Homeಮುಖಪುಟ’ರಿಸರ್ವ್ ಬ್ಯಾಂಕ್ ಆಫ್‌ ಕೈಲಾಸ’ದ ಕರೆನ್ಸಿ ಬಿಡುಗಡೆ ಮಾಡಿದ ನಿತ್ಯಾನಂದ!

’ರಿಸರ್ವ್ ಬ್ಯಾಂಕ್ ಆಫ್‌ ಕೈಲಾಸ’ದ ಕರೆನ್ಸಿ ಬಿಡುಗಡೆ ಮಾಡಿದ ನಿತ್ಯಾನಂದ!

ಇವರ ವಿರುದ್ಧ ಭಾರತದಲ್ಲಿ ಹತ್ತಾರು ಪ್ರಕರಣಗಳ ವಿಚಾರಣೆ ಬಾಕಿ ಇದ್ದು, ನೇಪಾಳದ ಮೂಲಕ ಭಾರತದಿಂದ ಪಲಾಯನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

- Advertisement -
- Advertisement -

ಕೈಲಾಸ ಎಂಬ ಹಿಂದೂ ರಾಷ್ಟ್ರವನ್ನು ಕಟ್ಟಿಕೊಂಡಿದ್ದಾಗಿ ಹೇಳಿಕೊಂಡಿದ್ದ ವಿವಾದಾತ್ಮಕ ವ್ಯಕ್ತಿ ನಿತ್ಯಾನಂದ, ಇದೀಗ ತನ್ನ ದೇಶದ ರಿಸರ್ವ್ ಬ್ಯಾಂಕಿನ ಕರೆನ್ಸಿಯನ್ನು ಬಿಡುಗಡೆ ಮಾಡಿದ್ದಾರೆ.

ಗಣೇಶ ಚತುರ್ಥಿಯಂದು ರಿಸರ್ವ್ ಬ್ಯಾಂಕ್ ಆಫ್ ಕೈಲಾಸದ ಕರೆನ್ಸಿಯನ್ನು ಬಿಡುಗಡೆಗೊಳಿಸುವುದಾಗಿ ನಿತ್ಯಾನಂದ ವಾರಗಳ ಹಿಂದೆ ಹೇಳಿಕೊಂಡಿದ್ದರು. ಇದೀಗ ಇಂದು ನೋಟನ್ನು ಬಿಡುಗಡೆ ಮಾಡಲಾಗಿದೆ ಎಂದು ಫೇಸ್ಬುಕ್‌ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಮಹಿಳೆಯರ ಮತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಹುಡುಕಾಟ ನಡೆಸುತ್ತಿದೆ. ಇವರ ವಿರುದ್ಧ ಭಾರತದಲ್ಲಿ ಹತ್ತಾರು ಪ್ರಕರಣಗಳ ವಿಚಾರಣೆ ಬಾಕಿ ಇವೆ. ನಿತ್ಯಾನಂದ ನೇಪಾಳದ ಮೂಲಕ ಭಾರತದಿಂದ ಪಲಾಯನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.


ಕೈಲಾಸ ಎಂಬುದು ಸ್ವತಂತ್ಯ್ರ ದೇಶವಾಗಿದ್ದು, ಇಲ್ಲಿಗೆ ನಾನೇ ಪ್ರಧಾನಿ. ಇಲ್ಲಿ ಪೊಲೀಸ್ ಕೋರ್ಟ್ ವ್ಯವಸ್ಥೆ ಇರಲಿದೆ. ಇಲ್ಲಿಗೆ ಆಗಮಿಸುವ ಭಕ್ತರಿಗೆ ಶಿಕ್ಷಣ ಮತ್ತು ವೈದ್ಯಕೀಯ ಉಚಿತವಾಗಿ ನೀಡಲಾಗುವುದು ಎಂದು ಅವರು ಹೇಳಿಕೊಂಡಿದ್ದರು.

ಇಂದು ಕರೆನ್ಸಿ ಬಿಡುಗಡೆ ಮಾಡಿ ಫೇಸ್ಬುಕ್ನಲ್ಲಿ ಬರಹವೊಂದನ್ನು ಪ್ರಕಟಿಸಿರುವ ನಿತ್ಯಾನಂದ, “ಕೈಲಾಸದ ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ, ಕೈಲಾಸದ ರಿಸರ್ವ್ ಬ್ಯಾಂಕ್‌ಅನ್ನು ಗಣಪತಿ, ಪರಮಾಶಿವ ಮತ್ತು ಗುರುಗಳ ಪಾದಕ್ಕೆ ಸಮರ್ಪಿಸುತ್ತಿದ್ದೇವೆ. ಹಿಂದೂ ಧರ್ಮದ ಸರ್ವೋಚ್ಚ ಮಠಾಧೀಶ, ಜಗತ್ಗುರು ಮಹಾಸನ್ನೀಧನಂ ಅವರ ದೈವಿಕ ಪವಿತ್ರ ಭಗವಾನ್ ನಿತ್ಯಾನಂದ ಪರಮಾಶಿವಂ!

On the auspicious occasion of Ganesha Chaturti in KAILASA, the Reserve Bank of KAILASA offers at the feet of Ganapati,…

Posted by KAILASA's HDH Nithyananda Paramashivam on Friday, August 21, 2020

ಕೈಲಾಸಾ ಮತ್ತು ಅದರ ಸನ್ಯಾಸಿಗಳ ತಂಡವು 100 ಕ್ಕೂ ಹೆಚ್ಚು ಪುಸ್ತಕ, 360 ಲೇಖನಗಳು ಮತ್ತು ಸಂಶೋಧನಾ ಪ್ರಬಂಧಗಳನ್ನು ಒಳಗೊಂಡ ಹಿಂದೂ ಆರ್ಥಿಕ ನೀತಿಗಳ ಬಗ್ಗೆ ವ್ಯಾಪಕ ಸಂಶೋಧನೆ ಮತ್ತು ಅಧ್ಯಯನವನ್ನು ಮಾಡಿದೆ. ಅಲ್ಲದೆ, ಕೈಲಾಸಾದ ಕರೆನ್ಸಿಗಳನ್ನು ಆಚರಣಾತ್ಮಕವಾಗಿ ಇಂದು ಬಿಡುಗಡೆ ಮಾಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.


ಓದಿ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು ಸುಳ್ಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...