Homeಮುಖಪುಟಭೂಷಣ್ ಪ್ರಕರಣ: ರಚನಾತ್ಮಕ ಟೀಕೆಯೊಂದನ್ನು ಸಹಿಸಲಾಗದಷ್ಟು ಸಂಕುಚಿತವೇ ಸುಪ್ರೀಮ್ ಭುಜಗಳು?

ಭೂಷಣ್ ಪ್ರಕರಣ: ರಚನಾತ್ಮಕ ಟೀಕೆಯೊಂದನ್ನು ಸಹಿಸಲಾಗದಷ್ಟು ಸಂಕುಚಿತವೇ ಸುಪ್ರೀಮ್ ಭುಜಗಳು?

ಈ ತೀರ್ಪಿನ ವೇಳೆ ಕಟಕಟೆಯಲ್ಲಿ ನಿಂತಿರುವುದು ಪ್ರಶಾಂತ್ ಮಾತ್ರವೇ ಅಲ್ಲ, ಸುಪ್ರೀಮ್ ಕೋರ್ಟಿನ ಸಹನೆ ಘನತೆ ವಿವೇಕಗಳು ಕೂಡ ಕಟಕಟೆಯಲ್ಲಿ ನಿಂತಿರುವುದು ಹೌದು.

- Advertisement -
- Advertisement -

ಸುಪ್ರೀಮ್ ಕೋರ್ಟಿನ ಘನತೆ ಗೌರವಗಳು ಗುರುವಾರ ಅಗ್ನಿಪರೀಕ್ಷೆಗೆ ಗುರಿಯಾಗಲಿವೆ. ನ್ಯಾಯಾಂಗ ನಿಂದನೆಯ ಉರುಳಿಗೆ ಪ್ರಶಾಂತ್ ಭೂಷಣ್ ಅವರ ಕೊರಳನ್ನು ಸಿಕ್ಕಿಸುವುದು ಆಳುವ ಪಟ್ಟಭದ್ರರ ಪ್ರಯತ್ನ. ಯಾಕೆಂದರೆ ಆಳುವವರ ಪಾಲಿಗೆ ಪ್ರಶಾಂತ್ ಬೆಂಬಿಡದೆ ಕಾಡುವ ತೊಣಚಿ. ಜೊತೆಗೆ ನ್ಯಾಯಾಂಗದ ಕಾರ್ಯವೈಖರಿ- ಭ್ರಷ್ಟಾಚಾರದತ್ತ ಕಾಲ ಕಾಲಕ್ಕೆ ಬೆರಳು ಮಾಡಿ ತೋರುತ್ತ, ಅದರ ಅಂತಸ್ಸಾಕ್ಷಿಯನ್ನು ಪಾಟೀಸವಾಲಿಗೆ ಗುರಿ ಮಾಡಿರುವ ದಿಟ್ಟ ನ್ಯಾಯವಾದಿ.

ಸಾಮಾಜಿಕ ಜಾಲತಾಣ ಟ್ವೀಟ್‌ರ್‌ನಲ್ಲಿ ಸುಪ್ರೀಮ್ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಕುರಿತು ಮತ್ತು ಕಳೆದ ಆರು ವರ್ಷಗಳ ಸುಪ್ರೀಮ್ ಕೋರ್ಟ್ ಕಾರ್ಯವೈಖರಿ ಕುರಿತು ಇತ್ತೀಚೆಗೆ ಎರಡು ಟ್ವೀಟ್‌ಗಳನ್ನು ಮಾಡಿದ್ದರು. ಇವುಗಳಿಂದ ನ್ಯಾಯಾಂಗ ನಿಂದನೆಯಾಗಿದೆ ಎಂಬ ತೀರ್ಮಾನಕ್ಕೆ ಬಂದಿರುವ ಸುಪ್ರೀಮ್ ಕೋರ್ಟ್ ಗುರುವಾರ ಪ್ರಶಾಂತ್ ಅವರಿಗೆ ವಿಧಿಸುವ ಶಿಕ್ಷೆಯ ಸ್ವರೂಪ ಮತ್ತು ಪ್ರಮಾಣವನ್ನು ಪ್ರಕಟಿಸಲಿದೆ.

ಈ ತೀರ್ಪಿನ ವೇಳೆ ಕಟಕಟೆಯಲ್ಲಿ ನಿಂತಿರುವುದು ಪ್ರಶಾಂತ್ ಮಾತ್ರವೇ ಅಲ್ಲ, ಸುಪ್ರೀಮ್ ಕೋರ್ಟಿನ ಸಹನೆ ಘನತೆ ವಿವೇಕಗಳು ಕೂಡ ಕಟಕಟೆಯಲ್ಲಿ ನಿಂತಿರುವುದು ಹೌದು. ಇಷ್ಟಕ್ಕೂ ಪ್ರಶಾಂತ್ ಟ್ವೀಟ್‌ಗಳು ಹೇಳಿದ್ದೇನು ಎಂಬುದನ್ನು ಮತ್ತೊಮ್ಮೆ ನೆನೆದು ನೋಡೋಣ:

ಟ್ವೀಟ್ 1- ತಮ್ಮ ಮೂಲಭೂತ ಹಕ್ಕನ್ನು ಉಳಿಸಿಕೊಳ್ಳಲು ಕದ ಬಡಿಯುವ ನಾಗರಿಕರ ಪಾಲಿಗೆ ಸುಪ್ರೀಮ್ ಕೋರ್ಟನ್ನು ಲಾಕ್‌ಡೌನ್ ಸ್ಥಿತಿಯಲ್ಲಿ ಇರಿಸಿ ಅವರಿಗೆ ನ್ಯಾಯವನ್ನು ನಿರಾಕರಿಸಿರುವ ಮುಖ್ಯ ನ್ಯಾಯಮೂರ್ತಿಯವರು ನಾಗಪುರದ ರಾಜಭವನದಲ್ಲಿ ಬಿಜೆಪಿ ನಾಯಕರೊಬ್ಬರ ಒಡೆತನದ 50 ಲಕ್ಷ ರು ಬೆಲೆ ಬಾಳುವ ಮೋಟರ್ ಸೈಕಲ್ಲನ್ನು ಏರಿ ಕುಳಿತಿದ್ದಾರೆ. ಮಾಸ್ಕ್ ಮತ್ತು ಹೆಲ್ಮೆಟ್ ಕೂಡ ಧರಿಸಿಲ್ಲ.

ಟ್ವೀಟ್ 2- ಅಧಿಕೃತ ತುರ್ತುಪರಿಸ್ಥಿತಿಯನ್ನು ಕೂಡ ಘೋಷಿಸದೆ ಕಳೆದ ಆರು ವರ್ಷಗಳ ಅವಧಿಯಲ್ಲಿ ಭಾರತದ ಜನತಂತ್ರವನ್ನು ಹೇಗೆ ನಾಶ ಮಾಡಲಾಯಿತು ಎಂಬುದನ್ನು ಭವಿಷ್ಯದಲ್ಲಿ ಇತಿಹಾಸಕಾರರು ಹೊರಳಿ ನೋಡಲಿದ್ದಾರೆ. ಆಗ ಅವರು ಈ ವಿನಾಶದಲ್ಲಿ ಸುಪ್ರೀಮ್ ಕೋರ್ಟಿನ, ಅದರಲ್ಲೂ ವಿಶೇಷವಾಗಿ ಕಳೆದ ನಾಲ್ವರು ಮುಖ್ಯನ್ಯಾಯಮೂರ್ತಿಗಳ ಪಾತ್ರವನ್ನು ರೇಖಾಂಕಿತಗೊಳಿಸಿ ಗುರುತಿಸುವರು.

ಕಾಯಿದೆ ಕಾನೂನು ನಿಷ್ಪಕ್ಷಪಾತತೆಯ ಬಟ್ಟೆಯನ್ನು ಕಣ್ಣಿಗೆ ಕಟ್ಟಿಕೊಂಡಿರುವ ನ್ಯಾಯದೇವತೆಗೆ, ದಯೆ, ಕರುಣೆ ಸಹನೆ, ಘನತೆ, ಔದಾರ್ಯ, ಕ್ಷಮೆಯ ಗುಣಗಳೂ ಇರುತ್ತವೆ. ವಿವೇಚನೆಯಿಂದ ಆಕೆ ಅದನ್ನು ಬಳಸುತ್ತಾಳೆ ಕೂಡ. ಆರೋಗ್ಯಕರವಾಗಿ ಜನಪರ ಕಾಳಜಿಗಳೊಂದಿಗೆ ಕೆಲಸ ಮಾಡಲು ಪೂರಕವಾಗುವ ಸಕಾರಾತ್ಮಕ ಟೀಕೆಯನ್ನು ಅಸಹನೆಯಿಂದ ಕೊಡವಿ ಹಾಕುವಷ್ಟು ಸಂಕುಚಿತವಲ್ಲ ನ್ಯಾಯಾಂಗದ ಭುಜಗಳು. ಭೂಷಣ್ ಅವರ ಈ ಟೀಕೆ ತಮ್ಮ ಸ್ವಂತದ ಹಿತಕ್ಕಾಗಿ ಮಾಡಿರುವಂತಹುದಲ್ಲ. ಒಂದು ವೇಳೆ ಘನತೆಯ ಗಡಿಯನ್ನು ಅಷ್ಟಿಷ್ಟು ಮೀರಿದ್ದರೂ ಅದನ್ನು ರಚನಾತ್ಮಕವಾಗಿ ಸ್ವೀಕರಿಸಬೇಕಿತ್ತು ಸುಪ್ರೀಮ್ ಕೋರ್ಟು.

ಸುಪ್ರೀಮ್ ಕೋರ್ಟಿನ ಆಡಳಿತ ಕೊಳೆತಿದೆ, ದೇಶದಲ್ಲಿ ಜನತಂತ್ರ ಉಳಿಯಬೇಕೆಂದಿದ್ದರೆ ಅದನ್ನು ಸರಿಪಡಿಸಬೇಕು ಎಂದು ೨೦೧೮ರ ಜನವರಿಯಲ್ಲಿ ಸರ್ವೋಚ್ಚ ನ್ಯಾಯಾಲಯದ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಇತಿಹಾಸದಲ್ಲೇ ಮೊದಲ ಬಾರಿಗೆ ಎಂಬAತೆ ಪತ್ರಿಕಾಗೋಷ್ಠಿ ನಡೆಸಿ ಹೇಳಿದ್ದರು. ಅಂದಿನ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರ ಯಾವ್ಯಾವ ನ್ಯಾಯಮೂರ್ತಿಗೆ ಯಾವ್ಯಾವ ಕೇಸುಗಳನ್ನು ವಿಚಾರಣೆಗೆ ಒಪ್ಪಿಸಬೇಕೆಂಬ ತೀರ್ಮಾನದಲ್ಲಿ ಗಂಭೀರ ಅಕ್ರಮಗಳು ನಡೆಯುತ್ತಿವೆ ಎಂಬ ಆಪಾದನೆಯನ್ನು ಈ ಹಿರಿಯ ನ್ಯಾಯಮೂರ್ತಿಗಳು ಮಾಡಿದ್ದರು. ನ್ಯಾಯಾಲಯದ ಘನತೆ ಮಣ್ಣುಪಾಲಾಗುತ್ತದೆಂಬ ಕಾರಣದಿಂದ ವಿವರಗಳನ್ನು ಬಹಿರಂಗಗೊಳಿಸುತ್ತಿಲ್ಲ ಎಂದೂ ಸಾರಿದ್ದರು. ಈ ನಾಲ್ವರ ಪೈಕಿ ಒಬ್ಬರಾದ ರಂಜನ್ ಗೊಗೋಯ್ ಮುಖ್ಯ ನ್ಯಾಯಮೂರ್ತಿಯ ಹುದ್ದೆ ಏರಿದರು. ಅವರ ಮೇಲಿನ ಆಪಾದನೆಗಳು ದೀಪಕ್ ಮಿಶ್ರ ವಿರುದ್ಧ ಮಾಡಿದ್ದ ಆಪಾದನೆಗಳಿಗಿಂತ ಹೀನ ಸ್ವರೂಪದವು.

ಸುಪ್ರೀಮ್ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರ ಮಾತುಗಳನ್ನು ಯಥಾವತ್ ಉಲ್ಲೇಖಿಸುವುದಾದರೆ, “ಗೊಗೋಯ್ (ಅವರನ್ನು ನ್ಯಾಯಮೂರ್ತಿ ಎಂದು ಕರೆಯಲು ನನ್ನ ಮನಸ್ಸು ಒಪ್ಪುವುದಿಲ್ಲ) (ದೀಪಕ್ ಮಿಶ್ರ ಎಸಗಿದ್ದಕ್ಕಿಂತ) ಗಂಭೀರವಾದ, ದೊಡ್ಡದಾದ ದುರ್ವರ್ತನೆಗಳನ್ನು ಪ್ರದರ್ಶಿಸಿದರು. ಅಕ್ಷರಶಃ ಆಳುವ ಬಿಜೆಪಿ ಸರ್ಕಾರದ ಕಾಲಿಗೆ ಬಿದ್ದು ನಮಸ್ಕರಿಸಿದರು. ಬಹುತೇಕ ಸುಪ್ರೀಮ್ ಕೋರ್ಟನ್ನು ರಾಜಕೀಯ ಕಾರ್ಯಾಂಗದ ವಶಕ್ಕೆ ಒಪ್ಪಿಸಿದರು. ಜನರ ಹಕ್ಕುಗಳನ್ನು ಕಾಯುವ ಪವಿತ್ರ ಕಾರ್ಯಕ್ಕೆ ಎಳ್ಳು ನೀರು ಬಿಟ್ಟರು. ಆದರೆ ಗೊಗೋಯ್ ಹೀಗೆ ನಡೆದುಕೊಳ್ಳುತ್ತಿದ್ದಾಗ ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿಗಳಿಂದ ಒಂದೇ ಒಂದು ಭಿನ್ನಮತದ ದನಿಯೂ ಕೇಳಿಬರಲಿಲ್ಲ.”

ಪ್ರಶಾಂತ್ ಭೂಷಣ್ ಟೀಕೆಗೆ ಸುಪ್ರೀಮ್ ಕೋರ್ಟ್ ಈಗ ತಳೆದಿರುವ ನಿಲುವಿನ ತರ್ಕದ ಪ್ರಕಾರ,2018ರಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಾಲ್ವರು ಹಿರಿಯ ನ್ಯಾಯಮೂರ್ತಿಗಳ ವಿರುದ್ಧವೂ ನ್ಯಾಯಾಂಗನಿಂದನೆ ಕ್ರಮ ಜರುಗಿಸಬೇಕು. ಮಾರ್ಕಂಡೇಯ ಕಾಟ್ಜು ಅವರನ್ನೂ ಬಿಡುವಂತಿಲ್ಲ.

ಕೋವಿಡ್-19 ಮಹಾಮಾರಿಯ ಈ ಸಂದರ್ಭದಲ್ಲಿ ಸುಪ್ರೀಮ್ ಕೋರ್ಟು ತನ್ನ ಕಲಾಪಗಳನ್ನು ಎಂದಿನಂತೆ ಕೋರ್ಟುಗಳಲ್ಲಿ ನಡೆಸುತ್ತಿಲ್ಲ. ವಾದ ಮಂಡನೆ- ವಿಚಾರಣೆ ತೀರ್ಪು ಎಲ್ಲವೂ ಕಂಪ್ಯೂಟರ್ ಜಾಲ ಬಳಸಿ ನಡೆಯುತ್ತಿದೆ. 19 ಸಾವಿರಕ್ಕೂ ಹೆಚ್ಚು ಕೇಸುಗಳು ವಿಚಾರಣೆಗೆ ಕಾದಿವೆ. ಇವುಗಳಲ್ಲಿ ಕಾಶ್ಮೀರಕ್ಕೆ ಸಂಬಂಧಿಸಿದ ಹೇಬಿಯಸ್ ಕಾರ್ಪಸ್ ಅರ್ಜಿಗಳು, ಪೌರತ್ವ

ಕಾಯಿದೆ ತಿದ್ದುಪಡಿಯನ್ನು ಪ್ರಶ್ನಿಸುವ ತುರ್ತು ಸ್ವರೂಪದ ಅರ್ಜಿಗಳೂ ಸೇರಿವೆ. ಇವುಗಳೆಲ್ಲವನ್ನೂ ಪಕ್ಕಕ್ಕಿರಿಸಿ ಪ್ರಶಾಂತ್ ಭೂಷಣ್ ಅವರ ವಿರುದ್ಧದ ಪ್ರಕರಣವನ್ನು ಕೈಗೆತ್ತಿಕೊಳ್ಳುವ ತುರ್ತನ್ನು ನಿವೃತ್ತ ನ್ಯಾಯಮೂರ್ತಿಗಳು, ನಿವೃತ್ತ ಹಿರಿಯ ಅಧಿಕಾರಿಗಳೂ ಪ್ರಶ್ನಿಸಿದ್ದಾರೆ.
ಹಾಲಿ ಸುಪ್ರೀಮ್ ಕೋರ್ಟ್ ನ್ಯಾಯಮೂರ್ತಿ ಅರುಣ್ ಮಿಶ್ರ ಅವರು ಪ್ರಧಾನಿ ಮೋದಿಯವರನ್ನು versatile Genius(ಬಹುಮಖ ಮೇಧಾವಿ) ಎಂದು ಸಾರ್ವಜನಿಕ ಸಮಾರಂಭವೊಂದರಲ್ಲಿ ಹೊಗಳಿದ್ದರು. ಪ್ರಶಾಂತ್ ಭೂಷಣ್ ಅವರು ಮೋದಿಯವರ ಕಟು ಟೀಕಾಕಾರರು ಎಂಬುದು ಜನಜನಿತ. ಆದರೂ ಪ್ರಶಾಂತ್ ವಿರುದ್ಧದ ಈ ಕೇಸನ್ನು ಅರುಣ್ ಮಿಶ್ರ ಅವರ ನ್ಯಾಯಪೀಠಕ್ಕೆ ಒಪ್ಪಿಸಿರುವ ಔಚಿತ್ಯವೂ ಪ್ರಶ್ನಾರ್ಹ.

ತಮ್ಮ ಮೇಲಿನ ಆಪಾದನೆಯ ವಿಚಾರಣೆಯನ್ನು ನ್ಯಾಯಮೂರ್ತಿ ಅರುಣ್ ಮಿಶ್ರ ಅವರಿಲ್ಲದ ಪೀಠಕ್ಕೆ ಒಪ್ಪಿಸಬೇಕು ಮತ್ತು ಶಿಕ್ಷೆಯ ಸ್ವರೂಪ- ಪ್ರಮಾಣದ ಪ್ರಕಟಣೆಯನ್ನು ಮರುವಿಮರ್ಶಾ ಅರ್ಜಿಯ ವಿಚಾರಣೆ ನಡೆಯುವವರೆಗೆ ಮುಂದೂಡಬೇಕು ಎಂಬುದಾಗಿ ಪ್ರಶಾಂತ್ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಗೆ ಬೆಲೆ ಸಿಕ್ಕೀತೇ, ನಿವೃತ್ತ ನ್ಯಾಯಮೂರ್ತಿಗಳು ಸುಪ್ರೀಮ್ ಕೋರ್ಟಿಗೆ ಬೋಧಿಸಿರುವ ವಿವೇಕ ಕೆಲಸ ಮಾಡೀತೇ ಕಾದು ನೋಡಬೇಕಿದೆ.


ಇದನ್ನೂ ಓದಿ: ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ.

ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...