Homeಮುಖಪುಟ#2RupeeBhakts ; ಬಿಜೆಪಿ ಐಟಿಸೆಲ್‌‌ನ ನಿಜಸ್ವರೂಪ ಬಿಚ್ಚಿಡುತ್ತಿರುವ ನೆಟ್ಟಿಗರು

#2RupeeBhakts ; ಬಿಜೆಪಿ ಐಟಿಸೆಲ್‌‌ನ ನಿಜಸ್ವರೂಪ ಬಿಚ್ಚಿಡುತ್ತಿರುವ ನೆಟ್ಟಿಗರು

- Advertisement -
- Advertisement -

ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ #2RupeeBhakts ಟ್ರೆಂಡ್ ಆಗುತ್ತಿದ್ದು ಬಿಜೆಪಿ ಪಕ್ಷವು ಸಾಮಾಜಿಕ ಜಾಲತಾಣವನ್ನು ಹೇಗೆ ಬಳಸಿಕೊಂಡಿತು ಎಂಬ ಬಗ್ಗೆ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆಯ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಲವಾರು ನಕಲಿ ಖಾತೆಗಳನ್ನು ಸೃಷ್ಟಿ ಮಾಡಿಸಿ ಅದಲ್ಲಿ ಹಾಕುವ ಒಂದೊಂದು ಪೋಸ್ಟ್ ಹಾಗೂ ಕಮೆಂಟುಗಳಿಗೆ ಬಿಜೆಪಿಯು ಹಣ ಪಾವತಿ ಮಾಡುತ್ತಿತ್ತು ಎಂದು ನೆಟ್ಟಿಗರು ಆರೋಪಿಸಿದ್ದಾರೆ.

ಪ್ರಸ್ತುತ ಟ್ವಿಟ್ಟರ್‌ ಟ್ರೆಂಡಿಂಗ್‌ನಲ್ಲಿ #2RupeeBhakts ಜನಪ್ರಿಯ ಟ್ರೆಂಡ್ ಆಗುತ್ತಿದ್ದು ಹಲವಾರು ಜನರು ಈ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಪೋಸ್ಟ್ ಹಾಕುತ್ತಿದ್ದಾರೆ.

ಇದನ್ನೂ ಓದಿ: 2019 ರ ಲೋಕಸಭಾ ಚುನಾವಣೆಗೆ ಬಿಜೆಪಿ ವ್ಯಯಿಸಿದ್ದು ಎಷ್ಟು ಗೊತ್ತೇ ?

ರಾಘು ಬಿ ಹಿಂದೂ ಎಂಬ ಹೆಸರಲ್ಲಿರುವ ಫೇಸ್‌ಬುಕ್‌ ಖಾತೆದಾರರೊಬ್ಬ, “2014 ರಿಂದ ನನಗೆ ಬಿಜೆಪಿ ಪಕ್ಷದವರು ಪ್ರತಿಯೊಂದು ಕಮೆಂಟ್‌ಗೂ 2 ರೂ. ಮತ್ತು ಪ್ರತಿ ಪೋಸ್ಟ್‌ಗೂ 3 ರೂ. ನಂತೆ ಪ್ರತಿ ತಿಂಗಳ ಕೊನೆಯಲ್ಲಿ ನನ್ನ ಅಕೌಂಟ್‌ಗೆ ಹಾಕುತ್ತಿದ್ದರು. ಆದರೆ ನನ್ನ ಆತ್ಮಸಾಕ್ಷಿ ಇತ್ತೀಚಿನ ದಿನಗಳಲ್ಲಿ ಒಪ್ಪುತ್ತಾ ಇರಲಿಲ್ಲ, ಎಂಜಲು ಕಾಸಿಗೋಸ್ಕರ ನನ್ನ ದೇಶವನ್ನು ಬಲಿಕೊಡಬಾರದೆಂದು ತಿರ್ಮಾನಿಸಿ ಹೊರಗಡೆ ಬಂದಿದ್ದೇನೆ.

ನಿಮಗಿದು ತಿಳಿದಿರಲಿ ಸಾಮಾಜಿಕ ಜಾಲತಾಣದಲ್ಲಿ ಅಸಹ್ಯವಾಗಿ ಕಮೆಂಟ್ ಮಾಡೋಕೆ ಅಂತಾನೆ ಈಗಿನ ಕೆಲವು ಮಂತ್ರಿಗಳ ನೇತೃತ್ವದಲ್ಲಿ ತಂಡವೊಂದು ಇದೆ. ಹುಡುಗಿಯರ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡೋದು ಬಿಜೆಪಿಗರ ಪ್ಲ್ಯಾನ್..ಸಧ್ಯ ನನ್ನ ಹಳೆಯ ಅಕೌಂಟ್ ಡಿಲೀಟ್ ಮಾಡಿ ಮತ್ತೊಮ್ಮೆ ಮನುಷ್ಯನಾಗಿ ಬದಲಾಗಿದ್ದೇನೆ” ಎಂದು ಬರೆದು ಕೊಂಡಿದ್ದಾರೆ.

2014ರಿಂದ ನಂಗೆ ಬಿಜೆಪಿ ಪಕ್ಷದವರು ಪ್ರತಿಯೊಂದು ಕಮೆಂಟ್ಗೂ 2 ರೂ ಮತ್ತು ಪ್ರತಿ ಪೋಸ್ಟ್ ಗೂ 3 ರೂ ಹಾಗೆ ಪ್ರತಿ ತಿಂಗಳ ಕೊನೆಯಲ್ಲಿ ನನ್ನ…

Posted by ರಾಘು ಬಿ ಹಿಂದೂ on Friday, August 21, 2020

ಚಂದ್ರಶೇಖರ್‌ ಶೆಟ್ಟಿ ಎಂಬವರು ಬಿಜೆಪಿ ಐಟಿ ಸೆಲ್‌ ಕಳುಹಿಸಿದ್ದಾರೆ ಎಂದು ಹೇಳಲಾದ ಮೆಸೇಜಿನ ಸ್ಕೀನ್ ಶಾರ್ಟ್ ಹಾಕಿ “ಭಕ್ತರೇ,2 ರೂಪಾಯಿ ಆಸೆಗೆ ಸುಳ್ಳು ಸುದ್ದಿ ಹಬ್ಬಿಸೋದು ಬಿಟ್ಟು ಕಾಂಗ್ರೆಸ್ ಪಕ್ಷ ಜಾರಿಗೆ ತಂದ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ಹೋಗಿ ದಿನಕ್ಕೆ 275ರೂ ಸಿಗುತ್ತೆ” ಎಂದು ವ್ಯಂಗ್ಯವಾಡಿದ್ದಾರೆ.

ಭಕ್ತರೇ,2 ರೂಪಾಯಿ ಆಸೆಗೆ ಸುಳ್ಳು ಸುದ್ದಿ ಹಬ್ಬಿಸೋದು ಬಿಟ್ಟು ಕಾಂಗ್ರೆಸ್ ಪಕ್ಷ ಜಾರಿಗೆ ತಂದ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ಹೋಗಿ ದಿನಕ್ಕೆ 275ರೂ ಸಿಗುತ್ತೆ#2RupeeBhakts

Posted by Chandrashekar Shetty on Saturday, August 22, 2020

ಮೊಹಮ್ಮದ್ ಅಝರ್‌ ಎನ್ನುವವರು, “ಎರಡು ರುಪಾಯಿಗೆ ತಬ್ಲೀಗ್‌ ಜಮಾತ್ ವಿಷಯದಲ್ಲಿ ಹಿಂದೂ ಮುಸ್ಲಿಮರ ನಡುವೆ ದ್ವೇಷವನ್ನು ಸೃಷ್ಟಿಸಿದವರು” ಎಂದು ಹೇಳಿದ್ದಾರೆ.

“18% ಜಿಎಸ್ಟಿ ಕಳೆದು ಪ್ರತಿ ಟ್ವೀಟ್‌ಗೆ ನಿಜವಾದ ಪಾವತಿ ಕೇವಲ 1.64 ರೂ.” ಎಂದು ಒಬ್ಬರು ಪ್ರಧಾನಿ ಮೋದಿಯ ಚಿತ್ರದ ಜೊತೆಗೆ ಟ್ವೀಟ್ ಮಾಡಿದ್ದಾರೆ.


ಓದಿ: ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...