Homeಕವನಗೌಹರ್ ರಾಜ಼ ಅವರ ‘ಮೈ ಲಾರ್ಡ್’ ಕನ್ನಡಾನುವಾದ

ಗೌಹರ್ ರಾಜ಼ ಅವರ ‘ಮೈ ಲಾರ್ಡ್’ ಕನ್ನಡಾನುವಾದ

- Advertisement -
- Advertisement -

ಮೈ ಲಾರ್ಡ್

ನನ್ನ ದೊರೆಯೇ

 

ನಾ ಮಾಡಿದ ಅಪರಾಧ ದೊಡ್ಡದು ದೊರೆಯೇ,

ಬಹಳ ಗಂಭೀರ.

 

ಎಲ್ಲರೂ ಬಾಯಿ ಮುಚ್ಚಿಕೊಂಡಿರಲೇಬೇಕಾದ ಈ ಕಾಲದಲ್ಲಿ

ನಾನು ಬಾಯಿ ತೆಗೆಯುವ ಉದ್ಧಟತನ ಮಾಡಿದೆ

ಅದು ಅಪರಾಧವೆ ಸರಿ

ಅದಕ್ಕೆ ನೀವು ಯಾವ ಶಿಕ್ಷೆಯಾದರೂ ಕೊಡಿ ನನ್ನ ದೊರೆಯೇ ,

ಎಷ್ಟಾದರೂ ನೀವು ದೈವೀ  ಛಾಯೆಯವರು.

 

ನ್ಯಾಯದಾನ ನಿಮ್ಮ ಕೆಲಸ, ನೀವು ಅದನ್ನು ಮಾಡಿ

ನೀವು ಸ್ವತಂತ್ರರು,

 

ನೀವು ನ್ಯಾಯಕ್ಕೆ ಯಾವುದೇ ರೂಪ ಕೊಡಬಹುದು

ಅದಕ್ಕೆ ನಮ್ಮ ಒಪ್ಪಿಗೆ ಇದೆ

ಅದನ್ನು ನೀವು ಬೇಕಾದಹಾಗೆ ಬದಲಾಯಿಸಿ,

 

ಅಥವಾ ತೆರೆದ ತುಟಿ ಹೊಲಿಯುವ ಸೂಜಿಯನ್ನಾಗಿಸಿ

ಹಗೆ ತೀರಿಸಿಕೊಳ್ಳಿ,

ನಮಗೆ ಒಪ್ಪಿಗೆ.

ಗೌಹರ್ ರಾಜ಼

 

ನ್ಯಾಯ ಖಡ್ಗದಿಂದ ನಿಮ್ಮೆಡೆ  ತೋರಿದ ಪ್ರತಿ ಬೆರಳನ್ನು ಕತ್ತರಿಸಿ ಬಿಸಾಕಿ,

ಇನ್ನೊಮ್ಮೆ ಯಾವ ನಿಯಾಮಕನ ಕಡೆ ಯಾರೂ ತೋರಿರಬಾರದು,

ಹಾಗೆ ಕತ್ತರಿಸಿ.

 

ನೀವು ಸ್ವತಂತ್ರರು

ನೀವು ನ್ಯಾಯದಾನ ಮಾಡಿ,

ಅದನ್ನು ನೀವು ಉಡಾಳ ಹುಡುಗರಿಗೆ ಪೆಟ್ಟು ಕೊಡುವ

ನಾಗರ ಬೆತ್ತವನ್ನಾಗಿಸಿ.

 

ನಾ ಮಾಡಿದ ಅಪರಾಧ ದೊಡ್ಡದು ದೊರೆಯೇ

ಬಹಳ ಗಂಭೀರ

ನೀವು ಯಾವ ಶಿಕ್ಷೆ ಯಾದರೂ ಕೊಡಿ ನನಗೆ.

 

ಆದರೆ

ನೀವು ಅವಕಾಶ ಕೊಟ್ಟರೆ

ಒಂದು ಮಾತು ಹೇಳಲೇ,

ಮೈ ಲಾರ್ಡ್,

ಇತಿಹಾಸದ ಒಂದು ಪಾಠ ನೆನಪಿಸಿಕೊಳ್ಳೋಣವೇ.

 

ಪ್ರತಿ ಶರತ್ಕಾಲದಲ್ಲಿ

ಹೂವು ಅರಳುತ್ತಲೇ ಇರುತ್ತವೆ

ಒಂದು ತುಂಡು ಮೋಡ ಎಲ್ಲಿಂದಲೋ

ಬಂದು ಬರಡು ಭೂಮಿಯ ಮೇಲೆ ಮಳೆ ಸುರಿಸುತ್ತದೆ

ನಗ್ನ ಗಿಡವೊಂದರ ಮೇಲಿನ ಮಗ್ನ  ಕೋಗಿಲೆ ಹಾಡುತ್ತಲೇ ಇರುತ್ತದೆ

ಪ್ರತಿ ದಿಕ್ಕಿನಿಂದ ಕೇಳುತ್ತಿರುತ್ತದೆ ಒಂದೇ ಕೂಗು

ನದಿ ಕೊಳ್ಳದ ತುಂಬೆಲ್ಲ ಅದೇ ಹಾಡು

ಆ ಹಾಡನ್ನು ಬಂಧಿಸಲಾದೀತೇ?

ಹಾಡು ಸ್ವತಂತ್ರ

ಎಲ್ಲ ದಿಕ್ಕಿಗೆ ಹರಿದು ಹೋದೀತು,

ಅಷ್ಟೇ.

-ಗೌಹರ್ ರಾಜ಼,
ಭಾರತೀಯ ವಿಜ್ಞಾನಿ, ಉರ್ದು ಕವಿ, ಸಾಮಾಜಿಕ ಕಾರ್ಯಕರ್ತ, ಸಾಕ್ಷ್ಯಚಿತ್ರ ನಿರ್ದೇಶಕ

ಕನ್ನಡಕ್ಕೆ: ಹೃಷಿಕೇಶ ಬಹದ್ದೂರ ದೇಸಾಯಿ

ವಿಡಿಯೊ ನೋಡಿ:

Gauhar Raza ki Nayi nazm – my lord #HumDekhenge #PrashantBhushan

Posted by Gauhar Raza on Thursday, August 20, 2020


ಓದಿ:

“ಕೇಳುವಿರೇನು ನೀವು ನಾ ಹುಚ್ಚನಾದದ್ದು ಹೇಗೆಂದು?”- ಖಲೀಲ್ ಗಿಬ್ರಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...