕೊಂಡಿದ್ದಾರೆ ಎಂದು ಹೇಳಿ, ದಿವಂಗತ ಜೆ. ಜಯಲಲಿತಾ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

- Advertisement -
- Advertisement -

ಆಗಸ್ಟ್ 14 ರಂದು ತಮಿಳುನಾಡು ಸರ್ಕಾರವು ಕೊರೊನಾ ಹಿನ್ನಲೆಯಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮಾಡುವ ಸಾರ್ವಜನಿಕ ಆಚರಣೆಗಳು, ಮೆರವಣಿಗೆಗಳನ್ನು ನಿಷೇಧಿಸಿದೆ. ಇದು ಸಾಂಸ್ಕೃತಿಕ ಹಬ್ಬವಾಗಿರುವುದರಿಂದ ನಿಯಮಗಳನ್ನು ಸಡಿಲಿಸಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿದೆ.

ಮೇ 2021 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ತನಕ ತಮಿಳುನಾಡಿನ ಎಐಎಡಿಎಂಕೆ ಜೊತೆ ಸೌಹಾರ್ದಯುತ ಸಂಬಂಧವನ್ನು ಹೊಂದಲು ಬಿಜೆಪಿ ಬಯಸುತ್ತಿದೆ, ಆದರೆ ಗಣೇಶ ಚತುರ್ಥಿಗೆ ಸಂಬಂಧಿಸಿದಂತೆ ಆಡಳಿತರೂಢ AIADMK ಮತ್ತು BJP ನಡುವೆ ಟ್ವಿಟ್ಟರ್‌‌ನಲ್ಲಿ ಯುದ್ದ ನಡೆಯುತ್ತಿದೆ.

ಕೊರೊನಾ ಸಾಂಕ್ರಾಮಿಕದಿಂದಾಗಿ ಕೇಂದ್ರವು ಹೊರಡಿಸಿದ ಮಾರ್ಗಸೂಚಿಗಳಿಗೆ ಅನುಸಾರವಾಗಿ ಈ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ (ಆಗಸ್ಟ್ 20) ತನ್ನ ಸ್ಪಷ್ಟನೆಯಲ್ಲಿ ಹೇಳಿದೆ. ಅಲ್ಲದೆ ರಾಜ್ಯ ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಮದ್ರಾಸ್ ಹೈಕೋರ್ಟ್ ಸಾರ್ವಜನಿಕರಿಗೆ ನಿರ್ದೇಶನ ನೀಡಿದೆ.

AIADMK ಲಾಂಛನ (PC: Money Control)

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಎಚ್.ರಾಜಾ, ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡಿರುವ ಕರ್ನಾಟಕದ ರಾಜ್ಯ ಸರ್ಕಾರವನ್ನು “ಗಂಡು ಸರ್ಕಾರ” ಎಂದು ಟ್ವೀಟ್ ಮಾಡುವ ಮೂಲಕ ತಮಿಳುನಾಡು ಸರ್ಕಾರವನ್ನು ಅಣಕಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಎಐಎಡಿಎಂಕೆ ಐಟಿ ವಿಭಾಗದ ಕಾರ್ಯದರ್ಶಿಗಳಾದ ರಾಜ್ ಸತ್ಯನ್ ಮತ್ತು ಕೋವಾಯ್ ಸತ್ಯನ್, “ಎಚ್. ರಾಜಾ ಕನಿಷ್ಠ ಸ್ಕೌಟ್ ಚುನಾವಣೆಯಲ್ಲಿ ಗೆಲ್ಲುವ ಮೂಲಕ ತನ್ನ ‘ಪುರುಷತ್ವವನ್ನು’ ಸಾಬೀತುಪಡಿಸಬೇಕು” ಎಂದು ತಿರುಗೇಟು ನೀಡಿದ್ದಾರೆ.

ಎಚ್‌. ರಾಜಾ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ (ತಮಿಳುನಾಡು) ನ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸ್ಫರ್ಧಿಸಿ ಕೇವಲ 52 ಮತ ಪಡೆದು ಸೋತಿದ್ದರು.

ಬಿಜೆಪಿ ಪಕ್ಷದ ರಾಜ್ಯ ಕನ್ವೀನರ್ ಐಟಿ ಮತ್ತು ಸಾಮಾಜಿಕ ಜಾಲತಾಣದ ಸಿ.ಟಿ. ನಿರ್ಮಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಎಐಎಡಿಎಂಕೆ ನಾಯಕರು 30 ವರ್ಷಗಳ ಕಾಲ ‘ಸೀರೆಯ’ ಹಿಂದೆ ಅಡಗಿಕೊಂಡಿದ್ದಾರೆ ಎಂದು ಹೇಳಿ, ದಿವಂಗತ ಜೆ. ಜಯಲಲಿತಾ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

ಈ ಟ್ವೀಟ್ ಯುದ್ದವು ಇಲ್ಲಿಗೆ ಮುಗಿಯದೆ ಎಐಎಡಿಎಂಕೆ ಅಧಿಕೃತ ಟ್ವಿಟರ್ ಹ್ಯಾಂಡಲ್ ಕೂಡಾ ಯುದ್ಧಕ್ಕೆ ಸೇರಿದ್ದು, ಚುನಾವಣೆಯಲ್ಲಿ ’ನೋಟಾ’ವನ್ನು ಸೋಲಿಸಲು ಸಾಧ್ಯವಾಗದ ಒಬ್ಬರ ಕೋಮು ಹಿತಾಸಕ್ತಿಗಳಿಗಾಗಿ ತಮಿಳುನಾಡು ಸರ್ಕಾರ ತನ್ನ ಜನರ ಜೀವನವನ್ನು ಗಿರವಿಗೆ ಇಡುವುದಿಲ್ಲ ಎಂದು ಹೇಳಿದೆ. “ಅವರು ಚುನಾವಣೆಯಲ್ಲಿ ಸ್ವತಂತ್ರವಾಗಿ ಹೋರಾಡಲಿ ಮತ್ತು ಕನಿಷ್ಠ ತಮ್ಮ ಠೇವಣಿಗಳನ್ನು ಉಳಿಸಲಿ. ಈ ರೀತಿಯಾಗಿ ತಮ್ಮ ಪುರುಷತ್ವವನ್ನು ಸಾಬೀತುಪಡಿಸಲಿ” ಎಂದು ಅದು ಹೇಳಿದೆ.

ಈ ಎಲ್ಲ ಕಾದಾಟಗಳ ಮಧ್ಯೆ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ ಪನ್ನೀರ್‌ ಸೆಲ್ವಂ ಸೇರಿದಂತೆ ಪಕ್ಷದ ಉನ್ನತ ಮಟ್ಟದ ಮೌನವಾಗಿದ್ದಾರೆ. 2017 ರಲ್ಲಿ ತಮಿಳು ವಾರಪತ್ರಿಕೆ ತುಘ್ಲಕ್ ಸಂಪಾದಕರಾದ ಗುರುಮೂರ್ತಿ ಇದೇ ರೀತಿಯಲ್ಲಿ ಆಪಾದನೆ ಮಾಡಿದಾಗಲೂ ಉನ್ನತ ಮಟ್ಟದ ನಾಯಕರು ಮೌನವಾಗಿದ್ದರು.

ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ (PC: New Indian Express.)

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಮೀನುಗಾರಿಕೆ ಸಚಿವ ಡಿ.ಜಯಕುಮಾರ್, “ಎಐಎಡಿಎಂಕೆ ಸರ್ಕಾರ ಗಂಡಸು ಸರ್ಕಾರ. ಎಚ್. ರಾಜಾ ನಮ್ಮನ್ನು ತಪ್ಪು ದಾರಿಗೆ ತಳ್ಳಬಾರದು.” ಎಂದು ಹೇಳಿದ್ದಾರೆ. ವಿಶೇಷವೆಂದರೆ, 2017 ರಲ್ಲಿ ಪಕ್ಷದ ಉನ್ನತ ನಾಯಕರ ಪರವಾಗಿ ಗುರುಮೂರ್ತಿಯನ್ನು ಡಿ. ಜಯಕುಮಾರ್‌ ಎದುರಿಸಿದ್ದರು.

ಇಷ್ಟೆ ಅಲ್ಲದೆ ಹಿಂದೂ ಮುನ್ನನಿ ಎಂಬ ಬಲಪಂಥೀಯ ಸಂಘಟನೆಯೊಂದು ರಾಜ್ಯದ ಆದೇಶವನ್ನು ಧಿಕ್ಕರಿಸಿ ರಾಜ್ಯದಲ್ಲಿ ಸುಮಾರು 1.5 ಲಕ್ಷ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವುದಾಗಿ ಹೇಳಿದೆ.

ಆಗಸ್ಟ್ 18 ರಂದು ಹೈಕೋರ್ಟ್‌ನ ಮಧುರೈ ಪೀಠದಲ್ಲಿ ಸಲ್ಲಿಸಿದ್ದ ಅರ್ಜಿಯು ಸಾರ್ವಜನಿಕ ಸಂಭ್ರಮಾಚರಣೆಗೆ ಅನುಮತಿ ನಿಡುವಂತೆ ಹಿಂದು ಮುನ್ನನಿ ಕೋರಿತ್ತು. ನ್ಯಾಯಾಲಯವು ಅನುಮತಿಯನ್ನು ನಿರಾಕರಿಸಿದ್ದಲ್ಲದೆ, ಅರ್ಜಿಯನ್ನು ಹಿಂಪಡೆಯದಿದ್ದರೆ ಅರ್ಜಿದಾರರಿಗೆ ದಂಡ ವಿಧಿಸಲಾಗುವುದು ಎಂದು ಹೇಳಿದೆ.

ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷ ಎಲ್ ಮುರುಗನ್ ಮತ್ತು ಇತರ ಹಿರಿಯ ಮುಖಂಡರು ಮುಖ್ಯಮಂತ್ರಿ ಪಳನಿಸ್ವಾಮಿಯನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಕೆಲವು ನಿರ್ಬಂಧಗಳನ್ನು ಸರಾಗಗೊಳಿಸಿವಂತೆ ಕೇಳಿದ್ದರೂ ಅವರು ಒಪ್ಪಿಲ್ಲ.

ಹಿಂದೂ ಮುನ್ನನಿಯ ಹೇಳಿಕೆಯನ್ನು ಬೆಂಬಲಿಸಿದ ಬಿಜೆಪಿಯು “ಸಣ್ಣ ದೇವಾಲಯಗಳಲ್ಲಿ ಸಾರ್ವಜನಿಕ ಪೂಜೆಯನ್ನು ಮತ್ತು ಮದ್ಯದ ಅಂಗಡಿಗಳನ್ನು ತೆರೆಯಲು ರಾಜ್ಯವು ಅನುಮತಿ ನೀಡಿದಾಗ, ವಿನಾಯಕ ಚತುರ್ಥಿ ಆಚರಣೆಯನ್ನು ಸಾರ್ವಜನಿಕವಾಗಿ ಸರ್ಕಾರ ಏಕೆ ನಿರಾಕರಿಸುತ್ತಿದೆ. ಕೊರೊನಾ ಪ್ರಕರಣ ಮತ್ತು ಸಾವುಗಳು ಹೆಚ್ಚಿರುವ ಮಹಾರಾಷ್ಟ್ರ ಚತುರ್ಥಿ ರ್‍ಯಾಲಿಗಳಿಗೆ ಅವಕಾಶ ನೀಡಿದಾಗ, ತಮಿಳುನಾಡು ಸರ್ಕಾರವು ನಮಗೆ ಏಕೆ ಅನುಮತಿ ನೀಡಲು ಸಾಧ್ಯವಿಲ್ಲ?” ಎಂದು ಹೇಳಿದೆ.

ಆದರೆ ತಮಿಳುನಾಡು ಸರ್ಕಾರ ತಮ್ಮ ಮನೆಗಳಲ್ಲೇ ವಿನಾಯಕ ಚತುರ್ಥಿಯನ್ನು ಆಚರಿಸುವಂತೆ ರಾಜ್ಯದ ಜನತೆಯಲ್ಲಿ ವಿನಂತಿಸಿದೆ. ಕೇಂದ್ರದ ಸೂಚನೆಯಂತೆ ಧಾರ್ಮಿಕ ಹಬ್ಬಗಳು ಮತ್ತು ಸಾಮೂಹಿಕ ಪ್ರಾರ್ಥನೆಗಳನ್ನು ನಿಷೇಧಿಸಲಾಗಿದೆ ಎಂದು ಅದು ಪುನರುಚ್ಚರಿಸಿದೆ.


ಓದಿ: ’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...