Homeಕರ್ನಾಟಕಬಿಜೆಪಿ ನಳಿನ್ ಕುಮಾರ್‌ ಎಂಬ ’ನಕಲಿ ಶ್ಯಾಮ’ನನ್ನು ಅಧ್ಯಕ್ಷ ಸ್ಥಾನಕ್ಕೇರಿಸಿದೆ: ಸಿದ್ದರಾಮಯ್ಯ ವ್ಯಂಗ್ಯ

ಬಿಜೆಪಿ ನಳಿನ್ ಕುಮಾರ್‌ ಎಂಬ ’ನಕಲಿ ಶ್ಯಾಮ’ನನ್ನು ಅಧ್ಯಕ್ಷ ಸ್ಥಾನಕ್ಕೇರಿಸಿದೆ: ಸಿದ್ದರಾಮಯ್ಯ ವ್ಯಂಗ್ಯ

10 ಹಿಂದುಗಳ ಹತ್ಯೆಯ ಆರೋಪಿಗಳು ಎಸ್‌ಡಿಪಿಐ, ಪಿಎಫ್ಐ ಸಂಘಟನೆಯವರಾದರೆ, 11 ಮುಸ್ಲಿಮ್ ಮತ್ತು 10 ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಯವರು. ಈಗ ಹೇಳಿ ಯಾವುದನ್ನು ನಿಷೇಧಿಸುತ್ತೀರಿ?

- Advertisement -
- Advertisement -

ಬುದ್ದಿವಂತರ ಜಿಲ್ಲೆ‌ ಎಂಬ ದಕ್ಷಿಣಕನ್ನಡದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು ನಳಿನ್ ಕುಮಾರ್‌‌
ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರಬಹುದು, ಇಲ್ಲವೇ ಪಕ್ಷದಲ್ಲಿ ಈ ಮಟ್ಟದ ಬೌದ್ದಿಕ ದಾರಿದ್ರ್ಯ ಇದ್ದಿರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

“ಬಿಜೆಪಿ ವಿರುದ್ಧ ಅನಗತ್ಯವಾದ ಆರೋಪಗಳನ್ನು ಮಾಡುತ್ತಿರುವ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ನಕಲಿ ನಾಯಕ” ಎಂದು ದೂರಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೆ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳ ಮೂಲಕ ತಿರುಗೇಟು ನೀಡಿದ್ದಾರೆ.

“ನಳಿನ್ ಕುಮಾರ್ ಕಟೀಲ್ ಅವರೇ, 2013-18 ರ ಅವಧಿಯಲ್ಲಿ 24 ಹಿಂದುಗಳ ಹತ್ಯೆಯಾಗಿದೆ ಎಂದು ಹೇಳಿದ್ದೀರಿ. ಕೋಮುಸಂಘರ್ಷದಲ್ಲಿ ಹತ್ಯೆಗೀಡಾದವರು 24 ಅಲ್ಲ, ಹಿಂದು-ಮುಸ್ಲಿಮ್ ಸೇರಿ ಒಟ್ಟು 45. ಈ ಪ್ರಕರಣಗಳನ್ನು ದಾಖಲೆ ಸಮೇತ ವಿವರಿಸಿ ನಮ್ಮ ಪಕ್ಷ ಪ್ರಕಟಿಸಿದ ಪುಸ್ತಕವನ್ನು ಓದಿ ನಿಮ್ಮ ಮನಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ

“2013-18 ರ ಅವಧಿಯಲ್ಲಿ ಕೋಮುಸಂಘರ್ಷಕ್ಕೆ ಹತ್ಯೆಗೀಡಾಗಿದ್ದ 10 ಹಿಂದುಗಳ ಹತ್ಯೆಯ ಆರೋಪಿಗಳು ಎಸ್‌ಡಿಪಿಐ, ಪಿಎಫ್ಐ ಸಂಘಟನೆಯವರಾದರೆ, 11 ಮುಸ್ಲಿಮ್ ಮತ್ತು ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಯವರು. ಈಗ ಹೇಳಿ ಯಾವುದನ್ನು ನಿಷೇಧಿಸುತ್ತೀರಿ?” ಎಂದು ಪ್ರಶ್ನಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ಹತ್ಯೆಗೀಡಾಗಿದ್ದಾರೆಂದು ಆರೋಪಿಸಿ ಬಿಜೆಪಿಯವರು ಕೇಂದ್ರ ಸರ್ಕಾರಕ್ಕೆ ಕಳಿಸಿದ್ದ ಪಟ್ಟಿಯಲ್ಲಿ ಜೀವಂತವಾಗಿ ಇರುವ ಅಶೋಕ್ ಪೂಜಾರಿ ಅವರ ಹೆಸರನ್ನು ಸೇರಿಸಿರುವ ನಿಮ್ಮ ಪಕ್ಷ ತನ್ನ ಬಣ್ಣ ತಾನೇ ಬಯಲು ಮಾಡಿಕೊಂಡು ನಗೆಪಾಟಲಿಗೀಡಾಗಿದ್ದು ನೆನಪಿದೆಯೇ ನಳಿನ್ ಕುಮಾರ್ ಅವರೇ? ಎಂದು ಕೇಳಿದ್ದಾರೆ.

ಇದನ್ನೂ ಓದಿ: ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ: ಸಿದ್ದರಾಮಯ್ಯ

ಹಿಂದೂಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನಳಿನ್ ಕುಮಾರ್ ಅವರೇ, ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆಯ ಪ್ರಕರಣ ತನಿಖೆಯನ್ನು ಸಿಬಿಐ ನಡೆಸುತ್ತಿದೆ, ನಿಮ್ಮ ಪ್ರಭಾವ ಬೀರಿ ಶೀಘ್ರವಾಗಿ ಈ ಹತ್ಯೆಯ ಅಪರಾಧಿಗಳನ್ನು ಪತ್ತೆಹಚ್ಚಿ ಹಿಂದು ಪರೇಶ್ ಮೇಸ್ತನ ಕುಟುಂಬಕ್ಕೆ ನ್ಯಾಯ ಯಾವಾಗ ಕೊಡಿಸುವಿರಿ? ಎಂದು ಆಗ್ರಹಿಸಿದ್ದಾರೆ.

ಹಿಂದುಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನೀವು, ದಕ್ಷಿಣ ಕನ್ನಡದ ಪ್ರಕಾಶ್ ಕುಳಾಯಿ, ಕೇಶವ ಶೆಟ್ಟಿ, ಹರೀಶ್ ಪೂಜಾರಿ, ಬ್ರಹ್ಮಾವರದ ಪ್ರವೀಣ್ ಪೂಜಾರಿ, ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್, ಮತ್ತು ಧನ್ಯಶ್ರೀ ಹಾಗೂ ವಿಜಯಪುರದ ದಾನಮ್ಮ ಹತ್ಯೆಯ ಆರೋಪಿಗಳು ಯಾರೆಂದು ತಿಳಿಸುವಿರಾ? ಎಂದು ಕೇಳಿದ್ದಾರೆ.

ಹಿಂದು ಧರ್ಮಕ್ಕೆ ಸೇರಿರುವ ಮಂಗಳೂರಿನ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುವಿರಾ? ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯ ಕೊಡಿಸುತ್ತೀರಿ? ಎಂದು ಪ್ರಶ್ನೆಗಳ ಸುರಿಮಳೆ ಹಾಕಿದ್ದಾರೆ.


ಓದಿ: ಪ್ರವಾದಿ ನಿಂದನೆ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣ: ಸಿದ್ದರಾಮಯ್ಯನವರ 13 ಅಂಶಗಳ ಪತ್ರ – ಉತ್ತರಿಸುವರೇ ಸಿಎಂ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...